2019: ನವದೆಹಲಿ: ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ಥಾನ ಈ ಮೂರು ನೆರೆ
ರಾಷ್ಟ್ರಗಳಲ್ಲಿ ೨೦೧೪ಕ್ಕೂ ಮುನ್ನ ಧಾರ್ಮಿಕ ಕಿರುಕುಳಕ್ಕೆ ಒಳಗಾಗಿ ವಲಸೆ ಬಂದಿರುವ ಮುಸ್ಲಿಮೇತರ ನಿರಾಶ್ರಿತರಿಗೆ ಭಾರತೀಯು ಪೌರತ್ವ ಒದಗಿಸುವ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ 2019 ಡಿಸೆಂಬರ್ 19ರ ಗುರುವಾರ ನಡೆದ ರಾಷ್ಟ್ರವ್ಯಾಪಿ ಪ್ರತಿಭಟನೆಯ ಕಾಲದಲ್ಲಿ
ಗುಂಡೇಟಿಗೆ 3 ಮಂದಿ ಬಲಿಯಾಗಿ ಹಲವರು ಗಾಯಗೊಂಡರು.
ರಾಷ್ಟ್ರವ್ಯಾಪಿ, ಪ್ರತಿಭಟನೆ,
ಮೆರವಣಿಗೆ, ಸಭೆಗಳು ಉತ್ತರ ಪ್ರದೇಶ ಮತ್ತು ಕರ್ನಾಟಕ ಸೇರಿದಂತೆ ಹಲವೆಡೆ ಹಿಂಸೆಗೆ ತಿರುಗಿದವು. ಉತ್ತರಪ್ರದೇಶದಲ್ಲಿ ಒಂದು ಸಾವು ಸಂಭವಿಸಿ, ೩ ಜನ ಗಾಯಗೊಂಡರೆ,
ಕರ್ನಾಟಕದ ಮಂಗಳೂರಿನಲ್ಲಿ ಪೊಲೀಸರ ಮೇಲೆ ಕಲ್ಲುತೂರಾಟ ನಡೆದು 14 ಮಂದಿ ಗಾಯಗೊಂಡ
ರು. ಪೊಲೀಸ್ ಗೋಲಿಬಾರಿಗೆ ಇಬ್ಬರು
ಬಲಿಯಾಗಿದ್ದು, ಹಿಂಸಾಚಾರದ ಬಳಿಕ ಕರ್ಫ್ಯೂ
ಜಾರಿಗೊಳಿಸಲಾಯಿತು. ಪ್ರತಿಭಟನೆಗಳ
ಪರಿಣಾಮವಾಗಿ ದೆಹಲಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ೧೯ ವಿಮಾನಗಳ ಸಂಚಾರ
ರದ್ದಾಯಿತು. ಗುರುಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾದ ಪರಿಣಾಮವಾಗಿ ೧೬ ವಿಮಾನಗಳ ಪಯಣ
ವಿಳಂಬಗೊಂಡಿತು. ಜಂತರ್-ಮಂತರ್ ನಲ್ಲಿ ಬೆಳಗ್ಗಿನಿಂದ ಸಂಜೆಯವರೆಗೂ ವಿವಿಧ ರಾಜಕೀಯ ಪಕ್ಷಗಳು ಮತ್ತು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆಗಳು ನಡೆದವು. ಕೆಂಪುಕೋಟೆ ಬಳಿ ನಿಷೇಧಾಜ್ಞೆ ಉಲ್ಲಂಘಿಸಿದವರನ್ನು ಪೊಲೀಸರು ಬಂಧಿಸಿದರೂ, ಬಳಿಕ ಪ್ರತಿಭಟನಕಾರರ ಸಂಖ್ಯೆ ಹೆಚ್ಚುತ್ತಲೇ ಹೋಯಿತು. ಈ
