Tuesday, December 30, 2025

PARYAYA: ವೈಕುಂಠ ಏಕಾದಶಿ ಸಡಗರ

 ವೈಕುಂಠ ಏಕಾದಶಿ ಸಡಗರ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೫ ಡಿಸೆಂಬರ್‌ ೩೦ರ ಮಂಗಳವಾರ ವೈಕುಂಠ ಏಕಾದಶಿಯನ್ನು ಸಡಗರದೊಂದಿಗೆ ಆಚರಿಸಲಾಯಿತು.

ನಸುಕಿನ ಬ್ರಾಹ್ಮೀ ಮುಹೂರ್ತದಲ್ಲಿಯೇ ಅಭಿಷೇಕದೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಬಳಿಕ ಅಲಂಕಾರ, ಮಹಾಮಂಗಳಾರತಿ ನಡೆಯಿತು.

ಭಾರೀ ಸಂಖ್ಯೆಯಲ್ಲಿ ಭಕ್ತರು ಮುಂಜಾನೆಯಲ್ಲೇ ಆಗಮಿಸಿ ದೇವರ ದರ್ಶನ, ವೈಕುಂಠ ದ್ವಾರದ ದರ್ಶನ ಪಡೆದು ಪುನೀತರಾದರು.

ಮಾಜಿ ಸಚಿವರಾದ ಶ್ರೀ ಎಸ್.‌ ಎನ್.‌ ಕೃಷ್ಣಯ್ಯ ಶೆಟ್ಟಿ ಅವರಿಂದ ಲಡ್ಡು ಪ್ರಸಾದ ಸೇವೆ, ಶ್ರೀ ಮುನಿರಾಜು ಮತ್ತು ಕುಟುಂಬದವರಿಗೆ ಅಲಂಕಾರ ಸೇವೆ, ಶ್ರೀ ನಾಗರಾಜ್‌ ಕೆ.ಎಂ. ಮತ್ತು ಕುಟುಂಬ, ಶ್ರೀ ಚೌಡರೆಡ್ಡಿ ಮತ್ತು ಕುಟುಂಬದವರಿಂದ ಪ್ರಸಾದ ಸೇವೆ ವ್ಯವಸ್ಥೆಯಿತ್ತು. ವಿದ್ಯಾ ರಘು ಪ್ರಸಾದ್‌ ಮತ್ತು ತಂಡ ಹಾಗೂ ಭಕ್ತಾದಿಗಳಿಂದ ಭಜನಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದ ಕೆಲವು ವಿಡಿಯೋ ಹಾಗೂ ಚಿತ್ರಗಳು ಇಲ್ಲಿವೆ. ಅಭಿಷೇಕದ ದೃಶ್ಯ ಕೆಳಗಿನ ಚಿತ್ರ ಕ್ಲಿಕ್‌ ಮಾಡಿರಿ ಅಥವಾ - Video link https://youtu.be/31F2f6wRhmI ಇದನ್ನು ಕ್ಲಿಕ್‌ ಮಾಡಿರಿ.

 
ಮಹಾಮಂಗಳಾರತಿ ದೃಶ್ಯ ನೋಡಲು ಈ ಕೆಳಗಿನ ಚಿತ್ರ ಕ್ಲಿಕ್‌ ಮಾಡಿರಿ ಅಥವಾ ಯೂ ಟ್ಯೂಬ್‌ ವಿಡಿಯೋ ಲಿಂಕ್‌ ಕ್ಲಿಕ್‌ ಮಾಡಿರಿ:

PARYAYA: ವೈಕುಂಠ ಏಕಾದಶಿ ಸಡಗರ:   ವೈಕುಂಠ ಏಕಾದಶಿ ಸಡಗರ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲ...

Monday, December 29, 2025

PARYAYA: ವೈಕುಂಠ ಏಕಾದಶಿಗೆ ಸಡಗರದ ಸಿದ್ಧತೆ

 ವೈಕುಂಠ ಏಕಾದಶಿಗೆ ಸಡಗರದ ಸಿದ್ಧತೆ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೫ ಡಿಸೆಂಬರ್‌ ೩೦ ಮಂಗಳವಾರದ ವೈಕುಂಠ ಏಕಾದಶಿ ಆಚರಣೆಗೆ ಸಡಗರದ ಸಿದ್ಧತೆ, ಶ್ರಮದಾನ ಕಾರ್ಯಕ್ರಮಗಳು ಡಿಸೆಂಬರ್‌ ೨೯ರಂದು ಭರದಿಂದ ನಡೆದವು.

ಭಕ್ತಾದಿಗಳು ದೇವಾಲಯ ಸ್ವಚ್ಛತೆಯಿಂದ ಹಿಡಿದು ಅಲಂಕಾರದವರೆಗೆ ಎಲ್ಲ ರೀತಿಯ ಶ್ರಮದಾನದಲ್ಲಿ ಲಗುಬಗೆಯಿಂದ ಪಾಲ್ಗೊಂಡರು.

ಮಂಗಳವಾರ ಬೆಳಗ್ಗೆ ೪ ಗಂಟೆಗೆ ಬ್ರಾಹ್ಮೀ ಮುಹೂರ್ತದಲ್ಲಿ ಅಭಿಷೇಕ, ಸಂಕಲ್ಪದೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ. ಬಳಿಕ ವಿಶೇಷ ಪೂಜೆ, ಭಜನಾ ಕಾರ್ಯಕ್ರಮಗಳು ನಡೆಯಲಿವೆ. ಬೆಳಗ್ಗೆ ೧೧ ಗಂಟೆಗೆ ವಿದ್ಯಾ ರಘು ಪ್ರಸಾದ್‌ ತಂಡವು ಭಜನಾ ಕಾರ್ಯಕ್ರಮವನ್ನು ನೆರವೇರಿಸಿಕೊಡಲಿದೆ.

