Monday, January 25, 2021

ಇಂದಿನ ಇತಿಹಾಸ History Today ಜನವರಿ 25

 ಇಂದಿನ ಇತಿಹಾಸ  History Today ಜನವರಿ 25 

2021: ನವದೆಹಲಿ: ೨೦೨೧ನೇ ಸಾಲಿನ ಪದ್ಮ ಪ್ರಶಸ್ತಿಗಳಿಗೆ ಡಾ. ಬಿಎಂ ಹೆಗ್ಡೆ, ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ, ಜಪಾನ್  ಪ್ರಧಾನಿ ಶಿಂಜೋ ಅಬೆ, ಸಾಹಿತಿ ಚಂದ್ರ ಶೇಖರ ಕಂಬಾರ ಸೇರಿದಂತೆ ಒಟ್ಟು 119 ಮಂದಿ 2021ರ ಸಾಲಿನ ‘ಪದ್ಮ’ ಗೌರವಕ್ಕೆ ಆಯ್ಕೆಯಾಗಿದ್ದಾರೆ.

2021 ಜನವರಿ 25ರ ಸೋಮವಾರ ‘ಪದ್ಮ’ ಪುರಸ್ಕೃತರ ಪಟ್ಟಿ ಬಿಡುಗಡೆಯಾಗಿದ್ದು ಏಳು
ಜನರಿಗೆ ಪದ್ಮವಿಭೂಣ, ೧೦ ಜನರಿಗೆ ಪದ್ಮಭೂಷಣ ಹಾಗೂ ೧೦೨ ಜನರಿಗೆ ಪದ್ಮಶ್ರೀ ಪ್ರಶಸ್ತಿಯ ಗೌರವ ಲಭಿಸಿದೆ. (ವಿವರಗಳಿಗೆ ಇಲ್ಲಿ ಕ್ಲಿಕ್  ಮಾಡಿರಿ)



ಇಂದಿನ ಇತಿಹಾಸ  History Today ಜನವರಿ 25  (2020+ ಹಿಂದಿನವುಗಳಿಗೆ ಇಲ್ಲಿ ಕ್ಲಿಕ್ ಮಾಡಿರಿ)

-ಸಂಗ್ರಹ: ನೆತ್ರಕೆರೆ ಉದಯಶಂಕರ

Sunday, January 24, 2021

ಇಂದಿನ ಇತಿಹಾಸ History Today ಜನವರಿ 24

 ಇಂದಿನ ಇತಿಹಾಸ  History Today ಜನವರಿ 24 

2021: ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು 2021 ಜನವರಿ 23ರ ಕೋಲ್ಕತ ಭೇಟಿ ಕಾಲದಲ್ಲಿ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪ್ರಕಟಿಸಿದ ಚಿತ್ರವೊಂದು ೨೪ ಗಂಟೆಗಳ  ಒಳಗಿನ ಅವಧಿಯಲ್ಲಿ ಸುಮಾರು 10 ಲಕ್ಷ (೧ ಮಿಲಿಯನ್) ಲೈಕ್ಗಳನ್ನು ಪಡೆಯಿತು.  ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಶ್ ಚಂದ್ರ ಬೋಸ್ ಅವರ ಜನ್ಮ ದಿನಾಚರಣೆಯ ನಿಮಿತ್ತ ಪ್ರಧಾನಿ ಜನವರಿ 23ರ ಶನಿವಾರ  ಕೋಲ್ಕತಕ್ಕೆ ಭೇಟಿ ನೀಡಿದ್ದರು. ನೇತಾಜಿ ಜನ್ಮದಿನವನ್ನು ಪ್ರಸ್ತುತ ವರ್ಷದಿಂದ ‘ಪರಾಕ್ರಮ ದಿನ’ವಾಗಿ ಆಚರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.  "ನೇತಾಜಿ ಬೋಸ್ಅವರಿಗೆ ಗೌರವ ಸಲ್ಲಿಸಲು ಕೋಲ್ಕತಕ್ಕೆ ತಲುಪಿದೆ" ಎಂಬ ಶೀರ್ಷಿಕೆಯೊಂದಿಗೆ  ಫೇಸ್ ಬುಕ್ ನಲ್ಲಿ ಚಿತ್ರವನ್ನು ಪ್ರಕಟಿಸಿದ್ದರು.  ಈ ಚಿತ್ರವು ಈವರೆಗೆ 10 ಲಕ್ಷ (1 ಮಿಲಿಯನ್ ) ಲೈಕ್ಗಳನ್ನು ಪಡೆದರೆ, 14,000ಕ್ಕೂ ಹೆಚ್ಚು ಮಂದಿ ಇದನ್ನು ಹಂಚಿಕೊಂಡಿದ್ದಾರೆ. ಚಿತ್ರಕ್ಕೆ 47,000 ಪ್ರತಿಕ್ರಿಯೆಗಳು (ಕಾಮೆಂಟ್) ಬಂದಿವೆ. ಪ್ರಧಾನಿಯವರು ಮೊದಲು ನೇತಾಜಿ ಭವನಕ್ಕೆ ಭೇಟಿ ನೀಡಿದರು. ನಂತರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಂದಿಗೆ ಸುಭಾಶ್ ಚಂದ್ರ ಬೋಸ್ ಅವರಿಗೆ ಗೌರವ ಸಲ್ಲಿಸಲು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ  ವೇದಿಕೆಯನ್ನು ಹಂಚಿಕೊಂಡರು(ಹೆಚ್ಚಿನ  ವಿವರಗಳಿಗೆ ಇಲ್ಲಿ ಕ್ಲಿಕ್  ಮಾಡಿರಿ)

