Showing posts with label ವಿಧಾನಸೌಧ. Show all posts
Showing posts with label ವಿಧಾನಸೌಧ. Show all posts

Thursday, December 18, 2025

PARYAYA: ಸುವರ್ಣ ಸೌಧದ ಕಾರಂಜಿ ಕೇಳುತ್ತಿದೆ…

 ಸುವರ್ಣ ಸೌಧದ ಕಾರಂಜಿ ಕೇಳುತ್ತಿದೆ

ಇದು ಸುವರ್ಣ ನೋಟ

ಕುಂದಾ ನಗರಿ ಎಂಬುದಾಗಿಯೇ ಹೆಸರು ಪಡೆದಿರುವ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಈ ಅಧಿವೇಶನ ಸಂದರ್ಭದ ಚಿತ್ರಗಳನ್ನು ತೆಗೆಯುವ ಸಲುವಾಗಿಯೇ ಬೆಳಗಾವಿಗೆ ತೆರಳಿದ ಹಿರಿಯ ಪತ್ರಿಕಾ ಛಾಯಾಗ್ರಾಹಕ ವಿಶ್ವನಾಥ ಸುವರ್ಣ ಅವರು ʼಪರ್ಯಾಯ ಡಾಟ್‌ ಕಾಮ್‌ʼ ವೆಬ್‌ಸೈಟಿಗೆ ಕೆಲವೊಂದು ಚಿತ್ರಗಳನ್ನು ಕಳುಹಿಸಿದ್ದಾರೆ. 

ಸುವರ್ಣ ಸೌಧದ ಮುಂಭಾಗದಲ್ಲಿ ಇತ್ತೀಚೆಗೆ ನಿರ್ಮಿಸಲಾಗಿರುವ ಸುಂದರ ಕಾರಂಜಿಗಳ ಚಿತ್ರಗಳು ಅವು. ಆ ಚಿತ್ರಗಳು ಮತ್ತು ಅಧಿವೇಶನ ಕುರಿತು ಹಿರಿಯ ಪತ್ರಕರ್ತ ನೆತ್ರಕೆರೆ ಉದಯಶಂಕರ ಪದ್ಯವೊಂದನ್ನು ಬರೆದರು.

ಆ ಕವನ ಇಲ್ಲಿದೆ:

ಶೀರ್ಷಿಕೆ: ಸುವರ್ಣ ಸೌಧದ ಕಾರಂಜಿ ಕೇಳುತ್ತಿದೆ


ಮೈಯ ನಡುಗಿಸುವ ಚಳಿಯಲಿ|
ಚರ್ಚೆ ನಡೆದಿದೆ ಕಾವೇರಿ ಸದನದಿ|
ಕುಂದ ನಗರಿಯ ಭವ್ಯಸೌಧದ|
ಒಳ ಸಭಾಂಗಣದಿ||

ಚಂದದಿಂದಲಿ ತಕ ತಕನೆ ಕುಣಿದಿದೆ|
ಮಂದ ಬೆಳಕಿನ ನಡುವೆ ನೀರಿನ|
 
ಭವ್ಯ ವರ್ಣದ ಛಾಪು ಚೆಲ್ಲುತ|
ದಿವ್ಯ ಕಾರಂಜಿ||

ಹಾಡು ಹಗಲಲಿ ನಡೆವ ಮಾತಿನ|
ಜೋರು ಚರ್ಚೆಯ ಬಳಿಕ ಬರುವುದೇ|
ನಾಕು ಜನಕನುಕೂಲವಾಗುವ|
ಖಚಿತ ಆಡಳಿತ? ||

ಮುಗಿಲು ಮುಟ್ಟಿದ ಕಾಡಿ|
ಕೆಣಕುವ ಅಟ್ಟಹಾಸದ ಭ್ರಷ್ಟ|
ಬಲಗಳ ಮೆಟ್ಟಿಹಾಕುವ ಶುಭ್ರ|
ವರ್ಣದ ಜಗ ಜಟ್ಟಿ ನಿರ್ಧಾರ? ||

ಹಾಲು ಬಂದಿತೇ ಬೆಣ್ಣೆ ಬಂದಿತೇ|
ವಿಷವು ಬಂದಿತೇ ಅಮೃತ|
ಬಂದಿತೆ ಕೋಪತಾಪದ ಬಿರುಸು|
ಮಾತಿನ ಮಥನ ಕಾಲದಲಿ? ||