ವೈಕುಂಠ ದ್ವಾರವನ್ನು ಶನಿವಾರ ರಾತ್ರೆಯ ವೇಳಗೆ ಸಜ್ಜುಗೊಳಿಸಲಾಗಿದ್ದು ಬೆಳಗ್ಗೆಯಿಂದ ರಾತ್ರಿ ೯ ಗಂಟೆಯವರೆಗೆ ವೈಕುಂಠ ದ್ವಾರ ದರ್ಶನದ ವ್ಯವಸ್ಥೆ ಮಾಡಲಾಗಿದೆ. ರಾತ್ರಿ ೯ ಗಂಟೆಗೆ ಮಹಾಮಂಗಳಾರತಿ ನಡೆಯಲಿದೆ.

ಮಾಜಿ ಸಚಿವ ಮಾಲೂರು ಎಸ್.ಎನ್.‌ ಕೃಷ್ಣಯ್ಯ ಶೆಟ್ಟಿ ಅವರು ಉಚಿತ ಲಡ್ಡು ಪ್ರಸಾದ ವಿತರಣೆಗೆ ವ್ಯವಸ್ಥೆ ಮಾಡಿದ್ದಾರೆ.

PARYAYA: ವೈಕುಂಠ ಏಕಾದಶಿಗೆ ಸಡಗರದ ಸಿದ್ಧತೆ:   ವೈಕುಂಠ ಏಕಾದಶಿಗೆ ಸಡಗರದ ಸಿದ್ಧತೆ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದ...

Saturday, December 27, 2025

PARYAYA: ವಿಬಿ-ಜಿ ರಾಮ್‌ ಜಿ: ಗಾಂಧೀಜಿ ಆಶಯಕ್ಕೆ ಧಕ್ಕೆಯೇ?

ಭಾರತೀಯ ಸಂಸತ್ತು ೨೦೨೫ರ ಡಿಸೆಂಬರ್‌ ೧೮ರಂದು ನೂತನ ʼವಿಬಿ-ಜಿ ರಾಮ್‌ ಜಿʼ ಅಂದರೆ ವಿಕಸಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಆಜೀವಿಕಾ ಮಿಷನ್ (ವಿಕಸಿತ ಭಾರತ್ ಗ್ಯಾರಂಟಿ ಉದ್ಯೋಗ ಮತ್ತು ಜೀವನೋಪಾಯ ಮಿಷನ್‌ (ಗ್ರಾಮೀಣ) ಕಾಯ್ದೆ ೨೦೨೫ ಇದನ್ನು ಹಿಂದಿನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯ ಸ್ಥಾನಕ್ಕೆ ತರಲು ತನ್ನ ಅಂಗೀಕಾರ ಮುದ್ರೆಯನ್ನು ಒತ್ತಿದೆ.

ರಾಷ್ಟ್ರಪತಿಗಳ ಒಪ್ಪಿಗೆಯೊಂದಿಗೆ ಅದು ಕಾಯ್ದೆಯಾಗಿ ದೇಶದಲ್ಲಿ ಜಾರಿಗೆ ಬಂದಿದೆ. ವಿರೋಧ ಪಕ್ಷಗಳು ಕಾಂಗ್ರೆಸ್‌ ಪಕ್ಷದ ನೇತೃತ್ವದಲ್ಲಿ ಈ ಕಾಯ್ದೆಯನ್ನು ತೀವ್ರವಾಗಿ ವಿರೋಧಿ ಇದು ಮಹಾತ್ಮ ಗಾಂಧಿಯವರನ್ನು ಮತ್ತೊಮ್ಮೆ ಕೊಂದಿದೆ ಎಂದು ಕಟುವಾಗಿ ಟೀಕಿಸಿವೆ.

ಹಾಗಿದ್ದರೆ ವಾಸ್ತವಾಂಶ ಏನು? ಈ ಎರಡೂ ಕಾಯ್ದೆ ಅಥವಾ ಯೋಜನೆಗಳನ್ನು ತುಲನಾತ್ಮಕವಾಗಿ ವಿಶ್ಲೇಷಿಸಬಹುದೇ? ನಿಜವಾಗಿಯೂ ʼವಿಬಿ-ಜಿ ರಾಮ್‌ ಜಿʼ ಕಾಯ್ದೆಯು ಮಹಾತ್ಮ ಗಾಂಧಿ ಆಶಯಗಳಿಗೆ ವಿರುದ್ಧವಾಗಿದೆಯೇ ಅಥವಾ ಮನರೇಗಾ ಇಟ್ಟಿದ್ದ ಹೆಜ್ಜೆಯನ್ನು ಇನ್ನೂ ಎತ್ತರದ ಸ್ತರಕ್ಕೆ ಒಯ್ಯುತ್ತಿದೆಯೇ? ಹೊಸ ಕಾಯ್ದೆಯ ವಿಧಿಗಳನ್ನು ಗಮನಿಸಿ, ವಿಶ್ಲೇಷಿಸಿ ನೋಡೋಣ ಬನ್ನಿ. (ಮುಂದಕ್ಕೆ ಓದಿ) ಅಥವಾ ಪರ್ಯಾಯ ವೆಬ್‌ ಸೈಟಿನ SPARDHA ಪುಟಕ್ಕೆ ಭೇಟಿ ಕೊಡಿ. 

Friday, December 26, 2025

PARYAYA: ನೇಮದ ವೇಳೆ ಸರ ಕದ್ದರು, ವಿಡಿಯೋದಿಂದಾಗಿ ಸಿಕ್ಕಿಬಿದ್ದರು!

 ನೇಮದ ವೇಳೆ ಸರ ಕದ್ದರು, ವಿಡಿಯೋದಿಂದಾಗಿ ಸಿಕ್ಕಿಬಿದ್ದರು!

ಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಗರಡಿಯಲ್ಲಿ ಶ್ರೀಬ್ರಹ್ಮಬೈದರ್ಕಳ ಗರಡಿ ನೇಮೋತ್ಸವದ ಸಂದರ್ಭದಲ್ಲಿ ವೃದ್ಧೆಯೊಬ್ಬರ ಚಿನ್ನದ ಸರವನ್ನು ಮೂವರು ಕಳ್ಳಿಯರು ಲಪಟಾಯಿಸಿದ ಘಟನೆ ಘಟಿಸಿದ್ದು, ಮೂವರನ್ನೂ ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ತಮಿಳುನಾಡಿನ ಶೀಥಲ್‌, ಕಾಳಿಯಮ್ಮ, ಮಾರಿ ಎಂಬುದಾಗಿ ಗುರುತಿಸಲಾಗಿದ್ದು ಅವರನ್ನು ವಾಹನವೊಂದರಲ್ಲಿ ಸಾಗುತ್ತಿದ್ದಾಗ ಸಾರ್ವಜನಿಕರೇ ಗುರುತಿಸಿ ಬಳಿಕ ಪೊಲೀಸರಿಗ ಒಪ್ಪಿಸಿದ್ದಾರೆ ಎಂದು ಸುದ್ದಿ ಮೂಲಗಳು ತಿಳಿಸಿವೆ.


ಹೆಜಮಾಡಿಯಲ್ಲಿ ಶ್ರೀ ಬ್ರಹ್ಮ ಬೈದರ್ಕಳ ನೇಮೋತ್ಸವದ ಸಂದರ್ಭದಲ್ಲಿ ಹೆಜಮಾಡಿ ನಿವಾಸಿ ಕಮಲ ಎಂಬವನ್ನು ಮೂರೂ ಬದಿಯಿಂದ ಸುತ್ತುಗಟ್ಟಿ ಒಂದು ಬದಿಗೆ ಸರಿಸಿ ಚಿನ್ನದ ಸರವನ್ನು ಕತ್ತರಿಸಿ ಲಪಟಾಯಿಸಲಾಗಿತ್ತು. ಸರದ ಬೆಲೆ ಸುಮಾರು ೨ ಲಕ್ಷ ರೂಪಾಯಿ ಎಂದು ಅಂದಾಜು ಮಾಡಲಾಗಿದೆ.

ಈ ಮೂವರು ಕಳ್ಳತನ ನಡೆಸಿದ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಈ ವಿಡಿಯೋ ವಾಟ್ಸಪ್‌ ಗಳಲ್ಲಿ ವೈರಲ್‌ ಆಗಿತ್ತು. ಕಳ್ಳಿಯರು ಬಟ್ಟೆ ಬದಲಾಯಿಸಿಕೊಂಡು ಪುತ್ತೂರಿನಲ್ಲಿ ವಾಹನದಲ್ಲಿ ಹೋಗುತ್ತಿದ್ದಾಗ ಸಹ ಪ್ರಯಾಣಿಕರು ಅವರನ್ನು ಗುರುತಿಸಿ, ಬಳಿಕ ಪೊಲೀಸರಿಗೆ ಒಪ್ಪಿಸಿದರು.

ಕಳ್ಳಿಯರು ವಾಹನದಲ್ಲಿ ಸಿಕ್ಕಿ ಬಿದ್ದ ವಿಡಿಯೋ ಕೂಡಾ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಮೂವರು ಕಳ್ಳಿಯರನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ.

ಬಂಧನದ ಬಳಿಕ ಉಡುಪಿ ನ್ಯಾಯಾಲಯಕ್ಕೆ ಕಳ್ಳಿಯರನ್ನು ಹಾಜರು ಪಡಿಸಿದ ಪೊಲೀಸರು ಬಳಿಕ ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಸುದ್ದಿ ಮೂಲಗಳು ಹೇಳಿವೆ.

PARYAYA: ನೇಮದ ವೇಳೆ ಸರ ಕದ್ದರು, ವಿಡಿಯೋದಿಂದಾಗಿ ಸಿಕ್ಕಿಬಿದ್ದರು!:   ನೇಮದ ವೇಳೆ ಸರ ಕದ್ದರು, ವಿಡಿಯೋದಿಂದಾಗಿ ಸಿಕ್ಕಿಬಿದ್ದರು! ಉ ಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಗರಡಿಯಲ್ಲಿ ಶ್ರೀಬ್ರಹ್ಮಬೈದರ್ಕಳ ಗರಡಿ ನೇಮೋತ್ಸವದ ಸಂದರ್ಭದಲ್...

Sunday, December 21, 2025

PARYAYA: ಶಾಲಾ ಮಕ್ಕಳಿಂದ ಯಕ್ಷಗಾನ ʼಭಾರ್ಗವ ವಿಜಯʼ

 ಶಾಲಾ ಮಕ್ಕಳಿಂದ ಯಕ್ಷಗಾನ ʼಭಾರ್ಗವ ವಿಜಯʼ

ಬೆಂಗಳೂರಿನ ರಾಮಕೃಷ್ಣ ಹೆಗಡೆ ನಗರ- ಥಣಿಸಂದ್ರ ಮುಖ್ಯರಸ್ತೆಯಲ್ಲಿ ಇರುವ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ೨೦೨೫ರ ಡಿಸೆಂಬರ್‌ ೧೯ ಮತ್ತು ೨೦ರಂದು ಶಾಲಾ ವಾರ್ಷಿಕೋತ್ಸವ ಜರುಗಿತು.

ಈ ಸಂದರ್ಭದಲ್ಲಿ ಶಾಲಾ ಮಕ್ಕಳು ʼಭಾರ್ಗವ ವಿಜಯʼ ಯಕ್ಷಗಾನವನ್ನು ಪ್ರದರ್ಶಿಸಿದರು.

