Wednesday, July 8, 2026

PARYAYA: ಜುಲೈ 17ರಂದು ಹಳಿ ಏರಲಿದೆ ದೇಶದ ಮೊದಲ ಹೈಡ್ರೋಜನ್ ರೈಲು!

 ಜುಲೈ 17ರಂದು ಹಳಿ ಏರಲಿದೆ ದೇಶದ ಮೊದಲ ಹೈಡ್ರೋಜನ್ ರೈಲು!

ವದೆಹಲಿ: ಭಾರತೀಯ ರೈಲ್ವೆಯು ಪರಿಸರ ಸ್ನೇಹಿ ಪ್ರಯಾಣದತ್ತ ಐತಿಹಾಸಿಕ ಹೆಜ್ಜೆ ಇಡಲು ಸಜ್ಜಾಗಿದೆ. ದೇಶದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜುಲೈ 17 ರಂದು ಹಸಿರು ನಿಶಾನೆ ತೋರಲಿದ್ದಾರೆ ಎಂದು ರೈಲ್ವೆ ಸಚಿವಾಲಯದ ಮೂಲಗಳು ತಿಳಿಸಿವೆ. ಹರಿಯಾಣದ ಜಿಂದ್ ರೈಲು ನಿಲ್ದಾಣದಿಂದ ಈ ರೈಲು ತನ್ನ ಮೊದಲ ಪಯಣ ಆರಂಭಿಸಲಿದೆ.

ಯೋಜನೆಯ ಮುಖ್ಯಾಂಶಗಳು:

  • ಮಾರ್ಗ: ಹರಿಯಾಣದ ಜಿಂದ್ – ಸೋನಿಪತ್ ನಡುವೆ ಈ ರೈಲು ಸಂಚರಿಸಲಿದೆ.
  • ದೈನಂದಿನ ಪ್ರಯಾಣ: ಪ್ರತಿದಿನ ಒಟ್ಟು 356 ಕಿ.ಮೀ ಅಂತರವನ್ನು ಕ್ರಮಿಸಲಿದೆ.
  • ಸಂಚಾರ: ದಿನಕ್ಕೆ ಎರಡು ರೌಂಡ್ ಟ್ರಿಪ್‌ಗಳನ್ನು ಪೂರೈಸಲಿದೆ.
  • ಸಾಮರ್ಥ್ಯ: ಒಟ್ಟು 682 ಪ್ರಯಾಣಿಕರು ಕುಳಿತುಕೊಳ್ಳುವ ಸಾಮರ್ಥ್ಯವನ್ನು ಹೊಂದಿದ್ದು, ಒಟ್ಟಾರೆ ಸುಮಾರು 2,600 ಪ್ರಯಾಣಿಕರನ್ನು ಹೊತ್ತೊಯ್ಯಬಲ್ಲದು.

ಹೈಡ್ರೋಜನ್ ರೈಲು ಹೇಗೆ ಕೆಲಸ ಮಾಡುತ್ತದೆ?

ಈ ರೈಲು ಡೀಸೆಲ್ ಅಥವಾ ವಿದ್ಯುತ್ ಬದಲಿಗೆ 'ಹೈಡ್ರೋಜನ್ ಫ್ಯೂಯಲ್ ಸೆಲ್' ತಂತ್ರಜ್ಞಾನವನ್ನು ಬಳಸುತ್ತದೆ. ಇದು ಹೈಡ್ರೋಜನ್ ಅನ್ನು ವಿದ್ಯುತ್ ಆಗಿ ಪರಿವರ್ತಿಸುವ ಮೂಲಕ ರೈಲನ್ನು ಚಲಾಯಿಸುತ್ತದೆ.

  • ಪರಿಸರ ಸ್ನೇಹಿ: ಈ ತಂತ್ರಜ್ಞಾನದಲ್ಲಿ ಯಾವುದೇ ಮಾಲಿನ್ಯಕಾರಕ ಹೊಗೆ ಬರುವುದಿಲ್ಲ. ಬದಲಾಗಿ, ಕೇವಲ ನೀರಿನ ಹಬೆ (Water Vapour) ಮಾತ್ರ ಹೊರಸೂಸುತ್ತದೆ, ಇದು ಪರಿಸರಕ್ಕೆ ಅತ್ಯಂತ ಸುರಕ್ಷಿತವಾಗಿದೆ.
  • ಶಕ್ತಿ: ಈ ರೈಲಿನಲ್ಲಿ ಎರಡು ಡ್ರೈವಿಂಗ್ ಪವರ್ ಕಾರ್‌ಗಳಿದ್ದು, ತಲಾ 1,200 kW ಶಕ್ತಿಯನ್ನು ಉತ್ಪಾದಿಸುತ್ತವೆ. ಒಟ್ಟಾರೆಯಾಗಿ ಇದು ಸುಮಾರು 3,200 ಕುದುರೆ ಶಕ್ತಿ (hp) ಸಾಮರ್ಥ್ಯವನ್ನು ಹೊಂದಿದೆ.

ವೇಗ ಮತ್ತು ಸುರಕ್ಷತೆ:

ರೈಲು ಗರಿಷ್ಠ 110 ಕಿ.ಮೀ ವೇಗದಲ್ಲಿ ಚಲಿಸುವ ಸಾಮರ್ಥ್ಯವನ್ನು ಹೊಂದಿದ್ದರೂ, ಸುರಕ್ಷತೆಯ ದೃಷ್ಟಿಯಿಂದ ಪ್ರಸ್ತುತ ಜಿಂದ್-ಸೋನಿಪತ್ ಮಾರ್ಗದಲ್ಲಿ 75 ಕಿ.ಮೀ ವೇಗದಲ್ಲಿ ಕಾರ್ಯನಿರ್ವಹಿಸಲಿದೆ. ಟ್ಯೂವಿ ಸುಡ್ (TÜV SÜD) ಸಂಸ್ಥೆಯಿಂದ ಈ ರೈಲಿನ ಸುರಕ್ಷತಾ ವ್ಯವಸ್ಥೆಗಳು ಈಗಾಗಲೇ ಅಂತರಾಷ್ಟ್ರೀಯ ಮಟ್ಟದಲ್ಲಿ ದೃಢೀಕರಿಸಲ್ಪಟ್ಟಿವೆ.

