Wednesday, January 7, 2026

PARYAYA: ಮೊಣಕಾಲು ಅಥವಾ ಮಂಡಿನೋವು ಬರುವುದು ಏಕೆ?

 ಮೊಣಕಾಲು ಅಥವಾ ಮಂಡಿನೋವು ಬರುವುದು ಏಕೆ?

ನೆಲದಲ್ಲಿ ಅಥವಾ ಕೆಳಗೆ ಕುಳಿತುಕೊಳ್ಳುವ ಅಭ್ಯಾಸವನ್ನು ಕೈಬಿಟ್ಟದ್ದೇ ಮೊಣಕಾಲು  ಅಥವಾ ಮಂಡಿ ನೋವು ಸೇರಿದಂತೆ ನಮ್ಮ ಹಲವಾರು ಆರೋಗ್ಯ ಸಮಸ್ಯೆಗಳಿಗೆ ಕಾರಣ. ಅದರಲ್ಲೂ ಬಸ್ಕಿ ತೆಗೆಯುವುದು, ಕೂತು-ಏಳುವ ಅಭ್ಯಾಸ ಕಡಿಮೆ ಮಾಡಿಕೊಂಡದ್ದು ಇತ್ಯಾದಿ ಕೂಡಾ ನರಸಂಬಂಧಿ ಸಮಸ್ಯೆಗಳಿಗೆ ಮೂಲ

ಮಹಿಳೆಯರು ಹಿಂದೆ ನೆಲದಲ್ಲಿ ಕುಳಿತೇ ಅಡುಗೆ ಮಾಡುತ್ತಿದ್ದರು. ಈಗ ಅಡುಗೆ ಮನೆಯ ವಿನ್ಯಾಸವೇ ಬದಲಿಯಾಗಿದೆ. ನಿಂತುಕೊಂಡು ಅಡುಗೆ ಮಾಡುವುದೇ ಆರಾಮ ಎಂಬ ಭಾವನೆ ಇದೆ. ಇದರೊಂದಿಗೆ ಅತ್ತಿತ್ತ ಓಡಾಡುವ ಅಭ್ಯಾಸವೂ ಕಡಿಮೆ.

ಮನೆಯ ಹೊರಗೆ ಬಿಡಿ ಮನೆಯ ಒಳಗೂ ಬರಿಗಾಲಲ್ಲಿ ನಡೆಯುವ ಕ್ರಮ ಕ್ರಮೇಣ ಮಾಯವಾಗುತ್ತಿದೆ. ನಡೆದಾಡುವುದೇ ಕಡಿಮೆ, ಕಡಿಮೆ ನಡೆದಾಡುವುದರ ಜೊತೆ ಮನೆಯ ಹೊರಗೆ, ಒಳಗೆ ಚಪ್ಪಲಿಗೆ ಮುಕ್ತ ಪ್ರವೇಶ. ಪರಿಣಾಮ ಪಾದಗಳಿಗೆ ಭೂಮಿಯ ಸ್ಪರ್ಶವೇ ಇಲ್ಲ.

ಇದರಿಂದ ಆಗುವ ದೊಡ್ಡ ನಷ್ಟ- ಭೂಮಿಯ ಅಯಸ್ಕಾಂತ ಶಕ್ತಿಯನ್ನು ಸಂಪೂರ್ಣವಾಗಿ ಕಳೆದುಕೊಳ್ಳುವಿಕೆ. ಈ ಅಯಸ್ಕಾಂತ ಶಕ್ತಿ ಅಥವಾ ಮ್ಯಾಗ್ನೆಟ್‌ ಪವರ್‌ ದೇಹ ಸ್ವಾಸ್ಥ್ಯಕ್ಕೆ ಬಲುಮುಖ್ಯ.

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯಲ್ಲಿ ಶ್ರೀ ಬಾಲಾಜಿ ಮಹಾಗಣಪತಿ ದೇವಸ್ಥಾನ ಸೇವಾ ಸಮಿತಿ ಮತ್ತು ಕಂಪಾನಿಯೋ ಸಂಸ್ಥೆಯ ಸಹಯೋಗದಲ್ಲಿ ನಡೆಯುತ್ತಿರುವ ʼಫೂಟ್‌ ಪಲ್ಸ್‌ʼ ಥೆರೆಪಿ ಶಿಬಿರದ ಸಂದರ್ಭದಲ್ಲಿ ಥೆರೆಪಿ ತಜ್ಞ ಕಾರ್ತಿಕ್‌ ಹೇಳಿದ ಸೂತ್ರಗಳಲ್ಲಿ ಇವೂ ಸೇರಿವೆ.