ಎರಡು ಭಾಗಗಳಲ್ಲಿ ಇರುವ ಯಕ್ಷಗಾನದ ವಿಡಿಯೋಗಳು ಇಲ್ಲಿವೆ:




ಇನ್ನಷ್ಟು ವಿವರಗಳಿಗೆ PARYAYA.COMನ   ಯಕ್ಷಗಾನ/ತಾಳಮದ್ದಳೆ ಪುಟಕ್ಕೆ ಭೇಟಿ ನೀಡಿ.
PARYAYA: ಶಾಲಾ ಮಕ್ಕಳಿಂದ ಯಕ್ಷಗಾನ ʼಭಾರ್ಗವ ವಿಜಯʼ:   ಶಾಲಾ ಮಕ್ಕಳಿಂದ ಯಕ್ಷಗಾನ ʼ ಭಾರ್ಗವ ವಿಜಯ ʼ ಬೆಂ ಗಳೂರಿನ ರಾಮಕೃಷ್ಣ ಹೆಗಡೆ ನಗರ- ಥಣಿಸಂದ್ರ ಮುಖ್ಯರಸ್ತೆಯಲ್ಲಿ ಇರುವ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ೨೦೨೫ರ ಡಿ...

ಇಂದಿನ ಇತಿಹಾಸ History Today ಡಿಸೆಂಬರ್ 21

  ಇಂದಿನ ಇತಿಹಾಸ History Today ಡಿಸೆಂಬರ್ 21

2025: ನವದೆಹಲಿ: ಮನರೇಗಾ ಯೋಜನೆಗೆ ಪರ್ಯಾಯವಾಗಿ ರೂಪಿಸಿದ ʼವಿಕಸಿತ ಭಾರತ ಗ್ಯಾರಂಟಿ ಉದ್ಯೋಗ ಮತ್ತು ಜೀವನೋಪಾಯ ಮಿಷನ್‌ (ಗ್ರಾಮೀಣ) ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ದಿನ ಅಂಕಿತ ಹಾಕಿದರು. ಇದರೊಂದಿಗೆ ವಿಬಿ-ಜಿ ರಾಮ್‌ ಜಿ ಮಸೂದೆ ಈದಿನದಿಂದ ಕಾಯ್ದೆಯಾಗಿ ಜಾರಿಗೊಂಡಿತು. ಈ ಕಾಯ್ದೆಯು ಗ್ರಾಮೀಣ ಕುಟುಂಬಗಳಿಗೆ ಪ್ರತಿ ಹಣಕಾಸು ವರ್ಷದಲ್ಲಿ ೧೨೫ ದಿನಗಳ ಶಾಸನಬದ್ಧ ಉದ್ಯೋಗ ಖಾತರಿಯನ್ನು ನೀಡುತ್ತದೆ. ಜೊತೆಗೆ ಸಬಲೀಕರಣ, ಸಮಗ್ರ ಬೆಳವಣಿಗೆ, ಅಭಿವೃದ್ಧಿ ಉಪಕ್ರಮಗಳ ಜಾರಿಗೆ ಇಂಬು ನೀಡುತ್ತದೆ. ಇದರಿಂದಾಗಿ ಸಮೃದ್ಧ ಮತ್ತು ಸ್ವಾವಲಂಬಿ ಗ್ರಾಮೀಣ ಭಾರತಕ್ಕೆ ಭದ್ರ ಅಡಿಪಾಯವಾಗುತ್ತದೆ. ಇದು ಗ್ರಾಮೀಣ ಉದ್ಯೋಗ ನೀತಿಯ ರೂಪಾಂತರದಲ್ಲಿ ಮಹತ್ವದ ಮೈಲಿಗಲ್ಲು ಎಂದು ರಾಷ್ಟ್ರಪತಿಗಳ ಸಚಿವಾಲಯದ ಪ್ರಕಟಣೆ ತಿಳಿಸಿತು.

2020: ನವದೆಹಲಿಇಂಗ್ಲೆಂಡಿನಲ್ಲಿ ರೂಪಾಂತರಗೊಂಡ ಹೊಸ ಸೂಪರ್ ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಡಿಸೆಂಬರ್ ೨೨ ರಿಂದ ಭಾರತಕ್ಕೆ ಬರುವ ಇಂಗ್ಲೆಂಡಿನ ಎಲ್ಲ ವಿಮಾನಗಳನ್ನು 2020 ಡಿಸೆಂಬರ್ 21ರ ಸೋಮವಾರ ಭಾರತ ನಿಷೇಧಿಸಿತುಡಿಸೆಂಬರ್ ೨೨ರಂದು ರಾತ್ರಿ ೨೩.೫೯ ಗಂಟೆಯಿಂದ ಭಾರತಕ್ಕೆ ಇಂಗ್ಲೆಂಡಿನಿಂದ ಬರುವ ಎಲ್ಲ ವಿಮಾನಯಾನಗಳನ್ನು ನಿಷೇಧಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಪ್ರಕಟಿಸಿದೆಹಾಂಗ್ ಕಾಂಗ್ ಇದೇ ರೀತಿಯ ಘೋಷಣೆ ಮಾಡಿದ ಕೆಲವೇ ಗಂಟೆಗಳ ನಂತಭಾರತ ಇಂಗ್ಲೆಂಡಿನಿಂದ ವಿಮಾನಗಳ ಹಾರಾಟವನ್ನು ನಿಷೇಧಿಸಿತುಇತರ ಹಲವು ದೇಶಗಳೂ ಇದೇ ರೀತಿ ಇಂಗ್ಲೆಂಡಿನ ವಿಮಾನಗಳನ್ನು ನಿಷೇಧಿಸಿವೆರೂಪಾಂತರಗೊಂಡ ಹೊಸ ಸೂಪರ್-ವೈರಸ್ ಒತ್ತಡದ ಹಿನ್ನೆಲೆಯಲ್ಲಿ ಹಾಂಕಾಂಗ್ ಮೊತ್ತ ಮೊದಲಿಗೆ ಇಂಗ್ಲೆಂಡ್ ವಿಮಾನಗಳನ್ನು ನಿಷೇಧಿಸಿತುಇದರಿಂದಾಗಿ ಇಂತಹ ನಿಷೇಧ ಘೋಷಿಸಿದ ಏಷ್ಯಾದ ಮೊದಲ ನಗರ ಎಂಬ ಹೆಗ್ಗಳಿಕೆ ಹಾಂಕಾಂಗಿಗೆ ಪ್ರಾಪ್ತವಾಗಿದೆಸೂಪರ್ ಕೊರೋನಾವೈರಸ್ಸನ್ನು ಬ್ರಿಟನ್ನಿನಲ್ಲಿ ಗುರುತಿಲಾಗಿದೆ. (ವಿವರಗಳಿಗೆ ಇಲ್ಲಿ ಕ್ಲಿಕ್  ಮಾಡಿ)

