ನಾನು ಮೆಚ್ಚಿದ ವಾಟ್ಸಪ್

Wednesday, January 1, 2020

ಇಂದಿನ ಇತಿಹಾಸ History Today ಜನವರಿ 01

2020: ಬೆಂಗಳೂರು:  ೨೦೨೦ನೇ ಇಸವಿಯು ಭಾರತದ ಗಗನಯಾನ ಮತ್ತು ಚಂದ್ರಯಾನ-೩ರ ವರ್ಷ ಎಂಬುದಾಗಿ 2020 ಜನವರಿ 01ರ ಬುಧವಾರ ಇಲ್ಲಿ ಘೋಷಿಸಿದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮುಖ್ಯಸ್ಥ ಕೆ.ಶಿವನ್ ಅವರು ಭಾರತದ ಚೊಚ್ಚಲ ಮಾನವ ಸಹಿತ ಗಗನಯಾನ ಯೋಜನೆಯ ತರಬೇತಿ ಪಡೆಯಲು ಭಾರತೀಯ ವಾಯುಪಡೆಯ ನಾಲ್ವರು ಸಿಬ್ಬಂದಿಯನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕಟಿಸಿದರು. ಇಸ್ರೋ ಕೇಂದ್ರ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಿವನ್ ಅವರು ನಾಲ್ವರು ಗಗನಯಾನಿಗಳು ಜನವರಿ ೩ನೇ ವಾರದಿಂದ ರಷ್ಯಾದಲ್ಲಿ ತರಬೇತಿ ಪಡೆಯಲಿದ್ದಾರೆ ಎಂದು ಹೇಳಿದರು. ಆದರೆ ಅವರ ಹೆಸರುಗಳನ್ನು ಇಸ್ರೋ ಅಧ್ಯಕ್ಷರು ಬಹಿರಂಗ ಪಡಿಸಲಿಲ್ಲ.  ಗಗನಯಾನಕ್ಕೆ ಮುನ್ನ ಪ್ರೊಪಲ್ಷನ್ ಮಾಡ್ಯೂಲ್ಗಳ ಮಾನವ ರೇಟಿಂಗ್ ಮತ್ತು ಸಿಬ್ಬಂದಿ ತಪ್ಪಿಸಿಕೊಳ್ಳುವ ವ್ಯವಸ್ಥೆ ಸೇರಿದಂತೆ ಅನೇಕ ವ್ಯವಸ್ಥೆಗಳನ್ನು ಪರೀಕ್ಷಿಸಲಾಗುವುದುಎಂದು ಶಿವನ್ ಹೇಳಿದರು. ಚಂದ್ರನ ದಕ್ಷಿಣ ಧ್ರುವ ಪ್ರದೇಶಕ್ಕೇ ಚಂದ್ರಯಾನ- ಸಾಗಲಿದೆ. ಇದಕ್ಕಾಗಿ ಅಂದಾಜು ೬೦೦ ಕೋಟಿ ರೂಪಾಯಿ ವೆಚ್ಚವಾಗುವ ನಿರೀಕ್ಷೆ ಇದೆ ಎಂದು ಶಿವನ್ ಅಧಿಕೃತವಾಗಿ ಪ್ರಕಟಿಸಿದರು. ಚಂದ್ರಯಾನ- ಯೋಜನೆಯಲ್ಲಿ ಲ್ಯಾಂಡರ್ ಮತ್ತು ರೋವರ್ನ್ನು ಮಾತ್ರ ಹೊಸದಾಗಿ ಬಳಸಲಾಗುವುದು. ಚಾಂದ್ರಕಕ್ಷೆಯಲ್ಲಿ ಸುತ್ತುತ್ತಿರುವ ಚಂದ್ರಯಾನ - ಆರ್ಬಿಟರ್ ನ್ನೇ ಯೋಜನೆಯಲ್ಲಿ ಬಳಸಿಕೊಳ್ಳಲಾಗುವುದು. ಯೋಜನೆಗೆ ಕೇಂದ್ರ ಸರ್ಕಾರದ ಒಪ್ಪಿಗೆ ಲಭಿಸಿದ್ದು, ಸಿದ್ಧತೆ ಆರಂಭಿಸಲಾಗಿದೆ ಎಂದು ಶಿವನ್ ಹೇಳಿದರು.  (ವಿವರಗಳಿಗೆಇಲ್ಲಿ  ಕ್ಲಿಕ್ಕಿಸಿ)

