Sunday, January 22, 2023

PARYAYA: ವಿಟ್ಲಾಯನದ ಕೊನೆಯದಿನ: ನೆತ್ರಕೆರೆಯಲ್ಲಿ ಕಟ್ಟೆಪೂಜೆ

 ವಿಟ್ಲಾಯನದ ಕೊನೆಯದಿನ: ನೆತ್ರಕೆರೆಯಲ್ಲಿ ಕಟ್ಟೆಪೂಜೆ


ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲದ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೆಯ ಕೊನೆಯ ದಿನ (೨೩ ಜನವರಿ ೨೦೨೩) ದೇವಸ್ಥಾನದ ಓಕುಳಿ ಕಟ್ಟೆಯಲ್ಲಿ ಪೂಜೆಯ ಬಳಿಕ ಕೊಡಂಗಾಯಿಗೆ ಅವಭೃತ ಸ್ನಾನಕ್ಕೆ ಹೋಗುವುದು ಕ್ರಮ.

ಹೀಗೆ  ಹೋಗುವ ದಾರಿಯಲ್ಲಿ  ವಿಟ್ಲ ಪ್ರಾಥಮಿಕ ಶಾಲೆ, ಕೂಡೂರು ಕಟ್ಟೆ, ನೆತ್ರಕೆರೆ ಕಟ್ಟೆಗಳು, ಕಡಂಬು ಕಟ್ಟೆ ಸೇರಿದಂತೆ ವಿವಿಧ ಕಟ್ಟೆಗಳಲ್ಲಿ ಕಟ್ಟೆ ಪೂಜೆ ಸ್ವೀಕರಿಸಿ ಕೊಡಂಗಾಯಿಯಲ್ಲಿ ಅವಭೃತ ಸ್ನಾನ ಪೂರೈಸಿ ಪಂಚಲಿಂಗೇಶ್ವರನು ಸ್ವಸ್ಥಾನಕ್ಕೆ ವಾಪಸಾಗುತ್ತಾನೆ.


ಅವಭೃತ ಸ್ನಾನಕ್ಕಾಗಿ ಪಂಚಲಿಂಗೇಶ್ವರನು ಸವಾರಿ ನಡೆಸುವ ದೃಶ್ಯ ಮತ್ತು ನೆತ್ರಕೆರೆ ಕಟ್ಟೆಗಳಲ್ಲಿ ಪೂಜೆ ಸ್ವೀಕರಿಸುವ ಸಂಭ್ರಮದ ವಿಡಿಯೋ ಇಲ್ಲಿದೆ. (ವಿಡಿಯೋ, ಚಿತ್ರಗಳು: ಎನ್.‌ ಶ್ಯಾಮ್‌, ಎನ್‌.ಟಿ. ಗಣೇಶ್)



೨೦೨೩ರ ವಿಟ್ಲ ಜಾತ್ರೋತ್ಸವವನ್ನು ಮತ್ತೊಮ್ಮೆ ಮೆಲುಕು ಹಾಕುವಿರಾದರೆ ಕೆಳಗೆ ಕ್ಲಿಕ್‌ ಮಾಡಿರಿ:

ವಿಟ್ಲಾಯನದ ಕೊನೆಯ ದಿನ

 ವಿಟ್ಲ ರಥೋತ್ಸವ ಸಂಭ್ರಮ

ವಿಟ್ಲ ಜಾತ್ರೆ ಬಯ್ಯದ ಬಲಿ

 ವಿಟ್ಲಾಯನ ವೈಭವ

ವಿಟ್ಲ ಜಾತ್ರೋತ್ಸವ ಸಂಭ್ರಮ

PARYAYA: ವಿಟ್ಲಾಯನದ ಕೊನೆಯದಿನ: ನೆತ್ರಕೆರೆಯಲ್ಲಿ ಕಟ್ಟೆಪೂಜೆ:  ವಿಟ್ಲಾಯನದ ಕೊನೆಯದಿನ: ನೆತ್ರಕೆರೆಯಲ್ಲಿ ಕಟ್ಟೆಪೂಜೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲದ ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೆಯ ಕೊನೆಯ ದಿನ (೨೩ ಜನವರಿ ...