ಈ ರೈಲಿನ ಆಗಮನದಿಂದ ಭಾರತವು ಜರ್ಮನಿ, ಜಪಾನ್ ಮತ್ತು ಚೀನಾದಂತಹ ಮುಂದುವರಿದ ರಾಷ್ಟ್ರಗಳ ಸಾಲಿಗೆ ಸೇರ್ಪಡೆಯಾಗಿದ್ದು, ಇದು ಭಾರತೀಯ ರೈಲ್ವೆಯ ಇಂಗಾಲ ಮುಕ್ತ (Net-Zero) ಗುರಿಯತ್ತ ಇಟ್ಟ ದೊಡ್ಡ ಹೆಜ್ಜೆಯಾಗಿದೆ.

PARYAYA: ಜುಲೈ 17ರಂದು ಹಳಿ ಏರಲಿದೆ ದೇಶದ ಮೊದಲ ಹೈಡ್ರೋಜನ್ ರೈಲು!:   ಜುಲೈ 17 ರಂದು ಹಳಿ ಏರಲಿದೆ ದೇಶದ ಮೊದಲ ಹೈಡ್ರೋಜನ್ ರೈಲು! ನ ವದೆಹಲಿ: ಭಾರತೀಯ ರೈಲ್ವೆಯು ಪರಿಸರ ಸ್ನೇಹಿ ಪ್ರಯಾಣದತ್ತ ಐತಿಹಾಸಿಕ ಹೆಜ್ಜೆ ಇಡಲು ಸಜ್ಜಾಗಿದೆ. ದೇಶದ...

Tuesday, June 30, 2026

PARYAYA: ದೇಗುಲಕ್ಕೆ ಕಳೆಗಟ್ಟಿಸಿದ ಎರಡು ಕಾರ್ಯಕ್ರಮಗಳು

 ದೇಗುಲಕ್ಕೆ ಕಳೆಗಟ್ಟಿಸಿದ ಎರಡು ಕಾರ್ಯಕ್ರಮಗಳು

ಯಕ್ಷಗಾನ ತರಗತಿ ದ್ವಿತೀಯ ತಂಡ ಪ್ರಾರಂಭೋತ್ಸವ + ಸತ್ಯನಾರಾಯಣ ಪೂಜಾ

ಕ್ತಿ ಶ್ರದ್ಧೆಯೊಂದಿಗೆ ನಡೆಯುವ ದೇವಾರಾಧನೆ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳಿಗೆ ಇಂಬುಕೊಡುವ ಕಾರ್ಯಕ್ರಮಗಳು ದೇವಾಲಯಕ್ಕೆ ವಿಶೇಷ ಕಳೆಯನ್ನು ನೀಡುತ್ತವೆ.

ಗಣೇಶೋತ್ಸವ, ವಾರ್ಷಿಕೋತ್ಸವ, ಜಾತ್ರೆ ಇವುಗಳೆಲ್ಲ ದೇವಸ್ಥಾನಕ್ಕೆ ವಿಶೇಷ ಕಳೆಯನ್ನು ತಂದುಕೊಡುವ ವಿಶೇಷ ಸಂದರ್ಭಗಳು. ಹಾಗೆಯೇ ಇಂತಹ ಸಂದರ್ಭಗಳಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳು ಈ ವಿಶೇಷ ಸಂದರ್ಭಗಳನ್ನು ಇನ್ನಷ್ಟು ಸ್ಮರಣೀಯವನ್ನಾಗಿ ಮಾಡುತ್ತವೆ.

ದೇವಸ್ಥಾನಗಳಲ್ಲಿ ಇಂತಹ ಸಾಂಸ್ಕತಿಕ ಚಟುವಟಿಕೆಗೆ ಒದಗಿ ಬರುವ ಪ್ರೋತ್ಸಾಹ ಇನ್ನೂ ವಿಶೇಷವಾದದ್ದು.

ಬೆಂಗಳೂರಿನ ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನವು ಈ ನಿಟ್ಟಿನಲ್ಲಿ ನಿರಂತರ ಶ್ರಮ ವಹಿಸುತ್ತಿದೆ.

ಪ್ರತಿ ಮಾಸವೂ ಸತ್ಯ ನಾರಾಯಣ ಪೂಜೆ ಮತ್ತು ಸಂಕಷ್ಟಿ ಪೂಜೆಯನ್ನು ನಿರಂತರವಾಗಿ ನೆರವೇರಿಸುತ್ತಾ ಬಂದಿರುವುದರ ಜೊತೆಗೆ ಕಳೆದ ಎಂಟು ತಿಂಗಳುಗಳಿಂದ ಯಕ್ಷಗುರು ಉಮೇಶರಾಜ್‌ ಮಂದಾರ್ತಿ ನೇತೃತ್ವದ ʼಯಕ್ಷ ಕಲಾ ಕೌಸ್ತುಭʼ ತಂಡದ ಮೂಲಕ ಆಸಕ್ತರಿಗೆ ಕರ್ನಾಟಕದ ಹೆಮ್ಮೆಯ ಕಲೆಯಾದ ಯಕ್ಷಗಾನವನ್ನು ಕಲಿಸಿಕೊಡುವ ಕೈಕಂಕರ್ಯಕ್ಕೆ ನೀರೆಯುತ್ತಾ ಬಂದಿದೆ.

ಈ ತಂಡದ ಮೂಲಕ ಯಕ್ಷಗಾನ ಕಲಿತ ಮಕ್ಕಳು, ಮಹಿಳೆಯರು ಈ ಅವಧಿಯಲ್ಲಿ ಮೂರು ಯಕ್ಷಗಾನ ಪ್ರದರ್ಶನಗಳನ್ನೂ ಯಶಸ್ವಿಯಾಗಿ ನೀಡಿದ್ದಾರೆ. ಇದೀಗ ತಂಡವು ಯಕ್ಷಗಾನ ಕಲಿಯಬಯಸಿರುವ ಎರಡನೇ ತಂಡಕ್ಕೆ ತರಗತಿಗಳನ್ನೂ ಆರಂಭಿಸಿದೆ.

