ಚೈತ್ರ ಮಾಸದ ಸತ್ಯನಾರಾಯಣ ಪೂಜಾ
ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೬ ಏಪ್ರಿಲ್ ೧ರ ಬುಧವಾರ ಪರಾಭವ ಸಂವತ್ಸರದ ಚೈತ್ರ ಮಾಸದ ಶ್ರೀ ಸತ್ಯ ನಾರಾಯಣ ಪೂಜೆಯನ್ನು ಶ್ರದ್ಧಾ ಭಕ್ತಿಯೊಂದಿಗೆ ನೆರವೇರಿಸಲಾಯಿತು.
ಭಾರೀ ಸಂಖ್ಯೆಯಲ್ಲಿ ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಶ್ರೀ ಕೃಷ್ಣೋಜಿ ರಾವ್ ಮತ್ತು ಕುಟುಂಬದವರು ಅಲಂಕಾರ ಹಾಗೂ ಶ್ರೀ ಮಹೇಶ್ ಮತ್ತು ಕುಟುಂಬದವರು ಪ್ರಸಾದದ ವ್ಯವಸ್ಥೆ ಮಾಡಿದ್ದರು.
ಈ ಸಂದರ್ಭದ ಕೆಲವು ಚಿತ್ರಗಳು ಹಾಗೂ ವಿಡಿಯೋ ಇಲ್ಲಿದೆ.