2021: ನವದೆಹಲಿ: ಕಲೆ, ಸಂಸ್ಕೃತಿ, ಕ್ರೀಡಾ ಕ್ಷೇತ್ರಗಳಲ್ಲಿನ ಅಸಾಧಾರಣ ಸಾಧನೆ ಸೇರಿದಂತೆ ಸಾಮಾಜಿಕ ಸೇವೆ ಹಾಗೂ ಶೌರ್ಯ ಪ್ರದರ್ಶಿಸಿದ ವಿವಿಧ ರಾಜ್ಯಗಳ ಒಟ್ಟು ೩೨ ಮಕ್ಕಳು ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗೆ ಪಾತ್ರರಾದರು.  ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ ೨೧ ರಾಜ್ಯಗಳ ೩೨ ಜಿಲ್ಲೆಗಳ ಮಕ್ಕಳು ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿತು. ‘ಕಲೆ ಮತ್ತು ಸಂಸ್ಕೃತಿ ವಿಭಾಗದಿಂದ ಏಳು, ಹೊಸ ಆವಿಷ್ಕಾರ ಕ್ಷೇತ್ರದಿಂದ ಒಂಬತ್ತು, ವಿದ್ವತ್ಪೂರ್ಣ ಸಾಧನೆಗಾಗಿ ಐದು ಪ್ರಶಸ್ತಿಗಳನ್ನು ನೀಡಲಾಗಿದೆ. ಕ್ರೀಡಾ ಕ್ಷೇತ್ರದಿಂದ ಏಳು ಮಕ್ಕಳು ಪ್ರಶಸ್ತಿ ಪಡೆದಿದ್ದಾರೆ. ಧೈರ್ಯ ಸಾಹಸ ಪ್ರದರ್ಶಿಸಿದ ಮೂವರು ಮಕ್ಕಳು ಹಾಗೂ ಸಾಮಾಜಿಕ ಸೇವಾ ಕ್ಷೇತ್ರದಿಂದ ಒಬ್ಬರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆಎಂದು ಸಚಿವಾಲಯವು ವಿವರಿಸಿತು. ಯುವ ಸಾಧಕರನ್ನು ಶ್ಲಾಘಿಸಿರುವ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರುಪ್ರಧಾನ ಮಂತ್ರಿ ಬಾಲ ಪುರಸ್ಕಾರ ೨೦೨೧ ವಿಜೇತರಿಗೆ ಪ್ರೇರಣೆ ನೀಡುವುದಲ್ಲದೆ, ಲಕ್ಷಾಂತರ ಚಿಕ್ಕ ಮಕ್ಕಳ ಕನಸು ಮತ್ತು ಆಶಯಗಳನ್ನು ವಿಸ್ತರಿಸಲು ಪ್ರೋತ್ಸಾಹಿಸುತ್ತದೆ. ನಮ್ಮ ರಾಷ್ಟ್ರವನ್ನು ಯಶಸ್ಸು ಮತ್ತು ಸಮೃದ್ಧಿಯ ಹೊಸ ಉತ್ತುಂಗಕ್ಕೆ ಕೊಂಡೊಯ್ಯಲು ನಾವೆಲ್ಲರೂ ನಮ್ಮ ವೈಯಕ್ತಿಕ ಪ್ರಯತ್ನವನ್ನು ಮಾಡೋಣಎಂದು ಸಂದೇಶ ನೀಡಿದರು. ಬಾಲಪುರಸ್ಕಾರಕ್ಕೆ ಪಾತ್ರರಾಗಿರುವ ಮಕ್ಕಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು 2021 ಜನವರಿ 25ರ ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ.