೨೦೨೬ ಜೂನ್‌ ೨೮ರ ಭಾನುವಾರ ಎರಡನೇ ತಂಡದ ಯಕ್ಷಗಾನ ತರಗತಿಯ ಆರಂಭೋತ್ಸವ ʼಬಾಲಾಜಿ ಮಹಾಗಣಪತಿಯ ಸನ್ನಿಧಿಯಲ್ಲಿ ಕಿರೀಟ ಪೂಜೆಯೊಂದಿಗೆ ಜರುಗಿತು. ಯಕ್ಷಗಾನ ವಿದ್ಯಾರ್ಥಿಗಳು, ಪೋಷಕರು, ಯಕ್ಷ ಕಲಾ ಕೌಸ್ತುಭ ಕುಟುಂಬದ ಸರ್ವ ಸದಸ್ಯರು, ದೇವಸ್ಥಾನ ಆಡಳಿತ ಸಮಿತಿಯ ಅಧ್ಯಕ್ಷ, ಉಪಾಧ್ಯಕ್ಷ, ಕಾರ್ಯದರ್ಶಿ ಸೇರಿದಂತೆ ಟ್ರಸ್ಟಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಮರುದಿನ ೨೦೨೬ ಜೂನ್‌ ೨೯ರ ಸೋಮವಾರ ದೇವಸ್ಥಾನದ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಿತು.

ಈ ಎರಡೂ ಕಾರ್ಯಕ್ರಮಗಳ ಚಿತ್ರಗಳು ಹಾಗೂ ವಿಡಿಯೋಗಳು ಇಲ್ಲಿವೆ.


PARYAYA: ದೇಗುಲಕ್ಕೆ ಕಳೆಗಟ್ಟಿಸಿದ ಎರಡು ಕಾರ್ಯಕ್ರಮಗಳು:   ದೇಗುಲಕ್ಕೆ ಕಳೆಗಟ್ಟಿಸಿದ ಎರಡು ಕಾರ್ಯಕ್ರಮಗಳು ಯಕ್ಷಗಾನ ತರಗತಿ ದ್ವಿತೀಯ ತಂಡ ಪ್ರಾರಂಭೋತ್ಸವ + ಸತ್ಯನಾರಾಯಣ ಪೂಜಾ ಭ ಕ್ತಿ ಶ್ರದ್ಧೆಯೊಂದಿಗೆ ನಡೆಯುವ ದೇವಾರಾಧನೆ ...

Sunday, June 21, 2026

PARYAYA: ಯಕ್ಷಗಾನದಲ್ಲಿ ಗೆಜ್ಜೆ ಕಟ್ಟುವುದು

 ಯಕ್ಷಗಾನದಲ್ಲಿ ಗೆಜ್ಜೆ ಕಟ್ಟುವುದು

ಕ್ಷಗಾನದಲ್ಲಿ ಗೆಜ್ಜೆ ಕಟ್ಟುವುದು ಒಂದು ಮಹತ್ವದ ಅಂಗ. ಗೆಜ್ಜೆ ಕಟ್ಟುವುದು ಯಕ್ಷಗಾನ ಕಲಾವಿದರಿಗೆ ಒಂದು ಸಂಭ್ರಮದ ಕ್ಷಣವೂ ಅಹುದು.


ಯಕ್ಷಗಾನ ಕಲಾವಿದರು ತಮ್ಮ ವೇಷ ಧರಿಸುವುದನ್ನು ಸ್ವತಃ ಮಾಡುತ್ತಾರೆ, ಅದು ಅಂದವಾಗಿ ಬಣ್ಣ ಬಳಿದುಕೊಂಡು, ವೇಷಭೂಷಣ ತೊಟ್ಟುಕೊಳ್ಳುವುದರಿಂದ ಹಿಡಿದು ಗೆಜ್ಜೆ ಕಟ್ಟುವವರೆಗೂ ಅವರವರೇ ತಮ್ಮ ಕೆಲಸಗಳನ್ನು ಮಾಡುತ್ತಾರೆ.

ಗೆಜ್ಜೆ ಕಟ್ಟುವುದನ್ನು ಕಲಿಯುವ ಮುನ್ನ ಗುರುಗಳು ಗೆಜ್ಜೆಯನ್ನು ಕಲಾವಿದರಿಗೆ ಕೊಡುತ್ತಾರೆ. ಅದನ್ನು ಪಡೆದುಕೊಳ್ಳುವ ಕಲಾವಿದರು ಪ್ರಪ್ರಥಮವಾಗಿ ದೇವರ ಮುಂದೆ ಹೋಗಿ ನಮಸ್ಕರಿಸಿ ಆ ಬಳಿಕ ಗುರುಗಳಿಗೆ ನಮಸ್ಕರಿಸುತ್ತಾರೆ. ಆ ಬಳಿಕ ಗುರುಗಳು ಕಲಾವಿದರಿಗೆ ಗೆಜ್ಜೆ ಕಟ್ಟುವುದನ್ನು ಹೇಳಿಕೊಡುತ್ತಾರೆ.

ಯಕ್ಷಗಾನ ಪ್ರದರ್ಶನದ ಸಂದರ್ಭದಲ್ಲಿ ಚೌಕಿಯಲ್ಲಿ ಗಣೇಶನ ಭಾವಚಿತ್ರವನ್ನು ಇರಿಸಿರುತ್ತಾರೆ. ಗೆಜ್ಜೆ ಕಟ್ಟುವ ಮುನ್ನ ಕಲಾವಿದರು ಗಣೇಶನಿಗೆ ನಮಸ್ಕರಿಸಿ ನಂತರ ಗೆಜ್ಜೆ ಕಟ್ಟಿಕೊಳ್ಳುತ್ತಾರೆ.