2020: ಕೋಲ್ಕತಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಾರಾಂತ್ಯದಲ್ಲಿ ರಾಜ್ಯಕ್ಕೆ ನೀಡಿದ ಎರಡು ದಿನಗಳ ಭೇಟಿಯ ಸಂದರ್ಭದಲ್ಲಿ ತೃಣಮೂಲ ನಾಯಕರನ್ನು ಸೆಳೆದುಕೊಂಡ ನಂತರ ’ಬಂಗಾಳ ಚುನಾವಣೆಯಲ್ಲಿ ಎರಡಂಕಿ ದಾಟಿ ಎಂದು ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್  2020 ಡಿಸೆಂಬರ್ 21ರ ಸೋಮವಾರ ಬಿಜೆಪಿಗೆ ಸವಾಲು ಹಾಕಿದರುಕಳೆದ ವರ್ಷ ಬಂಗಾಳ ಅಭಿಯಾನಕ್ಕಾಗಿ ಮಮತಾ ಬ್ಯಾನರ್ಜಿ ಅವರಿಂದ ಸೆಳೆಯಲ್ಪಟ್ಟ ಪ್ರಶಾಂತ ಕಿಶೋರ್ ಅವರು ’ಬಿಜೆಪಿಯು ಎರಡು ಅಂಕಿಗಳನ್ನು ದಾಟಲು ಹೆಣಗಾಡಲಿದೆ ಎಂದು ಹೇಳಿದರುಬಿಜೆಪಿಯು ತಮ್ಮ ಊಹೆಗಿಂತ ಉತ್ತಮವಾಗಿ ಕಾರ್ಯನಿರ್ವಹಿಸಿದರೆ  ‘ಜಾಗವನ್ನು (ಸ್ಪೇಸ್)’ ತೊರೆಯುವೆ ಎಂದು ಅವರು ಹೇಳಿದರುದಯವಿಟ್ಟು  ಟ್ವೀಟನ್ನು ಸಂರಕ್ಷಿಸಿ ಇಟ್ಟುಕೊಳ್ಳಿಬಿಜೆಪಿ ಏನಾದರೂ ಉತ್ತಮ ಸಾಧನೆ ತೋರಿದರೆನಾನು  ಜಾಗ (ಸ್ಪೇಸ್ಬಿಡಬೇಕಾಗುತ್ತದೆ ಎಂದು ಪ್ರಶಾಂತ್ ಟ್ವೀಟ್ ಮಾಡಿದರುಪ್ರಶಾಂತ ಕಿಶೋರ್ ಅವರು ಬಳಸಿದ ’ಸ್ಪೇಸ್ ಪದದ ಅರ್ಥವೇನು ಎಂದು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಚರ್ಚೆಗಳು ನಡೆದವುಕಿಶೋರ್ ಅವರು ’ಸ್ಪೇಸ್ ಪದದ ಅರ್ಥವನ್ನು ಸ್ಪಷ್ಟಪಡಿಸದ ಕಾರಣ ಇದು ಅಸ್ಪಷ್ಟವಾಗಿದೆ ಎಂದು ಬಿಜೆಪಿ ನಾಯಕರು ಪ್ರಶಾಂತ ಕಿಶೋರ್ ಟ್ವೀಟನ್ನು ಲೇವಡಿ ಮಾಡಿದರು. (ವಿವರಗಳಿಗೆ ಇಲ್ಲಿ ಕ್ಲಿಕ್  ಮಾಡಿ)