ಕೋಟಿ ಜನರ ಸಂಕಷ್ಟ ನೀಗುವ|
ಮೇಟಿ ಮಾಡುವ ಕೃಷಿಕ|
ಮಂದಿಯ ತಾಪ ಕಳೆವ|
ವಿವೇಕ ಮೆರೆವುದೇ ಚರ್ಚೆಕಾಲದಲಿ? ||

ಈ ಕವನ ಮತ್ತು ಅದರ ವಿಶ್ಲೇಷಣೆಯ ವಿಡಿಯೋ  👇👇  ಇಲ್ಲಿದೆ. ವಿಡಿಯೋ ನೋಡಲು ಕೆಳಗಿನ ಚಿತ್ರ ಕ್ಲಿಕ್‌ ಮಾಡಿ ಅಥವಾ ಯೂ ಟ್ಯೂಬ್‌ ಲಿಂಕ್‌  ( https://youtu.be/VmUnrkngtQE ) ಕ್ಲಿಕ್‌ ಮಾಡಿರಿ.  ಮೇಲಿನ ಚಿತ್ರಗಳ ಸಮೀಪ ನೋಟಕ್ಕೆ ಅವುಗಳನ್ನು ಕ್ಲಿಕ್‌ ಮಾಡಿರಿ.


PARYAYA: ಸುವರ್ಣ ಸೌಧದ ಕಾರಂಜಿ ಕೇಳುತ್ತಿದೆ…:   ಸುವರ್ಣ ಸೌಧದ ಕಾರಂಜಿ ಕೇಳುತ್ತಿದೆ … ಇದು ಸುವರ್ಣ ನೋಟ ಕುಂ ದಾ ನಗರಿ ಎಂಬುದಾಗಿಯೇ ಹೆಸರು ಪಡೆದಿರುವ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಧಾನಮಂಡಲದ ಚಳಿಗಾಲದ ಅಧ...

Monday, June 30, 2025

PARYAYA: ಕರ್ನಾಟಕದಲ್ಲಿ ಪತ್ರಿಕಾ ದಿನ: ಇತಿಹಾಸ ಗೊತ್ತಾ?

 ಕರ್ನಾಟಕದಲ್ಲಿ ಪತ್ರಿಕಾ ದಿ: ಇತಿಹಾಸ ಗೊತ್ತಾ?

ಇದು ಸುವರ್ಣ ನೋಟ

ಪ್ರತಿ ವರ್ಷ ಜುಲೈ 1 ರಂದು ಕರ್ನಾಟಕದಲ್ಲಿ 'ಪತ್ರಿಕಾ ದಿನ'ವನ್ನು ಆಚರಿಸಲಾಗುತ್ತದೆ. ಈ ದಿನಕ್ಕೆ ವಿಶೇಷ ಮಹತ್ವವಿದೆಏಕೆಂದರೆ ಇದು ಕನ್ನಡದ ಮೊಟ್ಟಮೊದಲ ಪತ್ರಿಕೆ 'ಮಂಗಳೂರು ಸಮಾಚಾರ' ಪ್ರಕಟಗೊಂಡ ದಿನ. 1843ರ ಜುಲೈ 1 ರಂದು ಮಂಗಳೂರಿನಲ್ಲಿ ಬಾಸೆಲ್ ಮಿಷನ್‌ನ ಮುದ್ರಣಾಲಯದಿಂದ ಈ ಪತ್ರಿಕೆ ಹೊರಬಂದಿತು.