ಮಧ್ಯೆ, ಜಾಮಿಯಾ ಮಿಲ್ಲಿಯಾ ವಿಶ್ವವಿದ್ಯಾಲಯದಲ್ಲಿ ಭಾನುವಾರ ಸಂಭವಿಸಿದ ಹಿಂಸಾಚಾರದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ವಿರುದ್ಧ ಲಾಠಿ ಪ್ರಯೋಗಿಸದಂತೆ ಕೇಂದ್ರ ಗೃಹ ಸಚಿವಾಲಯವು ದೆಹಲಿ ಪೊಲೀಸರಿಗೆ ಕಠಿಣ ಸಂದೇಶ ನೀಡಿತು. ವಿದ್ಯಾರ್ಥಿಗಳಿಗೂ ಬೀದಿಗೆ ಇಳಿಯುವ ಮುನ್ನ ಕಾನೂನನ್ನು ಓದಿಕೊಳ್ಳುವಂತೆ ಸೂಚಿಸಿತು. ಗುವಾಹಟಿ ಹೈಕೋರ್ಟ್ ಗುರುವಾರ ಸಂಜೆ ೫ ಗಂಟೆಯ ಒಳಗಾಗಿ
ಇಂಟರ್ ನೆಟ್ ಸಂಪರ್ಕ ಪುನಃಸ್ಥಾಪನೆ ಮಾಡುವಂತೆ ಅಸ್ಸಾಮ್ ಸರ್ಕಾರಕ್ಕೆ ಆಜ್ಞಾಪಿಸಿದ್ದು, ಶುಕ್ರವಾರದ ವೇಳೆಗೆ ಇಂಟರ್ ನೆಟ್ ಪುನಸ್ಥಾಪನೆ ಮಾಡಲಾಗುವುದು ಎಂದು ಅಸ್ಸಾಮ್ ಸರ್ಕಾರದ ಸಚಿವ ಹಿಮಂತ ಬಿಸ್ವ ಸರ್ಮಗುರುವಾರ ರಾತ್ರಿ ತಿಳಿಸಿದರು. (ವಿವರಗಳಿಗೆ ಇಲ್ಲಿ ಕ್ಲಿಕ್ ಮಾಡಿರಿ)
2019: ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ವೇಳೆಯಲ್ಲಿ ಜಾಮಿಯಾ
2019: ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ವೇಳೆಯಲ್ಲಿ ಜಾಮಿಯಾ
ಮಿಲ್ಲಿಯಾಇಸ್ಲಾಮಿಯಾ ವಿಶ್ವ ವಿದ್ಯಾಲಯದಲ್ಲಿ ಸಂಭವಿಸಿದ ಹಿಂಸಾಚಾರದ ವಾಸ್ತವಾಂಶ ಪತ್ತೆಗೆ ಸಮಿತಿ ರಚಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತು ಕೇಂದ್ರ ಸರ್ಕಾರ, ದೆಹಲಿ ಸರ್ಕಾರ ಮತ್ತು ಪೊಲೀಸರಿಗೆ ದೆಹಲಿ ಹೈಕೋರ್ಟ್ 2019 ಡಿಸೆಂಬರ್
19ರ ಗುರುವಾರ ನೋಟಿಸ್
ಜಾರಿ ಮಾಡಿತು. ಆದಾಗ್ಯೂ, ಮುಖ್ಯ ನ್ಯಾಯಮೂರ್ತಿ ಡಿಎನ್ ಪಟೇಲ್ ಮತ್ತು ನ್ಯಾಯಮೂರ್ತಿ ಸಿ. ಹರಿಶಂಕರ್ ಅವರನ್ನು ಒಳಗೊಂಡ ಪೀಠವು ಬಂಧನ ಸೇರಿದಂತೆ ಯಾವುದೇ ಬಲ ಪ್ರಯೋಗದಿಂದ ವಿದ್ಯಾರ್ಥಿಗಳಿಗೆ
ರಕ್ಷಣೆ ಒದಗಿಸಲು ಯಾವುದೇ ಆದೇಶವನ್ನೂ ನೀಡಲಿಲ್ಲ. ವಿದ್ಯಾರ್ಥಿಗಳಿಗೆ ರಕ್ಷಣೆ ಒದಗಿಸಲು ಹೈಕೋರ್ಟ್ ನಿರಾಕರಿಸಿದ ಬಳಿಕ ವಕೀಲರ ಗುಂಪೊಂದು ’ಶೇಮ್ ಶೇಮ್’