2021: ಕಠ್ಮಂಡು: ನೇಪಾಳದಲ್ಲಿ ಆಡಳಿತಾರೂಢ ನೇಪಾಳ ಕಮ್ಯೂನಿಸ್ಟ್ ಪಕ್ಷದ (ಎನ್ಸಿಪಿ) ಆಂತರಿಕ ಬಿಕ್ಕಟ್ಟಿನ ನಡುವೆ, 2021 ಜನವರಿ 24ರ ಭಾನುವಾರ ವಿರೋಧೀ ಬಣವು ಪ್ರಧಾನ ಮಂತ್ರಿ ಕೆ.ಪಿ. ಶರ್ಮಾ ಒಲಿ ಅವರನ್ನು ಪಕ್ಷದಿಂದಲೇ ಉಚ್ಛಾಟಿಸಿತು. ನೇಪಾಳ ಸಂಸತ್ತನ್ನು ತುರ್ತಾಗಿ ವಿಸರ್ಜಿಸಿರುವ ಬೆನ್ನಲ್ಲೇ ರಾಜಕೀಯ ಅಸ್ಥಿರತೆ ಮನೆ ಮಾಡಿದ್ದು, ಬಿಕ್ಕಟ್ಟು ಮತ್ತಷ್ಟು ಬಿಗಡಾಯಿಸಿತು. ವಿರೋಧ ಬಣದ ವಕ್ತಾರ ನಾರಾಯಣಕಾಜಿ ಶ್ರೇಷ್ಠ ಪ್ರಕಾರ, ಪ್ರಧಾನಿ ಒಲಿ ಇನ್ನು ಮುಂದೆ ಎನ್ಸಿಪಿ ಪಕ್ಷದ ಸದಸ್ಯರಾಗಿರುವುದಿಲ್ಲ. ಪೆರಿಸ್ ಡಾಂಡಾದಲ್ಲಿ ಸೇರಿದ ಕೇಂದ್ರ ಸಮಿತಿ ಸಭೆಯು ಪ್ರಧಾನಿ ಕೆ.ಪಿ. ಶರ್ಮಾ ಒಲಿ ಅವರನ್ನು  ಪಕ್ಷದಿಂದ ಉಚ್ಛಾಟಿಸಲು ನಿರ್ಧರಿಸಿದೆ. ಇನ್ನು ಮುಂದೆ ಅವರು ನೇಪಾಳ ಕಮ್ಯೂನಿಸ್ಟ್ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ಹೊಂದಿರುವುದಿಲ್ಲ ಎಂದು ಶ್ರೇಷ್ಠ ಹೇಳಿದರು. ಅಸಂವಿಧಾನಿಕ ನಿರ್ಧಾರ ತೆಗೆದುಕೊಂಡಿರುವ ಪ್ರಧಾನಿ ಒಲಿ ಅವರನ್ನು ಪಕ್ಷದಿಂದ ಏಕೆ ತೆಗೆದುಹಾಕಬಾರದು ಮತ್ತು ನೇಪಾಳ ಸಂಸತ್ ವಿಸರ್ಜಿಸಿದ ಹಿಂದಿನ ಕಾರಣಗಳನ್ನು ಕೇಳಿ ವಿರೋಧ ಬಣದ ಮಾಜಿ ಪ್ರಧಾನಿ ಪುಷ್ಪಾ ಕಮಲ್ ದಹಲ್ ಮತ್ತು ಮಾಧವ್ ಕುಮಾರ್ ನೋಟಿಸ್ ಜಾರಿಗೊಳಿಸಿದ್ದರು. ಆದರೆ ಪ್ರಧಾನಿ ಒಲಿ ಯಾವುದೇ ಸ್ಪಷ್ಟನೆ ನೀಡದಿರುವ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಯಿತು. ನಾವು ಬಹಳ ಸಮಯ ಕಾದೆವು. ಅವರು ನಮಗೆ ಉತ್ತರಿಸಲಿಲ್ಲ. ಹಾಗಾಗಿ ಪಕ್ಷದ ಕೇಂದ್ರ ಸಮಿತಿಯು ಪಕ್ಷದಿಂದ ಉಚ್ಛಾಟಿಸುವ ನಿರ್ಧಾರವನ್ನು ಕೈಗೊಂಡಿದೆ ಎಂದು ಶ್ರೇಷ್ಠ ತಿಳಿಸಿದರು.

ಇಂದಿನ ಇತಿಹಾಸ  History Today ಜನವರಿ 24  (2020+ ಹಿಂದಿನವುಗಳಿಗೆ ಇಲ್ಲಿ ಕ್ಲಿಕ್ ಮಾಡಿರಿ)

-ಸಂಗ್ರಹ: ನೆತ್ರಕೆರೆ ಉದಯಶಂಕರ

Friday, January 22, 2021

ಇಂದಿನ ಇತಿಹಾಸ History Today ಜನವರಿ 22

 ಇಂದಿನ ಇತಿಹಾಸ  History Today ಜನವರಿ 22 

2021: ನವದೆಹಲಿ: ಸುಮಾರು ಎರಡು ತಿಂಗಳ ಸುದೀರ್ಘ ಬಿಕ್ಕಟ್ಟನ್ನು ಪರಿಹರಿಸಲು ಸರ್ಕಾರ ಮತ್ತು ಚಳವಳಿ ನಿರತ ಕೃಷಿ ಮುಖಂಡರ ನಡುವಣ ಹನ್ನೊಂದನೇ ಸುತ್ತಿನ ಮಾತುಕತೆಗಳು ವಿಫಲವಾದ ಹಿನ್ನೆಲೆಯಲ್ಲಿ ಕೃಷಿ ಸುಧಾರಣಾ ಕಾನೂನುಗಳನ್ನು ವಿರೋಧಿಸುವ ರೈತ ಸಂಘಗಳ ಜೊತೆಗಿನ ಮಾತುಕತೆಯಿಂದ ಹೊರನಡೆಯಲು ತಾನು ಸಿದ್ಧವಾಗಿರುವುದಾಗಿ ಎಂದು ಕೇಂದ್ರ ಸರ್ಕಾರ 2021 ಜನವರಿ 22ರ ಶುಕ್ರವಾರ ಸುಳಿವು ನೀಡಿತು. ತನ್ನ ನಿಲುವನ್ನು ಬಿಗಿಗೊಳಿಸಿದ ಸರ್ಕಾರ, ಕಾನೂನುಗಳ ಅನುಷ್ಠಾನವನ್ನು ೧೮ ತಿಂಗಳುಗಳವರೆಗೆ ತಡೆಹಿಡಿಯುವ ಪ್ರಸ್ತಾಪವು ತನ್ನ ‘ಅತ್ಯುತ್ತಮ ಮತ್ತು ಕೊನೆಯ ಕೊಡುಗೆ’ ಎಂದು ಹೇಳಿದೆ ಮತ್ತು ಕಾನೂನಿನಲ್ಲಿ ಯಾವುದೇ ಲೋಪವಿಲ್ಲ ಎಂದು ಪುನರುಚ್ಚರಿಸಿದ್ದರೂ ಸಹ, ಪ್ರಸ್ತಾಪವನ್ನು ಮರುಪರಿಶೀಲಿಸುವಂತೆ ಪ್ರತಿಭಟನಕಾರ ರೈತರನ್ನು ಕೋರಿತು. ಸರ್ಕಾರದ ಪ್ರಸ್ತಾವನೆಯ ಕುರಿತು ರೈತರು ಮಾತನಾಡಲು ಸಿದ್ಧರಾದಾಗ ಮಾತ್ರ ಮುಂದಿನ ಸುತ್ತಿನ ಮಾತುಕತೆ ನಡೆಯಲಿದೆ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಈದಿನ ಘೋಷಿಸಿದರು. "ನಿಮ್ಮ ಕಳವಳಕ್ಕೆ ಸ್ಪಂದಿಸಲು ನಾವು ಯೋಚಿಸಿದ್ದೆವು. ಆದರೆ ಪ್ರಸ್ತಾಪದಲ್ಲಿ ಯಾವುದೇ  ತಪ್ಪು ಇಲ್ಲ. ನಾವು ನಿಮಗೆ ಉತ್ತಮ ಪ್ರಸ್ತಾಪವನ್ನು ನೀಡಿದ್ದೇವೆ. ದುರದೃಷ್ಟವಶಾತ್ ನೀವು ಅದನ್ನು ತಿರಸ್ಕರಿಸಿದ್ದೀರಿ’ ಎಂದು ತೋಮರ್ ಸಭೆಯಲ್ಲಿ ಹೇಳಿದರು.(ವಿವರಗಳಿಗೆ ಇಲ್ಲಿ ಕ್ಲಿಕ್  ಮಾಡಿರಿ)

