Tuesday, December 31, 2019

ಇಂದಿನ ಇತಿಹಾಸ History Today ಡಿಸೆಂಬರ್ 31

2019: ನವದೆಹಲಿ: ೨೦೨೪-೨೫ರ ವೇಳೆಗೆ ೫ ಟ್ರಿಲಿಯನ್ ಅಮೆರಿಕನ್ ಡಾಲರ್ ಜಿಡಿಪಿ ಗುರಿ ಸಾಧನೆಗಾಗಿ ಮುಂದಿನ ಐದು ವರ್ಷಗಳಲ್ಲಿ ಮೂಲಸವಲತ್ತು ಕ್ಷೇತ್ರದಲ್ಲಿ ಹೂಡಿಕೆಯನ್ನು ದುಪ್ಪಟ್ಟುಗೊಳಿಸುವ ಯೋಜನೆಯನ್ನು 2019 ಡಿಸೆಂಬರ್ 31ರ ಮಂಗಳವಾರ ಇಲ್ಲಿ ಅನಾವರಣಗೊಳಿಸಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ’ಮೂಲಸವಲತ್ತು ಕ್ಷೇತ್ರದಲ್ಲಿ ೧೦೫ ಲಕ್ಷ ಕೋಟಿ ರೂಪಾಯಿಗಳನ್ನು ಹೂಡಿಕೆ ಮಾಡಲಾಗುವುದುಎಂದು ಪ್ರಕಟಿಸಿದರು. ಮೂಲಸವಲತ್ತು ನೀಲನಕ್ಷೆ ರೂಪಿಸಲು ರಚಿಸಲಾಗಿದ್ದ ಕಾರ್ಯಪಡೆ ವರದಿಯನ್ನು ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಮಾಡಿದ ಸಚಿವೆ ಸೀತಾರಾಮನ್ ಅವರು ಮುಂದಿನ ೫ ವರ್ಷಗಳಲ್ಲಿ ಮೂಲ ಸವಲತ್ತು ಕ್ಷೇತ್ರಕ್ಕೆ ೧೦೦ ಲಕ್ಷ ಕೋಟಿ ರೂಪಾಯಿಗಳ ಹೂಡಿಕೆ ಮೂಲಕ ಒತ್ತು ನೀಡಬೇಕೆಂಬ ಪ್ರಧಾನಿ ನರೇಂದ್ರ ಮೋದಿ ಅವರ ಯೋಚನೆಗೆ ಅನುಗುಣವಾಗಿ ವಿಸ್ತೃತ ಯೋಜನೆಯನ್ನು ರೂಪಿಸಲಾಗಿದೆ ಎಂದು ಹೇಳಿದರು. ಯೋಜನೆಯ ಪ್ರಕಾರ ೨.೫ ಲಕ್ಷ ಕೋಟಿ ರೂಪಾಯಿಗಳ ಬಂದರು ಮತ್ತು ವಿಮಾನ ನಿಲ್ದಾಣ ಯೋಜನೆಗಳು, ೩.೨ ಲಕ್ಷ ಕೋಟಿ ರೂಪಾಯಿಗಳ ಡಿಜಿಟಲ್ ಮೂಲಸವಲತ್ತು ಯೋಜನೆಗಳು, ೧೬ ಲಕ್ಷ ಕೋಟಿ ರೂಪಾಯಿಗಳ ಗ್ರಾಮೀಣ, ಕೃಷಿ ಮತ್ತು ಆಹಾರ ಸಂಸ್ಕರಣೆ ಯೋಜನೆಗಳನ್ನು ಗುರುತಿಸಲಾಗಿದೆ. ಚಲನಶೀಲತಾ ಯೋಜನೆಗಳು ಸೇರಿದಂತೆ ೧೬ ಲಕ್ಷ ಕೋಟಿ ರೂಪಾಯಿಗಳ ಮೂಲ ಸವಲತ್ತು ಯೋಜನೆಗಳನ್ನು ಮೂಲಸವಲತ್ತು ರಾಷ್ಟ್ರೀಯ ಮೂಲಸವಲತ್ತು ಕೊಳವೆಮಾರ್ಗ (ನ್ಯಾಷನಲ್ ಇನ್‌ಫ್ರಾಸ್ಟ್ರಕ್ಚರ್ ಪೈಪ್‌ಲೈನ್- ಎನ್‌ಐಪಿ) ಯೋಜನೆಗಳಿಗೆ ಸೇರ್ಪಡೆ ಮಾಡಲಾಗುವುದು ಎಂದು ವಿತ್ತ ಸಚಿವೆ ತಿಳಿಸಿದರು. ರಾಷ್ಟ್ರೀಯ ಮೂಲಸವಲತ್ತು ಕೊಳವೆಮಾರ್ಗ ಹೂಡಿಕೆಯಲ್ಲಿ ಶೇಕಡಾ ೨೨-೨೫ರಷ್ಟನ್ನು ಖಾಸಗಿರಂಗವು ಹಂಚಿಕೊಳ್ಳಲಿದೆ. ಕೇಂದ್ರ ಮತ್ತು ರಾಜ್ಯಗಳು ಉಳಿದ ವೆಚ್ಚವನ್ನು ಸರಿಸಮವಾಗಿ ಹಂಚಿಕೊಳ್ಳಲಿವೆ ಎಂದು ವಿತ್ತ ಸಚಿವರು ಹೇಳಿದರು. (ವಿವರಗಳಿಗೆ ಇಲ್ಲಿ ಕ್ಲಿಕ್  ಮಾಡಿರಿ)

