Monday, January 5, 2026

PARYAYA: ಫೂಟ್‌ ಪಲ್ಸ್‌ ಥೆರೆಪಿ: ಏನೆಲ್ಲ ಅನುಕೂಲ ಉಂಟು?

ಫೂಟ್‌ ಪಲ್ಸ್‌ ಥೆರೆಪಿ: ಏನೆಲ್ಲ ಅನುಕೂಲ ಉಂಟು?

ಬೆಂಗಳೂರು ರಾಮಕೃಷ್ಣ ಹೆಗಡೆ ನಗರ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಉಚಿತ ಫುಟ್‌ ಪಲ್ಸ್‌ ಥೆರೆಪಿ ಶಿಬಿರವು ೨೦೨೬ ಜನವರಿ ೩ರಿಂದ ಆರಂಭಗೊಂಡಿದೆ.

ಪ್ರತಿದಿನ ಬೆಳಗ್ಗೆ ೯.೩೦ಕ್ಕೆ ಆರಂಭವಾಗಿ ಸಂಜೆ ೫ ಗಂಟೆಯವರೆಗೆ ನಡೆಯುವ ಈ ಶಿಬಿರವು ಜನವರಿ ೧೨ರವರೆಗೂ ನಡೆಯಲಿದೆ.


ಪ್ರತಿದಿನ ೩೦ ನಿಮಿಷಗಳ ಅವಧಿಯ ಚಿಕಿತ್ಸೆ ಪಡೆಯುವುದರಿಂದ ರಕ್ತ ಪರಿಚಲನೆ, ಮಾಂಸಖಂಡಗಳ ಸೆಳೆತ ಮತ್ತು ನರಗಳ ಯಾವುದೇ ಸರಳ ಮತ್ತು ದೀರ್ಘಕಾಲದ ಸಮಸ್ಯೆಗಳಿಗೆ ಔಷಧ ರಹಿತ ಹಾಗೂ ಅಡ್ಡ ಪರಿಣಾಮ ಇಲ್ಲದ ಪರಿಹಾರ ಲಭಿಸುತ್ತದೆ.

ಮಧುಮೇಹ, ಮಧುಮೇಹದಿಂದ ಬರುವ ಪಾದ ಉರಿಯೂತ, ಸಂಧಿವಾತ, ಕುತ್ತಿಗೆ ನೋವು ಇತ್ಯಾದಿ ಸಮಸ್ಯೆಗಳಿಗೂ ಈ ಚಿಕಿತ್ಸೆಯಲ್ಲಿ ಪರಿಹಾರ ಲಭ್ಯವಿದೆ. ಬಹುಮುಖ್ಯವಾಗಿ ಫಿಸಿಯೋಥೆರೆಪಿ ಅಗತ್ಯ ಉಳ್ಳವರಿಗೆ ಇದು ಅತ್ಯುತ್ತಮ ಎನ್ನುತ್ತಾರೆ ಈ ಚಿಕಿತ್ಸಾ ತಜ್ಞ ಕಾರ್ತಿಕ್.‌

ಚಿಕಿತ್ಸೆ ಬಗ್ಗೆ ಅವರೇನು ಹೇಳುತ್ತಾರೆ ? ಇಲ್ಲಿ 👇 ನೋಡಿ.


ಇದನ್ನೂ ನೋಡಿ:
PARYAYA: ಫೂಟ್‌ ಪಲ್ಸ್‌ ಥೆರೆಪಿ: ಏನೆಲ್ಲ ಅನುಕೂಲ ಉಂಟು?:   ಫೂಟ್‌ ಪಲ್ಸ್‌ ಥೆರೆಪಿ: ಏನೆಲ್ಲ ಅನುಕೂಲ ಉಂಟು? ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇ...

Saturday, January 3, 2026

PARYAYA: ಭಾರತಕ್ಕೆ ಮರಳಿತು ಬುದ್ಧನ ಅವಶೇಷ..

 ಭಾರತಕ್ಕೆ ಮರಳಿತು ಬುದ್ಧನ ಅವಶೇಷ..