ಕನ್ನಡ ಪತ್ರಿಕೋದ್ಯಮದ ಪಿತಾಮಹ: ರೆವರೆಂಡ್ ಹರ್ಮನ್ ಮೋಗ್ಲಿಂಗ್

'ಮಂಗಳೂರು ಸಮಾಚಾರ'ದ ಸಂಪಾದಕರು ರೆವರೆಂಡ್ ಹರ್ಮನ್ ಮೋಗ್ಲಿಂಗ್ಜರ್ಮನ್‌ನ ಮತ ಪ್ರಚಾರಕರಾದ ಇವರನ್ನು ಕನ್ನಡ ಪತ್ರಿಕೋದ್ಯಮದ ಮೂಲಪುರುಷ ಅಥವಾ ಪಿತಾಮಹ ಎಂದು ಕರೆಯಲಾಗುತ್ತದೆ. ಯುರೋಪಿಯನ್ ಪತ್ರಿಕೆಗಳ ಬಗ್ಗೆ ಅಪಾರ ಜ್ಞಾನ ಹೊಂದಿದ್ದ ಮೋಗ್ಲಿಂಗ್, 1840ರಲ್ಲಿ ಮಂಗಳೂರಿಗೆ ಬಂದ ನಂತರ ತುಳುಕೊಂಕಣಿಕನ್ನಡ ಭಾಷೆಗಳನ್ನು ಕಲಿತರು. ಮಿಷನರಿಯಾಗಿದ್ದರೂಸ್ಥಳೀಯ ಸಾಹಿತ್ಯ ಮತ್ತು ಶಿಕ್ಷಣದಲ್ಲಿ ಅವರು ತೀವ್ರ ಆಸಕ್ತಿ ತೋರಿಸಿದರು.

'ಮಂಗಳೂರು ಸಮಾಚಾರ'ದ ಪ್ರಕಟಣೆ ಮತ್ತು ಪ್ರಭಾವ

'ಮಂಗಳೂರು ಸಮಾಚಾರ'ವು ಆರಂಭದಲ್ಲಿ ತಿಂಗಳ ಕಾಲ ಪಾಕ್ಷಿಕವಾಗಿ ಪ್ರಕಟವಾಯಿತು. ಇದು ಕಲ್ಲಚ್ಚಿನಲ್ಲಿ ಪ್ರಕಟವಾಗುತ್ತಿತ್ತು ಮತ್ತು ನಾಲ್ಕು ಪುಟಗಳನ್ನು ಒಳಗೊಂಡಿತ್ತುಅದರ ಬೆಲೆ ಕೇವಲ ಒಂದು ಪೈಸೆ. ಮೋಗ್ಲಿಂಗ್ ಅವರೇ ಸುದ್ದಿಗಳನ್ನು ಆಯ್ಕೆ ಮಾಡುತ್ತಿದ್ದರು. ಸ್ಥಳೀಯಸರ್ಕಾರಿ ಅಧಿಸೂಚನೆಗಳುಕಾನೂನು ವಿಷಯಗಳುಹಾಡುಗಳುಕಥೆಗಳುಅಂತರರಾಜ್ಯ ವರ್ತಮಾನಗಳುಮತ್ತು ಓದುಗರ ವಾಣಿಗಳಂತಹ ವೈವಿಧ್ಯಮಯ ವಿಷಯಗಳನ್ನು ಈ ಪತ್ರಿಕೆ ಪ್ರಕಟಿಸುತ್ತಿತ್ತು. ಜನರಿಗೆ ಕಾನೂನು ಅರಿವು ಮೂಡಿಸುವ ಉದ್ದೇಶದಿಂದ ಕೋರ್ಟ್ ಪ್ರಕರಣಗಳಿಗೆ ಸಂಬಂಧಿಸಿದ ಸುದ್ದಿಗಳನ್ನು ಹೆಚ್ಚಾಗಿ ಪ್ರಕಟಿಸಲಾಗುತ್ತಿತ್ತು. ನಂತರಈ ಪತ್ರಿಕೆಯ ಹೆಸರನ್ನು 'ಕನ್ನಡ ಸಮಾಚಾರ' ಎಂದು ಬದಲಾಯಿಸಿ ಬಳ್ಳಾರಿಯಿಂದ ಪ್ರಕಟಿಸಲು ಪ್ರಾರಂಭಿಸಲಾಯಿತು.

ಮೋಗ್ಲಿಂಗ್‌ಗೆ ಗೌರವ ಡಾಕ್ಟರೇಟ್

ಕನ್ನಡ ಸಾಹಿತ್ಯ ಮತ್ತು ಪತ್ರಿಕೋದ್ಯಮಕ್ಕೆ ಮೋಗ್ಲಿಂಗ್ ನೀಡಿದ ಅನನ್ಯ ಕೊಡುಗೆಗಾಗಿಟ್ಯೂಬಿಂಗೆನ್‌ನ ಎಬರ್‍ಹಾರ್ಡ್ ಕಾರ್ಲ್ಸ್ ವಿಶ್ವವಿದ್ಯಾನಿಲಯವು 1858ರಲ್ಲಿ ಅವರಿಗೆ ಗೌರವ ಡಾಕ್ಟರೇಟ್ ನೀಡಿತು. ಕನ್ನಡಕ್ಕಾಗಿ ಇಂತಹ ಗೌರವ ಪಡೆದ ಮೊದಲ ವ್ಯಕ್ತಿ ಇವರಾಗಿದ್ದರು.