2019: ನವದೆಹಲಿ:
2019 ಡಿಸೆಂಬರ್ 31ರ ಮಂಗಳವಾರ ಮಧ್ಯರಾತ್ರಿಯಿಂದ ಜಾರಿಗೆ ಬರುವಂತೆ
ಪ್ರಯಾಣಿಕರ ಮೂಲದರವನ್ನು ಏರಿಸಲು ರೈಲ್ವೇ ಸಚಿವಾಲಯವು 2019 ಡಿಸೆಂಬರ್ 31ರ ಮಂಗಳವಾರ ತಡರಾತ್ರಿಯಲ್ಲಿ ಆದೇಶ ನೀಡಿತು. ‘ರೈಲ್ವೇ ಸಚಿವಾಲಯವು ಮೂಲ ಪ್ರಯಾಣಿಕ ದರವನ್ನು (ಪ್ಯಾಸೆಂಜರ್ ಫೇರ್) ಪರಿಷ್ಕರಿಸಲು ನಿರ್ಧರಿಸಿದೆ. ಪರಿಷ್ಕೃತ ದರವು ೨೦೨೦ ಜನವರಿ ೧ರಿಂದ ಜಾರಿಗೆ ಬರುತ್ತದೆ ಎಂದು ಮಂಗಳವಾರ ರಾತ್ರಿ ಜಾರಿಗೊಳಿಸಲಾದ ಆದೇಶ ತಿಳಿಸಿತು.  ನೂತನ ಪಯಣದರ ಜಾರಿಗೆ ಕೆಲವೇ ಗಂಟೆಗಳು ಇರುವಾಗ ಈ ಆದೇಶವನ್ನು ಹೊರಡಿಸಲಾಯಿತು. ಕಿಲೋ ಮೀಟರ್ ದೂರಕ್ಕೆ ಸಾಮಾನ್ಯ ಹವಾನಿಯಂತ್ರಿತವಲ್ಲದ (ನಾನ್ ಎಸಿ) ರೈಲುಗಳಲ್ಲಿ ೧ ಪೈಸೆ ಮತ್ತು ಮೆಯಿಲ್ ಮತ್ತು ಎಕ್ಸ್ ಪ್ರೆಸ್ ರೈಲುಗಳಲ್ಲಿ (ಹವಾನಿಯಂತ್ರಿತವಲ್ಲದ ಬೋಗಿಗಳು)೨ ಪೈಸೆ ಹಾಗೂ ಹವಾನಿಯಂತ್ರಿತ ವರ್ಗಗಳಲ್ಲಿ ಪಯಣದರವನ್ನು ಕಿಲೋಮೀಟರಿಗೆ ೪ ಪೈಸೆಯಷ್ಟು ಏರಿಸಲಾಗಿದೆ. ಕೇಂದ್ರ ಸರ್ಕಾರವು ಪ್ರಯಾಣಿಕರ ದರ ಮತ್ತು ಸಾಗಣೆದರವನ್ನು ಪರಿಷ್ಕರಿಸಲು ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂಬುದಾಗಿ ರೈಲ್ವೇ ಮಂಡಳಿ  ಅಧ್ಯಕ್ಷ ವಿನೋದ ಕುಮಾರ್ ಯಾದವ್ ಅವರು ಹೇಳಿದ ಕೇವಲ ಒಂದು ದಿನದ ಬಳಿಕ ರೈಲ್ವೇ ಪಯಣದರಗಳ ಏರಿಕೆಯಾಗಿದೆ. ಏನಿದ್ದರೂ ಯಾದವ್ ಅವರು ದರವನ್ನು ಸುಧಾರಿಸುವ ಅಗತ್ಯವಿದೆ ಎಂದು ಹೇಳಿದ್ದರು. (ವಿವರಗಳಿಗೆ ಇಲ್ಲಿ ಕ್ಲಿಕ್  ಮಾಡಿರಿ)

2019: ನವದೆಹಲಿ:
೨೦೨೦ರಲ್ಲಿ ಭಾರತವು ಮೂರನೇ ಚಂದ್ರಯಾನವನ್ನು ನಡೆಸಲಿದೆ ಎಂದು
ಕೇಂದ್ರದ ಬಾಹ್ಯಾಕಾಶ ಇಲಾಖೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು 2019 ಡಿಸೆಂಬರ್ 31ರ ಮಂಗಳವಾರ ಇಲ್ಲಿ  ದೃಢ ಪಡಿಸಿದರು. ಕೇವಲ ಲ್ಯಾಂಡರ್ ಮತ್ತು ರೋವರ್ ಜೊತೆಗೆ ಚಂದ್ರಯಾನ -೩ ಮತ್ತೊಮ್ಮೆ ಚಂದ್ರನ ಅಂಗಳದಲ್ಲಿ ನಿಧಾನವಾಗಿ ಇಳಿಯುವ (ಸಾಫ್ಟ್ ಲ್ಯಾಂಡಿಂಗ್) ಪ್ರಯತ್ನ ಮಾಡಲಿದೆ ಎಂದು ಕೇಂದ್ರ ಸಚಿವರು ನುಡಿದರು. ‘ಹೌದು, ಭಾರತವು ತನ್ನ ಮೂರನೇ ಚಂದ್ರಯಾನವನ್ನು ೨೦೨೦ನೇ ಇಸವಿಯಲ್ಲಿ ನಡೆಸಲಿದೆ. ಆದಾಗ್ಯೂ, ನಾನು ಈ ಹಿಂದೆಯೇ ಹೇಳಿರುವಂತೆ ಚಂದ್ರಯಾನ-೨ನ್ನು ವಿಫಲವೆಂದು ಕರೆಯಲು ಸಾಧ್ಯವಿಲ್ಲ. ನಾವು ಅದರಿಂದ ಹಲವಾರು ವಿಷಯಗಳನ್ನು ಕಲಿತಿದ್ದೇವೆ. ವಿಶ್ವದಲ್ಲಿ ತನ್ನ ಮೊದಲನೇ ಯತ್ನದಲ್ಲೇ ಚಂದ್ರನ ಮೇಲೆ ಇಳಿದ ಯಾವುದೇ ರಾಷ್ಟ್ರವೂ ಇಲ್ಲ, ಅಮೆರಿಕವು ಇದಕ್ಕಾಗಿ ಹಲವಾರು ಪ್ರಯತ್ನಗಳನ್ನು ನಡೆಸಿತ್ತು. ಆದರೆ ನಮಗೆ ಅಂತಹ ಹಲವಾರು ಯತ್ನಗಳು ಬೇಕಾಗಲಾರದು ಎಂದು ಜಿತೇಂದ್ರ ಸಿಂಗ್ ಹೇಳಿದರು. ಚಂದ್ರಯಾನ-೨ ಯೋಜನೆಯು ಚಂದ್ರನ ಅಂಗಳವನ್ನು ತಲುಪಲು ಭಾರತ ನಡೆಸಿದ್ದ ಚೊಚ್ಚಲ ಯತ್ನವಾಗಿತ್ತು. ಸೆಪ್ಟೆಂಬರ್ ೭ರಂದು ಕೊನೆಯ ೨.೧ ಕಿಮೀ ಪಯಣ ಬಾಕಿ ಉಳಿದಿದ್ದಾಗ ಭೂ ಕೇಂದ್ರದ ಜೊತೆಗಿನ ವ್ಯೋಮನೌಕೆಯ ಸಂಪರ್ಕ ಕಡಿದುಹೋಗಿತ್ತು. ಇಳಿಯಬೇಕಿದ್ದ ತಾಣದಿಂದ ಕೇವಲ ೫೦೦ ಮೀಟರ್ ದೂರದಲ್ಲಿ ವಿಕ್ರಮ್ ಲ್ಯಾಂಡರ್ ಅಪ್ಪಳಿಸಿತ್ತು. ವಿಕ್ರಮ್ ಲ್ಯಾಂಡರ್ ಅಪ್ಪಳಿಸಿದ್ದನ್ನು ಜಿತೇಂದ್ರ ಸಿಂಗ್ ಅವರು ಸಂಸತ್ತಿನಲ್ಲಿ ಅಧಿಕೃತವಾಗಿ ದೃಢಪಡಿಸಿದ್ದರು. (ವಿವರಗಳಿಗೆ  ಇಲ್ಲಿ ಕ್ಲಿಕ್ ಮಾಡಿರಿ)