ಬೆಂಗಳೂರಿನ ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಕಳೆದ ಎಂಟು ತಿಂಗಳುಗಳಿಂದ ಯಕ್ಷಗಾನ ಕಲಿಯುತ್ತಿರುವ ಮಕ್ಕಳಿಗೆ ಇಂದು ೨೦೨೬ ಜೂನ್‌ ೨೧ರ ಭಾನುವಾರ ಗೆಜ್ಜೆ ಕಟ್ಟುವ ಸಂಭ್ರಮ. ಯಕ್ಷ ಕಲಾ ಕೌಸ್ತುಭ ತಂಡದ ಯಕ್ಷಗುರು ಉಮೇಶ ರಾಜ್‌ ಮಂದಾರ್ತಿ ಅವರು ಮಕ್ಕಳಿಗೆ ಗೆಜ್ಜೆ ಕಟ್ಟುವ ಬಗ್ಗೆ ಕಾರ್ಯಾಗಾರವನ್ನು ನಡೆಸಿದರು.

ಸಂದರ್ಭದ ಕೆಲವು ಪಟಗಳು ಹಾಗೂ ವಿಡಿಯೋಗಳು ಇಲ್ಲಿವೆ.

ಅಂದಹಾಗೆ ಯಕ್ಷಗಾನ ಕಲಿಯಲು ಇಚ್ಛಿಸುವವರಿಗಾಗಿ ಯಕ್ಷ ಕಲಾ ಕೌಸ್ತುಭದ ಎರಡನೇ ತಂಡದ ಅಭ್ಯಾಸ ಮುಂದಿನ ಭಾನುವಾರ ೨೦೨೬ ಜೂನ್‌ ೨೧ರಂದು ಬೆಳಗ್ಗೆ ಆರಂಭವಾಗಲಿದೆ. 
ಆಸಕ್ತರು ಇಲ್ಲಿ ಕ್ಲಿಕ್‌ ಮಾಡಿ ನೋಡಿ 👉


PARYAYA: ಯಕ್ಷಗಾನದಲ್ಲಿ ಗೆಜ್ಜೆ ಕಟ್ಟುವುದು:   ಯಕ್ಷಗಾನದಲ್ಲಿ ಗೆಜ್ಜೆ ಕಟ್ಟುವುದು ಯ ಕ್ಷಗಾನದಲ್ಲಿ ಗೆಜ್ಜೆ ಕಟ್ಟುವುದು ಒಂದು ಮಹತ್ವದ ಅಂಗ. ಗೆಜ್ಜೆ ಕಟ್ಟುವುದು ಯಕ್ಷಗಾನ ಕಲಾವಿದರಿಗೆ ಒಂದು ಸಂಭ್ರಮದ ಕ್ಷಣವೂ ಅಹುದ...

Thursday, June 18, 2026

PARYAYA: ರಾಜರಾಜೇಶ್ವರಿ ನಗರದಲ್ಲಿ ʼಕಂಸವಧೆʼ

 ರಾಜರಾಜೇಶ್ವರಿ ನಗರದಲ್ಲಿ ʼಕಂಸವಧೆʼ

ಬೆಂಗಳೂರು ರಾಜರಾಜೇಶ್ವರಿ ನಗರದ ಶಿವರತ್ನಪುರಿ ಟೆಂಪಲ್‌ ಆಫ್‌ ಹೆಲ್ತ್.‌ ರಸ್ತೆಯಲ್ಲಿ ಹೋಗುವವರನ್ನು ತನ್ನ ʼಪಿರಮಿಡ್‌ʼ ಆಕಾರದ ವಿಶಿಷ್ಠ ವಿನ್ಯಾಸದಿಂದಲೇ ಗಮನ ಸೆಳೆಯುವ ಸ್ಥಳ. ಇಲ್ಲಿ ಇತ್ತೀಚೆಗೆ ʼಪವಿತ್ರ ಭಾರತʼ ಕಾರ್ಯಕ್ರಮ. ೨೦೨೬ ಜೂನ್‌ ೧೩ರಂದು ವೇದ ಕುರಿತ ಸಂವಾದ ಮತ್ತು ಭರತ ನಾಟ್ಯದ ಸೊಬಗು.

೨೦೨೬ ಜೂನ್‌ ೧೪ರಂದು ವೇದ ಕುರಿತು ಸಂವಾದ ಮತ್ತು ಯಕ್ಷಗಾನ. ಈ ಕಾರ್ಯಕ್ರಮದಲ್ಲಿ ಬೆಂಗಳೂರು ಹೆಗಡೆ ನಗರ ಸಮೀಪದ ಅಮೃತಹಳ್ಳಿಯ ಮಕ್ಕಳಿಂದ ಸೊಗಸಾದ ʼಕಂಸವಧೆʼ ಯಕ್ಷಗಾನ. ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ʼಯಕ್ಷ ಕಲಾ ಕೌಸ್ತುಭʼ ತಂಡದ ಮೂಲಕ ಯಕ್ಷಗಾನ ಹೇಳಿಕೊಡುತ್ತಿರುವ ಯಕ್ಷಗುರು ಉಮೇಶರಾಜ್‌ ಮಂದಾರ್ತಿ ಅವರ ನಿರ್ದೇಶನ.

ಭರತನಾಟ್ಯ ಕಲಿಯುತ್ತಿರುವ ಬಾಲಕಿಯರು ಮಂದಾರ್ತಿ ಅವರ ನಿರ್ದೇಶನದಲ್ಲಿ ಕೇವಲ ೧೦-೧೫ ದಿನಗಳ ಕಾಲ ನೀಡಿದ ತರಬೇತಿಯಲ್ಲಿ ಯಕ್ಷಗಾನ ಕಲಿತು ಯಶಸ್ವಿಯಾಗಿ ಅದ್ಭುತ ಪ್ರದರ್ಶನವನ್ನು ನೀಡಿದರು.


