Showing posts with label ಶ್ರೀ ಬಾಲಾಜಿ. Show all posts
Showing posts with label ಶ್ರೀ ಬಾಲಾಜಿ. Show all posts

Tuesday, August 25, 2026

PARYAYA: ಪತಂಜಲಿ ಯೋಗ ತರಗತಿ ಆರಂಭ

 ಪತಂಜಲಿ ಯೋಗ ತರಗತಿ ಆರಂಭ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ., ಅಭಯ ಆಂಜನೇಯ ಸ್ವಾಮಿ ದೇವಸ್ಥಾನದ ಚಟುವಟಿಕೆಗಳಿಗೆ, 2026 ಆಗಸ್ಟ್‌ 24ರ ಸೋಮವಾರ ಯೋಗ ತರಗತಿಗಳ ಆರಂಭದೊಂದಿಗೆ ಹೊಸ ಮಜಲು ಸೇರ್ಪಡೆಯಾಯಿತು.

ಆಗಸ್ಟ್‌ 24ರಂದು ಪತಂಜಲಿ ಯೋಗ ಸಮಿತಿಯು ದೇವಸ್ಥಾನದ ಆವರಣದಲ್ಲಿ  ಉಚಿತ ಯೋಗ ತರಗತಿಗಳನ್ನು ಆರಂಭಿಸಿತು.

ಪತಂಜಲಿ ಯೋಗ ಸಮಿತಿಯು ಬೆಂಗಳೂರಿನ ಉತ್ತರ ಭಾಗದಲ್ಲಿ ಸುಮಾರು ಇಪ್ಪತ್ತು ವರ್ಷಗಳ ಹಿಂದೆ ಉಚಿತ ಯೋಗ ತರಗತಿಗಳನ್ನು ಆರಂಭಿಸಿತ್ತು. ಪ್ರಸ್ತುತ ಸಮಿತಿಯು ಈ ಭಾಗದಲ್ಲಿ ಸುಮಾರು 30 ಉಚಿತ ಯೋಗ ತರಗತಿಗಳನ್ನು ನಡೆಸುತ್ತಿದೆ.

ಶ್ರೀ ಬಾಲಾಜಿ ಮಹಾಗಣಪತಿ ದೇವಸ್ಥಾನ ಸೇವಾ ಸಮಿತಿಯು ನಡೆಸುತ್ತಿರುವ ಈ ದೇವಸ್ಥಾನದಲ್ಲಿ ಭಾನುವಾರ ನಡೆದ ಯೋಗ ತರಗತಿ ಆರಂಭ ಕಾರ್ಯಕ್ರಮದಲ್ಲಿ ಯೋಗ ಸಮಿತಿಯ ಸುಧಾಮ, ಆನಂದ್‌ ಮತ್ತಿತರರು ಯೋಗದ ಬಗ್ಗೆ ವಿವರಗಳನ್ನು ನೀಡಿದರು.

ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿಗೆ ಪೂಜೆ ನೆರವೇರಿಸುವ ಮೂಲಕ ಯೋಗ ತರಗತಿಯ ಶುಭಾರಂಭವನ್ನು ಮಾಡಲಾಯಿತು.

ದೇವಸ್ಥಾನ ಸೇವಾ ಸಮಿತಿ ಟ್ರಸ್ಟಿನ ಅಧ್ಯಕ್ಷ ಚೌಡರೆಡ್ಡಿ, ಟ್ರಸ್ಟಿಗಳಾದ ಸುಗುಣನ್‌, ನೆತ್ರಕೆರೆ ಉದಯಶಂಕರ, ಯೋಗಸಮಿತಿಯ ತರಬೇತಿದಾರರಾದ ಉಮಾ ಜಯಶಂಕರ್‌ ಮತ್ತಿತರರೂ ಈ ಸಂದರ್ಭದಲ್ಲಿ ಹಾಜರಿದ್ದರು.ಯೋಗ ತರಗತಿ ಆರಂಭ ಸಂದರ್ಭದ ಕೆಲವು ಚಿತ್ರಗಳು ಹಾಗೂ ವಿಡಿಯೋ ಇಲ್ಲಿದೆ. ಸಮೀಪ ನೋಟಕ್ಕೆ ಚಿತ್ರಗಳನ್ನು ಕ್ಲಿಕ್‌ ಮಾಡಿ.

ದೇವಸ್ಥಾನದ ಆವರಣದಲ್ಲಿ ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿದಿನವೂ ಸಂಜೆ 5.30ರಿಂದ 6.30ರವರೆಗೆ ಉಚಿತ ಯೋಗ ತರಗತಿಗಳು ನಡೆಯಲಿವೆ.

ದೇವಸ್ಥಾನದ ಆವರಣದಲ್ಲಿ ಈಗಾಗಲೇ ಯಕ್ಷ ಕಲಾ ಕೌಸ್ತುಭ, ಬೆಂಗಳೂರು ತಂಡದ ವತಿಯಿಂದ ಯಕ್ಷಗುರು ಉಮೇಶರಾಜ್‌ ಮಂದಾರ್ತಿ ಅವರ ನೇತೃತ್ವದಲ್ಲಿ ಯಕ್ಷಗಾನ ತರಗತಿಗಳು ನಡೆಯುತ್ತಿವೆ.