ತಮಾನಕ್ಕೂ ಅಧಿಕ ಕಾಲದ ಕಾಯುವಿಕೆಯ ನಂತರಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷಗಳು (Piprahwa Relics) ಭಾರತಕ್ಕೆ ಮರಳಿವೆ.

ಈ ಕ್ಷಣ ಭಾರತೀಯರೆಲ್ಲರಿಗೂ ಹೆಮ್ಮೆಯಭಕ್ತಿಯ ಹಾಗೂ ಸಾಂಸ್ಕೃತಿಕ ಭಾವೈಕ್ಯತೆಯ ಕ್ಷಣ. ದೆಹಲಿಯಲ್ಲಿ ೨೦೨೬ ಜನವರಿ ೩ರ ಶನಿವಾರ ನಡೆದ ಕಾರ್ಯಕ್ರಮದ ಪ್ರಮುಖ ಹೈಲೈಟ್ಸ್ ಇಲ್ಲಿದೆ:

  • ಭವ್ಯ ಉದ್ಘಾಟನೆ: ನವದೆಹಲಿಯ ರೈ ಪಿತೋರಾ ಸಾಂಸ್ಕೃತಿಕ ಸಂಕೀರ್ಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು "ದಿ ಲೈಟ್ ಅಂಡ್ ದಿ ಲೋಟಸ್: ರೆಲಿಕ್ಸ್ ಆಫ್ ದಿ ಅವೇಕನ್ಡ್ ಒನ್" ಎಂಬ ಶೀರ್ಷಿಕೆಯಡಿ ಆಯೋಜಿಸಲಾದ ಪವಿತ್ರ ಪಿಪ್ರಹ್ವಾ ಅವಶೇಷಗಳ ಬೃಹತ್ ಅಂತರರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಿದರು.
  • ಹೆಮ್ಮೆಯ ನುಡಿಗಳು: ಈ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿಯವರು, "ಸುಮಾರು 125 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರಭಾರತದ ಪರಂಪರೆ ಮತ್ತು ಅದರ ಸಾಂಸ್ಕೃತಿಕ ಶ್ರೀಮಂತಿಕೆ ಮತ್ತೆ ತನ್ನ ತಾಯ್ನಾಡಿಗೆ ಮರಳಿದೆ," ಎಂದು ಸಂತಸ ವ್ಯಕ್ತಪಡಿಸಿದರು.
  • ಭಾರತದ ಅಸ್ಮಿತೆ: ಈ ಅವಶೇಷಗಳ ಆಗಮನವು ಕೇವಲ ಇತಿಹಾಸದ ಮರುಕಳಿಕೆಯಷ್ಟೇ ಅಲ್ಲ, ಬದಲಿಗೆ ಭಗವಾನ್ ಬುದ್ಧನ ಶಾಂತಿ ಮತ್ತು ಜ್ಞಾನದ ಸಂದೇಶವನ್ನು ಜಗತ್ತಿಗೆ ಸಾರುವ ಭಾರತದ ಸಾಂಸ್ಕೃತಿಕ ಶಕ್ತಿಯ ಸಂಕೇತ. ಈ ಸಂದರ್ಭದ ವಿಡಿಯೋ ಇಲ್ಲಿದೆ.
PARYAYA: ಭಾರತಕ್ಕೆ ಮರಳಿತು ಬುದ್ಧನ ಅವಶೇಷ..:   ಭಾರತ ಕ್ಕೆ ಮರಳಿತು ಬುದ್ಧನ ಅವಶೇಷ.. ಶ ತಮಾನಕ್ಕೂ ಅಧಿಕ ಕಾಲದ ಕಾಯುವಿಕೆಯ ನಂತರ , ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷಗಳು ( Piprahwa Rel...

PARYAYA: ದೈತ್ಯ ಚಂದ್ರನ ಕಂಡಿರಾ?

ದೈತ್ಯ ಚಂದ್ರನ ಕಂಡಿರಾ?

