Showing posts with label ಸ್ವಾತಂತ್ರ್ಯೋತ್ಸವ. Show all posts
Showing posts with label ಸ್ವಾತಂತ್ರ್ಯೋತ್ಸವ. Show all posts

Monday, August 17, 2026

PARYAYA: ಫ್ರೀಡಂ ಹಬ್ಬ: ಇದು ʼಸುವರ್ಣ ನೋಟʼ

 ಫ್ರೀಡಂ ಹಬ್ಬ: ಇದು ʼಸುವರ್ಣ ನೋಟʼ

೨೦೨೬ರ ಆಗಸ್ಟ್‌ ೧೫ರಂದು ನಡೆದ ೮೦ನೇ ಸ್ವಾತಂತ್ರ್ಯೋತ್ಸವವನ್ನು ವಿಧಾನ ಸೌಧದ ಮುಂಭಾಗದಲ್ಲಿ ʼಫ್ರೀಡಂ ಹಬ್ಬʼ ಆಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕಣ್ಮನ ಸೆಳೆದ ದೃಶ್ಯಗಳನ್ನು ಹಿರಿಯ ಪತ್ರಿಕಾ ಛಾಯಾಗ್ರಾಹಕ ವಿಶ್ವನಾಥ ಸುವರ್ಣ ಅವರು ಸೆರೆ ಹಿಡಿದದ್ದು ಹೀಗೆ.

ವಿಡಿಯೋ ನೋಡಿ.

ಯೂಟ್ಯೂಬ್‌ ವಿಡಿಯೋ ನೋಡಲು ಕೆಳಗಿನ ಚಿತ್ರ ಕ್ಲಿಕ್‌ ಮಾಡಿ.



PARYAYA: ಫ್ರೀಡಂ ಹಬ್ಬ: ಇದು ʼಸುವರ್ಣ ನೋಟʼ:   ಫ್ರೀಡಂ ಹಬ್ಬ: ಇದು ʼ ಸುವರ್ಣ ನೋಟ ʼ ೨೦೨೬ ರ ಆಗಸ್ಟ್‌ ೧೫ರಂದು ನಡೆದ ೮೦ನೇ ಸ್ವಾತಂತ್ರ್ಯೋತ್ಸವವನ್ನು ವಿಧಾನ ಸೌಧದ ಮುಂಭಾಗದಲ್ಲಿ ʼ ಫ್ರೀಡಂ ಹಬ್ಬ ʼ ಆಗಿ ಆಚರಿಸಲಾಯ...

Saturday, August 15, 2026

PARYAYA: ಸ್ವಾತಂತ್ರ್ಯೋತ್ಸವ ಸಡಗರ ೨೦೨೬

 ಸ್ವಾತಂತ್ರ್ಯೋತ್ಸವ ಸಡಗರ ೨೦೨೬

ದೇಶದ ಇತರೆಡೆಗಳಂತೆ ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯಲ್ಲಿಯೂ ೨೦೨೬ ಆಗಸ್ಟ್‌ ೧೬ರ ಶನಿವಾರ ಭಾರತದ ೮೦ನೇ ಸ್ವಾತಂತ್ರ್ಯೋತ್ಸವವನ್ನು ಸಡಗರದೊಂದಿಗೆ ಆಚರಿಸಲಾಯಿತು.

ನಿವೃತ್ತ ಯೋಧ, ಬಡಾವಣೆಯ ನಿವಾಸಿ ಕೆ. ಥೋಮಸ್‌ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ತ್ರಿವರ್ಣ ಧ್ವಜವನ್ನು ಅರಳಿಸಿದರು. ಈ ಸಂದರ್ಭದಲ್ಲಿ ಶ್ರೀ ಥೋಮಸ್‌ ಮತ್ತು ಅವರ ಪತ್ನಿಯನ್ನು ಸನ್ಮಾನಿಸಲಾಯಿತು.