ಆಧುನಿಕ ಪತ್ರಿಕೋದ್ಯಮದ ಬೆಳವಣಿಗೆ

'ಮಂಗಳೂರು ಸಮಾಚಾರ'ದೊಂದಿಗೆ ಆರಂಭವಾದ ಕನ್ನಡ ಪತ್ರಿಕಾರಂಗವು ಇಂದು ಆಧುನಿಕ ತಂತ್ರಜ್ಞಾನದೊಂದಿಗೆ ಅಗಾಧವಾಗಿ ಬೆಳೆದಿದೆ. ಈಗ ಅನೇಕ ಪತ್ರಿಕೆಗಳುಸ್ಯಾಟಲೈಟ್ ಚಾನೆಲ್‌ಗಳುಬಹುಭಾಷಾ ಪ್ರಾದೇಶಿಕ ಚಾನೆಲ್‌ಗಳುಆನ್‌ಲೈನ್ ಆವೃತ್ತಿಗಳುವೆಬ್‌ಸೈಟ್‌ಗಳುವೆಬ್ ಪತ್ರಿಕೆಗಳುಸಾಮಾಜಿಕ ಮಾಧ್ಯಮ (ಫೇಸ್‌ಬುಕ್ವಾಟ್ಸಪ್)ಮತ್ತು ನೇರ ಪ್ರಸಾರ ನೀಡುವ ಸುದ್ದಿವಾಹಿನಿಗಳ ಮೂಲಕ ಮಾಧ್ಯಮವು ಕ್ಷಣಕ್ಷಣದ ಸುದ್ದಿಗಳನ್ನು ಜನರಿಗೆ ತಲುಪಿಸುತ್ತಿದೆ.

ಛಾಯಾಗ್ರಹಣ ಮತ್ತು ವ್ಯಂಗ್ಯಚಿತ್ರ

ಇಂದಿನ ದಿನಗಳಲ್ಲಿ ಪತ್ರಿಕೆಗಳು ಜೀವಂತಿಕೆಯನ್ನು ತಳೆಯುವುದು ಛಾಯಾಚಿತ್ರಗಳು ಮತ್ತು ವ್ಯಂಗ್ಯ ಚಿತ್ರಗಳ ಮೂಲಕ. ಸಾವಿರ ಪದಗಳಲ್ಲಿ ಹೇಳಬಹುದಾದ ವಿಷಯವನ್ನು ಒಂದು ಛಾಯಾಚಿತ್ರ ಪ್ರಭಾವಶಾಲಿಯಾಗಿ ಹೇಳಬಲ್ಲುದು.

ಹಾಗೆಯೇ ವ್ಯಂಗ್ಯಚಿತ್ರ ಕೂಡಾ ಅತ್ಯಂತ ಪರಿಣಾಮಕಾರಿಯಾಗಿ ರಾಜಕೀಯ, ಜನರ ಬದುಕು, ವರ್ತನೆ, ಮಾತುಗಳನ್ನು ಮೊನಚಾಗಿ ತಿವಿಯಬಲ್ಲುದು.

ಹಿರಿಯ ಪತ್ರಿಕಾ ಛಾಯಾಗ್ರಾಹಕ ವಿಶ್ವನಾಥ ಸುವರ್ಣ ತಮ್ಮ ಛಾಯಾಚಿತ್ರಗಳ ಮೂಲಕ ಬಹುರೂಪೀ ವಿದ್ಯಮಾನಗಳನ್ನು ದಾಖಲಿಸಿದ್ದಾರೆ. ವಿಧಾನಸಭಾ ಕಲಾಪ, ಪೊಲೀಸ್‌ ಗೋಲೀಬಾರ್‌, ವಾಹನಗಳಿಗೆ ಬೆಂಕಿ, ಜನರ ಅಭಿವ್ಯಕ್ತಿಗಳು – ಹೀಗೆ ಹತ್ತಾರು ಸಂದರ್ಭಗಳು ಅವರ ಕ್ಯಾಮರಾದಲ್ಲಿ ಸೆರೆಯಾಗಿದೆ. ಅವುಗಳ ಸುಂದರ ಕಂತು ಇಲ್ಲಿದೆ.