ಈ ಸಂದರ್ಭದ ಕೆಲವು ಚಿತ್ರ ಹಾಗೂ ವಿಡಿಯೋಗಳು ಇಲ್ಲಿವೆ. ಯಕ್ಷಗಾನದ ಪೂರ್ಣ ಪ್ರಸಂಗವನ್ನು ವೀಕ್ಷಿಸಲು ಕೆಳಗಿನ ಚಿತ್ರಕ್ಲಿಕ್‌ ಮಾಡಿ.



PARYAYA: ರಾಜರಾಜೇಶ್ವರಿ ನಗರದಲ್ಲಿ ʼಕಂಸವಧೆʼ:   ರಾಜರಾಜೇಶ್ವರಿ ನಗರದಲ್ಲಿ ʼ ಕಂಸವಧೆ ʼ ಬೆಂ ಗಳೂರು ರಾಜರಾಜೇಶ್ವರಿ ನಗರದ ಶಿವರತ್ನಪುರಿ ಟೆಂಪಲ್‌ ಆಫ್‌ ಹೆಲ್ತ್.‌ ರಸ್ತೆಯಲ್ಲಿ ಹೋಗುವವರನ್ನು ತನ್ನ ʼ ಪಿರಮಿಡ್‌ ʼ ಆಕ...

Monday, June 15, 2026

PARYAYA: ಅರಳಲು ಅವಸರವಾಯಿತೇ ಈ ಬ್ರಹ್ಮ ಕಮಲಕ್ಕೆ?

 ಅರಳಲು ಅವಸರವಾಯಿತೇ ಈ ಬ್ರಹ್ಮ ಕಮಲಕ್ಕೆ?

ಇದು ʼಸುವರ್ಣʼ ನೋಟ

ವಾಮಾನ ವೈಪರೀತ್ಯದಿಂದ ಈ ಬಾರಿ ಮುಂಗಾರು ಕಣ್ಣಾ ಮುಚ್ಚಾಲೆ ಆಡುತ್ತಿದೆ. ವಾರ ಮುಂಚಿತವಾಗಿ ಬರುವುದೆಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದ್ದರೂ, ಬರುವುದು ತಡವಾಗಿದೆ.

ಸೆಕೆಗಾಲದ ಬಿಸಿಲ ಝಳವೂ ಈ ಸಾಲು ಅಂದರೆ ೨೦೨೬ನೇ ವರ್ಷದಲ್ಲಿ ಮಿತಿ ಮೀರಿತು. ಚಳಿಕಾಲದ ಕಥೆಯೂ ಅಷ್ಟೇ. ವಿಪರೀತ ಚಳಿ.

ಗಿಡ, ಮರ, ಬಳ್ಳಿಗಳ ಮೇಲೂ ಹವಾಮಾನದ ವೈಪರೀತ್ಯ ತನ್ನದೇ ಆದ ರೀತಿಯಲ್ಲಿ ಪ್ರಭಾವ ಬೀರಿದೆ. ಬೀರುತ್ತಿದೆ.

ನೋಡಿ. ಸಾಮಾನ್ಯವಾಗಿ ವರ್ಷಕ್ಕೆ ಒಂದೇ ಬಾರಿ ಅರಳುವ ಹೂ ಅದ್ಭುತ ಸೊಗಸಿನ ʼಬಹ್ಮ ಕಮಲʼ. ಸಾಮಾನ್ಯವಾಗಿ ಈ ಹೂ ಅರಳುವುದು ಜುಲೈ-ಆಗಸ್ಟ್‌ ತಿಂಗಳಲ್ಲಿ ಹುಣ್ಣಿಮೆ, ಅಮಾವಾಸ್ಯೆಯ ಸಮಯದಲ್ಲಿ.

ಈ ಬಾರಿ ಅದು ಕೂಡಾ ತಿಂಗಳು ಮುಂಚಿತವಾಗಿಯೇ ಅರಳಿ ಬಿಟ್ಟಿದೆ. ಮೊನ್ನೆ, ಮೊನ್ನೆ ಅಂದರೆ ೨೦೨೬ರ ಜೂನ್‌ ತಿಂಗಳ ೧೩ರ ಶನಿವಾರ ರಾತ್ರಿ ಅರಳಿತು. ಹೀಗೆ ಅರಳಿದ ಬ್ರಹ್ಮ ಕಮಲ ಹಿರಿಯ ಪತ್ರಿಕಾ ಛಾಯಾಗ್ರಾಹಕ ವಿಶ್ವನಾಥ ಸುವರ್ಣ ಅವರ ಕ್ಯಾಮರಾದಲ್ಲಿ ಬಂಧಿಯಾಗಿ ಬಿಟ್ಟಿತು. ಚಿತ್ರಗಳ ಸಮೀಪ ನೋಟಕ್ಕೆ ಅವುಗಳನ್ನು ಕ್ಲಿಕ್‌ ಮಾಡಿರಿ.

ಅಂದಹಾಗೆ, ಈ ಶನಿವಾರ ಪುಣ್ಯಪ್ರದವಾದ ಅಧಿಕ ಮಾಸದ  ಕೊನೆಯ ಶನಿವಾರ. ಅಧಿಕ ಮಾಸದಲ್ಲೇ ಅರಳಲು ʼಬ್ರಹ್ಮಕಮಲʼಕ್ಕೂ ಅವಸರವಾಗಿರಬಹುದೇನೋ? ಏನೇ ಆಗಲಿ, ಪುಣ್ಯದಿನದಂದೇ ಅರಳಿದ ಈ ಹೂವನ್ನು ನೋಡಿದವರಿಗೆ ಲಭಿಸುವ ಪುಣ್ಯ ಅಧಿಕವಾಗಲಿ ಎಂದು ಹಾರೈಸೋಣ.