2020: ನವದೆಹಲಿ: ಕರ್ನಾಟಕ ಮಹಾರಾಷ್ಟ್ರ ಸೇರಿದಂತೆ ದೇಶದ ಹನ್ನೆರಡು ರಾಜ್ಯಗಳಲ್ಲಿ ಕೇಂದ್ರ ಸರ್ಕಾರಒಂದು ದೇಶ, ಒಂದು ರೇಷನ್ ಕಾರ್ಡ್ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದೆ. ಇದರಲ್ಲಿ ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ಗುಜರಾತ್, ಹರ್ಯಾಣ, ರಾಜಸ್ಥಾನ, ಕೇರಳ, ಮಧ್ಯಪ್ರದೇಶ, ಗೋವಾ, ಜಾರ್ಖಂಡ್ ಮತ್ತು ತ್ರಿಪುರಾ ರಾಜ್ಯಗಳು ಕೂಡಾ ಸೇರಿವೆ.  ಒನ್ ನೇಶನ್, ಒನ್ ರೇಷನ್ ಕಾರ್ಡ್ಯೋಜನೆ ೨೦೨೦ರ ಜನವರಿ ೧ರಿಂದ ಜಾರಿಯಾಗಲಿದ್ದು, ರಾಜ್ಯಗಳಲ್ಲಿರುವ ಫಲಾನುಭವಿಗಳಿಗೆ ಅವರ ಹಾಲಿ ರೇಷನ್ ಕಾರ್ಡಿನಲ್ಲಿಯೇ ಅವರ ಪಾಲಿನ ರೇಷನ್ ಲಭ್ಯವಾಗಲಿದೆ ಎಂದು ವರದಿ ತಿಳಿಸಿದೆ. ೨೦೨೦ರ ಜೂನ್ ವೇಳೆಗೆ ದೇಶದ ಎಲ್ಲಾ ರಾಜ್ಯಗಳಲ್ಲಿಯೂಒನ್ ನೇಷನ್, ಒನ್ ರೇಷನ್ ಕಾರ್ಡ್ಯೋಜನೆ ಜಾರಿಯಾಗಲಿದೆ ಎಂದು 2020 ಜನವರಿ 01ರ ಬುಧವಾರ ವರದಿ ಹೇಳಿತು. ನೂತನ ಆಹಾರ ಸರಬರಾಜು ಪ್ರಕಾರ, ನೂತನ ರೇಷನ್ ಕಾರ್ಡಿಗಾಗಿ ಉತ್ತಮ ಗುಣಮಟ್ಟದ ವಿನ್ಯಾಸವನ್ನು ಒದಗಿಸುವಂತೆ ರಾಜ್ಯಗಳ ಬಳಿ ಕೇಳಲಾಗಿದ್ದು, ಅದನ್ನು ೨೦೨೦ರ ಜೂನ್ ೧ರಂದು ಬಿಡುಗಡೆಗೊಳಿಸಲಾಗುವುದು. ವಿವಿಧ ರಾಜ್ಯಗಳ ರೇಷನ್ ಕಾರ್ಡುಗಳನ್ನು ಮತ್ತು ಕೇಂದ್ರಾಡಳಿತ ಪ್ರದೇಶಗಳು ಗುಣಮಟ್ಟದ ವಿನ್ಯಾಸದಲ್ಲಿ ವಿತರಿಸಲಿವೆ ಎಂದು ವರದಿ ತಿಳಿಸಿದೆ. (ವಿವರಗಳಿಗೆ ಇಲ್ಲಿ  ಕ್ಲಿಕ್ಕಿಸಿ)

