ನಾನು ಮೆಚ್ಚಿದ ವಾಟ್ಸಪ್

Sunday, March 31, 2019

ಇದೀಗ ಅಧಿಕೃತ, ವಯನಾಡಿಗೂ ಇಳಿದ ರಾಹುಲ್ ಗಾಂಧಿ

ಇದೀಗ ಅಧಿಕೃತ, ವಯನಾಡಿಗೂ ಇಳಿದ ರಾಹುಲ್ ಗಾಂಧಿ
ತಿರುವನಂತಪುರಂ: ಇದೀಗ ಅಧಿಕೃತ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ  ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಉತ್ತರ ಪ್ರದೇಶದ ಅಮೇಥಿ ಕ್ಷೇತ್ರದ ಹೊರತಾಗಿ  ಉತ್ತರ ಕೇರಳದ ವಯನಾಡಿನಲ್ಲೂ ಸ್ಪರ್ಧೆಗೆ ಇಳಿಯಲಿದ್ದಾರೆ.

ಇದರೊಂದಿಗೆ ರಾಹುಲ್ ಅವರು ಕರ್ನಾಟಕದ ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಿದ್ದ ಅಜ್ಜಿ ಇಂದಿರಾಗಾಂಧಿ ಮತ್ತು ಬಳ್ಳಾರಿಯಿಂದ ಸ್ಪರ್ಧಿಸಿದ್ದ ಅಮ್ಮ ಸೋನಿಯಾ ಗಾಂಧಿ ಮಾರ್ಗದಲ್ಲಿ ಹೆಜ್ಜೆ ಹಾಕಿದ್ದಾರೆ.

ದಕ್ಷಿಣದ  ಎಲ್ಲ ರಾಜ್ಯಗಳೂ ಕಾಂಗ್ರೆಸ್ ಅಧ್ಯಕ್ಷರನ್ನು ತಮ್ಮ ರಾಜ್ಯಗಳಿಂದ ಸ್ಪರ್ಧಿಸುವಂತೆ ಮನವಿ ಮಾಡಿವೆ. ಸಾಕಷ್ಟು ಪರಿಶೀಲನೆಯ ಬಳಿಕ ಅವರು ಕರ್ನಾಟಕ ಮತ್ತು ತಮಿಳುನಾಡು ಜೊತೆ ಗಡಿಗಳನ್ನು ಹಂಚಿಕೊಂಡಿರುವ ಕೇರಳದ ವಯನಾಡು ಕ್ಷೇತ್ರದಿಂದಲೂ ಸ್ಪರ್ಧಿಸಲು ರಾಹುಲ್ ಗಾಂಧಿಯವರು ನಿರ್ಧರಿಸಿದ್ದಾರೆಎಂದು ಹಿರಿಯ ಕಾಂಗ್ರೆಸ್ ನಾಯಕ .ಕೆ. ಆಂಟನಿ ಅವರು ನವದೆಹಲಿಯಲ್ಲಿ 2019 ಮಾರ್ಚ್ 31 ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು.

ಕಾಂಗ್ರೆಸ್ ಅಧ್ಯಕ್ಷರ ನಿರ್ಧಾರದಿಂದ  ಆನಂದತುಂದಿಲರಾದ ಕಾರ್ಯಕರ್ತರು ಪಟಾಕಿಗಳನ್ನು ಸಿಡಿಸಿ, ಸಿಹಿ ಹಂಚಿಕೊಳ್ಳುವ  ಮೂಲಕ ವಯನಾಡುವಿನಿಂದ ರಾಹುಲ್ ಗಾಂಧಿ ಅವರ ಅಭ್ಯರ್ಥನವನ್ನು ಬೆಂಬಲಿಸಿದರು. ಹಲವಡೆಗಳಲ್ಲಿ ಕಾರ್ಯಕರ್ತರು ಮೆರವಣಿಗೆಗಳನ್ನೂ ನಡೆಸಿದರು.

(ವಿವರಗಳಿಗೆ ಕೆಳಗಿನ ಚಿತ್ರ ಕ್ಲಿಕ್ಕಿಸಿ):

No comments:

Post a Comment