ಬಡಾವಣೆಯ ಹಿರಿಯ ಸದಸ್ಯ, ಶ್ರೀ ಬಾಲಾಜಿ ಮಹಾಗಣಪತಿ ದೇವಸ್ಥಾನ ಸೇವಾ ಸಮಿತಿಯ ಅಧ್ಯಕ್ಷ ಶ್ರೀ ಚೌಡರೆಡ್ಡಿ ಮತ್ತು ಶ್ರೀ ಬಾಲಾಜಿ ಕೃಪಾ ನಿವಾಸಿಗಳ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಶ್ರೀ ರಾಜೇಶ ಹೆಗಡೆ ಅವರು ಮಹಾತ್ಮ ಗಾಂಧಿ ಮತ್ತು ಡಾ. ಅಂಬೇಡ್ಕರ್‌ ಭಾವಚಿತ್ರಗಳಿಗೆ ಪುಷ್ಟಾರ್ಚನೆ ಮಾಡಿದರು.

ಬಡಾವಣೆಯ ಹಿರಿಯ ನಿವಾಸಿ ಶ್ರೀ ಶಿವಪ್ಪ ಶಾಂತಪ್ಪನವರ ಸ್ವಾತಂತ್ರ್ಯದ ಮಹತ್ವ ಕುರಿತು ಮಾತನಾಡಿದರು. ಶ್ರೀ ರಾಜೇಶ ಹೆಗಡೆ ಅಧ್ಯಕ್ಷ ಭಾಷಣ ಮಾಡಿದರು. ಶ್ರೀ ನೆತ್ರಕೆರೆ ಉದಯಶಂಕರ ಕಾರ್ಯಕ್ರಮ ನಿರ್ವಹಿಸಿದರು.

ಬಡಾವಣೆಯ ಹಿರಿಯ ಸದಸ್ಯ ವಕೀಲ ಮುನಿರಾಜು ಅವರು ಉಪಾಹಾರದ ವ್ಯವಸ್ಥೆ ಮಾಡಿದ್ದರು. ಶ್ರೀ ಎಚ್.ವಿ. ಉದಯಶಂಕರ್‌, ಶ್ರೀ ರಾಘವೇಂದ್ರ ಕಾಮತ್‌, ಹಂಪಣ್ಣ, ರಶ್ಮಿ, ಸ್ವಾತಿ ಮತ್ತಿತರರು ಕಾರ್ಯಕ್ರಮ ಸಂಘಟಿಸುವಲ್ಲಿ ನೆರವಾಗಿದ್ದರು. ಬಡಾವಣೆಯ ಮತ್ತು ಆಸುಪಾಸಿನ ಪ್ರದೇಶಗಳ ನಿವಾಸಿಗಳು ಕಾರ್ಯಕ್ರಮದಲ್ಲಿ ಸಡಗರದೊಂದಿಗೆ ಪಾಲ್ಗೊಂಡರು. 
ಈ ಸಂದರ್ಭದ ವಿಡಿಯೋ ನೋಡಲು ಕೆಳಗೆ ಕ್ಲಿಕ್‌ ಮಾಡಿ.


PARYAYA: ಸ್ವಾತಂತ್ರ್ಯೋತ್ಸವ ಸಡಗರ ೨೦೨೬:   ಸ್ವಾತಂತ್ರ್ಯೋತ್ಸವ ಸಡಗರ ೨೦೨೬ ದೇ ಶದ ಇತರೆಡೆಗಳಂತೆ ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯಲ್ಲಿಯೂ ೨೦೨೬ ಆಗಸ್ಟ್‌ ೧೬ರ ಶನಿವಾರ ಭಾರತದ ೮೦ನ...

Tuesday, August 15, 2023

PARYAYA: ಶ್ರೀ ಬಾಲಾಜಿ ಕೃಪಾ ಬಡಾವಣೆಯಲ್ಲಿ ಸ್ವಾತಂತ್ರ್ಯೋತ್ಸವ

ಶ್ರೀ ಬಾಲಾಜಿ ಕೃಪಾ ಬಡಾವಣೆಯಲ್ಲಿ ಸ್ವಾತಂತ್ರ್ಯೋತ್ಸವ

ಬೆಂಗಳೂರುಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯಲ್ಲಿ ೨೦೨೩ ಆಗಸ್ಟ್‌ ೧೫ರ ಮಂಗಳವಾರ ಬಡಾವಣೆಯ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ೭೭ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. 