ಅವರ ಮಾತುಗಳ ವಿಡಿಯೋ ಇಲ್ಲಿದೆ. ಚಿತ್ರ ಕ್ಲಿಕ್‌ ಮಾಡಿ ನೋಡಿ. Youtube Video link: https://youtu.be/TlSSjnHtgJA

ರಂಗೋಲಿ ಸ್ಪರ್ಧೆ

ಹೇಳಬೇಕಾದ ಇನ್ನೊಂದು ಸುದ್ದಿ ಇಲ್ಲಿದೆ. ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಜನವರಿ ೧೫ರಂದು ಬರಲಿರುವ ಮಕರ ಸಂಕ್ರಾಂತಿಯ ಪ್ರಯುಕ್ತ ಮಹಿಳೆಯರಿಗೆ ʼರಂಗೋಲಿʼ ಸ್ಪರ್ಧೆಯನ್ನು ೨೦೨೫ ಜನವರಿ ೧೧ರ ಭಾನುವಾರ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮ ಬೆಳಗ್ಗೆ ೧೦.೩೦ರಿಂದ ೧೨ರ ನಡುವಣ ಅವಧಿಯಲ್ಲಿ ನಡೆಯಲಿದೆ. ಪಾಲ್ಗೊಳ್ಳಬಯಸುವವರು ಮಮತಾ (೮೮೬೭೯೬೭೮೮೮) ಅಥವಾ ಸ್ವಾತಿ (೮೧೦೫೬೮೫೮೯೯) ಅವರನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.


PARYAYA: ಮೊಣಕಾಲು ಅಥವಾ ಮಂಡಿನೋವು ಬರುವುದು ಏಕೆ?:   ಮೊಣಕಾಲು ಅಥವಾ ಮಂಡಿನೋವು ಬರುವುದು ಏಕೆ? ನೆ ಲದಲ್ಲಿ ಅಥವಾ ಕೆಳಗೆ ಕುಳಿತುಕೊಳ್ಳುವ ಅಭ್ಯಾಸವನ್ನು ಕೈಬಿಟ್ಟದ್ದೇ ಮೊಣಕಾಲು   ಅಥವಾ ಮಂಡಿ ನೋವು ಸೇರಿದಂತೆ ನಮ್ಮ ಹಲವಾರ...

Tuesday, January 6, 2026

PARYAYA: ಅಂಗಾರಕ ಸಂಕಷ್ಟಿ ಪೂಜಾ

 ಅಂಗಾರಕ ಸಂಕಷ್ಟಿ ಪೂಜಾ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೬ ಜನವರಿ ೬ರ ಮಂಗಳವಾರ ಅಂಗಾರಕ ಸಂಕಷ್ಟಿ ಪೂಜೆಯನ್ನು ಶ್ರದ್ಧಾ ಭಕ್ತಿಯೊಂದಿಗೆ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಭಕ್ತರು ವಿಘ್ನೇಶ್ವರನಿಗೆ ಕಡುಬಿನ ಹಾರದ ಸೇವೆಯನ್ನೂ ಸಲ್ಲಿಸಿದರು. ಭಕ್ತರು ಅಪಾರ ಸಂಖ್ಯೆಯಲ್ಲಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಈ ಸಂದರ್ಭದ ಕೆಲವು ಚಿತ್ರಗಳು, ವಿಡಿಯೋ ಇಲ್ಲಿದೆ. ವಿಡಿಯೋ ನೋಡಲು ಕೆಳಗಿನ ಚಿತ್ರ ಕ್ಲಿಕ್‌ ಮಾಡಿರಿ ಅಥವಾ ಯೂ ಟ್ಯೂಬ್‌ ಲಿಂಕ್‌ ಕ್ಲಿಕ್‌ ಮಾಡಿರಿ: https://youtu.be/yzDZdbkfa58



PARYAYA: ಅಂಗಾರಕ ಸಂಕಷ್ಟಿ ಪೂಜಾ:   ಅಂಗಾರಕ ಸಂಕಷ್ಟಿ ಪೂಜಾ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್...