ಜುಲೈ 01ರ ಪತ್ರಿಕಾ ದಿನಕ್ಕಾಗಿ ವಿಶ್ವನಾಥ ಸುವರ್ಣ ಅವರು ಈ ಚಿತ್ರಗಳನ್ನು ಇಲ್ಲಿ ಒದಗಿಸಿದ್ದಾರೆ. ಸಮೀಪ ನೋಟಕ್ಕಾಗಿ ಚಿತ್ರಗಳನ್ನು ಕ್ಲಿಕ್‌ ಮಾಡಿರಿ.










-ನೆತ್ರಕೆರೆ ಉದಯಶಂಕರ
 ಹಿಂದಿನ ಸುವರ್ಣ ನೋಟಗಳಿಗಾಗಿ
                                                            ಇಲ್ಲಿ ಕ್ಲಿಕ್‌ ಮಾಡಿರಿ   👉👉👉

PARYAYA: ಕರ್ನಾಟಕದಲ್ಲಿ ಪತ್ರಿಕಾ ದಿನ: ಇತಿಹಾಸ ಗೊತ್ತಾ?:   ಕರ್ನಾಟಕದಲ್ಲಿ ಪತ್ರಿಕಾ ದಿ ನ : ಇತಿಹಾಸ ಗೊತ್ತಾ? ಇದು ಸುವರ್ಣ ನೋಟ ಪ್ರ ತಿ ವರ್ಷ ಜುಲೈ 1 ರಂದು ಕರ್ನಾಟಕದಲ್ಲಿ ' ಪತ್ರಿಕಾ ದಿನ ' ವನ್ನು ಆಚರಿಸಲಾಗು...

Tuesday, May 27, 2025

PARYAYA: ಕಟ್ಟಿಗೆ ಸೋಮೀ, ಕಟ್ಟಿಗೆ…!

 ಕಟ್ಟಿಗೆ ಸೋಮೀ, ಕಟ್ಟಿಗೆ…!

ಇದು ಸುವರ್ಣ ನೋಟ!

ವಿಯ ಕಣ್ಣಿಗೆ ಕಾಣದ್ದು ಕವಿಯ ಕಣ್ಣಿಗೆ ಕಾಣುತ್ತದಂತೆ. ಕವಿಯ ಕಣ್ಣಿಗೆ ಕಾಣದ್ದು?

ಛಾಯಾಗ್ರಾಹಕನ ಕಣ್ಣಿಗೆ ಕಾಣುತ್ತದೆ ನೋಡಿ.

ವಿಧಾನ ಸೌಧದ ಮುಂದೆ ಕಟ್ಟಿಗೆ ಸೋಮೀ ಕಟ್ಟಿಗೆ ಎನ್ನುತ್ತಾ ಕಟ್ಟಿಗೆ ಹೊರೆ ಹೊತ್ತುಕೊಂಡು ಹೋಗುವ  ದೃಶ್ಯ ಕಂಡದ್ದು ಹಿರಿಯ ಪತ್ರಿಕಾ ಛಾಯಾಗ್ರಾಹಕ ವಿಶ್ವನಾಥ ಸುವರ್ಣ ಅವರ ಅಂತರದೃಷ್ಟಿಗೆ. ತಕ್ಷಣ ಅದನ್ನು ಸೆರೆ ಹಿಡಿದದ್ದು ಅವರ ಕ್ಯಾಮರಾ ಕಣ್ಣು. 

ಚಿತ್ರಗಳ ಸಮೀಪ ನೋಟಕ್ಕೆ ಅವುಗಳನ್ನು ಕ್ಲಿಕ್‌ ಮಾಡಿರಿ.




ಕೆಳಗಿನವುಗಳನ್ನೂ ಓದಿರಿ: 
ನಾಗರ ʼಹೊಳೆʼಯಲ್ಲಿ ಹಿಮ-ಚಳಿ ಮೇಳ!

ಪಕ್ಷಿ ಕಂಡರೆ ಸಾಕು… ʼಶೂಟ್‌ʼ…! ಇದು ʼಸುವರ್ಣ ನೋಟʼ

೨೦೨೪ರ ಕೊನೆಯ ಸೂರ್ಯಾಸ್ತಮಾನ... ʼಸುವರ್ಣʼ ನೋಟ..!

ಹಿಂಗಾರು ಮಳೆಗೆ ತೊಯ್ದ ವಿಧಾನಸೌಧ.. ಸುವರ್ಣ ನೋಟ

ಈ ಹಕ್ಕಿ ಕೊಕ್ಕಿನ ಬಣ್ಣ ಬದಲಾಯಿಸುತ್ತದೆ..!