ಇಂದಿನ ಇತಿಹಾಸ  History Today ಜನವರಿ 22  (2020+ ಹಿಂದಿನವುಗಳಿಗೆ ಇಲ್ಲಿ ಕ್ಲಿಕ್ ಮಾಡಿರಿ)

-ಸಂಗ್ರಹ: ನೆತ್ರಕೆರೆ ಉದಯಶಂಕರ

Thursday, January 21, 2021

ಇಂದಿನ ಇತಿಹಾಸ History Today ಜನವರಿ 21

 ಇಂದಿನ ಇತಿಹಾಸ  History Today ಜನವರಿ 21 

2021: ನವದೆಹಲಿ: ಪುಣೆಯ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಕಟ್ಟಡದಲ್ಲಿ 2021 ಜನವರಿ 21ರ ಗುರುವಾರ ಎರಡು ಬಾರಿ ಅಗ್ನಿಅನಾಹುತ ಸಂಭವಿಸಿದ್ದು, ಮೊದಲಿಗೆ ಮಧ್ಯಾಹ್ನ ಕಾಣಿಸಿಕೊಂಡ ಬೆಂಕಿಯಲ್ಲಿ ಐವರು ಸಾವನ್ನಪ್ಪಿದ್ದಾರೆ. ಬೆಂಕಿಯನ್ನು ನಿಯಂತ್ರಣಕ್ಕೆ ತಂದ ನಂತರ ಐದು ಸುಟ್ಟ ಶವಗಳು ಪತ್ತೆಯಾಗಿವೆ ಎಂದು ಪುಣೆಯ ಮೇಯರ್ ಮುರಳೀಧರ್ ಮೊಹೋಲ್ ಹೇಳಿದರು. ಕಟ್ಟಡದಲ್ಲಿ ಸಿಕ್ಕಿಬಿದ್ದ ಇತರ ಕೆಲವರನ್ನು ರಕ್ಷಿಸಲಾಗಿದೆ. ಬೆಂಕಿಯ ಕಾರಣವನ್ನು ಇನ್ನೂ ಕಂಡುಹಿಡಿಯಲಾಗಿಲ್ಲ. ಆದರೆ ವೆಲ್ಡಿಂಗ್ ಕೆಲಸವು ಬೆಂಕಿಗೆ ಕಾರಣವಾಗಿದೆ ಎಂದು ಊಹಿಸಲಾಗಿದೆ ಎಂದು ಅವರು ಹೇಳಿದರು. ಕಂಪೆನಿಯ ಸಿಇಒ ಮೊದಲಿಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಹೇಳಿದರು, ಆದರೆ ಸಾವುಗಳು ದೃಢಪಟ್ಟ ನಂತರ ತಮ್ಮ ಹೇಳಿಕೆಯನ್ನು ಪರಿಷ್ಕರಿಸಿದರು. (ವಿವರಗಳಿಗೆ ಇಲ್ಲಿ ಕ್ಲಿಕ್  ಮಾಡಿರಿ)