(ನಾಚಿಕೆಗೇಡು) ಎಂಬುದಾಗಿ ಘೋಷಣೆಗಳನ್ನು ಕೂಗಿತು. ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ಕಾಲದಲ್ಲಿ ಗಾಯಗೊಂಡಿರುವ ವಿದ್ಯಾರ್ಥಿಗಳಿಗೆ ವೈದ್ಯಕೀಯ ನೆರವು ಮತ್ತು ಪರಿಹಾರ ಒದಗಿಸುವಂತೆ ಕೋರಿದ್ದ ಆರು ಅರ್ಜಿಗಳ ಮೇಲಿನ ಸುದೀರ್ಘ ವಾದ ಮಂಡನೆಯ ಬಳಿಕ ನ್ಯಾಯಾಲಯವು ನೋಟಿಸುಗಳನ್ನು ಜಾರಿಗೊಳಿಸಲು ಆಜ್ಞಾಪಿಸಿತು. ಅರ್ಜಿದಾರರೊಬ್ಬರ ಪರವಾಗಿ ಹಾಜರಾಗಿದ್ದ ವಕೀಲರು ’ಪ್ರತಿಭಟನೆಯ ವೇಳೆಯಲ್ಲಿ ಒಬ್ಬ ವಿದ್ಯಾರ್ಥಿ ತನ್ನ ದೃಷ್ಟಿಯನ್ನು ಕಳೆದುಕೊಂಡಿರುವುದಾಗಿ ವರದಿಗಳು ತಿಳಿಸಿವೆ. ೪೩೨ ಅಶ್ರುವಾಯು ಶೆಲ್ಲುಗಳನ್ನು ಪ್ರಯೋಗಿಸಲಾಗಿದ್ದು ಇದು ೨೦೧೨ರಿಂದೀಚೆಗೆ ಅತ್ಯಂತ ಹೆಚ್ಚಿನ ಪ್ರಮಾಣದ ಅಶ್ರುವಾಯು ಶೆಲ್ ಪ್ರಯೋಗ’ ಎಂದು ಹೇಳಿದರು. (ವಿವರಗಳಿಗೆ ಇಲ್ಲಿ ಕ್ಲಿಕ್ ಮಾಡಿರಿ)

ಆಸ್ತಿಯನ್ನು ಜಪ್ತಿ ಮಾಡಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು 2019 ಡಿಸೆಂಬರ್ 19ರ ಗುರುವಾರ ಎಚ್ಚರಿಸಿದರು. ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಲಕ್ನೋ, ಸಂಭಲ್ ಮತ್ತು
ಮಾವೋನಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಪ್ರತಿಭಟನಾಕಾರು ಹಲವು ವಾಹನ, ಪೊಲೀಸ್ ಔಟ್ ಪೋಸ್ಟ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಶಾಂತಿ ಕದಡಲು ಯತ್ನಿಸುವ ಪ್ರತಿಭಟನಾಕಾರರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಸಿಎಂ ಯೋಗಿ ಆದಿತ್ಯನಾಥ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚಿಸಿದರು. ರಾಜ್ಯದಲ್ಲಿ ನಡೆಯುತ್ತಿರುವ ಕಾನೂನು ಬಾಹಿರ ಕೃತ್ಯಗಳನ್ನು ನಾನು ಸಹಿಸುವುದಿಲ್ಲ. ಹಿಂಸಾಚಾರದಲ್ಲಿ ತೊಡಗಿರುವವರನ್ನು ಗುರುತಿಸಿ, ಅವರ ಆಸ್ತಿ ಜಪ್ತಿ ಮಾಡಿ, ಹರಾಜು ಹಾಕಲಾಗುವುದು ಎಂದು ಯೋಗಿ ಎಚ್ಚರಿಸಿದರು. (ವಿವರಗಳಿಗೆ ಇಲ್ಲಿ ಕ್ಲಿಕ್ ಮಾಡಿರಿ)
2019: ಮಂಗಳೂರು : ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ
2019: ಮಂಗಳೂರು : ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ

No comments:
Post a Comment