ಎಲ್ಲಿ ಮಾರಾಯರೇ ಈ ಆಟಇದು ಸುವರ್ಣ ನೋಟ

ಗಗನಗಾಮಿ ಕೃಷ್ಣಮೃಗ..! (ಇದು ಸುವರ್ಣ ನೋಟ)

ಶಕ್ತಿ ಸೌಧದ ಬಳಿ ʼಸುವರ್ಣ ಸೂರ್ಯ..!” ಇದು ಸುವರ್ಣ ನೋಟ

ಬದುಕಿನ ಹೋರಾಟ….!

ಬದ್ಧ ವೈರಿಗಳ ಅಪರೂಪದ ಮೈತ್ರಿ.!

ಡಾ. ರಾಜಕುಮಾರ್ ಆರೋಗ್ಯ ಸೂತ್ರ…!

ಕಥೆ ಹೇಳುವೆ… ನನ್ನ ಕಥೆ ಹೇಳುವೆ..!

ಸ್ನೇಕ್ ಬರ್ಡ್’ ಭೋಜನ ಚಮತ್ಕಾರ..!

PARYAYA: ಕಟ್ಟಿಗೆ ಸೋಮೀ, ಕಟ್ಟಿಗೆ…!:   ಕಟ್ಟಿಗೆ ಸೋಮೀ, ಕಟ್ಟಿಗೆ…! ಇದು ಸುವರ್ಣ ನೋಟ! ರ ವಿಯ ಕಣ್ಣಿಗೆ ಕಾಣದ್ದು ಕವಿಯ ಕಣ್ಣಿಗೆ ಕಾಣುತ್ತದಂತೆ. ಕವಿಯ ಕಣ್ಣಿಗೆ ಕಾಣದ್ದು? ಛಾಯಾಗ್ರಾಹಕನ ಕಣ್ಣಿಗೆ ಕಾಣು...

Monday, April 7, 2025

PARYAYA: ವಿಧಾನಸೌಧಕ್ಕೆ ವರ್ಣಾಲಂಕಾರ

 ವಿಧಾನಸೌಧಕ್ಕೆ ವರ್ಣಾಲಂಕಾರ

ಇದು ಸುವರ್ಣ ನೋಟ

ನ್ನಡ ರಾಜ್ಯೋತ್ಸವ, ಗಣರಾಜ್ಯೋತ್ಸವ, ಸ್ವಾತಂತ್ರ್ಯೋತ್ಸವ – ಹೀಗೆ ವಿಶೇಷ ಸಂದರ್ಭಗಳಲ್ಲಿ ವರ್ಣಾಲಂಕಾರದಿಂದ ಜಗಮಗಿಸುತ್ತಿದ್ದ ಕರ್ನಾಟಕದ ವಿಧಾನಸೌಧ ಇದೀಗ ನಿತ್ಯವೂ ವರ್ಣಾಲಂಕಾರದಿಂದ ಸಂಭ್ರಮಿಸುತ್ತಿದೆ.

ವಿಧಾನಸೌಧದ ನಿತ್ಯ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ೨೦೨೫ ಏಪ್ರಿಲ್‌ ೦೬ರ ಶ್ರೀರಾಮ ನವಮಿಯಂದು ಉದ್ಘಾಟಿಸಿದ್ದಾರೆ.

ಅಧಿಕಾರಿಗಳ ಪ್ರಕಾರ ವಿಧಾನಸೌಧ ಇನ್ನು ಮುಂದೆ ಪ್ರತಿದಿನವೂ ಬಣ್ಣ ಬಣ್ಣದ ವಿದ್ಯುತ್‌ ದೀಪಾಲಂಕಾರದೊಂದಿಗೆ ಜಗಮಗಿಸಲಿದೆ.

ವಿಧಾನಸೌಧ ಬಣ್ಣದ ದೀಪಗಳ ಬೆಳಕಿನಲ್ಲಿ ಕಣ್ಸೆಳೆದ ಚಿತ್ರಗಳನ್ನು ಹಿರಿಯ ಪತ್ರಿಕಾ ಛಾಯಾಗ್ರಾಹಕ ವಿಶ್ವನಾಥ ಸುವರ್ಣ ಅವರು ತಮ್ಮ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ.

