ನಾನು ಮೆಚ್ಚಿದ ವಾಟ್ಸಪ್

Sunday, May 3, 2020

ಇಂದಿನ ಇತಿಹಾಸ History Today ಮೇ 03

2020: ಬೆಂಗಳೂರು:  ಕನ್ನಡದ ಹಿರಿಯ ಸಾಹಿತಿ ನಿತ್ಸೋತ್ಸವ’ ಕವಿ ಕೆ.ಎಸ್.ನಿಸಾರ್ ಅಹಮ್ಮದ್ (೮೪) ಅವರು 2020 ಮೇ 03ರ ಭಾನುವಾರ ನಿಧನರಾದರು.  ಇತ್ತೀಚೆಗೆ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ನಿಸಾರ್ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈದಿನ  ಅವರು ಬೆಂಗಳೂರಿನ ಪದ್ಮನಾಭನಗರದ ತಮ್ಮ ಸ್ವಗೃಹದಲ್ಲಿದ್ದ ಕೊನೆಯುಸಿರೆಳೆದರು. ಇತ್ತೀಚೆಗಷ್ಟೇ ೧೫ ದಿನಗಳ ಹಿಂದೆ ಅಮೆರಿಕದಲ್ಲಿದ್ದ ಅವರ ಪುತ್ರ ಕೂಡ ನಿಧನರಾಗಿದ್ದರು. ಇದರಿಂದ ನಿಸಾರ್ ಅಹಮದ್ ಮಾನಸಿಕವಾಗಿ ತೀವ್ರ ಆಘಾತಕ್ಕೊಳಗಾಗಿದ್ದರು. ನಿಸಾರ್ ನಿಧನದೊಂದಿಗೆ ಕನ್ನಡ ಸಾರಸ್ವತ ಲೋಕದ ಕೊಂಡಿಯೊಂದು ಕಳಚಿತು. ಜೋಗದ ಸಿರಿ ಬೆಳಕಿನಲ್ಲಿ... ನಿಸಾರ್ ಅಹಮದ್ ಅವರ ಜನಪ್ರಿಯ ಕೃತಿ. ಮನೆಮನೆ ತಲುಪಿದ ಕೃತಿ ಅವರಿಗೆ ಸಾಕಷ್ಟು ಜನಮನ್ನಣೆಯನ್ನೂ ತಂದುಕೊಟ್ಟಿತ್ತು. ಜನರು ಅವರನ್ನು ಪ್ರೀತಿಯಿಂದ ನಿತ್ಯೋತ್ಸವ ಕವಿ ನಿಸಾರ್ ಅಹಮದ್ ಎಂದೇ ಗುರುತಿಸಿದ್ದರು. ಪ್ರೊ.ಕೆ.ಎಸ್.ನಿಸಾರ್ ಅಹಮದ್ ಅವರ ಪೂರ್ಣ ಹೆಸರು ಕೊಕ್ಕರೆ ಹೊಸಳ್ಳಿ ಶೇಖ್ ಹೈದರ ನಿಸಾರ್ ಅಹಮದ್. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ಫೆಬ್ರುವರಿ , ೧೯೩೬ರಲ್ಲಿ ಜನಿಸಿದರು. ೧೯೫೯ರಲ್ಲಿ ಭೂ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ೧೯೯೪ರವರೆಗೆ ವಿವಿಧ ಸರ್ಕಾರಿ ಕಾಲೇಜುಗಳಲ್ಲಿ ಅಧ್ಯಾಪಕ ಹಾಗೂ ಪ್ರಾಧ್ಯಾಪಕರಾಗಿ ಕೆಲಸ ಮಾಡಿ ನಿವೃತ್ತರಾದರು. ೧೦ ವರ್ಷದವರಿದ್ದಾಗಲೇ ಜಲಪಾತ ಬಗ್ಗೆ ಬರೆದ ಕವನ ಕೈಬರಹದ ಪತ್ರಿಕೆಯಲ್ಲಿ ಅಚ್ಚಾಗಿತ್ತು. ೨೧ ಕವನ ಸಂಕಲನಗಳು, ೧೪ ವೈಚಾರಿಕ ಕೃತಿಗಳು, ಮಕ್ಕಳ ಸಾಹಿತ್ಯ ಕೃತಿಗಳು, ಅನುವಾದ ಕೃತಿಗಳು, ೧೩ ಸಂಪಾದನಾ ಗ್ರಂಥಗಳು ಪ್ರಕಟವಾಗಿವೆ. ಅವುಗಳಲ್ಲಿ ಮನಸು ಗಾಂಧಿ ಬಜಾರು, ನಿತ್ಯೋತ್ಸವ ಹಾಗೂ ಕುರಿಗಳು ಸಾರ್ ಕುರಿಗಳು ಪ್ರಸಿದ್ಧ ಕೃತಿಗಳು. (ವಿವರಗಳಿಗೆಇಲ್ಲಿ ಕ್ಲಿಕ್ ಮಾಡಿರಿ)

ಇಂದಿನ ಇತಿಹಾಸ  HistoryTodayಮೇ 03  (2019+ ಹಿಂದಿನವುಗಳಿಗೆ ಇಲ್ಲಿ ಕ್ಲಿಕ್ ಮಾಡಿರಿ)





No comments:

Post a Comment