2020: ನವದೆಹಲಿ
:
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇನ್ನು ಮಂದೆ ೪೨ ಮೀಟರಿಗಿಂತ ಎತ್ತರದ  ಕಟ್ಟಡ  ನಿರ್ಮಿಸುವಂತಿಲ್ಲ. ಕೇಂದ್ರೀಯ ಭಾಗದಲ್ಲಿ ಕೇಂದ್ರ ಸರ್ಕಾರದ ಸಚಿವಾಲಯಗಳು, ನೂತನ ಸಂಸತ್ ಭವನ, ರಾಜಪಥವನ್ನು ನವೀಕರಣಗೊಳಿಸಲಾಗುತ್ತಿದ್ದು, ಎಲ್ಲ ಕಟ್ಟಡಗಳು ಕೂಡ ಏಕರೂಪತೆಯಿಂದ ಕೂಡಿರಲು ಕೇಂದ್ರ ನಗರಾಭಿವೃದ್ಧಿ ಸಚಿವಾಲಯ 2020 ಜನವರಿ 01ರ ಬುಧವಾರ ಈ ನಿರ್ಧಾರ ಕೈಗೊಂಡಿತು. ಐತಿಹಾಸಿಕ ದೆಹಲಿ ಗೇಟ್ ೪೨ ಮೀಟರ್ ಎತ್ತರವಿದ್ದು, ಮುಂದೆ ನಿರ್ಮಾಣವಾಗುವ ಯಾವುದೇ ಕಟ್ಟಡಗಳು ಇದಕ್ಕಿಂತ ಒಂದು ಇಂಚು ಎತ್ತರ ಕೂಡ ಇರುವಂತಿಲ್ಲ. ಮೂರು ಕಟ್ಟಡಗಳ ನಿರ್ಮಾಣದ ಗುತ್ತಿಗೆ ಗುಜರಾತ್ ಮೂಲದ ಎಚ್ಸಿಪಿ ಡಿಸೈನ್ ಸಂಸ್ಥೆಗೆ ನೀಡಲಾಗಿದೆ. ೨೦೨೨ಕ್ಕೆ ೭೫ನೇ ಸ್ವಾತಂತ್ರೋತ್ಸವ ಆಚರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಂಸತ್ ಭವನವನ್ನು ಅವಧಿಯೊಳಗೆ ನಿರ್ಮಿಸಲು ಉದ್ದೇಶಿಸಲಾಗಿದೆ. ಉಳಿದ ಕಟ್ಟಡಗಳನ್ನು ೨೦೨೪ಕ್ಕೆ ಪೂರ್ಣಗೊಳಿಸಲು ತೀರ್ಮಾನಿಸಲಾಗಿದೆ. ಸುಮಾರು ೧೨ ಸಾವಿರ ಕೋಟಿ ರೂ.ವೆಚ್ಚದ ಯೋಜನೆ ಇದಾಗಿದೆ. ರಾಷ್ಟ್ರಪತಿ ಭವನವು ೩೪೫ ಎಕರೆ ವಿಸ್ತೀರ್ಣ ಹೊಂದಿದ್ದು, ಪೈಕಿ ೬೦ ಎಕರೆಯಲ್ಲಿ ಜೈವಿಕ ಉದ್ಯಾನ ನಿರ್ಮಿಸಲು ಪ್ರಸ್ತಾವನೆ ಇದೆ. ಜೊತೆಗೆ ಉಪರಾಷ್ಟ್ರಪತಿ ಹಾಗೂ ಪ್ರಧಾನಿ ನಿವಾಸವನ್ನು ಕೂಡ ನವೀಕರಿಸುವ ಸಾಧ್ಯತೆ ಇದೆ. (ವಿವರಗಳಿಗೆ ಇಲ್ಲಿ  ಕ್ಲಿಕ್ಕಿಸಿ)


2020: ಮುಂಬೈ: ಮದ್ಯ ದೊರೆ ವಿಜಯ್ ಮಲ್ಯ ಅವರಿಂದ ಜಫ್ತಿ ಮಾಡಲಾಗಿದ್ದ ಆಸ್ತಿಗಳನ್ನು ಬಳಕೆ  ಮಾಡಿ ಕೊಳ್ಳುವಂತೆ  ಮಲ್ಯ ಅವರಿಗೆ ಸಾಲ ನೀಡಿದ್ದ ಬ್ಯಾಂಕುಗಳಿಗೆ ಮುಂಬೈಯ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್) ನ್ಯಾಯಾಲಯ ಅನುಮತಿ ನೀಡಿದೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಮೂಲಗಳು 2020 ಜನವರಿ 01ರ ಬುಧವಾರ ತಿಳಿಸಿದವು. ಇದರೊಂದಿಗೆ ಮಲ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಯಿತು. ಆದಾಗ್ಯೂ ಸಂಬಂಧಪಟ್ಟ ಕಕ್ಷಿದಾರರಿಗೆ ಮುಂಬೈ ಹೈಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿರುವ ಕೋರ್ಟ್ ತನ್ನ ಆದೇಶದ ಜಾರಿಗೆ ಜನವರಿ ೧೮ರವರೆಗೆ ತಡೆಯಾಜ್ಞೆ ನೀಡಿದೆ. ಮೂಲಗಳ ಪ್ರಕಾರ ಜಫ್ತಿ ಮಾಡಲಾದ ಆಸ್ತಿಗಳಲ್ಲಿ ಮುಖ್ಯವಾಗಿ ಷೇರುಗಳಂತಹ ಹಣಕಾಸು ಭದ್ರತೆಗಳು ಸೇರಿವೆ ಎಂದು ಮೂಲಗಳು ಹೇಳಿವೆ. ಕಳೆದ ವರ್ಷ ಫೆಬ್ರವರಿಯಲ್ಲಿ ಜಾರಿ ನಿರ್ದೇಶನಾಲಯವು ವಿಶೇಷ ಪಿಎಂಎಲ್ ನ್ಯಾಯಾಲಯಕ್ಕೆ ಜಫ್ತು ಮಾಡಲಾದ ಆಸ್ತಿಗಳನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ನೇತೃತ್ವದ ಬ್ಯಾಂಕುಗಳ ಒಕ್ಕೂಟವು ಬಳಕೆ ಮಾಡಿಕೊಳ್ಳಲು ತನ್ನ ಆಕ್ಷೇಪ ಇಲ್ಲ ಎಂದು ತಿಳಿಸಿತ್ತು. (ವಿವರಗಳಿಗೆ ಇಲ್ಲಿ  ಕ್ಲಿಕ್ಕಿಸಿ)