PARYAYA: ಅರಳಲು ಅವಸರವಾಯಿತೇ ಈ ಬ್ರಹ್ಮ ಕಮಲಕ್ಕೆ?:   ಅರಳಲು ಅವಸರವಾಯಿತೇ ಈ ಬ್ರಹ್ಮ ಕಮಲಕ್ಕೆ? ಇದು ʼ ಸುವರ್ಣ ʼ ನೋಟ ಹ ವಾಮಾನ ವೈಪರೀತ್ಯದಿಂದ ಈ ಬಾರಿ ಮುಂಗಾರು ಕಣ್ಣಾ ಮುಚ್ಚಾಲೆ ಆಡುತ್ತಿದೆ. ವಾರ ಮುಂಚಿತವಾಗಿ ಬರುವ...

Thursday, June 11, 2026

PARYAYA: ಅಧಿಕ ಮಾಸದ ಪರಮ ಏಕಾದಶಿ ಸಂಭ್ರಮ

 ಅಧಿಕ ಮಾಸದ ಪರಮ ಏಕಾದಶಿ ಸಂಭ್ರಮ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೬ ಜೂನ್‌ ೧೧ರ ಗುರುವಾರ ಅಧಿಕ ಮಾಸದ ಪರಮ ಏಕಾದಶಿಯನ್ನು ಸಂಭ್ರಮದೊಂದಿಗೆ ಆಚರಿಸಲಾಯಿತು.

ದೇವಾಲಯದ ಭಕ್ತರು ವಿಷ್ಣು ಸಹಸ್ರನಾಮ, ಅಷ್ಟೋತ್ತರ, ಭಜನೆ, ಪ್ರಸಾದ ಸೇವೆಯೊಂದಿಗೆ ಈ ಸಂಭ್ರಮದಲ್ಲಿ ಪಾಲ್ಗೊಂಡರು.

ಇದೇ ಸಂದರ್ಭದಲ್ಲಿ ಬೆಳಗ್ಗೆ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ಕಿರಿಯ ಮಕ್ಕಳು, ಶಿಕ್ಷಕ ಮತ್ತಿತರ ಸಿಬ್ಬಂದಿ ದೇವಸ್ಥಾನಕ್ಕೆ ಆಗಮಿಸಿ, ಭಜನೆ, ಭಗವದ್ಗೀತೆ ಹಾಡುವ ಮೂಲಕ ಭಗವಂತನ ಸೇವಾ ಕೈಂಕರ್ಯ ನೆರವೇರಿಸಿದರು.

ಕಾಕತಾಳೀಯವಾಗಿ ಅಮೃತಹಳ್ಳಿಯ ಮಕ್ಕಳು ಯಕ್ಷಗುರು ಉಮೇಶರಾಜ್‌ ನೇತೃತ್ವದಲ್ಲಿ ಚೆಂಡೆ ಸಹಿತವಾಗಿ ʼಕಂಸವಧೆʼ ಯಕ್ಷಗಾನ ಅಭ್ಯಾಸ ಸೇವೆಯನ್ನು ಮಾಡಿದರು. ಭಕ್ತ ಸತೀಶ್‌ ಮತ್ತು ಕುಟುಂಬ ಸದಸ್ಯರು ಇದೇ ಸಂದರ್ಭದಲ್ಲಿ ಶ್ರೀ ವೆಂಕಟೇಶ್ವರನಿಗೆ ತೂಗುದೀಪವನ್ನು ಸಮರ್ಪಿಸಿದರು.

ಈ ಸಂದರ್ಭದ ಕೆಲವು ಚಿತ್ರಗಳು ಹಾಗೂ ವಿಡಿಯೋಗಳು ☝ ಇಲ್ಲಿವೆ. ಚಿತ್ರಗಳನ್ನು ಕ್ಲಿಕ್ಕಿಸುವ ಮೂಲಕ ಚಿತ್ರಗಳ ಸಮೀಪ ನೋಟ ಹಾಗೂ ವಿಡಿಯೋಗಳನ್ನು ನೋಡಬಹುದು.👇

ಅಧಿಕಮಾಸದ ಕೊನೆಯವಾರದ ಪ್ರಯುಕ್ತ ಸಂಪಿಗೆಹಳ್ಳಿಯ ಕೋದಂಡರಾಮ ಭಜನಾ ಮಂಡಳಿಯ ಸದಸ್ಯರು ಶನಿವಾರ ಸಂಜೆ ದೇವಾಲಯದಲ್ಲಿ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.





PARYAYA: ಅಧಿಕ ಮಾಸದ ಪರಮ ಏಕಾದಶಿ ಸಂಭ್ರಮ:   ಅಧಿಕ ಮಾಸದ ಪರಮ ಏಕಾದಶಿ ಸಂಭ್ರಮ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವ...

PARYAYA: ಗೃಹಿಣಿಯರು 'ರಾಷ್ಟ್ರ ನಿರ್ಮಾಪಕರು': ಅವರ ಶ್ರಮಕ್ಕೆ ಮಾಸಿಕ...

 ಗೃಹಿಣಿಯರು 'ರಾಷ್ಟ್ರ ನಿರ್ಮಾಪಕರು': ಅವರ ಶ್ರಮಕ್ಕೆ ಮಾಸಿಕ ₹30,000 ಮೌಲ್ಯ!

ಭಾರತೀಯ ನ್ಯಾಯಾಂಗ ಇತಿಹಾಸದಲ್ಲಿ ಒಂದು ಐತಿಹಾಸಿಕ ಮತ್ತು ಭಾವನಾತ್ಮಕ ತೀರ್ಪನ್ನು ಸುಪ್ರೀಂ ಕೋರ್ಟ್ 2026 ಜೂನ್‌ 11ರ ಗುರುವಾರ ನೀಡಿದೆ. ಇನ್ನು ಮುಂದೆ ಗೃಹಿಣಿಯರನ್ನು ಕೇವಲ 'ಮನೆಯಲ್ಲಿ ಇರುವವರು' ಎಂದು ನೋಡುವಂತಿಲ್ಲ, ಬದಲಾಗಿ ಅವರನ್ನು 'ರಾಷ್ಟ್ರ ನಿರ್ಮಾಪಕರು' (Nation Builders) ಎಂದು ಗೌರವಿಸಬೇಕು ಎಂದು ಸರ್ವೋಚ್ಚ ನ್ಯಾಯಾಲಯ ಘೋಷಿಸಿದೆ.