2021: ನವದೆಹಲಿ
: ಎರಡನೇ ಸುತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿಗಗಳಿಗೆ  ಕೋವಿಡ್ -೧೯ ವಿರುದ್ಧ ಲಸಿಕೆ ಹಾಕುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ೫೦ ವರ್ಷಕ್ಕಿಂತ ಮೇಲ್ಪಟ್ಟ ಇತರ ರಾಜಕಾರಣಿಗಳ ಸರದಿ ಮುಂದಿನ ಹಂತದಲ್ಲಿ ಬರಲಿದೆ ಎಂದು ಮುಖ್ಯಮಂತ್ರಿಗಳ  ಸಭೆಯಲ್ಲಿ ಪ್ರಧಾನಿ ಹೇಳಿದರುಹೆಲ್ತ್ಕೇರ್ ಮತ್ತು ಮುಂಚೂಣಿ ಕಾರ್ಯಕರ್ತರಾದ  ಪೋಲಿಸ್, ಸಶಸ್ತ್ರ ಪಡೆ ಮತ್ತು ಪೌರ ಕಾರ್ಮಿಕ  ನಂತರ, ಲಸಿಕೆ ಹಾಕುವ ಮೂರನೇ ವರ್ಗವು ೫೦ ವರ್ಷಕ್ಕಿಂತ ಮೇಲ್ಪಟ್ಟವರಾಗಿರಬಹುದು, ನಂತರ ಸಹ ಕಾಯಿಲೆಗಳಿಂದ ಬಳಲುತ್ತಿರುವ ೫೦ ಕ್ಕಿಂತ ಕಡಿಮೆ ವಯಸ್ಸಿನವರಿಗೆ ಚಚ್ಚುಮದ್ದು ನೀಡಲಾಗುವುದು.  ನವೆಂಬರ್ ೨೪ ರಂದು  ನಡೆದ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜ್ಯ ಮುಖ್ಯಮಂತ್ರಿಗಳ ನಡುವಣ ಸಭೆಯಲ್ಲಿ ಲಸಿಕೆ ಅಭಿಯಾನಕ್ಕೆ ತಾತ್ಕಾಲಿಕ ಆದ್ಯತೆಯ ಬಗ್ಗೆ ಚರ್ಚಿಸಲಾಗಿತ್ತು ಮತ್ತು ರಾಜ್ಯ ಸರ್ಕಾರಗಳಿಗೆ ಆ ಬಗ್ಗೆ ತಿಳಿಸಲಾಗಿತ್ತು ಎಂದು ವರದಿಗಳು ತಿಳಿಸಿವೆ. (ವಿವರಗಳಿಗೆ ಇಲ್ಲಿ ಕ್ಲಿಕ್  ಮಾಡಿರಿ).

2021: ನವದೆಹಲಿ: ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ (ಪಿಎಂಎವೈ) ನಗರ ಪ್ರದೇಶಗಳಲ್ಲಿ .೬೮ ಲಕ್ಷಕ್ಕೂ ಹೆಚ್ಚು ಮನೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ 2021 ಜನವರಿ 21ರ ಗುರುವಾರ ಅನುಮೋದನೆ ನೀಡಿತು. ಕೇಂದ್ರ ಅನುಮೋದನೆ ಮತ್ತು ನಿರ್ವಹಣಾ ಸಮಿತಿ (ಸಿಎಸ್ಎಂಸಿ) ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ತಿಳಿಸಿತು. ಸಭೆಯಲ್ಲಿ ೧೪ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಅಧಿಕಾರಿಗಳು ಭಾಗವಹಿಸಿದ್ದರು. ಪಿಎಂಎವೈ-ಯು ಅಡಿಯಲ್ಲಿ ಇದುವರೆಗೆ ೪೧ ಲಕ್ಷ ಮನೆಗಳು ಪೂರ್ಣಗೊಂಡಿದ್ದು, ೭೦ ಲಕ್ಷಕ್ಕೂ ಹೆಚ್ಚು ಮನೆಗಳು ನಿರ್ಮಾಣ ಹಂತದಲ್ಲಿವೆ ಎಂದು ಸಚಿವಾಲಯ ತಿಳಿಸಿತು. ಪಿಎಂಎವೈ (ನಗರ) ಅಡಿಯಲ್ಲಿ ಕೇಂದ್ರ ಮಂಜೂರು ಮತ್ತು ನಿರ್ವಹಣಾ ಸಮಿತಿ (ಸಿಎಸ್ಎಂಸಿ) ಸಭೆಯಲ್ಲಿ ,೬೮,೬೦೬ ಹೊಸ ಮನೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. (ವಿವರಗಳಿಗೆ ಇಲ್ಲಿ ಕ್ಲಿಕ್  ಮಾಡಿರಿ)

ಇಂದಿನ ಇತಿಹಾಸ  History Today ಜನವರಿ 21  (2020+ ಹಿಂದಿನವುಗಳಿಗೆ ಇಲ್ಲಿ ಕ್ಲಿಕ್ ಮಾಡಿರಿ)