2020: ನವದೆಹಲಿ: ಭಾರತದ ಮೂರೂ ರಕ್ಷಣಾ ಪಡೆಗಳ ಪ್ರಪ್ರಥಮ ಮುಖ್ಯಸ್ಥರಾಗಿ (ಸಿಡಿಎಸ್) 2020
ಜನವರಿ 01ರ ಬುಧವಾರ   ಅಧಿಕಾರ  ವಹಿಸಿಕೊಂಡಿರುವ  ಜನರಲ್ ಬಿಪಿನ್ ರಾವತ್ ಅವರು ತಮ್ಮ ಮೊದಲ ಸಂದೇಶದಲ್ಲಿ ಸರ್ಕಾರದ ನಿರ್ದೇಶನಗಳನ್ನು ಪಾಲನೆ ಮಾಡುವ ಸೇನಾ ಪಡೆಗಳು ರಾಜಕೀಯದಿಂದ ದೂರ ಇರುತ್ತವೆ ಎಂದು ಹೇಳಿದರು. ಅಧಿಕಾರ ಸ್ವೀಕರಿಸಿದ ಬಳಿಕ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದ ರಾವತ್ ಅವರು ಸ್ಮಾರಕಕ್ಕೆ ಹೂಗುಚ್ಛ ಇಡುವ ಮೂಲಕ ಗೌರವ ಸಲ್ಲಿಸಿ ಬಳಿಕ ತಮ್ಮ ವಿರುದ್ಧದ ಟೀಕೆಗಳಿಗೆ ಉತ್ತರ ನೀಡಿದರು. ಮೂರೂ ರಕ್ಷಣಾ ಪಡೆಗಳು ಸಂಘಟಿತ ರೀತಿಯಲ್ಲಿ ಒಂದೇ ತಂಡದಂತೆ ಕಾರ್ಯವೆಸಗಬೇಕು. ರಾಜಕೀಯದಿಂದ ದೂರವಿದ್ದು, ಸರ್ಕಾರ ನೀಡಿದ ನಿರ್ದೇಶನದಂತೆ ಕೆಲಸ ಮಾಡೋಣ ಎಂದು ಅವರು ಹೇಳಿದರು. ++ ಎಂಬ ರೀತಿಯಲ್ಲಿ ತಂಡದ ಗುರಿ ಮೂರು ಅಲ್ಲ, ಅದು ಐದು ಅಥವಾ ಏಳು ಆಗಿರಬಹುದು. ಸಂಘಟಿತ ರೀತಿಯಲ್ಲಿ ನಮ್ಮ ಪ್ರಯತ್ನ ಮತ್ತಷ್ಟು ಹೆಚ್ಚು ಇರಬೇಕು. ಏಕೀಕರಣದ ಮೂಲಕ ನಾವು ಮತ್ತಷ್ಟು ಸಾಧಿಸಬೇಕು ಎಂದು ರಾವತ್ ನುಡಿದರು. ಸಂಪನ್ಮೂಲಗಳ ಸರಿಯಾದ ಬಳಕೆ ಮತ್ತು ಜಂಟಿ ತರಬೇತಿ ನೀಡುವುದರ ಬಗ್ಗೆ ಸಿಡಿಎಸ್ ಹೆಚ್ಚಿನ ಗಮನ ಹರಿಸುವುದು ಎಂದು  ಅವರು ಹೇಳಿದರು. (ವಿವರಗಳಿಗೆ ಇಲ್ಲಿ  ಕ್ಲಿಕ್ಕಿಸಿ)




No comments:

Post a Comment