PARYAYA: ವಿಟ್ಲಾಯನದ ಕೊನೆಯ ದಿನ

ವಿಟ್ಲಾಯನದ ಕೊನೆಯ ದಿನ

೨೦೨೩ ಜನವರಿ ೨೨ ಭಾನುವಾರ. ಇಂದು ದಕ್ಷಿಣ ಕನ್ನಡ ಜಿಲ್ಲೆ ವಿಟ್ಲದ ಶ್ರೀ ಪಂಚಲಿಂಗೇಶ್ವರನ ಜಾತ್ರೋತ್ಸವದ ಕೊನೆಯ ದಿನ. 

ಶನಿವಾರ ʼಬೆಡಿʼಯ ಮಧ್ಯೆ ಮಹಾರಥೋತ್ಸವದ ಬಳಿಕ ಬೀದಿ ಮೆರವಣಿಗೆ ಶಯನೋತ್ಸವ ನಡೆದು ವಿಶ್ರಾಂತಿ ಪಡೆಯುವ ದೇವರನ್ನು ಭಾನುವಾರ ಈದಿನ ಬೆಳಗ್ಗೆ ಎಬ್ಬಿಸಿ ಕವಟೋದ್ಘಾಟನೆ , ಬಳಿಕ ಮಹಾಪೂಜೆ ನಡೆಯುತ್ತದೆ. ಈ ವೇಳೆಯಲ್ಲಿ ಬಟ್ಲು ಕಾಣಿಕೆ, ತುಲಾಭಾರ ಸೇವೆ ನಡೆಯುತ್ತದೆ. 

ಓಕುಳಿಕಟ್ಟೆಯಲ್ಲಿ ಕಟ್ಟೆ ಪೂಜೆಗಾಗಿ ದೇವಾಲಯದ ಒಳಗಿನಿಂದ ಹೊರ ಬರುತ್ತಿರುವ ದೃಶ್ಯದ ವಿಡಿಯೋ ಇಲ್ಲಿದೆ:


ರಾತ್ರಿ ದೇವಸ್ಥಾನದ ಒಳಗಿನ ಬಲಿಯ ಬಳಿಕ ಹೊರಗೆ ಓಕುಳಿ ಕಟ್ಟೆಯಲ್ಲಿ ಕಟ್ಟೆ ಪೂಜೆ. ಕಟ್ಟೆ ಪೂಜೆಯ ಬಳಿಕ ಶ್ರೀವರಿಗೆ ಅಷ್ಟಾವಧಾನ ಸೇವೆ. ಅಲ್ಲಿಂದ ಕೊಡಂಗಾಯಿಗೆ ಅವಭೃತ ಸ್ನಾನಕ್ಕೆ ಸವಾರಿ,

ಈ ಸವಾರಿಯಲ್ಲಿ ಪ್ರಾಥಮಿಕ ಶಾಲೆ, ಕೂಡೂರು ಕಟ್ಟೆ, ನೆತ್ರಕೆರೆ ಕಟ್ಟೆಗಳು, ಕಡಂಬು ಕಟ್ಟೆ ಸೇರಿದಂತೆ ವಿವಿಧ ಕಟ್ಟೆಗಳಲ್ಲಿ ಕಟ್ಟೆ ಪೂಜೆಗಳು ನಡೆಯುತ್ತದೆ. ಇಲ್ಲಿನ ಭಕ್ತಾದಿಗಳು ತಮ್ಮ ತಮ್ಮ ಪ್ರದೇಶದ ಕಟ್ಟೆಗೆ ಬರುವ ದೇವರನ್ನು ಸಂಭ್ರಮೋತ್ಸಾಹದೊಂದಿಗೆ ಸ್ವಾಗತಿಸಿ, ಪೂಜೆ ನೀಡಿ ಬೀಳ್ಕೊಡುತ್ತಾರೆ.

ಕೊಡಂಗಾಯಿಯಲ್ಲಿ ಅವಭೃತ ಸ್ನಾನದ ಬಳಿಕ ಮರಳಿ ದೇವಸ್ಥಾನಕ್ಕೆ ವಾಪಸ್.‌ ಬರುವಾಗ ಪುನಃ ಭಕ್ತಾದಿಗಳಿಂದ ಅಲ್ಲಲ್ಲಿ ಪೂಜೆ ಮಂಗಳಾರತಿ. ಕೊನೆಗೆ ಧ್ವಜಾವರೋಹಣ, ಸಂಪ್ರೋಕ್ಷಣೆಯೊಂದಿಗೆ ವಿಟ್ಲ ಜಾತ್ರೆಗೆ ತೆರೆ.