೨೦೨೬ ಜನವರಿ ೩ರಂದು ದೈತ್ಯ ಚಂದ್ರ ದರ್ಶನದ ಬಗ್ಗೆ ಬಂದ ಸುದ್ದಿಗಳನ್ನು ನೋಡಿರುವಿರಲ್ಲವೇ? ಹಲವರು ಸುದ್ದಿ ಓದಿ ಬಳಿಕ ಚಂದ್ರನನ್ನು ನೋಡಲು ಮರೆತೇ ಬಿಟ್ಟಿರಬಹುದು.

ಅಂತಹವರು ಇಲ್ಲಿ ಚಂದ್ರ ದೈತ್ಯ ರೂಪವನ್ನು ನೋಡಬಹುದು. ಸಮೀಪ ನೋಟಕ್ಕೆ ಚಿತ್ರವನ್ನು ಕ್ಲಿಕ್‌ ಮಾಡಿ.


PARYAYA: ದೈತ್ಯ ಚಂದ್ರನ ಕಂಡಿರಾ?:   ದೈತ್ಯ ಚಂದ್ರನ ಕಂಡಿರಾ? ೨೦ ೨೬ ಜನವರಿ ೩ರಂದು ದೈತ್ಯ ಚಂದ್ರ ದರ್ಶನದ ಬಗ್ಗೆ ಬಂದ ಸುದ್ದಿಗಳನ್ನು ನೋಡಿರುವಿರಲ್ಲವೇ? ಹಲವರು ಸುದ್ದಿ ಓದಿ ಬಳಿಕ ಚಂದ್ರನನ್ನು ನೋಡಲು ಮರ...

Thursday, January 1, 2026

PARYAYA: ಉಚಿತ ಫುಟ್‌ ಪಲ್ಸ್‌ ಥೆರೆಪಿ ಶಿಬಿರ

 ಉಚಿತ ಫುಟ್‌ ಪಲ್ಸ್‌ ಥೆರೆಪಿ ಶಿಬಿರ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ ದೇವಸ್ಥಾನ ಸೇವಾ ಸಮಿತಿ ಹಾಗೂ ಕಂಪಾನಿಯೋ ಇವರ ಸಹಯೋಗದೊಂದಿಗೆ  "ಉಚಿತ ಫುಟ್ ಪಲ್ಸ್ ಥೆರಪಿ " ಶಿಬಿರವನ್ನು ದೇವಾಲಯ ಆವರಣದಲ್ಲಿ ಆಯೋಜಿಸಲಾಗಿದೆ.

ಈ ಶಿಬಿರದಲ್ಲಿ ರಕ್ತ ಪರಿಚಲನೆ, ಮಾಂಸಖಂಡಗಳ ಸೆಳೆತ, ಮತ್ತು ನರಗಳ ಯಾವುದೇ ಸರಳ ಮತ್ತು ದೀರ್ಘ ಕಾಲದ ಸಮಸ್ಯೆಗಳಿಗೆ ಔಷಧ ರಹಿತ ಹಾಗೂ ಅಡ್ಡ ಪರಿಣಾಮ ಇಲ್ಲದೆ ಚಿಕತ್ಸೆ ಸಲಹೆಗಳನ್ನು ನೀಡಲಾಗುವುದು.

ಶಿಬಿರವು ದಿನಾಂಕ 03-01-2026 ರಿಂದ 12-01-2026 ರವರೆಗೆಬೆಳಗ್ಗೆ 9.30 ರಿಂದ ಸಂಜೆ 05:00 ಗಂಟೆಯ ತನಕ ನಡೆಯುತ್ತದೆ ಎಂದು ದೇವಸ್ಥಾನದ ಆಡಳಿತ ಸಮಿತಿಯ ಪ್ರಕಟಣೆ ತಿಳಿಸಿದೆ.

