Saturday, August 18, 2018

ಇಂದು ಮಳೆ ನುಡಿಯಿತು..


ಇಂದು ಮಳೆ ನುಡಿಯಿತು..

ಅಂದು ನಾನು ಹಲವು ಬಾರಿ ಹೇಳಿದ್ದೆ, ಬೇಡ-ಬೇಡ ಅಂತ... ನೀವು ನನ್ನ ದಾರಿ ಅಡ್ಡಗಟ್ಟಿದಿರಿ..
ಹೊಳೆಯೂ ಹೇಳಿತು.
ಅಂದು ನಾನು ತುಂಬಾ ಉಕ್ಕಿ ಹರಿದಿದ್ದೆ... ಆದರೆ ನೀವು ನನ್ನ ಹೃದಯ ಹಿಸುಕಿ, ನನ್ನ ದಡವನ್ನು ಆಕ್ರಮಿಸಿದಿರಿ.
ಭೂಮಿಯೂ ಹೇಳಿತು.
ಅಂದು ನಾನು ಸಾಕಷ್ಟು ಜಲ ಹೀರಿದ್ದೆ.. ಇಂದು ನೀವು ನನ್ನ ಬಾಯಿಗೆ ಕಾಂಕ್ರೀಟ್ ತುಂಬಿದಿರಿ...
ನಾನು ನೀರು ಸಂಗ್ರಹಿಸುತ್ತಿದ್ದ ಹೊಲ-ಜಲಾಶಯಕ್ಕೆ ನೀವು ಮಣ್ಣು ತುಂಬಿದಿರಿ....
ಬೆಟ್ಟಗಳೂ ನುಡಿದವು...
ಅಂದು ನಾನು ಭೀಕರ ಗಾಳಿ-ಮಳೆಗೆ ಅಲುಗಾಡದೆ ಗಟ್ಟಿ ನಿಂತಿದ್ದೆ.. ಆದರೆ ನೀವು ನನ್ನ ಕಾಲು ತುಂಡರಿಸಿದಿರಿ...
ನನಗೆ ಕಾಲು ಗಟ್ಟಿ ಊರಲಾಗದೆ ಭೂಕುಸಿದು ಬೀಳುತ್ತಿದೆ.
ಈಗ ಮಳೆ ಕೇಳುತ್ತಿದೆ..
ನೀವು ಮಣ್ಣು ತುಂಬಿದ ನದಿ-ತೋಡುಗಳನ್ನು ನನಗೆ ತೆರೆದು ಬಿಡುತ್ತೀರಾ? ನಾನು ನನ್ನ ಪಾಡಿಗೆ ಹೋಗುವೆ....
ಹೊಳೆ ಕೇಳುತ್ತಿದೆ...
ನನ್ನಿಂದ ನೀವು ಆಕ್ರಮಿಸಿದ ದಡವನ್ನು ವಾಪಸ್ಸು ಕೊಡುವಿರಾ?ನಾನು ನನ್ನ ದಾರಿಯಲ್ಲೇ ಹೋಗುವೆ...
ಭೂಮಿ ಕೇಳುತ್ತಿದೆ
ನಾನು ನೀರು ಸಂಗ್ರಹಿಸುತ್ತಿದ್ದ ಹೊಲ-ಜಲಾಶಯ ವಾಪಸ್ಸು ಕೊಡುವಿರಾ? ನಾನು ಅಲ್ಲೇ ಹಾಯಾಗಿರುವೆ....
ಬೆಟ್ಟಗಳು ಕೇಳುತ್ತಿವೆ
ಇನ್ನಾದರೂ ನನ್ನ ಕಾಲು-ಕಡಿಯುವುದನ್ನು ನಿಲ್ಲಿಸುವಿರಾ? ನಾನು ಒಂಟಿ ಕಾಲಲ್ಲಾದರೂ ಗಟ್ಟಿ ಕಾಲೂರಲು ಪ್ರಯತ್ನಿಸುವೆ....
ನೆನಪಿರಲಿ
ನಾವು ಮನುಷ್ಯರು ಪ್ರಕೃತಿಯ ಕಾವಲುಗಾರರು ಮಾತ್ರ ಒಡೆಯರಲ್ಲ....
ಮರೆತರೆ
ಪ್ರಕೃತಿಯೇ... ಅದು ಏನೆಂಬುದನ್ನು ನಮಗೆ ಕಲಿಸಿಕೊಡುತ್ತದೆ....
ಮಳೆಗಾಲ ಅದಕ್ಕೊಂದು ಉದಾಹರಣೆ ಮಾತ್ರ.     

(
ಸಂಗ್ರಹಾನುವಾದ: ಕೆ.ಪಿ.ನಾಭ ಐಲ್)
(‘ವಿಟ್ಲ ಸುದ್ದಿಗಳುವಾಟ್ಸಪ್ ನಲ್ಲಿ ಬಂದ ಒಂದು ಮಲಯಾಳಂ ಸಂದೇಶ)

No comments:

Post a Comment