ಮುಖ್ಯ ಅತಿಥಿಯಾಗಿದ್ದ ನಿವೃತ್ತ ಸೇನಾ ಅಧಿಕಾರಿ ಥಾಮಸ್‌ ದೇವಸ್ಸಿ ಅವರು ಧ್ವಜಾರೋಹಣವನ್ನು ನೆರವೇರಿಸಿದರು. ಹಿರಿಯ ನ್ಯಾಯವಾದಿ ವಿ. ಮುನಿರಾಜು ಅವರು ಅತಿಥಿಯಾಗಿದ್ದರು.

ಸಮಾರಂಭದಲ್ಲಿ ಪಿಯುಸಿ ಮತ್ತು ಎಸ್‌ಎಸ್‌ಎಸ್‌ಯಲ್ಲಿ ಉನ್ನತ ಅಂಕಗಳನ್ನು ಗಳಿಸಿದ ಬಡಾವಣೆಯ ಮಕ್ಕಳಿಗೆ ಸನ್ಮಾನ ಮಾಡಲಾಯಿತು. ಗೌರವಕ್ಕೆ ಅರ್ಹರಾದ ರೋಷನ್‌ ಅವರು ೫೮೮ ಅಂಕಗಳೊಂದಿಗೆ ಉನ್ನತ ಸಾಧನೆ ಮಾಡಿದ್ದರೆ, ಪಿಯುಸಿಯಲ್ಲಿ ೫೪೬ ಅಂಕಗಳನ್ನು ಪಡೆದ ರಕ್ಷಿತಾ ಆರ್.‌ ಚಿತ್ರಗಾರ ಅವರು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದು ಬಡಾವಣೆಗೆ ಕೀರ್ತಿಯನ್ನು ತಂದಿದ್ದಾರೆ.

ಸಮಾರಂಭದ ಕೆಲವು ನೋಟಗಳ ವಿಡಿಯೋಗಳು ಇಲ್ಲಿವೆ:

ಮುಖ್ಯ ಅತಿಥಿ ಥಾಮಸ್‌ ದೇವಸ್ಸಿ ಅವರ ಭಾಷಣ:

ಸಂಘದ ಅಧ್ಯಕ್ಷ ರಾಜೇಶ ಕೆ. ಹೆಗಡೆ ಅವರಿಂದ ಅಧ್ಯಕ್ಷೀಯ ಭಾಷಣ:

ಸಮಾರಂಭದ ಸಂದರ್ಭದಲ್ಲಿ ಬಡಾವಣೆಯ ಹಿರಿಯ ಸದಸ್ಯ, ನ್ಯಾಯವಾದಿ ವಿ. ಮುನಿರಾಜು ಅವರು ಲಘು ಉಪಾಹಾರದ ವ್ಯವಸ್ಥೆ ಮಾಡಿದ್ದರು.

ಹೆಚ್ಚಿನ ಅಂಕಗಳೊಂದಿಗೆ ಗೌರವಕ್ಕೆ ಪಾತ್ರರಾದ ರೋಷನ್‌ ಮತ್ತು ರಕ್ಷಿತಾ ಆರ್‌ ಚಿತ್ರಗಾರ:


PARYAYA: ಶ್ರೀ ಬಾಲಾಜಿ ಕೃಪಾ ಬಡಾವಣೆಯಲ್ಲಿ ಸ್ವಾತಂತ್ರ್ಯೋತ್ಸವ: ಶ್ರೀ ಬಾಲಾಜಿ ಕೃಪಾ ಬಡಾವಣೆಯಲ್ಲಿ ಸ್ವಾತಂತ್ರ್ಯೋತ್ಸವ ಬೆಂಗಳೂರು : ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯಲ್ಲಿ ೨೦೨೩ ಆಗಸ್ಟ್‌ ೧೫ರ ಮಂಗಳವಾರ ...