ನವದೆಹಲಿ: ಭಾರತದ ಮೂರು ರಕ್ಷಣಾ ಪಡೆಗಳ ಪ್ರಪ್ರಥಮ ಮುಖ್ಯಸ್ಥರಾಗಿ (ಚೀಫ್ ಆಫ್ ಡಿಫೆನ್ಸ್ ಸ್ಟಾಫ್- ಸಿಡಿಎಸ್)  ಜನರಲ್ ಬಿಪಿನ್ ರಾವತ್ ಅವರು 2020 ಜನವರಿ 01ರ ಬುಧವಾರ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇದೇ ವೇಳಗೆ ಕೇಂದ್ರ ಸರ್ಕಾರವು ಸೇನಾ ವ್ಯವಹಾರಗಳ ಇಲಾಖೆಯನ್ನು ಸೃಷ್ಟಿಸಿದ್ದು, ಇದರ ಮುಖ್ಯಸ್ಥರನ್ನಾಗಿಯೂ ಜನರಲ್ ರಾವತ್ ಅವರನ್ನೆ ನೇಮಕ ಮಾಡಿತು. ರಕ್ಷಣಾ ಪಡೆಗಳ ಮುಖ್ಯಸ್ಥರೇ (ಸಿಡಿಎಸ್) ಸೇನಾ ವ್ಯವಹಾರಗಳ ಇಲಾಖೆಗೂ ಮುಖ್ಯಸ್ಥರಾಗಿರುತ್ತಾರೆ ಎಂದು ಕೇಂದ್ರ ಸರ್ಕಾರದ ಆದೇಶ ತಿಳಿಸಿತು. ಸರ್ಕಾರದ ಆದೇಶದಂತೆ ಸಿಡಿಎಸ್ ಮುಖ್ಯಸ್ಥರಾಗಿರುವ ವಹಿಸಿಕೊಂಡಿರುವ ಜನರಲ್ ಬಿಪಿನ್ ರಾವತ್ ಸೇನಾ ವ್ಯವಹಾರಗಳ ಇಲಾಖೆಯ ಇಲಾಖೆಯ ನೇತೃತ್ವ ವಹಿಸಲಿದ್ದಾರೆ. ಹೊಸ ಇಲಾಖೆಯ ವ್ಯಾಪ್ತಿಯಲ್ಲಿ ಭೂ ಸೇನೆ, ವಾಯು ಮತ್ತು ನೌಕಾಪಡೆಯ ನೀತಿ, ಯೋಜನೆ ಮತ್ತು ಖರೀದಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಜನವರಿ 01ರ ಬುಧವಾರದಂದು ಜನರಲ್ ಬಿಪಿನ್ ರಾವತ್ ಅವರು ಭಾರತದ ಮೂರೂ ರಕ್ಷಣಾ ಪಡೆಗಳ ಪ್ರಪ್ರಥಮ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳುವರು. ಕೆಲ ದಿನಗಳ ಹಿಂದಷ್ಟೇ ರಕ್ಷಣಾ ಪಡೆಗಳ ಮುಖ್ಯಸ್ಥ (ಸಿಡಿಎಸ್) ಹುದ್ದೆಯನ್ನು ಸೃಷ್ಟಿಸಲಾಗಿತ್ತು. ಭಾರತದ ರಕ್ಷಣಾ ಪಡೆಯ ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಗಳ ಮೂರೂ ವಿಭಾಗಗಳಲ್ಲಿ ಸಹಕಾರ- ಸಮನ್ವಯ ಸಾಧನೆಯ ಜವಾಬ್ದಾರಿ ಸಿಡಿಎಸ್ ಆವರದಾಗಿರುತ್ತದೆ. ಮೂರೂ ಇಲಾಖೆಗಳಿಗೆ ಸಂಬಂಧಿಸಿದಂತೆ ರಕ್ಷಣಾ ಸಚಿವರಿಗೆ ಸಿಡಿಎಸ್ ಅವರೇ ಏಕಗವಾಕ್ಷಿ ಸಲಹೆಗಾರರಾಗಿರುತ್ತಾರೆ. ಮೂರೂ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿರುವ ಜನರಲ್ ರಾವತ್ ಅವರು ೨೦೧೭ರಲ್ಲಿ ಭೂ ಸೇನಾ ಮುಖ್ಯಸ್ಥರಾಗಿ ನೇಮಕಗೊಂಡು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಅವರ ಸೇವಾವಧಿ ಈದಿನಕ್ಕೆ  ಮುಕ್ತಾಯಗೊಂಡಿತ್ತು. ಜನರಲ್ ಬಿಪಿನ್ ರಾವತ್ ಅವರ ಸ್ಥಾನಕ್ಕೆ, ಭೂಸೇನಾ ದಂಡನಾಯಕರಾಗಿ ನೇಮಕಗೊಂಡಿರುವ ಲೆಫ್ಟಿನೆಂಟ್ ಜನರಲ್ ಮನೋಜ್ ಮುಕುಂದ್ ನರವಣೆ ಅವರೂ ಮಂಗಳವಾರ ಭೂ ಸೇನಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡರು. (ವಿವರಗಳಿಗೆ ಇಲ್ಲಿಕ್ಲಿಕ್ ಮಾಡಿರಿ)