ಆಸಕ್ತರು ವಿವರಗಳಿಗೆ ಮೇಲಿನ ಚಿತ್ರ ಕ್ಲಿಕ್‌ ಮಾಡಿನೋಡಬಹುದು ಅಥವಾ ಕಾರ್ತಿಕ್‌  (ಮೊಬೈಲ್‌ ನಂಬರ್‌ 9901612625) ಅವರನ್ನು ಸಂಪರ್ಕಿಸಬಹುದು.

PARYAYA: ಉಚಿತ ಫುಟ್‌ ಪಲ್ಸ್‌ ಥೆರೆಪಿ ಶಿಬಿರ:   ಉಚಿತ ಫುಟ್‌ ಪಲ್ಸ್‌ ಥೆರೆಪಿ ಶಿಬಿರ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ ದೇವಸ್ಥಾನ ಸೇವಾ ಸಮಿತಿ ಹಾಗೂ ಕಂಪಾನಿ...

Tuesday, December 30, 2025

PARYAYA: ವೈಕುಂಠ ಏಕಾದಶಿ ಸಡಗರ

 ವೈಕುಂಠ ಏಕಾದಶಿ ಸಡಗರ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೫ ಡಿಸೆಂಬರ್‌ ೩೦ರ ಮಂಗಳವಾರ ವೈಕುಂಠ ಏಕಾದಶಿಯನ್ನು ಸಡಗರದೊಂದಿಗೆ ಆಚರಿಸಲಾಯಿತು.

ನಸುಕಿನ ಬ್ರಾಹ್ಮೀ ಮುಹೂರ್ತದಲ್ಲಿಯೇ ಅಭಿಷೇಕದೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಬಳಿಕ ಅಲಂಕಾರ, ಮಹಾಮಂಗಳಾರತಿ ನಡೆಯಿತು.

ಭಾರೀ ಸಂಖ್ಯೆಯಲ್ಲಿ ಭಕ್ತರು ಮುಂಜಾನೆಯಲ್ಲೇ ಆಗಮಿಸಿ ದೇವರ ದರ್ಶನ, ವೈಕುಂಠ ದ್ವಾರದ ದರ್ಶನ ಪಡೆದು ಪುನೀತರಾದರು.

ಮಾಜಿ ಸಚಿವರಾದ ಶ್ರೀ ಎಸ್.‌ ಎನ್.‌ ಕೃಷ್ಣಯ್ಯ ಶೆಟ್ಟಿ ಅವರಿಂದ ಲಡ್ಡು ಪ್ರಸಾದ ಸೇವೆ, ಶ್ರೀ ಮುನಿರಾಜು ಮತ್ತು ಕುಟುಂಬದವರಿಗೆ ಅಲಂಕಾರ ಸೇವೆ, ಶ್ರೀ ನಾಗರಾಜ್‌ ಕೆ.ಎಂ. ಮತ್ತು ಕುಟುಂಬ, ಶ್ರೀ ಚೌಡರೆಡ್ಡಿ ಮತ್ತು ಕುಟುಂಬದವರಿಂದ ಪ್ರಸಾದ ಸೇವೆ ವ್ಯವಸ್ಥೆಯಿತ್ತು. ವಿದ್ಯಾ ರಘು ಪ್ರಸಾದ್‌ ಮತ್ತು ತಂಡ ಹಾಗೂ ಭಕ್ತಾದಿಗಳಿಂದ ಭಜನಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದ ಕೆಲವು ವಿಡಿಯೋ ಹಾಗೂ ಚಿತ್ರಗಳು ಇಲ್ಲಿವೆ. ಅಭಿಷೇಕದ ದೃಶ್ಯ ಕೆಳಗಿನ ಚಿತ್ರ ಕ್ಲಿಕ್‌ ಮಾಡಿರಿ ಅಥವಾ - Video link https://youtu.be/31F2f6wRhmI ಇದನ್ನು ಕ್ಲಿಕ್‌ ಮಾಡಿರಿ.