Monday, January 5, 2026

PARYAYA: ಫೂಟ್‌ ಪಲ್ಸ್‌ ಥೆರೆಪಿ: ಏನೆಲ್ಲ ಅನುಕೂಲ ಉಂಟು?

ಫೂಟ್‌ ಪಲ್ಸ್‌ ಥೆರೆಪಿ: ಏನೆಲ್ಲ ಅನುಕೂಲ ಉಂಟು?

ಬೆಂಗಳೂರು ರಾಮಕೃಷ್ಣ ಹೆಗಡೆ ನಗರ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಉಚಿತ ಫುಟ್‌ ಪಲ್ಸ್‌ ಥೆರೆಪಿ ಶಿಬಿರವು ೨೦೨೬ ಜನವರಿ ೩ರಿಂದ ಆರಂಭಗೊಂಡಿದೆ.

ಪ್ರತಿದಿನ ಬೆಳಗ್ಗೆ ೯.೩೦ಕ್ಕೆ ಆರಂಭವಾಗಿ ಸಂಜೆ ೫ ಗಂಟೆಯವರೆಗೆ ನಡೆಯುವ ಈ ಶಿಬಿರವು ಜನವರಿ ೧೨ರವರೆಗೂ ನಡೆಯಲಿದೆ.


ಪ್ರತಿದಿನ ೩೦ ನಿಮಿಷಗಳ ಅವಧಿಯ ಚಿಕಿತ್ಸೆ ಪಡೆಯುವುದರಿಂದ ರಕ್ತ ಪರಿಚಲನೆ, ಮಾಂಸಖಂಡಗಳ ಸೆಳೆತ ಮತ್ತು ನರಗಳ ಯಾವುದೇ ಸರಳ ಮತ್ತು ದೀರ್ಘಕಾಲದ ಸಮಸ್ಯೆಗಳಿಗೆ ಔಷಧ ರಹಿತ ಹಾಗೂ ಅಡ್ಡ ಪರಿಣಾಮ ಇಲ್ಲದ ಪರಿಹಾರ ಲಭಿಸುತ್ತದೆ.

ಮಧುಮೇಹ, ಮಧುಮೇಹದಿಂದ ಬರುವ ಪಾದ ಉರಿಯೂತ, ಸಂಧಿವಾತ, ಕುತ್ತಿಗೆ ನೋವು ಇತ್ಯಾದಿ ಸಮಸ್ಯೆಗಳಿಗೂ ಈ ಚಿಕಿತ್ಸೆಯಲ್ಲಿ ಪರಿಹಾರ ಲಭ್ಯವಿದೆ. ಬಹುಮುಖ್ಯವಾಗಿ ಫಿಸಿಯೋಥೆರೆಪಿ ಅಗತ್ಯ ಉಳ್ಳವರಿಗೆ ಇದು ಅತ್ಯುತ್ತಮ ಎನ್ನುತ್ತಾರೆ ಈ ಚಿಕಿತ್ಸಾ ತಜ್ಞ ಕಾರ್ತಿಕ್.‌

ಚಿಕಿತ್ಸೆ ಬಗ್ಗೆ ಅವರೇನು ಹೇಳುತ್ತಾರೆ ? ಇಲ್ಲಿ 👇 ನೋಡಿ.


ಇದನ್ನೂ ನೋಡಿ:
PARYAYA: ಫೂಟ್‌ ಪಲ್ಸ್‌ ಥೆರೆಪಿ: ಏನೆಲ್ಲ ಅನುಕೂಲ ಉಂಟು?:   ಫೂಟ್‌ ಪಲ್ಸ್‌ ಥೆರೆಪಿ: ಏನೆಲ್ಲ ಅನುಕೂಲ ಉಂಟು? ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇ...

Saturday, January 3, 2026

PARYAYA: ಭಾರತಕ್ಕೆ ಮರಳಿತು ಬುದ್ಧನ ಅವಶೇಷ..

 ಭಾರತಕ್ಕೆ ಮರಳಿತು ಬುದ್ಧನ ಅವಶೇಷ..