Monday, December 30, 2019

ಇಂದಿನ ಇತಿಹಾಸ History Today ಡಿಸೆಂಬರ್ 30

2019: ನವದೆಹಲಿ: ಭಾರತದ ಮೂರೂ ರಕ್ಷಣಾ ಪಡೆಗಳ ಪ್ರಪ್ರಥಮ ಮುಖ್ಯಸ್ಥರಾಗಿ (ತ್ರಿಸೇನಾ ಮಹಾದಂಡನಾಯಕ- ಚೀಫ್ ಆಫ್ ಡಿಫೆನ್ಸ್ ಸ್ಟಾಫ್- ಸಿಡಿಎಸ್) ಹೊರಹೊಗುತ್ತಿರುವ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್  ಅವರನ್ನು ಕೇಂದ್ರ ಸರ್ಕಾರವು 2019 ಡಿಸೆಂಬರ್ 30ರ ಸೋಮವಾರ ನೇಮಕ ಮಾಡಿತು. ತ್ರಿಸೇನಾ ಪಡೆಗಳ ಮಹಾದಂಡನಾಯಕ ಭೂಸೇನೆ, ವಾಯುಸೇನೆ ಮತ್ತು ಜಲಪಡೆ – ಈ ಮೂರೂ ಸೇವೆಗಳಿಗೆ ಸಂಬಂಧಿಸಿದ ಎಲ್ಲ ವಿಚಾರಗಳಲ್ಲಿಯೂ ರಕ್ಷಣಾ ಸಚಿವರಿಗೆ ಮುಖ್ಯ  ಸೇನಾ ಸಲಹೆಗಾರರಾಗಿ ಕೆಲಸ ಮಾಡುತ್ತಾರೆ. ‘ಜನರಲ್ ಬಿಪಿನ್ ರಾವತ್ ಅವರನ್ನು 31.12.2019ರಿಂದ ಜಾರಿಯಾಗುವಂತೆ ತ್ರಿಸೇನಾ ಪಡೆಗಳ ಮಹಾದಂಡನಾಯಕರಾಗಿ (ಸಿಡಿಎಸ್) ನೇಮಕ ಮಾಡಲು ಸರ್ಕಾರ ನಿರ್ಧರಿಸಿದೆ. ಮುಂದಿನ ಆದೇಶಗಳವರೆಗೆ ಮತ್ತು ಸೇವಾ ವಿಸ್ತರಣೆಯವರೆಗೆ ಅವರು ಹುದ್ದೆಯಲ್ಲಿ ಮುಂದುವರೆಯುವರು’ ಎಂದು ರಕ್ಷಣಾ ಸಚಿವಾಲಯದ ಆದೇಶ ತಿಳಿಸಿದೆ.  ರಾವತ್ ಅವರು 1978ರಲ್ಲಿ ಸೇನೆಗೆ ಸೇರ್ಪಡೆಯಾಗಿದ್ದರು ಮತ್ತು ಪ್ರಸ್ತುತ 2017ರ ಜನವರಿ 1ರಿಂದ ಸೇನಾ ಸಿಬ್ಬಂದಿ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಅಧಿಕಾರಾವಧಿ 2019 ಡಿಸೆಂಬರ್ 31ಕ್ಕೆ ಮುಕ್ತಾಯವಾಗಲಿತ್ತು  (ವಿವರಗಳಿಗೆ ಇಲ್ಲಿ ಕ್ಲಿಕ್ಕಿಸಿ)

2019: ಮುಂಬೈ
:
ಮಹಾರಾಷ್ಟ್ರದ ಶಿವಸೇನೆ ನೇತೃತ್ವದ ಸರ್ಕಾರದಲ್ಲಿ ಸಚಿವ ಸಂಪುಟ . ಎನ್ ಸಿಪಿ
ವಿಸ್ತರಣೆಯಾಯಿತು. ನಾಯಕ ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿ 2019 ಡಿಸೆಂಬರ್ 30ರ ಸೋಮವಾರ  ಪ್ರಮಾಣ ವಚನ ಸ್ವೀಕರಿಸಿದರು. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪುತ್ರ ಆದಿತ್ಯ ಠಾಕ್ರೆ ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್, ದಿಲೀಪ್ ವಾಲ್ಸೆ ಪಾಟೀಲ್, ಧನಂಜಯ್ ಮುಂಡೆ, ವಿಜಯ್ ವಡೆತ್ತಿವಾರ್ ಮುಂತಾದವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ- ಎನ್ ಸಿಪಿ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರದ  ಸಚಿವ ಸಂಪುಟಕ್ಕೆ ಈದಿನ  ೩೬ ಶಾಸಕರು ಸಚಿವರಾಗಿ ಸೇರ್ಪಡೆಯಾದರು. (೨೬ ಸಂಪುಟ ದರ್ಜೆ ಮತ್ತು ೧೦ ಮಂದಿ ರಾಜ್ಯ ಸಚಿವರು) ನವೆಂಬರ್ ನಲ್ಲಿ ನಡೆದ ಧಿಡೀರ್ ರಾಜಕೀಯ ಬೆಳವಣಿಗೆಯಲ್ಲಿ ಅಜಿತ್ ಪವಾರ್ ಬಿಜೆಪಿ ಜೊತೆ ಕೈಜೋಡಿಸಿ ಉಪಮುಖ್ಯಮಂತ್ರಿಯಾಗಿದ್ದರು. ಆದರೆ ಎನ್ ಸಿಪಿ ಬೆಂಬಲ ದೊರೆಯದ ಹಿನ್ನಲೆ ಸರ್ಕಾರ ಪತನಗೊಂಡಿತ್ತು. (ವಿವರಗಳಿಗೆ ಇಲ್ಲಿ ಕ್ಲಿಕ್ಕಿಸಿ)

2019: ನವದೆಹಲಿ
:
ಪ್ರಧಾನಿ ನರೇಂದ್ರ ಮೋದಿ ಅವರ ನಂ., ಲೋಕಕಲ್ಯಾಣ ಮಾರ್ಗ್ ನಿವಾಸದ
ಬಳಿ 2019 ಡಿಸೆಂಬರ್ 30ರ ಸೋಮವಾರ ಸಂಜೆ ಬೆಂಕಿ ದುರಂತ ಅಪಾಯದ ಗಂಟೆ ಮೊಳಗಿದಾಗ ೧೭ ಅಗ್ನಿಶಾಮಕ ವಾಹನಗಳು ಅಲ್ಲಿಗೆ ಧಾವಿಸಿದವು. ಅಗ್ನಿ ಆಕಸ್ಮಿಕದ ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ ಎಂದು ಅಧಿಕಾರಿಗಳು ತಿಳಿಸಿದರು. ಸಂಜೆ .೨೫ರ ಸುಮಾರಿಗೆ ಅವಘಡ ಸಂಭವಿಸಿತು. ಏನಿದ್ದರೂ ಇದೊಂದು ಸಣ್ಣ ಅಗ್ನಿ ಪ್ರಮಾದವಾಗಿತ್ತು. ಶಾರ್ಟ್ ಸರ್ಕ್ಯೂಟ್ ಇದಕ್ಕೆ ಕಾರಣ ಎಂದು ಹೇಳಲಾಯಿತು. ಎಸ್ ಪಿಜಿ ಸ್ವಾಗತ ಪ್ರದೇಶದಲ್ಲಿ ಸಣ್ಣ ಪ್ರಮಾಣದ ಅಗ್ನಿ ಅನಾಹುತ ಸಂಭವಿಸಿದ್ದು, ಪರಿಸ್ಥಿತಿ ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದರು. (ವಿವರಗಳಿಗೆ ಇಲ್ಲಿ ಕ್ಲಿಕ್ಕಿಸಿ)