 
ಮಹಾಮಂಗಳಾರತಿ ದೃಶ್ಯ ನೋಡಲು ಈ ಕೆಳಗಿನ ಚಿತ್ರ ಕ್ಲಿಕ್‌ ಮಾಡಿರಿ ಅಥವಾ ಯೂ ಟ್ಯೂಬ್‌ ವಿಡಿಯೋ ಲಿಂಕ್‌ ಕ್ಲಿಕ್‌ ಮಾಡಿರಿ:

PARYAYA: ವೈಕುಂಠ ಏಕಾದಶಿ ಸಡಗರ:   ವೈಕುಂಠ ಏಕಾದಶಿ ಸಡಗರ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲ...

Monday, December 29, 2025

PARYAYA: ವೈಕುಂಠ ಏಕಾದಶಿಗೆ ಸಡಗರದ ಸಿದ್ಧತೆ

 ವೈಕುಂಠ ಏಕಾದಶಿಗೆ ಸಡಗರದ ಸಿದ್ಧತೆ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೫ ಡಿಸೆಂಬರ್‌ ೩೦ ಮಂಗಳವಾರದ ವೈಕುಂಠ ಏಕಾದಶಿ ಆಚರಣೆಗೆ ಸಡಗರದ ಸಿದ್ಧತೆ, ಶ್ರಮದಾನ ಕಾರ್ಯಕ್ರಮಗಳು ಡಿಸೆಂಬರ್‌ ೨೯ರಂದು ಭರದಿಂದ ನಡೆದವು.

ಭಕ್ತಾದಿಗಳು ದೇವಾಲಯ ಸ್ವಚ್ಛತೆಯಿಂದ ಹಿಡಿದು ಅಲಂಕಾರದವರೆಗೆ ಎಲ್ಲ ರೀತಿಯ ಶ್ರಮದಾನದಲ್ಲಿ ಲಗುಬಗೆಯಿಂದ ಪಾಲ್ಗೊಂಡರು.

ಮಂಗಳವಾರ ಬೆಳಗ್ಗೆ ೪ ಗಂಟೆಗೆ ಬ್ರಾಹ್ಮೀ ಮುಹೂರ್ತದಲ್ಲಿ ಅಭಿಷೇಕ, ಸಂಕಲ್ಪದೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ. ಬಳಿಕ ವಿಶೇಷ ಪೂಜೆ, ಭಜನಾ ಕಾರ್ಯಕ್ರಮಗಳು ನಡೆಯಲಿವೆ. ಬೆಳಗ್ಗೆ ೧೧ ಗಂಟೆಗೆ ವಿದ್ಯಾ ರಘು ಪ್ರಸಾದ್‌ ತಂಡವು ಭಜನಾ ಕಾರ್ಯಕ್ರಮವನ್ನು ನೆರವೇರಿಸಿಕೊಡಲಿದೆ.

ವೈಕುಂಠ ದ್ವಾರವನ್ನು ಶನಿವಾರ ರಾತ್ರೆಯ ವೇಳಗೆ ಸಜ್ಜುಗೊಳಿಸಲಾಗಿದ್ದು ಬೆಳಗ್ಗೆಯಿಂದ ರಾತ್ರಿ ೯ ಗಂಟೆಯವರೆಗೆ ವೈಕುಂಠ ದ್ವಾರ ದರ್ಶನದ ವ್ಯವಸ್ಥೆ ಮಾಡಲಾಗಿದೆ. ರಾತ್ರಿ ೯ ಗಂಟೆಗೆ ಮಹಾಮಂಗಳಾರತಿ ನಡೆಯಲಿದೆ.

ಮಾಜಿ ಸಚಿವ ಮಾಲೂರು ಎಸ್.ಎನ್.‌ ಕೃಷ್ಣಯ್ಯ ಶೆಟ್ಟಿ ಅವರು ಉಚಿತ ಲಡ್ಡು ಪ್ರಸಾದ ವಿತರಣೆಗೆ ವ್ಯವಸ್ಥೆ ಮಾಡಿದ್ದಾರೆ.

