Wednesday, September 11, 2019

ಇಂದಿನ ಇತಿಹಾಸ History Today ಸೆಪ್ಟೆಂಬರ್ 11

ಇಂದಿನ ಇತಿಹಾಸ  History Today ಸೆಪ್ಟೆಂಬರ್ 11
2019: ಜಿನೇವಾ: ಕಾಶ್ಚೀರ ವಿಚಾರದಲ್ಲಿ ಮಧ್ಯಪ್ರವೇಶ ಮಾಡುವಂತೆ ಪಾಕಿಸ್ತಾನ ಮಾಡಿರುವ ಮನವಿಯನ್ನು ವಿಶ್ವಸಂಸ್ಥೆ ಸಾರಾಸಗಟು ತಿರಸ್ಕರಿಸಿ, ಭಾರತ ಮತ್ತು ಪಾಕಿಸ್ತಾನ ಮಾತುಕತೆಯ ಮೂಲಕವೇ ವಿವಾದ ಇತ್ಯರ್ಥ ಪಡಿಸಿಕೊಳ್ಳಬೇಕು ಎಂದು 2019 ಸೆಪ್ಟೆಂಬರ್ 11ರ ಬುಧವಾರ ಸೂಚಿಸಿತು. ಜಮ್ಮು-ಕಾಶ್ಮೀರದ ವಿಚಾರದಲ್ಲಿ ಉಭಯ ದೇಶಗಳು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯಲ್ಲಿ (ಯುಎನ್ಎಚ್ ಆರ್ಸಿ) ಪರಸ್ಪರ ಘರ್ಷಿಸಿದ ಒಂದು  ದಿನದ ಬಳಿಕ, ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೋ ಗ್ಯುಟೆರಸ್ ಅವರುಕಾಶ್ಮೀರ ವಿಚಾರದಲ್ಲಿ ಯಾವುದೇ ರಾಜಕೀಯ ಬಿಕ್ಕಟ್ಟಿಗೆ ಅವಕಾಶ ನೀಡಬಾರದುಎಂದು ಕಳಕಳಿ ವ್ಯಕ್ತಪಡಿಸಿ, ಕಾಶ್ಮೀರದ ವಿಚಾರವನ್ನು ಭಾರತ ಮತ್ತು ಪಾಕಿಸ್ತಾನ ಮಾತುಕತೆಯ ಮೂಲಕವೇ ಇತ್ಯರ್ಥಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ಸ್ವಿಜರ್ಲೆಂಡಿನ ರಾಜಧಾನಿ ಜಿನೇವಾದಲ್ಲಿ ನಡೆದ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ೪೨ನೇ ಸಮ್ಮೇಳನದಲ್ಲಿ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗ್ಯುಟೆರಸ್  ಅವರು ಹೇಳಿಕೆ ನೀಡಿದ್ದಾರೆ ಎಂದು ವರದಿಯೊಂದು ತಿಳಿಸಿತು. (ವಿವರಗಳಿಗೆ ಇಲ್ಲಿ ಕ್ಲಿಕ್ಕಿಸಿ)