-ಸಂಗ್ರಹ: ನೆತ್ರಕೆರೆ ಉದಯಶಂಕರ

Tuesday, January 19, 2021

ಇಂದಿನ ಇತಿಹಾಸ History Today ಜನವರಿ 19

 ಇಂದಿನ ಇತಿಹಾಸ  History Today ಜನವರಿ 19 

2021: ನವದೆಹಲಿ: ಸಂಸತ್ ಸದಸ್ಯರು  ಮತ್ತು ಇತರರಿಗೆ ಸಂಸತ್ತು ಕ್ಯಾಂಟೀನ್ಗಳಲ್ಲಿ ನೀಡಲಾಗುವ ಆಹಾರದ ಸಬ್ಸಿಡಿಯನ್ನು ನಿಲ್ಲಿಸಲಾಗಿದೆ. ಹೀಗಾಗಿ ಇಲ್ಲಿನ ಆಹಾರ ದುಬಾರಿಯಾಗಲಿದೆ ಎಂದು ಲೋಕಸಭಾ ಅಧ್ಯಕ್ಷ ಓಂ ಬಿರ್ಲಾ 2021 ಜನವರಿ 19 ಮಂಗಳವಾರ ತಿಳಿಸಿದರು. ಬಿರ್ಲಾ ಅವರು ಕ್ರಮದ ಆರ್ಥಿಕ ಪರಿಣಾಮಗಳನ್ನು ನಿರ್ದಿಷ್ಟಪಡಿಸದಿದ್ದರೂ, ಸಬ್ಸಿಡಿ ಕೊನೆಗೊಳ್ಳುವುದರಿಂದ ಲೋಕಸಭಾ ಸಚಿವಾಲಯವು ವಾರ್ಷಿಕವಾಗಿ ಕೋಟಿ ರೂ.ಗಳಿಗಿಂತ ಹೆಚ್ಚಿನ ಹಣವನ್ನು ಉಳಿಸಬಹುದು ಎಂದು ಅಂದಾಜು ಮಾಡಲಾಗಿದೆ.ಜನವರಿ ೨೯ ರಂದು ಆರಂಭವಾಗಲಿರುವ ಮುಂದಿನ ಸಂಸತ್ತಿನ ಅಧಿವೇಶನದ ಸಿದ್ಧತೆಗಳ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿರ್ಲಾ, ಉತ್ತರ ರೈಲ್ವೆಯ ಬದಲಿಗೆ ಸಂಸತ್ತು ಕ್ಯಾಂಟೀನುಗಳನ್ನು ಇನ್ನು ಐಟಿಡಿಸಿ ನಡೆಸಲಿದೆ ಎಂದು ಹೇಳಿದರು. ಬಜೆಟ್ ಅಧಿವೇಶನ ಪ್ರಾರಂಭವಾಗುವ ಮೊದಲು ಕೋವಿಡ್-೧೯ ಪರೀಕ್ಷೆಗೆ ಒಳಪಡುವಂತೆ ಎಲ್ಲ ಎಲ್ಲಾ ಸಂಸತ್ ಸದಸ್ಯರನ್ನು  ಕೋರಲಾಗುವುದು ಎಂದು ಬಿರ್ಲಾ ಹೇಳಿದರು.(ವಿವರಗಳಿಗೆ ಇಲ್ಲಿ ಕ್ಲಿಕ್ ಮಾಡಿರಿ)

2020: ಬೆಂಗಳೂರು: ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆ ೨೦೧೧ರ ಸಾಂವಿಧಾನಿಕ ಸಿಂಧುತ್ವವನ್ನು ಹೈಕೋರ್ಟ್ 2021 ಜನವರಿ 19ರ ಮಂಗಳವಾರ ಎತ್ತಿಹಿಡಿಯಿತು ಮತ್ತು ತತ್ ಕ್ಷಣವೇ  ಹೆಚ್ಚುವರಿ ವಿಶೇಷ ನ್ಯಾಯಾಲಯಗಳನ್ನು ತೆರೆಯುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತು. ಈ ಸಂಬಂಧ ಸಲ್ಲಿಕೆಯಾಗಿದ್ದ ಹಲವು ಅರ್ಜಿಗಳನ್ನು ವಿಲೇವಾರಿ ಮಾಡಿದ ನ್ಯಾಯಮೂರ್ತಿ ಅರವಿಂದ ಕುಮಾರ್ ಮತ್ತು ಬಿ.. ಪಾಟೀಲ ಅವರಿದ್ದ ವಿಭಾಗೀಯ ಪೀಠ, ವಿಶೇಷವಾಗಿ ಎಲ್ಲಾ ಜಿಲ್ಲೆಗಳಲ್ಲೂ ನ್ಯಾಯಾಲಯ ತೆರೆಯುವಂತೆ ತಿಳಿಸಿತು. ಬೆಂಗಳೂರು ನಗರದಲ್ಲಿ ಮಾತ್ರ ಭೂಕಬಳಿಕೆ ವಿಶೇಷ ನ್ಯಾಯಾಲಯ ಇದೆ. ಕಾಯ್ದೆಯಡಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಬೇಕೆಂದರೆ ರೈತರು ರಾಜಧಾನಿಗೇ ಬರಬೇಕಾದ ಸ್ಥಿತಿ ಇದೆ. ಇದು ಬಡ ರೈತರಿಗೆ ಕಷ್ಟವಾಗಿದೆ. ಅಲ್ಲದೇ ಕಾಯ್ದೆಯಡಿ ,೮೦೦ ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ ,೪೦೦ ಪ್ರಕರಣಗಳು ವಿಚಾರಣೆ ಬಾಕಿ ಇವೆ. ಹೀಗಾಗಿ ಹೆಚ್ಚುವರಿ ನ್ಯಾಯಾಲಯಗಳನ್ನು ಜಿಲ್ಲಾ ಮಟ್ಟದಲ್ಲಿ ತೆರೆಯುವುದು ಸೂಕ್ತಎಂದು ಪೀಠ ಅಭಿಪ್ರಾಯಪಟ್ಟಿತು. ಸಕಾರಣವಿಲ್ಲದೆ ಭೂ ಕಬಳಿಕೆ ವಿಶೇಷ ನ್ಯಾಯಾಲಯಗಳಿಗೆ ಪ್ರಕರಣಗಳನ್ನು ವರ್ಗಾಯಿಸಬಾರದು. ಆದೇಶವನ್ನು ಗಮನದಲ್ಲಿಟ್ಟುಕೊಂಡು ಪ್ರಕರಣಗಳನ್ನು ಪ್ರತ್ಯೇಕವಾಗಿ ನಿಭಾಯಿಸುವಂತೆ ವಿಶೇಷ ನ್ಯಾಯಾಲಯಕ್ಕೂ ಪೀಠ ನಿರ್ದೇಶನ ನೀಡಿತು. ‘ ಕಾಯ್ದೆಯು ಸಂವಿಧಾನದ ೧೪, ೨೦ ಮತ್ತು ೨೧ನೇ ವಿಧಿಗಳನ್ನು ಉಲ್ಲಂಘಿಸಿದೆಎಂದು ಆರೋಪಿಸಿ ಹೈಕೋರ್ಟ್ಗೆ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸಲ್ಲಿಕೆಯಾಗಿದ್ದವು.