Friday, August 21, 2026

PARYAYA: ವರ ಮಹಾಲಕ್ಷ್ಮಿ ಪೂಜಾ

 ವರ ಮಹಾಲಕ್ಷ್ಮಿ ಪೂಜಾ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೬ ಆಗಸ್ಟ್‌ ೨೧ ಶುಕ್ರವಾರ ಶ್ರೀ ವರ ಮಹಾಲಕ್ಷ್ಮಿ ಪೂಜೆಯನ್ನು ಶ್ರದ್ಧಾ ಭಕ್ತಿಯೊಂದಿಗೆ ನೆರವೇರಿಸಲಾಯಿತು.

ವರಲಕ್ಷ್ಮಿ ವ್ರತದ ಮಹತ್ವವನ್ನು ಅರುಹುವ ಕಥಾ ಶ್ರವಣ, ವರ ಮಹಾಲಕ್ಷ್ಮಿಗೆ ಮಹಿಳೆಯರಿಂದ ಕುಂಕುಮಾರ್ಚನೆ, ಸಂಗೀತ ಸೇವೆ  ನಡೆಯಿತು. ಶ್ರೀ ಮುನಿರಾಜು, ಶ್ರೀ ಕೃಷ್ಣೋಜಿರಾವ್‌, ಶ್ರೀ ಕಾರಿಯಪ್ಪ ಕುಟುಂಬದವರು ಅಲಂಕಾರ, ತಾಂಬೂಲ, ಪ್ರಸಾದದ ವ್ಯವಸ್ಥೆ ಮಾಡಿದ್ದರು.

ಈ ಸಂದರ್ಭದ ಕೆಲವು ಚಿತ್ರಗಳು ಹಾಗೂ ವಿಡಿಯೋ ಇಲ್ಲಿದೆ.

PARYAYA: ವರ ಮಹಾಲಕ್ಷ್ಮಿ ಪೂಜಾ:   ವರ ಮಹಾಲಕ್ಷ್ಮಿ ಪೂಜಾ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲ...

Thursday, March 19, 2026

PARYAYA: ಯುಗಾದಿ ಉತ್ಸವ ಆಚರಣೆ

 ಯುಗಾದಿ ಉತ್ಸವ ಆಚರಣೆ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ ಸೇವಾ ಸಮಿತಿಯ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಾಲಯದಲ್ಲಿ ೨೦೨೬ ಮಾರ್ಚ್‌ ೧೯ರ ಗುರುವಾರ ಪರಾಭವ ಸಂವತ್ಸರದ ಯುಗಾದಿ ಉತ್ಸವವನ್ನು ಸಡಗರದೊಂದಿಗೆ ಆಚರಿಸಲಾಯಿತು.

ಹೊಸ ವರ್ಷದ ಸಲುವಾಗಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ಹಾಗೂ ಸಪರಿವಾರ ದೇವರನ್ನು ವಿಶೇಷವಾಗಿ ಹೂ ಹಾರಗಳಿಂದ ಅಲಂಕರಿಸಲಾಗಿತ್ತು.

ಪುಷ್ಪಾಲಂಕಾರ ಸೇವೆಯನ್ನು ಶ್ರೀ ಮುನಿರಾಜು ಮತ್ತು ಕುಟುಂಬ, ವಸ್ತ್ರ ಸೇವೆಯನ್ನು ಶ್ರೀ ನಾರಾಯಣ ಸ್ವಾಮಿ ಮತ್ತು ಕುಟುಂಬದವರು ಕೈಗೊಂಡಿದ್ದರು. ದೇವಾಲಯದ ಅರ್ಚಕ ಶ್ರೀ ನಾಗೇಂದ್ರ ಭಟ್‌ ಅವರು ಪಂಚಾಂಗದ ಫಲಾಫಲಗಳನ್ನು ವಿವರಿಸಿ, ಬಳಿಕ ಪೂಜಾ ಕೈಂಕರ್ಯ ನೆರವೇರಿಸಿದರು.

ಭಕ್ತರಿಂದ ಭಜನಾ ಸೇವೆ ನಡೆಯಿತು. ಬೇವು-ಬೆಲ್ಲ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.

ಈ ಸಂದರ್ಭದ ವಿಡಿಯೋ, ಕೆಲವು ಚಿತ್ರಗಳು ಇಲ್ಲಿವೆ. ವಿಡಿಯೋ ನೋಡಲು ಕೆಳಗಿನ ಚಿತ್ರ ಕ್ಲಿಕ್‌ ಮಾಡಿರಿ.

PARYAYA: ಯುಗಾದಿ ಉತ್ಸವ ಆಚರಣೆ:   ಯುಗಾದಿ ಉತ್ಸವ ಆಚರಣೆ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ ಸೇವಾ ಸಮಿತಿಯ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇ...