2019: ಮಥುರಾ (ಉತ್ತರಪ್ರದೇಶ): ’ಗೋವುಮತ್ತುಓಂಪದ ಕೇಳಿದರೆ, ಕೆಲವು ಜನರಿಗೆಆಘಾತವಾಗುತ್ತದೆಇದು ದುರದೃಷ್ಟಕರ ಎಂದು ಪ್ರಧಾನಿ ನರೇಂದ್ರ ಮೋದಿ ಅವರು 2019 ಸೆಪ್ಟೆಂಬರ್ 11ರ  ಬುಧವಾರ ಇಲ್ಲಿ ಹೇಳಿದರು. ಉತ್ತರ ಪ್ರದೇಶದ ಮಥುರಾದಲ್ಲಿ ರಾಷ್ಟ್ರೀಯ ಜಾನುವಾರುಗಳ ರೋಗ ನಿಯಂತ್ರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರಧಾನಿ ಮಾತನಾಡಿದರು. ‘ಕೆಲವು ವ್ಯಕ್ತಿಗಳ ಕೂದಲುಗಳುಗೋವುಮತ್ತುಓಂಪದ ಕೇಳುತ್ತಿದ್ದಂತೆಯೇ ವಿದ್ಯುತ್ ಆಘಾತಕ್ಕೆ ಒಳಗಾದಂತೆ ನಿಮಿರುತ್ತವೆ. ರಾಷ್ಟ್ರವು ೧೬ ನೇ ಶತಮಾನದಷ್ಟು ಹಿಂದಕ್ಕೆ ಹೋಗಿದೆ ಎಂದು ಅವರು ಭಾವಿಸುತ್ತಾರೆ, ಇದು ದುರದೃಷ್ಟಕರ. ಪ್ರಾಣಿಗಳು ಇಲ್ಲದ ಗ್ರಾಮೀಣ ಆರ್ಥಿಕ ವ್ಯವಸ್ಥೆ ಬಗ್ಗೆ ಯಾರಾದರೂ ಮಾತನಾಡಲು ಸಾಧ್ಯವಿದೆಯೇ? ಎಂದು ಪ್ರದಾನಿ ಮೋದಿ ಪ್ರಶ್ನಿಸಿದರು. ರೈತರಿಗಾಗಿ ಇತರ ಹಲವು ಯೋಜನೆಗಳ ಜೊತೆಗೆ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮವನ್ನು  (ಎನ್ಎಡಿಸಿಪಿ) ಅವರು ಉದ್ಘಾಟಿಸಿದರು. ‘ಭಾರತದ ಆರ್ಥಿಕತೆಗೆ ಸಂಬಂಧಿಸಿದಂತೆ ಪರಿಸರ ಮತ್ತು ಪ್ರಾಣಿಗಳು ಯಾವಾಗಲೂ ಮಹತ್ವ ಪಡೆದಿವೆ. ಪ್ರಕೃತಿ ಮತ್ತು ಆರ್ಥಿಕ ಪ್ರಗತಿಯ ಮಧ್ಯೆ ಸಮತೋಲನ ಕಾಪಾಡುತ್ತಾ ನಾವು ಹೊಸ ಸಶಕ್ತ ಭಾರತದತ್ತ ಸಾಗಲು ಸಾಧ್ಯವಿದೆಎಂದು ಪ್ರಧಾನಿ ಹೇಳಿದರು. (ವಿವರಗಳಿಗೆ ಇಲ್ಲಿ ಕ್ಲಿಕ್ಕಿಸಿ)