ರಸ್ತೆ ಅಪಘಾತಗಳಲ್ಲಿ ಮೃತಪಟ್ಟ ಗೃಹಿಣಿಯರ ಕುಟುಂಬಕ್ಕೆ ಪರಿಹಾರ ನೀಡುವಾಗ, ಅವರ ಮನೆಯ ಕೆಲಸದ ಮೌಲ್ಯವನ್ನು ಮಾಸಿಕ ಕನಿಷ್ಠ ₹30,000 ಎಂದು ಪರಿಗಣಿಸಬೇಕೆಂದು ನ್ಯಾಯಪೀಠ ಆದೇಶ ನೀಡಿದೆ.

ಈ ತೀರ್ಪು ಪಂಜಾಬ್‌ನ ಮೋಟಾರು ಅಪಘಾತ ಪರಿಹಾರ ಪ್ರಕರಣವೊಂದಕ್ಕೆ ಸಂಬಂಧಿಸಿದ ಮೇಲ್ಮನವಿಗೆ ಸಂಬಂಧಿಸಿದಂತೆ  ಬಂದಿದೆ. 2001ರ ನವೆಂಬರ್‌ನಲ್ಲಿ ರೇಷ್ಮಾ ಎಂಬ ಮಹಿಳೆಯೊಬ್ಬರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಅವರ ಪತಿ ಮತ್ತು ಮೂವರು ಮಕ್ಕಳು ಪರಿಹಾರ ಕೋರಿ ಮೋಟಾರು ಅಪಘಾತ ಪರಿಹಾರ ನ್ಯಾಯಾಧಿಕರಣವನ್ನು (Motor Accident Claims Tribunal) ಸಂಪರ್ಕಿಸಿದ್ದರು.
2003ರಲ್ಲಿ ನ್ಯಾಯಾಧಿಕರಣವು ಪರಿಹಾರವನ್ನು ಘೋಷಿಸಿದ್ದರೂ, ಈ ವಿಷಯವು ಹಲವು ವರ್ಷಗಳ ಕಾಲ ಕಾನೂನು ಸಮರದಲ್ಲಿ ಸಿಲುಕಿಕೊಂಡಿತ್ತು. ಅಂತಿಮವಾಗಿ, ಅಪಘಾತ ನಡೆದ ಎರಡು ದಶಕಗಳಿಗೂ ಹೆಚ್ಚು ಸಮಯದ ನಂತರ, 2024ರ ಡಿಸೆಂಬರ್‌ನಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಪ್ರಕರಣವನ್ನು ಇತ್ಯರ್ಥ ಪಡಿಸಿತ್ತು. ಈ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟಿಗೆ   ಈ ಮೇಲ್ಮನವಿ ಬಂದಿತ್ತು.

ತೀರ್ಪಿನ ಪ್ರಮುಖ ಮುಖ್ಯಾಂಶಗಳು:

  • ಗೃಹಿಣಿಯರ ಶ್ರಮಕ್ಕೆ ಬೆಲೆ: ದಶಕಗಳಿಂದ ರಸ್ತೆ ಅಪಘಾತ ಪರಿಹಾರ ಪ್ರಕರಣಗಳಲ್ಲಿ, ಗೃಹಿಣಿಯರ ಕೆಲಸವನ್ನು ಕೌಶಲ್ಯರಹಿತ ಕಾರ್ಮಿಕರ ವೇತನಕ್ಕೆ ಹೋಲಿಸಲಾಗುತ್ತಿತ್ತು. ಇದನ್ನು ತಳ್ಳಿಹಾಕಿರುವ ನ್ಯಾಯಮೂರ್ತಿಗಳಾದ ಸಂಜಯ್ ಕರೋಲ್ ಮತ್ತು ಎನ್. ಕೋಟಿಸ್ವರ್ ಸಿಂಗ್ ಅವರ ಪೀಠ, ಗೃಹಿಣಿಯರ ಕೆಲಸದ ಸಾಮಾಜಿಕ ಮತ್ತು ಆರ್ಥಿಕ ಮೌಲ್ಯ ಅಪಾರವಾದುದು ಎಂದು ಅಭಿಪ್ರಾಯಪಟ್ಟಿದೆ.
  • ಹೊಸ ಮಾನದಂಡ: "ನಾವು ಒಂದು ಹೊಸ ತತ್ವವನ್ನು ರೂಪಿಸಿದ್ದೇವೆ. ಪ್ರಣಯ್ ಸೇಥಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಜೊತೆಗೆ, ಗೃಹಸೇವೆ ಅಥವಾ ಮನೆಯ ನಿರ್ವಹಣೆಯ ನಷ್ಟವನ್ನು ಮಾಸಿಕ ಕನಿಷ್ಠ ₹30,000 ಎಂದು ಪರಿಗಣಿಸಬೇಕು" ಎಂದು ನ್ಯಾಯಮೂರ್ತಿ ಕರೋಲ್ ತಿಳಿಸಿದ್ದಾರೆ.
  • ನ್ಯಾಯಕ್ಕಾಗಿ ಎರಡು ದಶಕಗಳ ಕಾಯುವಿಕೆ: ಪಂಜಾಬ್‌ನ ರೇಷ್ಮಾ ಎಂಬ ಮಹಿಳೆ 2001ರಲ್ಲಿ ಅಪಘಾತದಲ್ಲಿ ಮೃತಪಟ್ಟಿದ್ದರು. ಅವರ ಕುಟುಂಬಕ್ಕೆ ನ್ಯಾಯ ಸಿಗಲು ಬರೋಬ್ಬರಿ 20 ವರ್ಷಕ್ಕೂ ಹೆಚ್ಚು ಸಮಯ ಬೇಕಾಯಿತು. ಈ ವಿಳಂಬದ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿದ ನ್ಯಾಯಾಲಯ, ಇಂತಹ ಪ್ರಕರಣಗಳನ್ನು ಒಂದು ವರ್ಷದೊಳಗೆ ಇತ್ಯರ್ಥಪಡಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಈ ತೀರ್ಪು ಯಾಕೆ ಐತಿಹಾಸಿಕ?