ಆ ಚಿತ್ರಗಳು ಇಲ್ಲಿವೆ. ಜೊತೆಗೆ ಈ ಚಿತ್ರಗಳನ್ನಾಧರಿಸಿ ʼಪರ್ಯಾಯʼ ನಿರ್ಮಿಸಿದ ಒಂದು ವಿಡಿಯೋ ಕೂಡಾ ಇಲ್ಲಿದೆ.

ಚಿತ್ರಗಳ ಸಮೀಪ ನೋಟಕ್ಕೆ ಅವುಗಳನ್ನು ಕ್ಲಿಕ್‌ ಮಾಡಿ


ಶಕ್ತಿ ಸೌಧದ ಹೊಳಪು,

ಬಣ್ಣಗಳ ಚಿತ್ತಾರ!
ವಿಶೇಷ ದಿನದ ಸಂಭ್ರಮ,
ನಿತ್ಯವೂ ಬೆಳಗುವ ಸಿಂಗಾರ!
ಕತ್ತಲೆಗೆ ಬೆಳಕು,
ಮನಗಳಿಗೆ ಹರ್ಷ!
ನಾಡಿನ ಹೆಮ್ಮೆಯ ಪ್ರತೀಕ,
ಸದಾ ಬೆಳಗಲಿ ಈ ಸ್ಪರ್ಶ!

ಕಟ್ಟಿದರು ಕನಸನು ಹೊತ್ತು,
ನಾಡಿನ ಭವ್ಯತೆಯ ನೆಲೆ.
ಶಿಲ್ಪಿಗಳ ಕೈಚಳಕದ ಕಲೆ,
 
ಕಲ್ಲಿನಲಿ ಮೂಡಿದ ಬೆಲೆ.

ಸ್ವಾತಂತ್ರ್ಯದ ಉಸಿರು ಸೇರಿ,
ಪ್ರಜಾಪ್ರಭುತ್ವದ ಗುಡಿ.
ಕಾಲದ ಪುಟಗಳಲಿ ಮೆರೆದಿಹುದು,
ಕರುನಾಡಿನ ಕೀರ್ತಿ ನುಡಿ.

ಕನಸುಗಾರರ ದೃಷ್ಟಿಯ ಫಲ,
ಕೆಂಗಲ್ ಹನುಮಂತಯ್ಯನವರ ಶ್ರಮ.
ನಾಡಿನ ಆಡಳಿತದ ತಾಣವಿದು,
ಕನ್ನಡಿಗರ ಹೆಮ್ಮೆಯ ಧ್ವಜ ಸ್ತಂಭ.


ವಿಡಿಯೋ ನೋಡಲು ಯುಟ್ಯೂಬ್‌ ವಿಡಿಯೋ ಕೊಂಡಿ ಅಥವಾ ಅದರ ಕೆಳಗಿನ ಚಿತ್ರವನ್ನು ಕ್ಲಿಕ್‌ ಮಾಡಿ.

ಕೆಳಗಿನವುಗಳನ್ನೂ ಓದಿರಿ: 
ನಾಗರ ʼಹೊಳೆʼಯಲ್ಲಿ ಹಿಮ-ಚಳಿ ಮೇಳ!
ಪಕ್ಷಿ ಕಂಡರೆ ಸಾಕು… ʼಶೂಟ್‌ʼ…! ಇದು ʼಸುವರ್ಣ ನೋಟʼ
೨೦೨೪ರ ಕೊನೆಯ ಸೂರ್ಯಾಸ್ತಮಾನ... ʼಸುವರ್ಣʼ ನೋಟ..!
ಹಿಂಗಾರು ಮಳೆಗೆ ತೊಯ್ದ ವಿಧಾನಸೌಧ.. ಸುವರ್ಣ ನೋಟ
ಈ ಹಕ್ಕಿ ಕೊಕ್ಕಿನ ಬಣ್ಣ ಬದಲಾಯಿಸುತ್ತದೆ..!
ಎಲ್ಲಿ ಮಾರಾಯರೇ ಈ ಆಟ? ಇದು ಸುವರ್ಣ ನೋಟ
ಗಗನಗಾಮಿ ಕೃಷ್ಣಮೃಗ..! (ಇದು ಸುವರ್ಣ ನೋಟ)
ಶಕ್ತಿ ಸೌಧದ ಬಳಿ ʼಸುವರ್ಣ ಸೂರ್ಯ..!” ಇದು ಸುವರ್ಣ ನೋಟ
ಬದುಕಿನ ಹೋರಾಟ….!
ಬದ್ಧ ವೈರಿಗಳ ಅಪರೂಪದ ಮೈತ್ರಿ.!
ಡಾ. ರಾಜಕುಮಾರ್ ಆರೋಗ್ಯ ಸೂತ್ರ…!
ಕಥೆ ಹೇಳುವೆ… ನನ್ನ ಕಥೆ ಹೇಳುವೆ..!
‘ಸ್ನೇಕ್ ಬರ್ಡ್’ ಭೋಜನ ಚಮತ್ಕಾರ..!

ಬೆಂಗಳೂರಿನ ಭೂ ಮಾಫಿಯಾ- ಭ್ರಷ್ಟಾಚಾರದ ಚಕ್ರವ್ಯೂಹ

(ಮೇಲಿನ ಚಿತ್ರ ಕ್ಲಿಕ್‌ ಮಾಡಿ ನೋಡಿ. ಕೇವಲ ಅರ್ಧ ಬೆಲೆ ಪಾವತಿಸಿ ಈ👆 ಡಿಜಿಟಲ್‌ ಪುಸ್ತಕ ಪಡೆಯಿರಿ. ಸಂಪರ್ಕಿಸಿ: 9480215706/ 9845049970)

PARYAYA: ವಿಧಾನಸೌಧಕ್ಕೆ ವರ್ಣಾಲಂಕಾರ:   ವಿಧಾನಸೌಧಕ್ಕೆ ವರ್ಣಾಲಂಕಾರ ಇದು ಸುವರ್ಣ ನೋಟ ಕ ನ್ನಡ ರಾಜ್ಯೋತ್ಸವ, ಗಣರಾಜ್ಯೋತ್ಸವ, ಸ್ವಾತಂತ್ರ್ಯೋತ್ಸವ – ಹೀಗೆ ವಿಶೇಷ ಸಂದರ್ಭಗಳಲ್ಲಿ ವರ್ಣಾಲಂಕಾರದಿಂದ ಜಗಮಗಿಸ...

Wednesday, October 23, 2024

PARYAYA: ಹಿಂಗಾರು ಮಳೆಗೆ ತೊಯ್ದ ವಿಧಾನಸೌಧ.. ಸುವರ್ಣ ನೋಟ

 ಹಿಂಗಾರು ಮಳೆಗೆ ತೊಯ್ದ ವಿಧಾನಸೌಧ..

ಇದು ಸುವರ್ಣ ನೋಟ!

ವಿಡಿಯೋ ನೋಡಲು ಮೇಲಿನ ಚಿತ್ರ ಕ್ಲಿಕ್‌ ಮಾಡಿರಿ.

ಹಿರಿಯ ಪತ್ರಿಕಾ ಛಾಯಾಗ್ರಾಹಕ ವಿಶ್ವನಾಥ ಸುವರ್ಣ ಅವರು ಸೆರೆ ಹಿಡಿದಿರುವ ಚಿತ್ರಗಳ ಸಮೀಪ ನೋಟಕ್ಕೆ ಕೆಳಗಿನ ಚಿತ್ರಗಳನ್ನು ಕ್ಲಿಕ್‌ ಮಾಡಿರಿ:








ಇವುಗಳನ್ನೂ ಓದಿರಿ:

ಈ ಹಕ್ಕಿ ಕೊಕ್ಕಿನ ಬಣ್ಣ ಬದಲಾಯಿಸುತ್ತದೆ..!

ಎಲ್ಲಿ ಮಾರಾಯರೇ ಈ ಆಟ? ಇದು ಸುವರ್ಣ ನೋಟ

PARYAYA: ಹಿಂಗಾರು ಮಳೆಗೆ ತೊಯ್ದ ವಿಧಾನಸೌಧ.. ಸುವರ್ಣ ನೋಟ:  ಹಿಂಗಾರು ಮಳೆಗೆ ತೊಯ್ದ ವಿಧಾನಸೌಧ.. ಇದು ಸುವರ್ಣ ನೋಟ! ವಿಡಿಯೋ ನೋಡಲು ಮೇಲಿನ ಚಿತ್ರ ಕ್ಲಿಕ್‌ ಮಾಡಿರಿ. ಇವುಗಳನ್ನೂ ಓದಿರಿ: ಈ ಹಕ್ಕಿ ಕೊಕ್ಕಿನ ಬಣ್ಣ ಬದಲಾಯಿಸುತ್ತದೆ...