2019: ಶ್ರೀನಗರ
:
ಸಂವಿಧಾನದ ೩೭೦ನೇ ವಿಧಿರದ್ದು ಮತ್ತು ರಾಜ್ಯವನ್ನು ಎರಡು ಕೇಂದ್ರಾಡಳಿತ
ಪ್ರದೇಶಗಳಾಗಿ  ವಿಭಜಿಸಿದ ಕೇಂದ್ರ ಸರ್ಕಾರದ ಆಗಸ್ಟ್ ೫ರ ನಿರ್ಧಾರದ ಬಳಿಕ ಬಂಧಿಸಲಾಗಿದ್ದ ಐವರು ರಾಜಕೀಯ ನಾಯಕರನ್ನು ಜಮ್ಮು ಮತ್ತು ಕಾಶ್ಮೀರ ಆಡಳಿತವು ೧೪೮ ದಿನಗಳ ಬಳಿಕ 2019 ಡಿಸೆಂಬರ್ 20ರ ಸೋಮವಾರ ಬಿಡುಗಡೆ ಮಾಡಿತು. ನ್ಯಾಷನಲ್ ಕಾನ್ಫರೆನ್ ಮತ್ತು ಪಿಡಿಪಿಗೆ ಸೇರಿದ ಐವರು ನಾಯಕರು ಕಳೆದ ನಾಲ್ಕು ತಿಂಗಳುಗಳಿಂದ ಮುಂಜಾಗರೂಕತಾ ಬಂಧನದ ಅಡಿಯಲ್ಲಿ ಇದ್ದರು. ಬಂಧಿತ ನಾಯಕರಲ್ಲಿ ಇಶ್ಫಾಖ್ ಜಬ್ಬಾರ್ ಮತ್ತು ಗುಲಾಂ ನಬಿ ಭಟ್ (ಎನ್ಸಿ) ಹಾಗೂ ಬಶೀರ್ ಮೀರ್ ಝಹೂರ್ ಮೀರ್ ಮತ್ತು ಯಾಸಿರ್ ರೇಶಿ (ಪಿಡಿಪಿ) ಅವರು ಸೇರಿದ್ದಾರೆ. ರೇಶಿ ಅವರು ಆಗಿನ ಮುಖ್ಯಮಂತ್ರಿ ಪಿಡಿಪಿ ನಾಯಕಿ ಮಹಬೂಬಾ ಮುಫ್ತಿ ಅವರ ವಿರುದ್ಧ ಬಹಿರಂಗ ಬಂಡಾಯ ಎದ್ದಿದ್ದ ಬಂಡುಕೋರ ನಾಯಕ ಎಂದೇ ಪರಿಗಣಿಸಲ್ಪಟ್ಟಿದ್ದರು.ನವೆಂಬರ್ ೨೫ರಂದು ಪಿಡಿಪಿಯ ದಿಲಾವರ್ ಮೀರ್ ಮತ್ತು ಡೆಮಾಕ್ರಟಿಕ್ ಪಾರ್ಟಿ ನ್ಯಾಷನಲಿಸ್ಟ್ ನಾಯಕ ಗುಲಾಂ ಹಸನ್ ಮೀರ್ ಅವರನ್ನು ೧೧೦ ದಿನಗಳ ಬಂಧನದ ಬಳಿಕ ಕೇಂದ್ರಾಡಳಿತ ಪ್ರದೇಶ ಆಡಳಿತವು ಬಿಡುಗಡೆ ಮಾಡಿತ್ತು. ಅವರು ಮಾಜಿ ಶಾಸಕರಾಗಿದ್ದು ಬಾರಾಮುಲ್ಲಾ ಜಿಲ್ಲೆಯ ನಿವಾಸಿಗಳಾಗಿದ್ದರು. (ವಿವರಗಳಿಗೆ ಇಲ್ಲಿ ಕ್ಲಿಕ್ಕಿಸಿ)