ಹಿಂದೆ, ಗೃಹಿಣಿಯರು ವೇತನ ಪಡೆಯದ ಕಾರಣ ಅವರ ಕೆಲಸಕ್ಕೆ ಮೌಲ್ಯವೇ ಇಲ್ಲ ಎಂಬಂತೆ ಪರಿಗಣಿಸಲಾಗುತ್ತಿತ್ತು. ಆದರೆ, 2010ರ ಅರುಣ್ ಕುಮಾರ್ ಅಗರ್ವಾಲ್ ಪ್ರಕರಣ ಮತ್ತು 2021ರ ಕೀರ್ತಿ ಪ್ರಕರಣಗಳಲ್ಲಿ ನ್ಯಾಯಾಲಯವು ಈ ಅಸಮಾನತೆಯನ್ನು ಪ್ರಶ್ನಿಸುತ್ತಾ ಬಂದಿತ್ತು. ಈಗ ಸುಪ್ರೀಂ ಕೋರ್ಟ್ ₹30,000 ರೂಪಾಯಿಯ ನಿಶ್ಚಿತ ಮಾನದಂಡವನ್ನು ನಿಗದಿಪಡಿಸುವ ಮೂಲಕ ಗೃಹಿಣಿಯರ ನಿರಂತರ ಸೇವೆಯನ್ನು ಅಧಿಕೃತವಾಗಿ ಮಾನ್ಯ ಮಾಡಿದೆ.

ಅಪಘಾತ ಪರಿಹಾರ ಪ್ರಕರಣಗಳಲ್ಲಿ ಸುಧಾರಣೆ

ಸುಪ್ರೀಂ ಕೋರ್ಟಿನ ಈ ಆದೇಶವು ಕೇವಲ ಪರಿಹಾರದ ಮೊತ್ತವನ್ನು ಹೆಚ್ಚಿಸುವುದಷ್ಟೇ ಅಲ್ಲ, ಬದಲಾಗಿ ಪರಿಹಾರ ಪ್ರಕರಣಗಳ ಇತ್ಯರ್ಥದಲ್ಲಿನ ವಿಳಂಬವನ್ನು ಹೋಗಲಾಡಿಸಲು ಎಲ್ಲಾ ಹೈಕೋರ್ಟುಗಳ ಮುಖ್ಯ ನ್ಯಾಯಮೂರ್ತಿಗಳಿಗೆ ನಿರ್ದೇಶನವನ್ನೂ  ನೀಡಿದೆ. "ಮೋಟಾರು ವಾಹನ ಕಾಯ್ದೆಯು ಸಂತ್ರಸ್ತ ಕುಟುಂಬಗಳಿಗೆ ಕಲ್ಯಾಣವನ್ನು ತಲುಪಿಸುವ ಉದ್ದೇಶವನ್ನು ಹೊಂದಿದೆ, ಆದರೆ ದಶಕಗಳ ಕಾಲ ಕಾಯುವಿಕೆ ಈ ಉದ್ದೇಶವನ್ನೇ ಸೋಲಿಸುತ್ತದೆ" ಎಂದು ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿದೆ.

ತೀರ್ಮಾನ: ಈ ತೀರ್ಪು ಭಾರತದ ಲಕ್ಷಾಂತರ ಗೃಹಿಣಿಯರ ಶ್ರಮಕ್ಕೆ ದೊರೆತ ದೊಡ್ಡ ಮನ್ನಣೆ. ಮನೆ ಎಂಬ ಸಂಸ್ಥೆಯನ್ನು ಕಟ್ಟುವಲ್ಲಿ ಮಹಿಳೆಯರ ಕೊಡುಗೆ ಕೇವಲ ವೈಯಕ್ತಿಕವಲ್ಲ, ಅದು ರಾಷ್ಟ್ರ ನಿರ್ಮಾಣದ ಪ್ರಕ್ರಿಯೆ ಎಂಬುದನ್ನು ಸುಪ್ರೀಂ ಕೋರ್ಟ್ ಈ ಮೂಲಕ ಜಗತ್ತಿಗೆ ಸಾರಿದೆ.

ಈ ಐತಿಹಾಸಿಕ ತೀರ್ಪಿನ ಬಗ್ಗೆ ನಿಮ್ಮ ಅನಿಸಿಕೆಗಳೇನು? ಈ ತೀರ್ಪು ಸಾಮಾನ್ಯ ಜನರಿಗೆ ಹೇಗೆ ಸಹಾಯ ಮಾಡುತ್ತದೆ ಎಂದು ನೀವು ಭಾವಿಸುತ್ತೀರಿ? ನಿಮ್ಮ ಅನಿಸಿಕೆಯನ್ನು ಕೆಳಗೆ ‘comments’ ವಿಭಾಗದಲ್ಲಿ ಬರೆಯಿರಿ.

PARYAYA: ಗೃಹಿಣಿಯರು 'ರಾಷ್ಟ್ರ ನಿರ್ಮಾಪಕರು': ಅವರ ಶ್ರಮಕ್ಕೆ ಮಾಸಿಕ...:   ಗೃಹಿಣಿಯರು ' ರಾಷ್ಟ್ರ ನಿರ್ಮಾಪಕರು ': ಅವರ ಶ್ರಮಕ್ಕೆ ಮಾಸಿಕ ₹30,000 ಮೌಲ್ಯ! ಭಾ ರತೀಯ ನ್ಯಾಯಾಂಗ ಇತಿಹಾಸದಲ್ಲಿ ಒಂದು ಐತಿಹಾಸಿಕ ಮತ್ತು ಭಾವನಾತ್ಮಕ ತೀರ...