2021: ವಾಷಿಂಗ್ಟನ್: ಅಮೆರಿಕದ ನೂತನ ಅಧ್ಯಕ್ಷರಾಗಿ ಜೋ ಬೈಡನ್ ಹಾಗೂ ಉಪಾಧ್ಯಕ್ಷರಾಗಿ ಕಮಲಾ ಹ್ಯಾರಿಸ್ ಅವರು 2021 ಜನವರಿ 20ರ ಬುಧವಾರ ಅಧಿಕಾರ ಸ್ವೀಕರಿಸಲಿದ್ದಾರೆ. ಇದರೊಂದಿಗೆ ಡೊನಾಲ್ಡ್ ಟ್ರಂಪ್ ಅವರ ಅಧಿಕಾರ ಕೊನೆಗೊಳ್ಳಲಿದೆ.ಟ್ರಂಪ್ ಅವರು ಕೈಗೊಂಡಿರುವ ಹಲವು ನಿರ್ಧಾರಗಳನ್ನು ಬೈಡನ್ ರದ್ದುಗೊಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಯುರೋಪ್ ಮತ್ತು ಬ್ರೆಜಿಲಿನಿಂದ ಅಮೆರಿಕ ಪ್ರವೇಶಿಸುವುದಕ್ಕೆ ಹೇರಿರುವ ಪ್ರಯಾಣ ನಿರ್ಬಂಧ ಜನವರಿ ೨೬ಕ್ಕೆ ಕೊನೆಗೊಳ್ಳಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈಗಾಗಲೇ ಹೇಳಿದ್ದಾರೆ. ಆದರೆ ನಿರ್ಬಂಧಗಳನ್ನು ತ್ವರಿತವಾಗಿ ವಿಸ್ತರಿಸಲು ಜೋ ಬೈಡನ್ ಯೋಜಿಸಿರುವುದಾಗಿ ಅವರ ವಕ್ತಾರರು ತಿಳಿಸಿದ್ದಾರೆ.ಅಧಿಕಾರ ಸ್ವೀಕರಿಸಿದ ಮೊದಲ ದಿನ ಬೈಡನ್ ಮತ್ತು ಹ್ಯಾರಿಸ್ ಕೋವಿಡ್-೧೯ ಸಾಂಕ್ರಾಮಿಕದಿಂದ ಮೃತರಾದವರಿಗೆ ಸಂತಾಪ ಸೂಚಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಧ್ಯೆ, ಅಮೆರಿಕದ ನೂತನ ಉಪಾಧ್ಯಕ್ಷೆಯಾಗಿ ಪ್ರಮಾಣವಚನ ಸ್ವೀಕರಿಸಲು ನಾನು ಎದುರು ನೋಡುತ್ತಿದ್ದೇನೆ. ಕಾರ್ಯಕ್ರಮದಲ್ಲಿ ಹೆಮ್ಮೆಯಿಂದ ಭಾಗವಹಿಸುತ್ತೇನೆ ಎಂದು ಕಮಲಾ ಹ್ಯಾರಿಸ್ ಹೇಳಿದ್ದಾರೆ. ನಾವು ಕೆಲಸ ಮಾಡಲು ಸಿದ್ಧರಿದ್ದೇವೆ. ಮಾಡುವುದಕ್ಕೆ ಸಾಕಷ್ಟು ಕೆಲಸವಿದೆ. ನಮ್ಮ ನೂತನ ಆಡಳಿತದ ಎದುರು ಸಾಕಷ್ಟು ಸವಾಲುಗಳಿರುವುದನ್ನು ಒಪ್ಪಿಕೊಂಡಿದ್ದೇವೆ. ಆದರೆ ಅವುಗಳನ್ನು ಎದುರಿಸಿ ಗೆಲ್ಲುವುದು ಅಷ್ಟು ಸುಲಭವಲ್ಲ ಎಂದೂ ಅವರು ಹೇಳಿದ್ದಾರೆ.ಜೋ ಬೈಡನ್ ಅಧಿಕಾರ ಸ್ವೀಕಾರ ಸಮಾರಂಭಕ್ಕೆ ತೆರಳುವುದಿಲ್ಲ ಎಂದು ಡೊನಾಲ್ಡ್ ಟ್ರಂಪ್ ಹಿಂದೆ ಹೇಳಿದ್ದರು. ಅವರ ನಡೆ ಕುತೂಹಲ ಮೂಡಿಸಿದೆ.