Sunday, December 29, 2019

ಇಂದಿನ ಇತಿಹಾಸ History Today ಡಿಸೆಂಬರ್ 29

2019: ಉಡುಪಿ/ ಬೆಂಗಳೂರು: ಮಧ್ವಮತ ಪ್ರತಿಷ್ಠಾಪನಾಚಾರ್ಯ ಆಚಾರ್ಯ ಮಧ್ವರಿಂದ ಸ್ಥಾಪಿಸಲ್ಪಟ್ಟ ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಪೇಜಾವರ ಅಧೋಕ್ಷಜ ಮಠದ 32ನೇ ಸ್ವಾಮೀಜಿಸಂತಶ್ರೇಷ್ಠ , ಮಾಧ್ವಮತಪ್ರಚಾರಕ, ಹಿಂದೂ ಕುಲ ತಿಲಕ, ಅಪ್ರತಿಮ ಜ್ಞಾನಿ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಕೆಲದಿನಗಳ ತೀವ್ರ ಅನಾರೋಗ್ಯದ ಬಳಿಕ 2019 ಡಿಸೆಂಬರ್ 29ರ ಭಾನುವಾರ ಶ್ರೀಕೃಷ್ಣ ಪಾದವನ್ನು  ಸೇರಿದರು.  ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪೇಜಾವರ ಮಠದ ವಿದ್ಯೇಶ ತೀರ್ಥ ಸ್ವಾಮೀಜಿ ಈದಿನ ಬೆಳಗ್ಗೆ 9.20ಕ್ಕೆ ಕೊನೆಯುಸಿರೆಳೆದರು. ಧಾರ್ಮಿಕ ಕ್ಷೇತ್ರದಲ್ಲಿ ಮಾತ್ರವಲ್ಲದೆ ಸಾಮಾಜಿಕ, ರಾಜಕೀಯ ಚಟುವಟಿಕೆಗಳಿಗೂ ಪ್ರತಿಕ್ರಿಯಿಸುತ್ತ, ಎಲ್ಲ ರಂಗದಲ್ಲೂ ಸಕ್ರಿಯರಾಗಿದ್ದ ಪೇಜಾವರ ಶ್ರೀಗಳು ದೇಶಾದ್ಯಂತ ಪರಿಚಿತರಾಗಿದ್ದವರು.  89 ವರ್ಷ ಬದುಕಿದ ಪೇಜಾವರ ಶ್ರೀಗಳು ತಮ್ಮ ಜೀವನದ ಅಂತಿಮ ದಿನಗಳಲ್ಲೂ ಲವಲವಿಕೆಯ ಬದುಕು ನಡೆಸಿದ್ದು ವಿಶೇಷ. ದೈಹಿಕವಾಗಿ ಅವರು ಸಕ್ರಿಯರಾಗಿದ್ದರು. ದಿನನಿತ್ಯ ಪೂಜೆ, ಪ್ರಾರ್ಥನೆ, ಜಪ ತಪಗಳ ಜೊತೆಗೆ ವ್ಯಾಯಾಮ, ಯೋಗ, ಪ್ರಾಣಾಯಾಮಗಳನ್ನೂ ಅವರು ತಪ್ಪದೇ ಮಾಡುತ್ತಿದ್ದರು.  ಮಲೆನಾಡಿನ ನಕ್ಸಲ್ ಪೀಡಿತ ಗ್ರಾಮಗಳು ಹಾಗೂ ಅಭಿವೃದ್ಧಿ ಕಾಣದೇ ಇರುವ ಕುಗ್ರಾಮಗಳ ಅಭಿವೃದ್ಧಿಯ ಕನಸು ಕಂಡಿದ್ದ ಶ್ರೀಗಳು ಮಲೆನಾಡಿನೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಕಟ್ಟಾ ಹಿಂದುತ್ವವಾದಿಯಾಗಿದ್ದ ಶ್ರೀಗಳು ತಮ್ಮ ಕಾರುಚಾಲಕನಾಗಿ ಮುಸ್ಲಿಮ್ ಬಂಧುಗಳನ್ನು ಇಟ್ಟುಕೊಂಡಿದ್ದರು. ಅವರ ಕುಟುಂಬ ಸದಸ್ಯರ ಕ್ಷೇಮವನ್ನು ಅತ್ಯಂತ ಆತ್ಮೀಯತೆಯಿಂದ ನೋಡಿಕೊಂಡಿದ್ದರು. ವಿಶ್ವ ಹಿಂದೂ ಪರಿಷತ್ತಿನ ಮಾರ್ಗದರ್ಶಕರಲ್ಲಿ ಒಬ್ಬರಾಗಿದ್ದ ಪೇಜಾವರ ಶ್ರೀಗಳಿಗೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕು ಎಂಬುದು ಜೀವಮಾನದ ಕನಸಾಗಿತ್ತು.  ೧೯೩೧ ಏಪ್ರಿಲ್ ೨೩ರಂದು ಜನಿಸಿದ ಶ್ರೀಗಳ ಪಾರ್ಥಿವ ಶರೀರವನ್ನು ಉಡುಪಿಯ ಅಜ್ಜರಕಾಡಿನಲ್ಲೂ, ಬಳಿಕ ಬೆಂಗಳೂರಿನಲ್ಲೂ ಸಾರ್ವಜನಿಕರಿಗೆ ಅಂತ್ಯ ದರ್ಶನಕ್ಕಾಗಿ ಇರಿಸಿ, ಬಳಿಕ ಬೆಂಗಳೂರಿನ ಶ್ರೀನಿವಾಸ ನಗರದ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಅಂತ್ಯವಿಧಿಗಳನ್ನು ನೆರವೇರಿಸಿ ಬೃಂದಾವನಸ್ಥರನ್ನಾಗಿ ಮಾಡಲಾಯಿತು. (ವಿವರಗಳಿಗೆಇಲ್ಲಿ ಕ್ಲಿಕ್ ಮಾಡಿರಿ)

2019:  ನವದೆಹಲಿ: ತಿದ್ದುಪಡಿಗೊಂಡ ಪೌರತ್ವ ಕಾಯ್ದೆಯನ್ನು ವಿರೋಧಿಸುತ್ತಿರುವ ವಿರೋಧ ಪಕ್ಷಗಳುದಲಿತ ವಿರೋಧಿಗಳುಎಂದು 2019 ಡಿಸೆಂಬರ್ 29ರ ಭಾನುವಾರ ಟೀಕಿಸಿದ ಬಿಜೆಪಿ ಕಾರ್ಯಾಧ್ಯಕ್ಷ ಜೆ.ಪಿ. ನಡ್ಡಾ ಅವರುಪೌರತ್ವ ಕಾಯ್ದೆಯಿಂದ ಅನುಕೂಲ ಪಡೆಯಲಿರುವ ಶೇಕಡಾ ೭೦-೮೦ ಮಂದಿ ದಲಿತ ಸಮುದಾಯದವರು’ ಎಂದು ಹೇಳಿದರು.  ‘ಕಾಯ್ದೆಯನ್ನು ವಿರೋಧಿಸುತ್ತಿರುವ ದಲಿತ ನಾಯಕರನ್ನು ಬಯಲಿಗೆಳೆಯಬೇಕುಎಂದು ನುಡಿದ ನಡ್ಡಾ, ’ಪ್ರಧಾನಿ ನರೇಂದ್ರ ಮೋದಿ ಅವರು ದಲಿತ ಸಮುದಾಯದ ಅತ್ಯಂತ ದೊಡ್ಡ ಸಂರಕ್ಷಕಎಂದು ಪ್ರತಿಪಾದಿಸಿದರು. ದಲಿತ ಸಮೂಹವೊಂದು ಸಂಘಟಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ನಡ್ಡಾ ಅವರುಕಾಂಗ್ರೆಸ್ ಪಕ್ಷವು ಪೌರತ್ವ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದಂತೆ ಅಲ್ಪಸಂಖ್ಯಾತರನ್ನು ದಾರಿತಪ್ಪಿಸುತ್ತಿರುವ ಅಭಿಯಾನದ ನೇತೃತ್ವವನ್ನು ಕಾಂಗ್ರೆಸ್ ವಹಿಸಿದೆಎಂದು ಆಪಾದಿಸಿದರು. ನೂತನ ಕಾಯ್ದೆಯು ನೆರೆಯ ರಾಷ್ಟ್ರಗಳ ಅಲ್ಪಸಂಖ್ಯತರಿಗೆ ಪೌರತ್ವ ನೀಡುವುದಕ್ಕೆ ಸಂಬಂಧಿಸಿದ್ದೇ ಹೊರತು ಯಾವುದೇ ವ್ಯಕ್ತಿಯ ಪೌರತ್ವ ಕಿತ್ತುಕೊಳ್ಳುವುದಕ್ಕೆ ಸಂಬಂಧಿಸಿದ್ದಲ್ಲ ಎಂದು ನಡ್ಡಾ ನುಡಿದರು. (ವಿವರಗಳಿಗೆ ಇಲ್ಲಿ ಕ್ಲಿಕ್  ಮಾಡಿರಿ)