PARYAYA: ವೈಕುಂಠ ಏಕಾದಶಿಗೆ ಸಡಗರದ ಸಿದ್ಧತೆ:   ವೈಕುಂಠ ಏಕಾದಶಿಗೆ ಸಡಗರದ ಸಿದ್ಧತೆ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದ...

Saturday, December 27, 2025

PARYAYA: ವಿಬಿ-ಜಿ ರಾಮ್‌ ಜಿ: ಗಾಂಧೀಜಿ ಆಶಯಕ್ಕೆ ಧಕ್ಕೆಯೇ?

ಭಾರತೀಯ ಸಂಸತ್ತು ೨೦೨೫ರ ಡಿಸೆಂಬರ್‌ ೧೮ರಂದು ನೂತನ ʼವಿಬಿ-ಜಿ ರಾಮ್‌ ಜಿʼ ಅಂದರೆ ವಿಕಸಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಆಜೀವಿಕಾ ಮಿಷನ್ (ವಿಕಸಿತ ಭಾರತ್ ಗ್ಯಾರಂಟಿ ಉದ್ಯೋಗ ಮತ್ತು ಜೀವನೋಪಾಯ ಮಿಷನ್‌ (ಗ್ರಾಮೀಣ) ಕಾಯ್ದೆ ೨೦೨೫ ಇದನ್ನು ಹಿಂದಿನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯ ಸ್ಥಾನಕ್ಕೆ ತರಲು ತನ್ನ ಅಂಗೀಕಾರ ಮುದ್ರೆಯನ್ನು ಒತ್ತಿದೆ.

ರಾಷ್ಟ್ರಪತಿಗಳ ಒಪ್ಪಿಗೆಯೊಂದಿಗೆ ಅದು ಕಾಯ್ದೆಯಾಗಿ ದೇಶದಲ್ಲಿ ಜಾರಿಗೆ ಬಂದಿದೆ. ವಿರೋಧ ಪಕ್ಷಗಳು ಕಾಂಗ್ರೆಸ್‌ ಪಕ್ಷದ ನೇತೃತ್ವದಲ್ಲಿ ಈ ಕಾಯ್ದೆಯನ್ನು ತೀವ್ರವಾಗಿ ವಿರೋಧಿ ಇದು ಮಹಾತ್ಮ ಗಾಂಧಿಯವರನ್ನು ಮತ್ತೊಮ್ಮೆ ಕೊಂದಿದೆ ಎಂದು ಕಟುವಾಗಿ ಟೀಕಿಸಿವೆ.

ಹಾಗಿದ್ದರೆ ವಾಸ್ತವಾಂಶ ಏನು? ಈ ಎರಡೂ ಕಾಯ್ದೆ ಅಥವಾ ಯೋಜನೆಗಳನ್ನು ತುಲನಾತ್ಮಕವಾಗಿ ವಿಶ್ಲೇಷಿಸಬಹುದೇ? ನಿಜವಾಗಿಯೂ ʼವಿಬಿ-ಜಿ ರಾಮ್‌ ಜಿʼ ಕಾಯ್ದೆಯು ಮಹಾತ್ಮ ಗಾಂಧಿ ಆಶಯಗಳಿಗೆ ವಿರುದ್ಧವಾಗಿದೆಯೇ ಅಥವಾ ಮನರೇಗಾ ಇಟ್ಟಿದ್ದ ಹೆಜ್ಜೆಯನ್ನು ಇನ್ನೂ ಎತ್ತರದ ಸ್ತರಕ್ಕೆ ಒಯ್ಯುತ್ತಿದೆಯೇ? ಹೊಸ ಕಾಯ್ದೆಯ ವಿಧಿಗಳನ್ನು ಗಮನಿಸಿ, ವಿಶ್ಲೇಷಿಸಿ ನೋಡೋಣ ಬನ್ನಿ. (ಮುಂದಕ್ಕೆ ಓದಿ) ಅಥವಾ ಪರ್ಯಾಯ ವೆಬ್‌ ಸೈಟಿನ SPARDHA ಪುಟಕ್ಕೆ ಭೇಟಿ ಕೊಡಿ.