ನಾನು ಮೆಚ್ಚಿದ ವಾಟ್ಸಪ್

Tuesday, July 25, 2017

ರಮಾನಾಥ ರೈ ಅವರಿಗೆ ರಾಜ್ಯ ಗೃಹ ಸಚಿವ ಪಟ್ಟ Ramananth Rai to become Home Minister

ರಮಾನಾಥ ರೈ ಅವರಿಗೆ ರಾಜ್ಯ ಗೃಹ ಸಚಿವ ಪಟ್ಟ
ಬೆಂಗಳೂರು: ಕೆ.ಪಿ.ಸಿ.ಸಿ. ಅಧ್ಯಕ್ಷರಾಗಿರುವ ಡಾ.ಜಿ. ಪರಮೇಶ್ವರ್‌ ಅವರು ತೆರವುಗೊಳಿಸಿದ್ದ ಗೃಹ ಖಾತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಅರಣ್ಯ ಸಚಿವ ರಮಾನಾಥ ರೈ ಅವರಿಗೆ  ನೀಡಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ ಎಂದು ಸುದ್ದಿಮೂಲಗಳು ತಿಳಿಸಿವೆ.


ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು. ಮಂಗಳವಾರ ಈ ಸಂಬಂಧ ಸಚಿವ ರಮಾನಾಥ ರೈ ಅವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡು ಗೃಹ ಖಾತೆಯ ಜವಾಬ್ದಾರಿ ನೀಡುವ ಕುರಿತು  ಚರ್ಚಿಸಿದರು.  ಹೈಕಮಾಂಡ್‌ ಸೂಚನೆಯನ್ನೂ ರೈ ಅವರಿಗೆ ಮನವರಿಕೆ ಮಾಡಿಕೊಟ್ಟರು.

ಚರ್ಚೆಯ ಬಳಿಕ ರಮಾನಾಥ ರೈ ಗೃಹ ಖಾತೆಯ ಜವಾಬ್ದಾರಿ ಹೊರಲು ಸಹಮತಿ ವ್ಯಕ್ತಪಡಿಸಿದ್ದಾರೆ ಎಂದು ಸಿಎಂ ಆಪ್ತ ಮೂಲಗಳು ತಿಳಿಸಿವೆ.

Ramananth Rai to become Home Minister 

No comments:

Post a Comment