2019: ನವದೆಹಲಿ:ಮಿಲೆನಿಯಲ್ಸ್, ಸೋಶಿಯಲ್ ಮೀಡಿಯಾ ತಲೆಮಾರು ಮತ್ತು  ಝಡ್ ತಲೆಮಾರು ಇತ್ಯಾದಿ ಹೆಸರುಗಳಿಂದ ಕರೆಯಲ್ಪಡುವ ಇಂದಿನ ಯುವಕರು ವ್ಯವಸ್ಥೆಯ ಅಸ್ಥಿರತೆ ಮತ್ತು ಸ್ವಜನ ಪಕ್ಷಪಾತವನ್ನು ಸಹಿಸುವುದಿಲ್ಲಎಂದು ಪ್ರಧಾನಿ ನರೇಂದ್ರ ಮೋದಿ ಅವರು 2019 ಡಿಸೆಂಬರ್ 29ರ ಭಾನುವಾರ ಹೇಳಿದರು. ೨೦೧೯ರ ಸಾಲಿನ ತಮ್ಮ ಕೊನೆಯಮನ್ ಕಿ ಬಾತ್  ಬಾನುಲಿ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವ್ಯವಸ್ಥೆಯನ್ನು ನಂಬುವ ದೇಶದ ಯುವಕರ ನಿರೀಕ್ಷೆಗಳು ಮತ್ತು ಇತರ ವ್ಯಾಪಕ ವಿಷಯಗಳ ಕುರಿತು ಮಾತನಾಡಿದರು. ‘ಮುಂಬರುವ ದಶಕದಲ್ಲಿ ಯುವ ಭಾರತವು ಮಹತ್ವದ ಪಾತ್ರ ವಹಿಸಲಿದೆ. ಇಂದಿನ ಯುವಜನತೆ ವ್ಯವಸ್ಥೆಯನ್ನು ನಂಬುತ್ತದೆ ಮತ್ತು ವ್ಯಾಪಕ ವಿಷಯಗಳ ಬಗ್ಗೆ ತಮ್ಮದೇ ಅಭಿಪ್ರಾಯವನ್ನು ಹೊಂದಿದೆ. ಇದು ಮಹಾನ್ ವಿಷಯ ಎಂದು ನಾನು ಪರಿಗಣಿಸುತ್ತೇನೆಎಂದು ಪ್ರಧಾನಿ ಹೇಳಿದರು. ಇಂದಿನ ಯುವಕರು ಅಸ್ಥಿರತೆ, ಅರಾಜಕತೆ, ಸ್ವಜನಪಕ್ಷಪಾತವನ್ನು ದ್ವೇಷಿಸುತ್ತಾರೆ ಎಂದು ಅವರು ಹೇಳಿದರು. ಬಿಹಾರಿನ ಪಶ್ಚಿಮ ಚಂಪಾರಣ್ ಜಿಲ್ಲೆಯ ಭೈರಗಂಜ್ ಆರೋಗ್ಯ ಕೇಂದ್ರದ ಉದಾಹರಣೆಯನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ ಶಾಲೆಯೊಂದರ ಹಳೆ ವಿದ್ಯಾರ್ಥಿ ಸಂಘವು ಸಂಘಟಿಸಿದ ಆರೋಗ್ಯ ಶಿಬಿರಕ್ಕೆ ನೆರೆಯ ಗ್ರಾಮಗಳ ಸಹಸ್ರಾರು ಮಂದಿ ಆರೋಗ್ಯ ತಪಾಸಣೆಗಾಗಿ ಹೇಗೆ ಬರುತ್ತಿದ್ದಾರೆ ಎಂಬ ವಿಷಯವನ್ನು ಹಂಚಿಕೊಂಡರು. ‘ಇದು ಸರ್ಕಾರಿ ಕಾರ್ಯಕ್ರಮವಲ್ಲ, ಇಲ್ಲವೇ ಸರ್ಕಾರಿ ಉಪಕ್ರಮವೂ ಅಲ್ಲ. ಇದು ಸ್ಥಳೀಯ ಕೆಆರ್ ಹೈಸ್ಕೂಲಿನ ಹಳೆಯ ವಿದ್ಯಾರ್ಥಿಗಳ  ಸಂಘದ ಸಭೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮ. ಅವರು ಇದಕ್ಕೆಸಂಕಲ್ಪ ೯೫ಎಂಬ ಹೆಸರು ಇಟ್ಟಿದ್ದಾರೆಎಂದು ಹೇಳಿದ ಪ್ರಧಾನಿ, ಒಳ್ಳೆಯ ಕೆಲಸಗಳಿಗಾಗಿ ಯುವಕರು ಇಂತಹ ಹಳೆ ವಿದ್ಯಾರ್ಥಿ ಸಂಘಗಳನ್ನು ಬಳಸಬೇಕು ಎಂದು ಸೂಚಿಸಿದರು. (ವಿವರಗಳಿಗಾಗಿ ಇಲ್ಲಿ ಕ್ಲಿಕ್  ಮಾಡಿರಿ)