2020: ನವದೆಹಲಿ:  ಪಧಾನಿ ನರೇಂದ್ರ ಮೋದಿ ಅವರು ’ಪಿಎಂ-ಕಿಸಾನ್ ಸಮ್ಮಾನ್ ನೇರ ನಗದು ವರ್ಗಾವಣೆ ಯೋಜನೆಯಡಿ ರೈತರಿಗೆ ಮುಂದಿನ ಕಂತನ್ನು ಬಿಡುಗಡೆ ಮಾಡಲಿದ್ದು ಅದಕ್ಕೆ ಸಂಬಂಧಿಸಿದಂತೆ ಕ್ರಿಸ್ ಮಸ್ ದಿನದಂದು ರೈತರ ಜೊತೆ ಚಾಟ್ ಮಾಡಲಿದ್ದಾರೆ ಬಾರಿಯ ಕಂತಿನಲ್ಲಿ ಪ್ರಧಾನಿಯವರು  ಕೋಟಿ ರೈತರಿಗೆ ೧೮,೦೦೦ ಕೋಟಿ ರೂಪಾಯಿಗಳನ್ನು ಪಾವತಿ ಮಾಡಲಿದ್ದಾರೆ ಎಂದು ಕೃಷಿ ಸಚಿವಾಲಯ 2020 ಡಿಸೆಂಬರ್ 21ರ ಸೋಮವಾರ ತಿಳಿಸಿತುಮೋದಿಯವರು ೨೦೧೯ ರಲ್ಲಿ ಮೊದಲ ಕಂತನ್ನು ಬಿಡುಗಡೆ ಮಾಡಿದ್ದರು ಮತ್ತು ತಮ್ಮ ಜೀವನೋಪಾಯಕ್ಕೆ ಧಕ್ಕೆ ತರುತ್ತದೆ ಎಂದು ಬಹುತೇಕ ಪಂಜಾಬಿನ ಸಾವಿರಾರು ರೈತರು  ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟಿಸುತ್ತಿರುವ ಸಮಯದಲ್ಲಿ ಇನ್ನೊಂದು ಕಂತನ್ನು ಬಿಡುಗಡೆ ಮಾಡಲಿದ್ದಾರೆಕೃಷಿ ಸುಧಾರಣೆಗಳು ರೈತರಿಗೆ ಹೆಚ್ಚಿನ ಮಾರುಕಟ್ಟೆ ಅವಕಾಶವನ್ನು ನೀಡುತ್ತವೆ ಮತ್ತು ಕೃಷಿ ಕ್ಷೇತ್ರದಲ್ಲಿ ಹೂಡಿಕೆಯನ್ನು ಹೆಚ್ಚಿಸುತ್ತದೆ ಎಂದು ಸರ್ಕಾರ ಪ್ರತಿಪಾದಿಸುತ್ತಿದೆಇದು ಮುಕ್ತ ಸಂಭಾಷಣೆಯಾಗಿದೆಪ್ರಧಾನಮಂತ್ರಿ ಹೊಸ ಕೃಷಿ ಕಾನೂನುಗಳ ಬಗ್ಗೆ ಮತ್ತು ಅವು ರೈತರಿಗೆ ಹೇಗೆ ಪ್ರಯೋಜನವನ್ನು ನೀಡುತ್ತವೆ  ಎಂಬ ಮಾತನಾಡುವ ಸಾಧ್ಯತೆ ಇದೆ ಎಂದು ಹೆಸರು ಹೇಳಲು ಇಚ್ಛಿಸದ ಅಧಿಕಾರಿಯೊಬ್ಬರು ಹೇಳಿದರುಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಅಡಿಯಲ್ಲಿಸರ್ಕಾರವು ಮಾನ್ಯ ದಾಖಲಾತಿಯೊಂದಿಗೆ ರೈತರಿಗೆ ವರ್ಷಕ್ಕೆ ,೦೦೦ ರೂ.ಗಳ ಆದಾಯ ಬೆಂಬಲವನ್ನು ಒದಗಿಸುತ್ತದೆನಾಲ್ಕು ತಿಂಗಳಿಗೊಮ್ಮೆ  ಮೂರು ಸಮಾನ ನಗದು ವರ್ಗಾವಣೆಯಲ್ಲಿ ,೦೦೦ ರೂಮೊದಲ ಕಂತು ಪಾವತಿಸುವ ಮೂಲಕ ೨೦೧೯ರ ಫೆಬ್ರುವರಿಯಲ್ಲಿ  ಇದನ್ನು ಪ್ರಾರಂಭಿಸಲಾಯಿತು. (ವಿವರಗಳಿಗೆ ಇಲ್ಲಿ ಕ್ಲಿಕ್  ಮಾಡಿ)

2020: ನವದೆಹಲಿಪ್ರಧಾನಿ ನರೇಂದ್ರ ಮೋದಿ ಸರ್ಕಾರ ಪರಿಚಯಿಸಿದ ಹೊಸ ಕೃಷಿ ಸುಧಾರಣೆಗಳ ವಿರುದ್ಧ ರಾಷ್ಟ್ರ ರಾಜಧಾನಿಯ ಸುತ್ತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆಸುದ್ದಿ ಸಂಸ್ಥೆಯೊಂದು ನಡೆಸಿದ ಸಮೀಕ್ಷೆಯಲ್ಲಿ ಹೆಚ್ಚಿನ ಭಾರತೀಯರು ಹೊಸ ಕೃಷಿ ಕಾಯ್ದೆಗಳ ಅನುಷ್ಠಾನವನ್ನು ಬೆಂಬಲಿಸಿದ್ದಾರೆ ಮತ್ತು ರೈತರು ಆಂದೋಲನವನ್ನು ಹಿಂತೆಗೆದುಕೊಳ್ಳಬೇಕು ಎಂದು ಅಭಿಪ್ರಾಯ ಪಟ್ಟಿದ್ದಾರೆ೨೨ ರಾಜ್ಯಗಳಲ್ಲಿ ,೪೦೦ ಕ್ಕೂ ಹೆಚ್ಚು ಜನರನ್ನು ಸಮೀಕ್ಷೆಗಾಗಿ ಸಂಪರ್ಕಿಸಲಾಗಿದ್ದುಬಹುತೇಕ ಮಂದಿ ಹೊಸ ಕೃಷಿ ಸುಧಾರಣಾ ಕಾನೂನುಗಳು ಬೆಳೆಗಾರರಿಗೆ ಪ್ರಯೋಜನವನ್ನು ನೀಡುತ್ತವೆ ಎಂದು ಹೇಳಿದರುಹೆಚ್ಚಿನ ಕೃಷಿ ರಾಜ್ಯಗಳಲ್ಲಿವಿಶೇಷವಾಗಿ ಉತ್ತರ ಪ್ರದೇಶಮಧ್ಯಪ್ರದೇಶಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಹೊಸ ಶಾಸನಗಳಿಗೆ ಬೆಂಬಲವು ಪ್ರಬಲವಾಗಿದೆ ಎಂದು ಅಂಕಿ ಸಂಖ್ಯೆಗಳು ತೋರಿಸಿವೆಇದಕ್ಕೆ ಹೊರತಾಗಿರುವುದು ಪಂಜಾಬ್ಅಲ್ಲಿ ಕೃಷಿ ಕ್ಷೇತ್ರದ ಉದಾರೀಕರಣದ ವಿಷಯವು ಹೆಚ್ಚು ರಾಜಕೀಯೀಕರಣಗೊಂಡಿರುವುದರಿಂದ ಬೆಂಬಲವನ್ನು ಸ್ವಲ್ಪ ಕಡಿಮೆಯಾಗಿದೆದೇಶಾದ್ಯಂತ ಹೊಸ ಕಾನೂನುಗಳಿಗೆ ಒಟ್ಟಾರೆ ಬೆಂಬಲವು ಶೇಕಡಾ ೫೩. ರಷ್ಟಿದೆ ಎಂದು ಸಮೀಕ್ಷೆಯು ಹೇಳಿದೆಶೇಕಡಾ ೫೬.೫೯ ರಷ್ಟು ಜನರು ರೈತರು ತಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಲು ಇದು ಸಕಾಲ ಎಂಬ ನಂಬಿಕೆ ವ್ಯಕ್ತ ಪಡಿಸಿದರು. (ವಿವರಗಳಿಗೆ ಇಲ್ಲಿ ಕ್ಲಿಕ್  ಮಾಡಿ)

2020: ನವದೆಹಲಿಭಾರತದಲ್ಲಿ ಚಿರತೆಗಳ ಸಂಖ್ಯೆಯು ಶೇಕಡಾ ೬೦ ರಷ್ಟು ಹೆಚ್ಚಾಗಿದೆ ಎಂದು ಸರ್ಕಾರ 2020 ಡಿಸೆಂಬರ್ 21ರ ಸೋಮವಾರ ಬಿಡುಗಡೆ ಮಾಡಿದ ವರದಿ ತಿಳಿಸಿದೆಭಾರತದಲ್ಲಿ ಈಗ ೧೨,೮೫೨ ಚಿರತೆಗಳಿವೆ ಎಂದು ಕೇಂದ್ರ ಪರಿಸರ ಸಚಿವ ಪ್ರಕಾಶ ಜಾವಡೇಕರ್ ಬಿಡುಗಡೆ ಮಾಡಿದ ‘ಭಾರತದಲ್ಲಿ ಚಿರತೆಗಳ ಸ್ಥಿತಿಗತಿ-೨೦೧೮ ವರದಿಯಲ್ಲಿ ತಿಳಿಸಲಾಗಿದೆ.  "೨೦೧೪ರಲ್ಲಿ ನಡೆಸಿದ ಹಿಂದಿನ ಅಂದಾಜಿಗಿಂತ ಸಂಖ್ಯೆಯಲ್ಲಿ ಶೇಕಡಾ ೬೦ಕ್ಕಿಂvಲೂ ಹೆಚ್ಚು ಹೆಚ್ಚಿದೆ ಎಂದು ವರದಿಯನ್ನು ಬಿಡುಗಡೆ ಮಾಡಿದ ನಂತರ ಜಾವಡೇಕರ್ ಹೇಳಿದರು.  ಹೆಚ್ಚು ಚಿರತೆಗಳನ್ನು ಹೊಂದಿರುವ ರಾಜ್ಯಗಳ ಬಗ್ಗೆಯೂ ಅವರು ಪ್ರಸ್ತಾಪಿಸಿದರು. ‘ಅತಿ ಹೆಚ್ಚು ಚಿರತೆ ಅಂದಾಜುಗಳನ್ನು ದಾಖಲಿಸಿದ ಮಧ್ಯಪ್ರದೇಶ (,೪೨೧), ಕರ್ನಾಟಕ (೧೭೮೩ಮತ್ತು ಮಹಾರಾಷ್ಟ್ರ (೧೬೯೦ರಾಜ್ಯಗಳಿಗೆ ಅಭಿನಂದನೆಗಳುಕಳೆದ ಕೆಲವು ವರ್ಷಗಳಿಂದ ಹುಲಿಸಿಂಹ ಮತ್ತು ಚಿರತೆಗಳ ಸಂಖ್ಯೆಯಲ್ಲಿನ ಹೆಚ್ಚಳವು ವನ್ಯಜೀವಿ ಮತ್ತು ಜೀವವೈವಿಧ್ಯತೆಯ ಬೆಳವಣಿಗೆಗೆ ಸಾಕ್ಷಿಯಾಗಿದೆ ಎಂದು ಜಾವಡೇಕರ್ ಟ್ವಿಟರಿನಲ್ಲಿ  ತಿಳಿಸಿದ್ದಾರೆಚಿರತೆಗಳು ಹೆಚ್ಚು ಹೊಂದಿಕೊಳ್ಳಬಲ್ಲ ಮಾಂಸಾಹಾರಿಗಳಲ್ಲಿ ಸೇರಿವೆಮತ್ತು ಅವು ಮಾನವನ ವಾಸಸ್ಥಾನಗಳಿಗೆ ಬಹಳ ಹತ್ತಿರದಲ್ಲಿವೆ ಎಂದು ತಿಳಿದುಬಂದಿದೆ. (ವಿವರಗಳಿಗೆ ಇಲ್ಲಿ ಕ್ಲಿಕ್  ಮಾಡಿ)

2020: ನವದೆಹಲಿಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿಉತ್ತರ ಪ್ರದೇಶದ ಮಾಜಿ ರಾಜ್ಯಪಾಲ ಹಿರಿಯ ಕಾಂಗ್ರೆಸ್ ನಾಯಕ ಮೋತಿಲಾಲ್ ವೊರಾ ಅವರು ತಮ್ಮ ೯೩ ನೇ ಹುಟ್ಟುಹಬ್ಬವನ್ನು ಆಚರಿಸಿದ ಒಂದು ದಿನದ ಬಳಿಕ ದೆಹಲಿಯಲ್ಲಿ 2020 ಡಿಸೆಂಬರ್ 21ರ ಸೋಮವಾರ ನಿಧನರಾದರುಅಕ್ಟೋಬರಿನಲ್ಲಿ ಕೋವಿಡ್ -೧೯ ರಿಂದ ಚೇತರಿಸಿಕೊಂಡಿದ್ದ ವೋರಾ ಅವರನ್ನು ಡಿಸೆಂಬರ್ ೧೯ ರಂದು ಉಸಿರಾಟದ ತೊಂದರೆಗಾಗಿ ದೆಹಲಿಯ ಎಸ್ಕೋರ್ಟ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತುವೃತ್ತಿಯಲ್ಲಿ ಪತ್ರಕರ್ತರಾಗಿದ್ದ ವೋರಾ ನವಭಾರತ್ ಟೈಮ್ಸ್ ಪತ್ರಿಕೆಯಲ್ಲಿ ಮುಂಬೈಯಲ್ಲಿ  (ಆಗಿನ ಬಾಂಬೆವರದಿಗಾರರಾಗಿ ಕೆಲಸ ಮಾಡಿದ್ದರುಬಳಿಕ ನಾಗಪುರ ಮತ್ತು ರಾಯಪುರದಲ್ಲಿ ನವಭಾರತ್ ಮತ್ತು ನಂತರ ನಾಗಪುರದಲ್ಲಿ ನಾಗಪುರ ಟೈಮ್ಸ್ ನಲ್ಲಿ ಸೇವೆ ಸಲ್ಲಿಸಿದ್ದರುಸುಮಾರು ಎರಡು ದಶಕಗಳಿಂದ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿಖಜಾಂಚಿಯ ಪ್ರಮುಖ ಸಾಂಸ್ಥಿಕ ಹುದ್ದೆಯಲ್ಲಿದ್ದ ವೋರಾ ಅವರನ್ನು ೨೦೧೮ ರಲ್ಲಿ ಆಡಳಿತದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿತ್ತುಮತ್ತೊಬ್ಬ ಹಿರಿಯ ನಾಯಕ ಅಹ್ಮದ್ ಪಟೇಲ್ ಎಐಸಿಸಿ ಖಜಾಂಚಿಯಾಗಿ ಅಧಿಕಾರ ವಹಿಸಿಕೊಂಡು  ವರ್ಷದ ನವೆಂಬರ್ ೨೫ ರಂದು ನಿಧನರಾಗುವವರೆಗೂ  ಹುದ್ದೆಯನ್ನು ಅಲಂಕರಿಸಿದ್ದರುಗುರುಗ್ರಾಮ ಆಸ್ಪತ್ರೆಯಲ್ಲಿ ಕೋವಿಡ್ ನಂತರದ ಸಮಸ್ಯೆಗಳಿಂದ ಅವರು ನಿಧನರಾಗಿದ್ದರು. (ವಿವರಗಳಿಗೆ ಇಲ್ಲಿ ಕ್ಲಿಕ್  ಮಾಡಿ)

2020: ಕೋಲ್ಕತತೃಣಮೂಲ ಕಾಂಗ್ರೆಸ್ (ಟಿಎಂಸಿಶಾಸಕ ಸ್ಥಾನವನ್ನು ಇತ್ತೀಚೆಗೆ ತ್ಯಜಿಸಿದ ಸುವೇಂದು ಅಧಿಕಾರಿ ಶಾಸಕ ಸ್ಥಾನಕ್ಕೆ ತಾವು ನೀಡಿದ ರಾಜೀನಾಮೆಯನ್ನು ವಿಧಾನಸಭಾಧ್ಯಕ್ಷ ಬಿಮನ್ ಬ್ಯಾನರ್ಜಿ ಅವರು ಅಂಗೀಕರಿಸಿದ್ದಾರೆ ಎಂದು 2020 ಡಿಸೆಂಬರ್ 21ರ ಸೋಮವಾರ ಹೇಳಿದರುತಮ್ಮ ಮುಂದೆ ಸೋಮವಾರ ಹಾಜರಾಗುವಂತೆ ಅಧಿಕಾರಿ ಅವರಿಗೆ ವಿಧಾನಸಭಾಧ್ಯಕ್ಷರು ಸೂಚಿಸಿದ್ದರುಸದನದ ಶಾಸಕ ಸ್ಥಾನಕ್ಕೆ ನೀಡಿದ ನನ್ನ ರಾಜೀನಾಮೆಗೆ ಸಂಬಂಧಿಸಿದಂತೆ ವಿಧಾನಸಭೆ ಸಭಾಧ್ಯಕ್ಷರು ನನ್ನನ್ನು ಕರೆದಿದ್ದರುಇಂದುನಾನು ಅವರನ್ನು ಭೇಟಿ ಮಾಡಿದೆ.... ನನ್ನ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ ಎಂದು ನನಗೆ ತಿಳಿಸಲಾಯಿತು ಎಂದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿಹೊಸದಾಗಿ ಸೇರ್ಪಡೆಯಾದ ಅಧಿಕಾರಿ ಹೇಳಿದರು. "ಸುವೇಂದು ಅಧಿಕಾರಿ ಅವರು ಈದಿನ ನನ್ನ ಮುಂದೆ ಹಾಜರಾಗಿದ್ದರು ಮತ್ತು ಬೇರೆಯವರ ಪ್ರಭಾವಕ್ಕೆ ಒಳಗಾಗದೆ ರಾಜೀನಾಮೆ ನೀಡಿರುವುದಾಗಿ ಖಚಿತ ಪಡಿಸಿದರುಅವರ ರಾಜೀನಾಮೆ ಸ್ವಯಂಪ್ರೇರಿತ ಮತ್ತು ನಿಜವಾದದ್ದು ಎಂದು ನನಗೆ ಮನವರಿಕೆಯಾಗಿದೆಅವರ ರಾಜೀನಾಮೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಂಗೀಕರಿಸಿದ್ದೇನೆ ಎಂದು ಸಭಾಧ್ಯಕ್ಷರು ಹೇಳಿದರು. (ವಿವರಗಳಿಗೆ ಇಲ್ಲಿ ಕ್ಲಿಕ್  ಮಾಡಿ)

ಇಂದಿನ ಇತಿಹಾಸ  History Today ಡಿಸೆಂಬರ್ 21 (2019+ ಹಿಂದಿನವುಗಳಿಗೆ ಇಲ್ಲಿ ಕ್ಲಿಕ್ ಮಾಡಿರಿ)

-ಸಂಗ್ರಹ: ನೆತ್ರಕೆರೆ ಉದಯಶಂಕರ