Thursday, June 18, 2026

PARYAYA: ರಾಜರಾಜೇಶ್ವರಿ ನಗರದಲ್ಲಿ ʼಕಂಸವಧೆʼ

 ರಾಜರಾಜೇಶ್ವರಿ ನಗರದಲ್ಲಿ ʼಕಂಸವಧೆʼ

ಬೆಂಗಳೂರು ರಾಜರಾಜೇಶ್ವರಿ ನಗರದ ಶಿವರತ್ನಪುರಿ ಟೆಂಪಲ್‌ ಆಫ್‌ ಹೆಲ್ತ್.‌ ರಸ್ತೆಯಲ್ಲಿ ಹೋಗುವವರನ್ನು ತನ್ನ ʼಪಿರಮಿಡ್‌ʼ ಆಕಾರದ ವಿಶಿಷ್ಠ ವಿನ್ಯಾಸದಿಂದಲೇ ಗಮನ ಸೆಳೆಯುವ ಸ್ಥಳ. ಇಲ್ಲಿ ಇತ್ತೀಚೆಗೆ ʼಪವಿತ್ರ ಭಾರತʼ ಕಾರ್ಯಕ್ರಮ. ೨೦೨೬ ಜೂನ್‌ ೧೩ರಂದು ವೇದ ಕುರಿತ ಸಂವಾದ ಮತ್ತು ಭರತ ನಾಟ್ಯದ ಸೊಬಗು.

೨೦೨೬ ಜೂನ್‌ ೧೪ರಂದು ವೇದ ಕುರಿತು ಸಂವಾದ ಮತ್ತು ಯಕ್ಷಗಾನ. ಈ ಕಾರ್ಯಕ್ರಮದಲ್ಲಿ ಬೆಂಗಳೂರು ಹೆಗಡೆ ನಗರ ಸಮೀಪದ ಅಮೃತಹಳ್ಳಿಯ ಮಕ್ಕಳಿಂದ ಸೊಗಸಾದ ʼಕಂಸವಧೆʼ ಯಕ್ಷಗಾನ. ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ʼಯಕ್ಷ ಕಲಾ ಕೌಸ್ತುಭʼ ತಂಡದ ಮೂಲಕ ಯಕ್ಷಗಾನ ಹೇಳಿಕೊಡುತ್ತಿರುವ ಯಕ್ಷಗುರು ಉಮೇಶರಾಜ್‌ ಮಂದಾರ್ತಿ ಅವರ ನಿರ್ದೇಶನ.

ಭರತನಾಟ್ಯ ಕಲಿಯುತ್ತಿರುವ ಬಾಲಕಿಯರು ಮಂದಾರ್ತಿ ಅವರ ನಿರ್ದೇಶನದಲ್ಲಿ ಕೇವಲ ೧೦-೧೫ ದಿನಗಳ ಕಾಲ ನೀಡಿದ ತರಬೇತಿಯಲ್ಲಿ ಯಕ್ಷಗಾನ ಕಲಿತು ಯಶಸ್ವಿಯಾಗಿ ಅದ್ಭುತ ಪ್ರದರ್ಶನವನ್ನು ನೀಡಿದರು.


ಈ ಸಂದರ್ಭದ ಕೆಲವು ಚಿತ್ರ ಹಾಗೂ ವಿಡಿಯೋಗಳು ಇಲ್ಲಿವೆ. ಯಕ್ಷಗಾನದ ಪೂರ್ಣ ಪ್ರಸಂಗವನ್ನು ವೀಕ್ಷಿಸಲು ಕೆಳಗಿನ ಚಿತ್ರಕ್ಲಿಕ್‌ ಮಾಡಿ.



PARYAYA: ರಾಜರಾಜೇಶ್ವರಿ ನಗರದಲ್ಲಿ ʼಕಂಸವಧೆʼ:   ರಾಜರಾಜೇಶ್ವರಿ ನಗರದಲ್ಲಿ ʼ ಕಂಸವಧೆ ʼ ಬೆಂ ಗಳೂರು ರಾಜರಾಜೇಶ್ವರಿ ನಗರದ ಶಿವರತ್ನಪುರಿ ಟೆಂಪಲ್‌ ಆಫ್‌ ಹೆಲ್ತ್.‌ ರಸ್ತೆಯಲ್ಲಿ ಹೋಗುವವರನ್ನು ತನ್ನ ʼ ಪಿರಮಿಡ್‌ ʼ ಆಕ...

No comments:

Post a Comment