ಇಲ್ಲಿ ಶನಿವಾರದ ಮಹಾರಥೋತ್ಸವದ ಚಿತ್ರ ಹಾಗೂ ʼಬೆಡಿʼ ಸಂಭ್ರಮದ ವಿಡಿಯೋವನ್ನು ನೋಡಬಹುದು. (ಚಿತ್ರ, ವಿಡಿಯೋ ಕೃಪೆ: ವಿಟ್ಲ ಸುದ್ದಿಗಳು ವಾಟ್ಸಪ್‌ ಗ್ರೂಪ್).

ವಿಟ್ಲ ಜಾತ್ರೆಯ ಹಿಂದಿನ ಸುದ್ದಿಗಳನ್ನು ಕೆಳಗೆ ಕ್ಲಿಕ್‌ ಮಾಡಿರಿ:

 ವಿಟ್ಲ ರಥೋತ್ಸವ ಸಂಭ್ರಮ

ವಿಟ್ಲ ಜಾತ್ರೆ ಬಯ್ಯದ ಬಲಿ

 ವಿಟ್ಲಾಯನ ವೈಭವ

ವಿಟ್ಲ ಜಾತ್ರೋತ್ಸವ ಸಂಭ್ರಮ

PARYAYA: ವಿಟ್ಲಾಯನದ ಕೊನೆಯ ದಿನ: ವಿಟ್ಲಾಯನದ ಕೊನೆಯ ದಿನ ೨೦೨೩ ಜನವರಿ ೨೨ ಭಾನುವಾರ. ಇಂದು ದಕ್ಷಿಣ ಕನ್ನಡ ಜಿಲ್ಲೆ ವಿಟ್ಲದ ಶ್ರೀ ಪಂಚಲಿಂಗೇಶ್ವರನ ಜಾತ್ರೋತ್ಸವದ ಕೊನೆಯ ದಿನ.  ಶನಿವಾರ ʼಬೆಡಿʼಯ ಮಧ್ಯೆ ಮ...

Saturday, January 21, 2023

PARYAYA: ವಿಟ್ಲ ರಥೋತ್ಸವ ಸಂಭ್ರಮ

 ವಿಟ್ಲ ರಥೋತ್ಸವ ಸಂಭ್ರಮ


ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ರಥೋತ್ಸವ ೨೦೨೩ ಜನವರಿ ೨೧ರ ಶನಿವಾರ ವಿಜೃಂಭಣೆಯಿಂದ ನಡೆಯುತ್ತಿದೆ. 

ರಥೋತ್ಸವದ ದಿನ ಇಡೀ ಊರ ಮಂದಿಯ ಕೊಡುಗೆಯೊಂದಿಗೆ ನಡೆಯುವ ʼಬೆಡಿʼ - ಪಟಾಕಿಯ ಸಂಭ್ರಮದ ಎಲ್ಲರ ಕಣ್ಮನ ಸೆಳೆಯುತ್ತದೆ.

ಅದಕ್ಕೂ ಮುನ್ನ ಈವರೆಗೆ ನಡೆದ ಬಯ್ಯದ ಬಲಿ, ಕೆರೆ ಆಯನ, ಹೂ ತೇರು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ವಿಡಿಯೋಗಳು ಇಲ್ಲಿವೆ. ವಿಡಿಯೋ, ಚಿತ್ರ ಕೃಪೆ: ವಿಟ್ಲ ಸುದ್ದಿಗಳು ವಾಟ್ಸಪ್‌ ಗ್ರೂಪ್, ಸದಾಶಿವ ಶಿಲ್ಪಿ ಸ್ಟುಡಿಯೋ, ನಮ್ಮ ನ್ಯೂಸ್‌ ಇತ್ಯಾದಿ.  

ನಡು ದೀಪೋತ್ಕೆಸವ ಕೆರೆ ಆಯನ, ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ ನೋಡಲು ಕೆಳಗೆ ಕ್ಲಿಕ್‌ ಮಾಡಿರಿ:


ಪಂಚಲಿಂಗೇಶ್ವರ ದೇವರು ʼಹೂ ತೇರುʼ ಏರು ಮುನ್ನ....



ಜಾತ್ರಾ ಸಂಭ್ರಮದ ಇನ್ನೊಂದು ದೃಶ್ಯ.