2019: ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರ ನೂತನ ಮುಖ್ಯ ಕಾರ್ಯದರ್ಶಿ (ಪ್ರಿನ್ಸಿಪಲ್ ಸೆಕ್ರೆಟರಿ) ಆಗಿ ಪ್ರಮೋದ್ ಕುಮಾರ್ ಮಿಶ್ರ  ಅವರನ್ನು ನೇಮಕ ಮಾಡಲಾಗಿದೆ ಎಂದು ಪ್ರಧಾನಮಂತ್ರಿ ಸಚಿವಾಲಯದ ಪ್ರಕಟಣೆ 2019 ಸೆಪ್ಟೆಂಬರ್ 11 ಬುಧವಾರ  ತಿಳಿಸಿತು. ಕೇಂದ್ರ ಸರ್ಕಾರದಲ್ಲಿ ಕಳೆದ ಐದು ವರ್ಷಗಳ ಕಾಲ ಪ್ರಧಾನಿ ಮೋದಿ ಅವರ ಪ್ರಿನ್ಸಿಪಲ್ ಸೆಕ್ರೆಟರಿಯಾಗಿ ಕಾರ್ಯನಿರ್ವಹಿಸಿದ್ದ ನೃಪೇಂದ್ರ ಮಿಶ್ರ ಅವರು ಕಳೆದ ತಿಂಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.ಮಿಶ್ರ ಅವರು ಗುಜರಾತ್ ಕೇಡರ್ 1972 ತಂಡದ ಐಎಎಸ್ ಅಧಿಕಾರಿ. ಇವರು ಮೊದಲು ಪ್ರಧಾನ ಮಂತ್ರಿಯ ಅಡಿಷನಲ್ ಪ್ರಿನ್ಸಿಪಲ್ ಸೆಕ್ರೆಟರಿಯಾಗಿ ಕಾರ್ಯನಿರ್ವಹಿಸಿದ್ದರು. ಅಲ್ಲದೇ ಆ್ಯಗ್ರಿಕಲ್ಚರ್ ಅಂಡ್ ಕಾರ್ಪೋರೇಶನ್ ಸೆಕ್ರೆಟರಿ, ರಾಜ್ಯ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದರುಮಿಶ್ರ ಅವರು ಮೇ ತಿಂಗಳಿನಲ್ಲಿ ಎಕಾನಾಮಿಕ್ಸ್ ಅಂಡ್ ಡೆವಲಪ್ ಮೆಂಟ್ ಸ್ಟಡೀಸ್ ನಲ್ಲಿ ಇಂಗ್ಲೆಂಡ್ ಸುಸ್ಸೆಕ್ಸ್ ಯೂನಿರ್ವಸಿಟಿಯಿಂದ ಪಿಎಚ್ ಡಿ ಪದವಿ ಪಡೆದಿದ್ದರು. ಅಲ್ಲದೇ ವಿಪತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಪ್ರತಿಷ್ಠಿತ ವಿಶ್ವಸಂಸ್ಥೆಯ ಪ್ರಶಸ್ತಿಗೆ ಭಾಜನರಾಗಿದ್ದರುಏತನ್ಮಧ್ಯೆ ಪ್ರಧಾನ ಮಂತ್ರಿ ಕಚೇರಿಯ ವಿಶೇಷ ಕರ್ತವ್ಯ ನಿರ್ವಹಣೆ ಅಧಿಕಾರಿಯಾದ ಪಿಕೆ ಸಿನ್ನಾ ಅವರನ್ನು ಪ್ರಧಾನಮಂತ್ರಿಯ ಪ್ರಧಾನ ಸಲಹೆಗಾರ (ಪ್ರಿನ್ಸಿಪಲ್ ಅಡ್ವೈಸರ್) ಆಗಿ ನೇಮಕ ಮಾಡಲಾಗಿದೆ ಎಂದು ವರದಿ ತಿಳಿಸಿತು.

2019: ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ದಂಡ ಇಳಿಸಲು ನಿರ್ಧಾರ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 2019 ಸೆಪ್ಟೆಂಬರ್ 11ರ ಬುಧವಾರ ಹೇಳಿದರು. ಸಂಚಾರ ನಿಯಮ ಉಲ್ಲಂಘನೆ ದಂಡ ದುಪ್ಪಟ್ಟುಗೊಳಿಸಿದ್ದಕ್ಕೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ದಂಡ ಕಡಿತಗೊಳಿಸಲು ನಿರ್ಧಾರ ಮಾಡಲಾಗಿದೆ ಎಂದು ಯಡಿಯೂರಪ್ಪ ಹೇಳಿದರು. ದಂಡ ಕಡಿತಗೊಳಿಸಲು ಸಾರಿಗೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಅವರು ಮಾಹಿತಿ ನೀಡಿದರು. ಈಗಾಗಲೇ ಗುಜರಾತ್ ರಾಜ್ಯದಲ್ಲೂ ಇಳಿಕೆ ಮಾಡಲಾಗಿದೆ. ಗುಜರಾತ್ ಮಾದರಿಯ ದಂಡ ಇಳಿಕೆಯ ಮಾಹಿತಿ ಪಡೆದು ರಾಜ್ಯದಲ್ಲೂ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.ಈ ಮಧ್ಯೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ದಂಡ ದುಪ್ಪಟ್ಟುಗೊಳಿಸಿರುವುದು ಹಣ ಮಾಡುವ ಉದ್ದೇಶಕ್ಕಾಗಿ ಅಲ್ಲ, ಅಪಘಾತಗಳಲ್ಲಿ ಜನರ ಪ್ರಾಣ ರಕ್ಷಣೆಗಾಗಿ ಎಂದು ಸ್ಪಷ್ಟ ಪಡಿಸಿದರು.


No comments:

Post a Comment