ತಮಾನಕ್ಕೂ ಅಧಿಕ ಕಾಲದ ಕಾಯುವಿಕೆಯ ನಂತರಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷಗಳು (Piprahwa Relics) ಭಾರತಕ್ಕೆ ಮರಳಿವೆ.

ಈ ಕ್ಷಣ ಭಾರತೀಯರೆಲ್ಲರಿಗೂ ಹೆಮ್ಮೆಯಭಕ್ತಿಯ ಹಾಗೂ ಸಾಂಸ್ಕೃತಿಕ ಭಾವೈಕ್ಯತೆಯ ಕ್ಷಣ. ದೆಹಲಿಯಲ್ಲಿ ೨೦೨೬ ಜನವರಿ ೩ರ ಶನಿವಾರ ನಡೆದ ಕಾರ್ಯಕ್ರಮದ ಪ್ರಮುಖ ಹೈಲೈಟ್ಸ್ ಇಲ್ಲಿದೆ:

  • ಭವ್ಯ ಉದ್ಘಾಟನೆ: ನವದೆಹಲಿಯ ರೈ ಪಿತೋರಾ ಸಾಂಸ್ಕೃತಿಕ ಸಂಕೀರ್ಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು "ದಿ ಲೈಟ್ ಅಂಡ್ ದಿ ಲೋಟಸ್: ರೆಲಿಕ್ಸ್ ಆಫ್ ದಿ ಅವೇಕನ್ಡ್ ಒನ್" ಎಂಬ ಶೀರ್ಷಿಕೆಯಡಿ ಆಯೋಜಿಸಲಾದ ಪವಿತ್ರ ಪಿಪ್ರಹ್ವಾ ಅವಶೇಷಗಳ ಬೃಹತ್ ಅಂತರರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಿದರು.
  • ಹೆಮ್ಮೆಯ ನುಡಿಗಳು: ಈ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿಯವರು, "ಸುಮಾರು 125 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರಭಾರತದ ಪರಂಪರೆ ಮತ್ತು ಅದರ ಸಾಂಸ್ಕೃತಿಕ ಶ್ರೀಮಂತಿಕೆ ಮತ್ತೆ ತನ್ನ ತಾಯ್ನಾಡಿಗೆ ಮರಳಿದೆ," ಎಂದು ಸಂತಸ ವ್ಯಕ್ತಪಡಿಸಿದರು.
  • ಭಾರತದ ಅಸ್ಮಿತೆ: ಈ ಅವಶೇಷಗಳ ಆಗಮನವು ಕೇವಲ ಇತಿಹಾಸದ ಮರುಕಳಿಕೆಯಷ್ಟೇ ಅಲ್ಲ, ಬದಲಿಗೆ ಭಗವಾನ್ ಬುದ್ಧನ ಶಾಂತಿ ಮತ್ತು ಜ್ಞಾನದ ಸಂದೇಶವನ್ನು ಜಗತ್ತಿಗೆ ಸಾರುವ ಭಾರತದ ಸಾಂಸ್ಕೃತಿಕ ಶಕ್ತಿಯ ಸಂಕೇತ. ಈ ಸಂದರ್ಭದ ವಿಡಿಯೋ ಇಲ್ಲಿದೆ.
PARYAYA: ಭಾರತಕ್ಕೆ ಮರಳಿತು ಬುದ್ಧನ ಅವಶೇಷ..:   ಭಾರತ ಕ್ಕೆ ಮರಳಿತು ಬುದ್ಧನ ಅವಶೇಷ.. ಶ ತಮಾನಕ್ಕೂ ಅಧಿಕ ಕಾಲದ ಕಾಯುವಿಕೆಯ ನಂತರ , ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷಗಳು ( Piprahwa Rel...

PARYAYA: ದೈತ್ಯ ಚಂದ್ರನ ಕಂಡಿರಾ?

ದೈತ್ಯ ಚಂದ್ರನ ಕಂಡಿರಾ?

೨೦೨೬ ಜನವರಿ ೩ರಂದು ದೈತ್ಯ ಚಂದ್ರ ದರ್ಶನದ ಬಗ್ಗೆ ಬಂದ ಸುದ್ದಿಗಳನ್ನು ನೋಡಿರುವಿರಲ್ಲವೇ? ಹಲವರು ಸುದ್ದಿ ಓದಿ ಬಳಿಕ ಚಂದ್ರನನ್ನು ನೋಡಲು ಮರೆತೇ ಬಿಟ್ಟಿರಬಹುದು.