ಬಯ್ಯದ ಬಲಿ ಸಂದರ್ಭದಲ್ಲಿ ದೇವರ ಸಮೀಪ ದೃಶ್ಯಗಳನ್ನು ನೋಡಿ:


PARYAYA: ವಿಟ್ಲ ರಥೋತ್ಸವ ಸಂಭ್ರಮ:  ವಿಟ್ಲ ರಥೋತ್ಸವ ಸಂಭ್ರಮ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ರಥೋತ್ಸವ ೨೦೨೩ ಜನವರಿ ೨೧ರ ಶನಿವಾರ ವಿಜೃಂಭಣೆಯಿಂದ ನಡೆಯ...

Wednesday, January 18, 2023

PARYAYA: ವಿಟ್ಲ ಜಾತ್ರೆ ಬಯ್ಯದ ಬಲಿ

ವಿಟ್ಲ ಜಾತ್ರೆ ಬಯ್ಯದ ಬಲಿ


ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೆಯಲ್ಲಿ ಐದನೇ ದಿನ ವಿಶೇಷ. ಇಲ್ಲಿಯವರೆ ಸಣ್ಣ ತೇರಿನಲ್ಲಿ ದೇವರ ಉತ್ಸವ ನಡೆದರೆ ʼಬಯ್ಯದ ಬಲಿʼ ಎಂಬುದಾಗಿ ಕರೆಯಲಾಗುವ ಐದನೇ ದಿನ ದೇವರು ದೊಡ್ಡ ರಥವನ್ನು ಏರಿ ಸವಾರಿ ಮಾಡುವುದು ವಿಶೇಷ. ಈ ದಿನದ ಸಂಭ್ರಮ ಕೂಡಾ ಹಿಂದಿನ ನಾಲ್ಕು ದಿನಗಳ ಸಂಭ್ರಮಕ್ಕಿಂತ ಹೆಚ್ಚು.

ಈದಿನ ವಿಟ್ಲ ಸಮೀಪದ ಕೇಪುವಿನಿಂದ ಶ್ರೀ ಮಲರಾಯ ದೈವದ ಭಂಡಾರ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಬರುತ್ತದೆ. ವಿಟ್ಲದ ʼಬಯ್ಯದ ಬಲಿʼ ಉತ್ಸವ ಸಂಭ್ರಮ ಶ್ರೀ ಮಲರಾಯ ದೈವದ ಭಂಡಾರ ಆಗಮನದೊಂದಿಗೆ ಶುರುವಾಗುತ್ತದೆ.

ʼಬಯ್ಯದ  ಬಲಿʼ ಸಂಭ್ರಮವನ್ನು ಈ ಕೆಳಗಿನ ವಿಡಿಯೋಗಳಲ್ಲಿ ನೋಡಿ. ಚಿತ್ರ ವಿಡಿಯೋ ಕೃಪೆ: ವಿಟ್ಲ ಸುದ್ದಿಗಳು ವಾಟ್ಸಪ್‌ ಗ್ರೂಪ್‌, ವಿಟಿವಿ. 

ಕೇಪುವಿನಿಂದ ಶ್ರೀ ಮಲರಾಯ ದೈವದ ಭಂಡಾರ ಆಗಮನ ಮತ್ತು ಜಾತ್ರಾ ವೈಭವದ ವೀಕ್ಷಣೆಗೆ ಕೆಳಗಿನ ಚಿತ್ರ ಕ್ಲಿಕ್‌ ಮಾಡಿ.

ಜಾತ್ರೆಯ ಮೊದಲ ದಿನ ಅಂದರೆ ಲಕ್ಷ ದೀಪೋತ್ಸವದ ದಿನ ನಡೆದ ರುದ್ರಯಾಗ ಮತ್ತು ಜಾತ್ರೆಯ ವೈಭವದ ಇನ್ನೊಂದು ವಿಡಿಯೋ ಇಲ್ಲಿದೆ. ಕೃಪೆ: ನಮ್ಮ ನ್ಯೂಸ್


PARYAYA: ವಿಟ್ಲ ಜಾತ್ರೆ ಬಯ್ಯದ ಬಲಿ: ವಿಟ್ಲ ಜಾತ್ರೆ ಬಯ್ಯದ ಬಲಿ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೆಯಲ್ಲಿ ಐದನೇ ದಿನ ವಿಶೇಷ. ಇಲ್ಲಿಯವರೆ ಸಣ್ಣ ತೇರ...

Sunday, January 15, 2023

PARYAYA: ವಿಟ್ಲಾಯನ ವೈಭವ

 ವಿಟ್ಲಾಯನ ವೈಭವ


ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಯ ಎರಡನೇ ದಿನವಾದ ೨೦೨೩ ಜನವರಿ ೧೫ರ ಭಾನುವಾರ ಸಂಜೆ ಪಂಚಲಿಂಗೇಶ್ವರನ ನಿತ್ಯೋತ್ಸವ -ರಥೋತ್ಸವ ಜರುಗಿತು. 