Monday, November 17, 2025

PARYAYA: ಕಾರ್ತೀಕ ದೀಪೋತ್ಸವ

 ಕಾರ್ತೀಕ ದೀಪೋತ್ಸವ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಕಾರ್ತೀಕ ಮಾಸದ ಕೊನೆಯ ಸೋಮವಾರ (೨೦೨೫ ನವೆಂಬರ್‌ ೧೭) ಕಾರ್ತೀಕ ದೀಪೋತ್ಸವವನ್ನು ಸಂಭ್ರಮದೊಂದಿಗೆ ನೆರವೇರಿಸಲಾಯಿತು.

ಈ ಸಂದರ್ಭದ ಕೆಲವು ಚಿತ್ರಗಳು ಹಾಗೂ ವಿಡಿಯೋ ಇಲ್ಲಿದೆ.


PARYAYA: ಕಾರ್ತೀಕ ದೀಪೋತ್ಸವ:   ಕಾರ್ತೀಕ ದೀಪೋತ್ಸವ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಕ...

Saturday, November 8, 2025

PARYAYA: ಕಾರ್ತೀಕ ಮಾಸದ ಸಂಕಷ್ಟಿ ಪೂಜಾ

 ಕಾರ್ತೀಕ ಮಾಸದ ಸಂಕಷ್ಟಿ ಪೂಜಾ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೫ ನವೆಂಬರ್‌ ೦೮ರ ಶನಿವಾರ ಕಾರ್ತೀಕ ಮಾಸದ ಸಂಕಷ್ಟಿ ಪೂಜೆಯನ್ನು ಶ್ರದ್ಧಾ ಭಕ್ತಿಗಳೊಂದಿಗೆ ನೆರವೇರಿಸಲಾಯಿತು.

ಈ ಸಂದರ್ಭದ ಕೆಲವು ಚಿತ್ರ ಹಾಗೂ ವಿಡಿಯೋಗಳು ಇಲ್ಲಿವೆ.








PARYAYA: ಕಾರ್ತೀಕ ಮಾಸದ ಸಂಕಷ್ಟಿ ಪೂಜಾ:   ಕಾರ್ತೀಕ ಮಾಸದ ಸಂಕಷ್ಟಿ ಪೂಜಾ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್...

Saturday, August 9, 2025

PARYAYA: ಶ್ರೀ ವರ ಮಹಾಲಕ್ಷ್ಮಿ, ಸತ್ಯನಾರಾಯಣ ಪೂಜಾ

 ಶ್ರೀ ವರ ಮಹಾಲಕ್ಷ್ಮಿ, ಸತ್ಯನಾರಾಯಣ ಪೂಜಾ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೫ ಆಗಸ್ಟ್‌ ೦೮ರ ಶುಕ್ರವಾರ ಶ್ರೀ ವರ ಮಹಾಲಕ್ಷ್ಮಿ, ಸತ್ಯನಾರಾಯಣ ಪೂಜೆಯನ್ನು ಶ್ರದ್ಧಾ ಭಕ್ತಿಗಳೊಂದಿಗೆ ನೆರವೇರಿಸಲಾಯಿತು.

ಪ್ರತಿ ತಿಂಗಳ ಪೌರ್ಣಮಿಯಂದು ನೆರವೇರಿಸಲಾಗುವ ಶ್ರೀ ಸತ್ಯನಾರಾಯಣ ಪೂಜೆಯ ದಿನವಾದ ಶುಕ್ರವಾರವೇ ವರ ಲಕ್ಷ್ಮೀ ವ್ರತವೂ ಬಂದದ್ದರಿಂದ ದೇವಸ್ಥಾನದಲ್ಲಿ ವರಲಕ್ಷ್ಮೀ ಪೂಜೆಯನ್ನೂ ಸತ್ಯನಾರಾಯಣ ಪೂಜೆಯ ಜೊತೆಗೇ ನೆರವೇರಿಸಿದ್ದ ಭಕ್ತರ ಉತ್ಸಾಹವನ್ನು ಇಮ್ಮಡಿಸಿತ್ತು.

ಈ ಸಂದರ್ಭದ ವಿಡಿಯೋ, ಚಿತ್ರಗಳು ಇಲ್ಲಿವೆ.

ವಿಡಿಯೋ ನೋಡಲು ಕೆಳಗಿನ ಚಿತ್ರವನ್ನು ಕ್ಲಿಕ್‌ ಮಾಡಿರಿ ಅಥವಾ ಯೂ ಟ್ಯೂಬ್‌ ವಿಡಿಯೋ ಲಿಂಕ್‌ ಕ್ಲಿಕ್‌ ಮಾಡಿರಿ.

ದೇವಸ್ಥಾನಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳಿಗಾಗಿ ಕೆಳಗಿನ ಚಿತ್ರವನ್ನು ಕ್ಲಿಕ್‌ ಮಾಡಿರಿ. 


PARYAYA: ಶ್ರೀ ವರ ಮಹಾಲಕ್ಷ್ಮಿ, ಸತ್ಯನಾರಾಯಣ ಪೂಜಾ:   ಶ್ರೀ ವರ ಮಹಾಲಕ್ಷ್ಮಿ, ಸತ್ಯನಾರಾಯಣ ಪೂಜಾ ಬೆಂ ಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್...