ಅಂತಹವರು ಇಲ್ಲಿ ಚಂದ್ರ ದೈತ್ಯ ರೂಪವನ್ನು ನೋಡಬಹುದು. ಸಮೀಪ ನೋಟಕ್ಕೆ ಚಿತ್ರವನ್ನು ಕ್ಲಿಕ್‌ ಮಾಡಿ.


PARYAYA: ದೈತ್ಯ ಚಂದ್ರನ ಕಂಡಿರಾ?:   ದೈತ್ಯ ಚಂದ್ರನ ಕಂಡಿರಾ? ೨೦ ೨೬ ಜನವರಿ ೩ರಂದು ದೈತ್ಯ ಚಂದ್ರ ದರ್ಶನದ ಬಗ್ಗೆ ಬಂದ ಸುದ್ದಿಗಳನ್ನು ನೋಡಿರುವಿರಲ್ಲವೇ? ಹಲವರು ಸುದ್ದಿ ಓದಿ ಬಳಿಕ ಚಂದ್ರನನ್ನು ನೋಡಲು ಮರ...

Thursday, January 1, 2026

PARYAYA: ಉಚಿತ ಫುಟ್‌ ಪಲ್ಸ್‌ ಥೆರೆಪಿ ಶಿಬಿರ

 ಉಚಿತ ಫುಟ್‌ ಪಲ್ಸ್‌ ಥೆರೆಪಿ ಶಿಬಿರ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ ದೇವಸ್ಥಾನ ಸೇವಾ ಸಮಿತಿ ಹಾಗೂ ಕಂಪಾನಿಯೋ ಇವರ ಸಹಯೋಗದೊಂದಿಗೆ  "ಉಚಿತ ಫುಟ್ ಪಲ್ಸ್ ಥೆರಪಿ " ಶಿಬಿರವನ್ನು ದೇವಾಲಯ ಆವರಣದಲ್ಲಿ ಆಯೋಜಿಸಲಾಗಿದೆ.

ಈ ಶಿಬಿರದಲ್ಲಿ ರಕ್ತ ಪರಿಚಲನೆ, ಮಾಂಸಖಂಡಗಳ ಸೆಳೆತ, ಮತ್ತು ನರಗಳ ಯಾವುದೇ ಸರಳ ಮತ್ತು ದೀರ್ಘ ಕಾಲದ ಸಮಸ್ಯೆಗಳಿಗೆ ಔಷಧ ರಹಿತ ಹಾಗೂ ಅಡ್ಡ ಪರಿಣಾಮ ಇಲ್ಲದೆ ಚಿಕತ್ಸೆ ಸಲಹೆಗಳನ್ನು ನೀಡಲಾಗುವುದು.

ಶಿಬಿರವು ದಿನಾಂಕ 03-01-2026 ರಿಂದ 12-01-2026 ರವರೆಗೆಬೆಳಗ್ಗೆ 9.30 ರಿಂದ ಸಂಜೆ 05:00 ಗಂಟೆಯ ತನಕ ನಡೆಯುತ್ತದೆ ಎಂದು ದೇವಸ್ಥಾನದ ಆಡಳಿತ ಸಮಿತಿಯ ಪ್ರಕಟಣೆ ತಿಳಿಸಿದೆ.

ಆಸಕ್ತರು ವಿವರಗಳಿಗೆ ಮೇಲಿನ ಚಿತ್ರ ಕ್ಲಿಕ್‌ ಮಾಡಿನೋಡಬಹುದು ಅಥವಾ ಕಾರ್ತಿಕ್‌  (ಮೊಬೈಲ್‌ ನಂಬರ್‌ 9901612625) ಅವರನ್ನು ಸಂಪರ್ಕಿಸಬಹುದು.

PARYAYA: ಉಚಿತ ಫುಟ್‌ ಪಲ್ಸ್‌ ಥೆರೆಪಿ ಶಿಬಿರ:   ಉಚಿತ ಫುಟ್‌ ಪಲ್ಸ್‌ ಥೆರೆಪಿ ಶಿಬಿರ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ ದೇವಸ್ಥಾನ ಸೇವಾ ಸಮಿತಿ ಹಾಗೂ ಕಂಪಾನಿ...