ಪುಟ್ಟ ತೇರಿನಲ್ಲಿ ರಥೋತ್ಸವ ಮುಗಿದ ಬಳಿಕ ದೇವಾಲಯದ ಹೊರಾವರಣ ಕಟ್ಟೆಯಲ್ಲಿ ದೇವರ ಪೂಜೆ ನೆರವೇರಿತು.

ಈ ಸಂದರ್ಭದ ದೃಶ್ಯಗಳು ವಿಡಿಯೋದಲ್ಲಿ ಮೂಡಿಬಂದದ್ದು ಹೀಗೆ: ವಿಡಿಯೋ ಕೃಪೆ: ವಿಟ್ಲ ಸುದ್ದಿಗಳು ವಾಟ್ಸಪ್‌ ಗ್ರೂಪ್. ವಿಡಿಯೋ ಕ್ಲಿಕ್ಲಿಸಿದವರು: ನೆತ್ರಕೆರೆ ಶ್ಯಾಮ್‌ .

ವಿಡಿಯೋ ನೋಡಲು ಕೆಳಗೆ ಕ್ಲಿಕ್‌ ಮಾಡಿರಿ:




PARYAYA: ವಿಟ್ಲಾಯನ ವೈಭವ:  ವಿಟ್ಲಾಯನ ವೈಭವ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಯ ಎರಡನೇ ದಿನವಾದ ೨೦೨೩ ಜನವರಿ ೧೫ರ ಭಾನುವಾರ ಸ...

PARYAYA: ವಿಟ್ಲ ಜಾತ್ರೋತ್ಸವ ಸಂಭ್ರಮ

ವಿಟ್ಲ ಜಾತ್ರೋತ್ಸವ ಸಂಭ್ರಮ


ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ಸಹಸ್ರಾರು ವರ್ಷಗಳಷ್ಟು ಪುರಾತನವಾದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ ಸಂಭ್ರಮ ೨೦೨೩ ಜನವರಿ ೧೪ರ ಶನಿವಾರ ಮಕರ ಸಂಕ್ರಾಂತಿಯೊಂದಿಗೆ ಆರಂಭವಾಗಿದೆ.

ʼವಿಟ್ಲಾಯನʼ ಎಂಬುದಾಗಿಯೇ ಖ್ಯಾತವಾಗಿರುವ  ವಿಟ್ಲ ಜಾತ್ರೆಯ ಮೊದಲ ದಿನದ ಧ್ವಜಾರೋಹಣ, ಲಕ್ಷದೀಪೋತ್ಸವ  ಸಂಭ್ರಮದ ಕೆಲವು ದೃಶ್ಯಗಳು ಇಲ್ಲಿವೆ. ಚಿತ್ರ ಹಾಗೂ  ವಿಡಿಯೋ ಕೃಪೆ: ವಿಟ್ಲ ಸುದ್ದಿಗಳು ವಾಟ್ಸಪ್‌ ಗ್ರೂಪಿನ ಶ್ಯಾಮ್‌ ನೆತ್ರಕೆರೆ, ಸದಾಶಿವ "ಶಿಲ್ಪಿʼ ವಿಟ್ಲ.









 ಸಂಜೆ  ಭಜನಾ ತಂಡಗಳ ಜೊತೆಗೆ ನಡೆದ ಉಲ್ಪೆ ಮೆರವಣಿಗೆ ಮತ್ತು ಹಸಿರುವಾಣಿ ಮೆರವಣಿಗೆ ಸಂಭ್ರಮದ  ವಿಡಿಯೋ  l ಇಲ್ಲಿದೆ.  ಕೃಪೆ : ವಿಟಿವಿ, ವಿಟ್ಲ. ಕೆಳಗಿನ ಚಿತ್ರ ಕ್ಲಿಕ್‌ ಮಾಡಿರಿ:

PARYAYA: ವಿಟ್ಲ ಜಾತ್ರೋತ್ಸವ ಸಂಭ್ರಮ:  ವಿಟ್ಲ ಜಾತ್ರೋತ್ಸವ ಸಂಭ್ರಮ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ಸಹಸ್ರಾರು ವರ್ಷಗಳಷ್ಟು ಪುರಾತನವಾದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ...