Friday, February 21, 2025

PARYAYA: ದೇಗುಲ ವಾರ್ಷಿಕೋತ್ಸವ: ಪಂಚಹೋಮ

 ದೇಗುಲ ವಾರ್ಷಿಕೋತ್ಸವ: ಪಂಚಹೋಮ


ಬೆಂ
ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿವೆಂಕಟೇಶ್ವರಅಭಯ ಆಂಜನೇಯ ಸ್ವಾಮಿ ದೇವಸ್ಥಾನದ ವಾರ್ಷಿಕೋತ್ಸವವು ೨೦೨೫ ಫೆಬ್ರುವರಿ ೨೦ ಗುರುವಾರ ಸಂಪನ್ನಗೊಂಡಿತು.
ವಿಡಿಯೋ ನೋಡಲು ಎಡಬದಿಯ ಚಿತ್ರ ಕ್ಲಿಕ್‌ ಮಾಡಿರಿ.

ದೇವಾಲಯಕ್ಕೆ ಒಂದು ವರ್ಷ ತುಂಬಿದ ಸಲುವಾಗಿ ಈ ಸಂದರ್ಭದಲ್ಲಿ ಪಂಚಹೋಮಗಳ ಸಲುವಾಗಿ ಶ್ರೀ ಮಹಾಗಣಪತಿ, ಶ್ರೀ ವೆಂಕಟೇಶ್ವರ, ಶ್ರೀ ಆಂಜನೇಯ, ಶ್ರೀ ಸುಬ್ರಹ್ಮಣ್ಯ ಹಾಗೂ ನವಗ್ರಹ ದೇವತೆಗಳನ್ನು ಸ್ಥಾಪಿಸಿ ಅರ್ಚನೆ ನೆರವೇರಿಸಲಾಯಿತು.


ಆ ಬಳಿಕ ಶ್ರೀ ಗಣಪತಿ ಅಥರ್ವ ಶೀರ್ಷ ಹೋಮ, ಶ್ರೀ ಶ್ರೀ ವೆಂಕಟೇಶ್ವರ ಮೂಲಮಂತ್ರ ಹೋಮ,ಶ್ರೀ ಆಂಜನೇಯ ಮೂಲಮಂತ್ರ ಹೋಮ, ನವಗ್ರಹ ಹೋಮ, ಸರ್ಪ ಸೂಕ್ತ ಹೋಮಗಳನ್ನು ನಡೆಸಲಾಯಿತು. ವಿಡಿಯೋ ನೋಡಲು ಮೇಲಿನ ಚಿತ್ರ ಕ್ಲಿಕ್‌ ಮಾಡಿರಿ.


ಪಂಚಹೋಮಗಳ ಬಳಿಕ ಮಹಾಮಂಗಳಾರತಿ ನಡೆಯಿತು. ವಿಡಿಯೋ ನೋಡಲು ಮೇಲಿನ ಚಿತ್ರ ಕ್ಲಿಕ್‌ ಮಾಡಿರಿ.

ಸಂಜೆ ಭಕ್ತರು ಭಜನೆ ಸೇವೆ ಸಲ್ಲಿಸಿದರು. ಆಸುಪಾಸಿನ ಭಕ್ತಾದಿಗಳು ಭಾರೀ ಸಂಖ್ಯೆಯಲ್ಲಿ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಶ್ರೀ ಮುನಿರಾಜು ಕುಟುಂಬದವರು ಪ್ರಸಾದ ಸೇವೆಯನ್ನು ಒದಗಿಸಿದರು. ವಿಡಿಯೋ ನೋಡಲು ಕೆಳಗಿನ ಚಿತ್ರ ಕ್ಲಿಕ್‌ ಮಾಡಿರಿ

ಇವುಗಳನ್ನೂ ಓದಿರಿ:

ಶ್ರೀ ಬಾಲಾಜಿ ಕೃಪಾ ಬಡಾವಣೆಯಲ್ಲಿ ಗಣೇಶೋತ್ಸವ

ವಿನಾಯಕ ಚತುರ್ಥಿ ಆಚರಣೆ

ಮೂವತ್ತೇ ದಿನಗಳಲ್ಲಿ ಮೇಲೆದ್ದ ದೇವಾಲಯ...

ಅಂಗಾರಕ ಸಂಕಷ್ಟಿ ಏಕೆ ಮಹತ್ವಪೂರ್ಣ?

ಇನ್ನೂ ಓದಿಲ್ಲವೇ?

ಬೆಂಗಳೂರಿನ ಭೂ ಮಾಫಿಯಾ- ಭ್ರಷ್ಟಾಚಾರದ ಚಕ್ರವ್ಯೂಹ

(ಮೇಲಿನ ಚಿತ್ರ ಕ್ಲಿಕ್‌ ಮಾಡಿ ನೋಡಿ. ಯುಪಿಐ ಮೂಲಕ ಕೇವಲ ಶೇಕಡಾ 50 ರಷ್ಟು ಪಾವತಿಸಿ ಈ👆 ಡಿಜಿಟಲ್‌ ಪುಸ್ತಕ ಪಡೆಯಿರಿ. ಸಂಪರ್ಕಿಸಿ: 9480215706/ 9845049970)

PARYAYA: ದೇಗುಲ ವಾರ್ಷಿಕೋತ್ಸವ: ಪಂಚಹೋಮ:   ದೇಗುಲ ವಾರ್ಷಿಕೋತ್ಸವ: ಪಂಚಹೋಮ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ , ವೆಂಕಟೇಶ್ವರ , ಅಭಯ ಆಂಜನೇಯ ಸ್ವಾಮಿ...

No comments:

Post a Comment