2021: ನವದೆಹಲಿ: ಭೂತಾನ್, ಮಾಲ್ಡೀವ್ಸ್, ಬಾಂಗ್ಲಾದೇಶ, ನೇಪಾಳ, ಮ್ಯಾನ್ಮಾರ್, ಸಿಯಾಚಿಲ್ಗೆ ಕೋವಿಡ್-೧೯ ಲಸಿಕೆಯನ್ನು ಬುಧವಾರದಿಂದ ಸರಬರಾಜು ಮಾಡುವುದಾಗಿ ಭಾರತವು 2021 ಜನವರಿ 19ರ ಮಂಗಳವಾರ ಘೋಷಿಸಿತು. ದೇಶದಲ್ಲಿ ಅಗತ್ಯತೆ ಇರುವ ಲಸಿಕೆಯ ಪ್ರಮಾಣವನ್ನು ಗಮನದಲ್ಲಿ ಇರಿಸಿಕೊಂಡು, ಮುಂದಿನ ವಾರ ಹಾಗೂ ತಿಂಗಳಲ್ಲಿ ಹಂತ ಹಂತವಾಗಿ ಪಾಲುದಾರ ರಾಷ್ಟ್ರಗಳಿಗೆ ಭಾರತವು ಲಸಿಕೆಯನ್ನು ಸರಬರಾಜು ಮಾಡಲಿದೆ ಎಂದು ವಿದೇಶಾಂಗ ಸಚಿವಾಲಯವು ತಿಳಿಸಿತು. ಶ್ರೀಲಂಕಾ, ಅಫ್ಘಾನಿಸ್ಥಾನ ಹಾಗೂ ಮಾರಿಷಸ್ಸಿನ ನಿಯಂತ್ರಕರಿಂದ ಅಗತ್ಯವಿರುವ ಒಪ್ಪಿಗೆಗಳಿಗೆ ಭಾರತವು ಕಾಯುತ್ತಿದೆ ಎಂದೂ ಸಚಿವಾಲಯವು ತಿಳಿಸಿತು. ಭಾರತದಲ್ಲಿ ತಯಾರಾದ ಕೋವಿಡ್-೧೯ ಲಸಿಕೆಗಳಿಗೆ ವಿವಿಧ ನೆರೆ ರಾಷ್ಟ್ರಗಳಿಂದ ಹಾಗೂ ಪಾಲುದಾರ ರಾಷ್ಟ್ರಗಳಿಂದ ಮನವಿಯನ್ನು ಭಾರತವು ಸ್ವೀಕರಿಸಿದೆ. ಮನವಿಗೆ ಪ್ರತಿಯಾಗಿ ಭಾರತವು ಲಸಿಕೆ ಸರಬರಾಜು ಮಾಡುತ್ತಿದೆಎಂದು ಪ್ರಕಟಣೆಯಲ್ಲಿ ಸಚಿವಾಲಯವು ತಿಳಿಸಿತು. ಭಾರತದಲ್ಲಿ ಉತ್ಪಾದಿಸುವ ಲಸಿಕೆ ಪೂರೈಸುವಂತೆ ನೆರೆ ರಾಷ್ಟ್ರಗಳು ಮತ್ತು ಪಾಲುದಾರ ದೇಶಗಳಿಂದ ಹಲವು ಮನವಿಗಳು ಸಲ್ಲಿಕೆಯಾಗಿವೆ. ಮನವಿಗಳನ್ನು ಗಮನದಲ್ಲಿಟ್ಟುಕೊಂಡು ಮತ್ತು ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಮಾನವೀಯ ನೆಲೆಯಲ್ಲಿ ನಮ್ಮ ಉತ್ಪಾದನಾ ಸಾಮರ್ಥ್ಯವನ್ನು ಬಳಸಿಕೊಂಡು ಲಸಿಕೆ ಪೂರೈಕೆಗೆ ಭಾರತ ಬದ್ಧವಾಗಿದೆ. ನೆರವಿನ ರೂಪದಲ್ಲಿ ಭೂತಾನ್, ಮಾಲ್ಡೀವ್ಸ್, ಬಾಂಗ್ಲಾದೇಶ, ನೇಪಾಳ, ಮ್ಯಾನ್ಮಾರ್ ಹಾಗೂ ಸಿಯಾಚಿಲ್ಗೆ ಬುಧವಾರದಿಂದ ರಫ್ತು ಆರಂಭಿಸಲಾಗುವುದು ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ.ದೇಶದಲ್ಲಿ ಈಗಾಗಲೇ ಕೋವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆ ನೀಡಿಕೆ ಆರಂಭಿಸಲಾಗಿದೆ. ಮುಂಚೂಣಿ ಆರೋಗ್ಯ ಕಾರ್ಯಕರ್ತರಿಗೆ ಸದ್ಯ ಲಸಿಕೆ ನೀಡಲಾಗುತ್ತಿದೆ.ಆಕ್ಸ್ಫರ್ಡ್, ಆಸ್ಟ್ರಜೆನೆಕಾದ ಕೋವಿಶೀಲ್ಡ್ ಲಸಿಕೆಯನ್ನು ಸೀರಂ ಇನ್ಸ್ಟಿಟ್ಯೂಟ್ ಹಾಗೂ ಕೊವ್ಯಾಕ್ಸಿನ್ ಅನ್ನು ಭಾರತ್ ಬಯೋಟೆಕ್ ಕಂಪನಿಗಳು ಉತ್ಪಾದಿಸುತ್ತಿವೆ.

ಇಂದಿನ ಇತಿಹಾಸ  History Today ಜನವರಿ 19  (2020+ ಹಿಂದಿನವುಗಳಿಗೆ ಇಲ್ಲಿ ಕ್ಲಿಕ್ ಮಾಡಿರಿ)

-ಸಂಗ್ರಹ: ನೆತ್ರಕೆರೆ ಉದಯಶಂಕರ