2019: ನವದೆಹಲಿಹಿರಿಯ ಚಿತ್ರನಟ ಅಮಿತಾಭ್ ಬಚ್ಚನ್ ಅವರನ್ನು ಚಲನಚಿತ್ರ ಜಗತ್ತಿಗೆ ನೀಡಿದ ಅಪ್ರತಿಮ ಕೊಡುಗೆಗಾಗಿ 2019 ಡಿಸೆಂಬರ್ 29ರ ಭಾನುವಾರ  ’ದಾದಾಸಾಹೇಬ್ ಫಾಲ್ಕೆಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಚಲನಚಿತ್ರ ಕ್ಷೇತ್ರದ ಅತ್ಯುನ್ನತ ಗೌರವವಾದ ಪ್ರಶಸ್ತಿಯನ್ನು ಬಚ್ಚನ್ ಅವರು ರಾಷ್ಟ್ರಪತಿ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಸ್ವೀಕರಿಸಿದರುಪ್ರತಿಷ್ಠಿತ ಪ್ರಶಸ್ತಿಯನ್ನು ಭಾರತೀಯ ಚಿತ್ರರಂಗದ ಜನಕ ಧುಂಡಿರಾಜ್ ಗೋವಿಂದ ಫಾಲ್ಕೆ ಅವರ ಹೆಸರಿನಲ್ಲಿ ೧೯೬೯ರಿಂದ ನೀಡಲಾಗುತ್ತಿದೆ. ಭಾರತೀಯ ಚಿತ್ರರಂಗದ ಬೆಳವಣಿಗೆ ಮತ್ತು ಅಭಿವೃದ್ಧಿಗಾಗಿ ಸಲ್ಲಿಸಿದ ಅಪ್ರತಿಮ ಸೇವೆಯನ್ನು ಪರಿಗಣಿಸಿ ಸರ್ಕಾರವು  ಪ್ರಶಸ್ತಿಯನ್ನು ನೀಡುತ್ತದೆ. ಪ್ರಶಸ್ತಿಯು ಸ್ವರ್ಣ ಕಮಲ ಮತ್ತು ೧೦ ಲಕ್ಷ ರೂಪಾಯಿಗಳ ನಗದು ಬಹುಮಾನವನ್ನು ಒಳಗೊಂಡಿದೆ. ಅಮಿತಾಭ್ ಬಚ್ಚನ್ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿ ಹೆಸರು ಘೋಷಣೆಯಾದಾಗ ಬಾಲಿವುಡ್ ಗಣ್ಯರು ಮತು ಅಭಿಮಾನಿಗಳಿಂದ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿತ್ತು. ಹಿರಿಯ ನಟನ ಜೊತೆಗೆ ನಟಿಸಿದ್ದ ಹೇಮಾ ಮಾಲಿನಿ ಅವರುಪ್ರಶಸ್ತಿಗೆ ಇದಕ್ಕಿಂತ ಹೆಚ್ಚಿನ ಸೂಕ್ತ ವ್ಯಕ್ತಿಯನ್ನು ನಾಮಕರಣ ಮಾಡುವ ಬಗ್ಗೆ ಯೋಚಿಸಲೂ ಸಾಧ್ಯವಿಲ್ಲಎಂದು ಹೇಳಿದ್ದರು. ಪುತ್ರ ಅಭಿಷೇಕ್ ಬಚ್ಚನ್, ರಜನೀಕಾಂತ್, ಲತಾ ಮಂಗೇಶ್ಕರ್, ಆಶಾ ಬೋಸ್ಲೆ, ಅನಿಲ್ ಕಪೂರ್, ಕರಣ್ ಜೋಹರ್, ರೀತೀಶ್ ದೇಶಮುಖ್, ವಿವೇಕ ಓಬೆರಾಯ್, ಅರ್ಜುನ್ ಕಪೂರ್, ಆಯುಷ್ಮಾನ್ ಖುರಾನಾ, ಹುಮಾ ಖುರೇಶಿ ಮತ್ತು ಕಾರ್ತಿಕ್ ಆರ್ಯನ್ ಸೇರಿದಂತೆ ಚಿತ್ರರಂಗದ ಗಣ್ಯರು ಅಮಿತಾಭ್ ಅವರನ್ನು ಅಭಿನಂದಿಸಿದವರಲ್ಲಿ ಸೇರಿದ್ದರು. (ವಿವರಗಳಿಗೆ ಇಲ್ಲಿ ಕ್ಲಿಕ್ ಮಾಡಿರಿ)

2019: ರಾಂಚಿ: ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಹೇಮಂತ್ ಸೊರೇನ್ ಅವರು ಜಾರ್ಖಂಡ್ ರಾಜ್ಯದ ೧೧ನೇ ಮುಖ್ಯಮಂತ್ರಿಯಾಗಿ 2019 ಡಿಸೆಂಬರ್ 29ರ ಭಾನುವಾರ  ಇಲ್ಲಿ ಪ್ರಮಾಣವಚನ ಸ್ವೀಕರಿಸಿದರು. ವಿರೋಧ ಪಕ್ಷಗಳ ಉನ್ನತ ನಾಯಕರು ಪ್ರಮಾಣವಚನ ಸಮಾರಂಭದಲ್ಲಿ ಪಾಲ್ಗೊಂಡು ವಿಪಕ್ಷ ಏಕತೆಯನ್ನು ಪ್ರದರ್ಶಿಸಿದರು. ರಾಜ್ಯಪಾಲರಾದ ದ್ರೌಪದಿ ಮುರ್ಮು ಅವರು ಹೇಮಂತ್ ಸೊರೇನ್ ಅವರಿಗೆ ಕಚೇರಿ ಮತ್ತು ಗೌಪ್ಯತಾ ಪ್ರಮಾಣ ವಚನವನ್ನು ಬೋಧಿಸಿದರು. ಸೊರೇನ್ ಅವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ ಭಾರೀ ಸಂಖ್ಯೆಯಲ್ಲಿ ಸೇರಿದ್ದ ಜನ ಸಮುದಾಯಜೈ ಜಾರ್ಖಂಡ್ಘೋಷಣೆಗಳನ್ನು ಮೊಳಗಿಸಿತು. ರಾಷ್ಟ್ರೀಯ ಜನತಾದಳದ (ಆರ್ಜೆಡಿ) ಸತ್ಯಾನಂದ ಭೋಗ್ಟಾ ಮತ್ತು ಕಾಂಗ್ರೆಸ್ ಪಕ್ಷದ ಜಾರ್ಖಂಡ್ ಘಟಕದ ಮುಖ್ಯಸ್ಥ ರಾಮೇಶ್ವರ ಓರಾನ್ ಅವರು ಕೂಡಾ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವುದರೊಂದಿಗೆ ೪೪ರ ಹರೆಯದ ಜೆಎಂಎಂ ನಾಯಕ ಎರಡನೇ ಅವಧಿಗೆ ತಮ್ಮ ರಾಜ್ಯಭಾರ ಆರಂಭಿಸಿದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಡಿಎಂಕೆಯ ಎಂಕೆ ಸ್ಟಾಲಿನ್, ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಸುಪ್ರೀಯಾ ಸುಳೆ, ಆರ್ಜೆಡಿಯ ತೇಜಸ್ವಿ ಯಾದವ್ ಮತ್ತು ಆಮ್ ಆದ್ಮಿ ಪಕ್ಷದ (ಆಪ್) ಸಂಜಯ್ ಸಿಂಗ್ ಅವರು ರಾಂಚಿಯ ಮೊರಬಾದಿ ಪ್ರದೇಶದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಹಾಜರಿದ್ದ ಗಣ್ಯರಲ್ಲಿ ಸೇರಿದ್ದರು. (ವಿವರಗಳಿಗೆ ಇಲ್ಲಿ ಕ್ಲಿಕ್  ಮಾಡಿರಿ)