Showing posts with label ಹಳದಿ ಮಾರ್ಗ. Show all posts
Showing posts with label ಹಳದಿ ಮಾರ್ಗ. Show all posts

Wednesday, August 13, 2025

PARYAYA: ಬೆಂಗಳೂರು ಮೆಟ್ರೋದ ಅದ್ಭುತ ವಿಡಿಯೋ !

 ಬೆಂಗಳೂರು ಮೆಟ್ರೋದ ಅದ್ಭುತ ವಿಡಿಯೋ !

ಬೆಂಗಳೂರು ಮೆಟ್ರೋದ ಹಳದಿ ಮತ್ತು ಹಸಿರು ಮಾರ್ಗಗಳು ಒಂದನ್ನೊಂದು ದಾಟಿ ಸಾಗುತ್ತಿರುವ ಅದ್ಭುತ ಡ್ರೋನ್ ವಿಡಿಯೋ ಇಂಟರ್ನೆಟ್‌ನಲ್ಲಿ ಸಂಚಲನ ಮೂಡಿಸಿದೆ! ಒಂದೇ ಫ್ರೇಮ್‌ನಲ್ಲಿ ನಾಲ್ಕು ಮೆಟ್ರೋ ರೈಲುಗಳು ಏಕಕಾಲದಲ್ಲಿ ಚಲಿಸುತ್ತಿರುವ ಅಪರೂಪದ ದೃಶ್ಯವನ್ನು ಈ ವಿಡಿಯೋ ಸೆರೆಹಿಡಿದಿದೆ.

ಆರ್‌ವಿ ರಸ್ತೆ ಇಂಟರ್‌ಚೇಂಜ್ ಬಳಿ ಸೆರೆಹಿಡಿಯಲಾದ ಈ ವಿಡಿಯೋನಗರವಾಸಿಗಳು ಮತ್ತು ಮೆಟ್ರೋ ಪ್ರಯಾಣಿಕರ ಪ್ರಶಂಸೆಗೆ ಪಾತ್ರವಾಗಿದೆ. ಬೆಂಗಳೂರು ಮೂಲದ ವಿಷಯ ರಚನೆಕಾರ ಶ್ರೀಹರಿ ಕಾರಂತ್ ಅವರು ತಮ್ಮ X (ಹಿಂದೆ ಟ್ವಿಟರ್) ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ನಗರದ ರಮಣೀಯ ದೃಶ್ಯಗಳನ್ನು ಸೆರೆಹಿಡಿಯುವುದರಲ್ಲಿ ಹೆಸರುವಾಸಿಯಾಗಿರುವ ಶ್ರೀಹರಿ, "ಈ ಪರಿಪೂರ್ಣ ಶಾಟ್‌ಗಾಗಿ ಬಹಳ ಸಮಯ ಕಾಯುತ್ತಿದ್ದೆ – ಹಳದಿ ಮತ್ತು ಹಸಿರು ಮಾರ್ಗಗಳು ಒಂದೇ ಫ್ರೇಮ್‌ನಲ್ಲಿ!" ಎಂದು ಶೀರ್ಷಿಕೆಯಲ್ಲಿ ಬರೆದಿದ್ದಾರೆ.

ಕೆಳಗೆ ಕ್ಲಿಕ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವ ಈ ದೃಶ್ಯ ವೈಭವವನ್ನು ನೀವೂ ಕಣ್ತುಂಬಿಕೊಳ್ಳಿ ಅಥವಾ ಶ್ರೀ ಹರಿ ಕಾರಂತ್‌ ಅವರ ಈ ಎಕ್ಸ್‌ ಲಿಂಕ್‌ ಕ್ಲಿಕ್‌ ಮಾಡಿರಿ


ಇನ್ನಷ್ಟು ಸುದ್ದಿಗಳಿಗೆ ಕೆಳಗಿನ ಚಿತ್ರ ಕ್ಲಿಕ್‌ ಮಾಡಿರಿ.
PARYAYA: ಬೆಂಗಳೂರು ಮೆಟ್ರೋದ ಅದ್ಭುತ ವಿಡಿಯೋ !:   ಬೆಂಗಳೂರು ಮೆಟ್ರೋದ ಅದ್ಭುತ ವಿಡಿಯೋ ! ಬೆಂ ಗಳೂರು ಮೆಟ್ರೋದ ಹಳದಿ ಮತ್ತು ಹಸಿರು ಮಾರ್ಗಗಳು ಒಂದನ್ನೊಂದು ದಾಟಿ ಸಾಗುತ್ತಿರುವ ಅದ್ಭುತ ಡ್ರೋನ್ ವಿಡಿಯೋ ಇಂಟರ್ನೆಟ್‌ನಲ...

Sunday, August 10, 2025

PARYAYA: ಬೆಂಗಳೂರು: ಈಗ ದೇಶದ ಅತಿದೊಡ್ಡ ಮೆಟ್ರೋ ಜಾಲ ಹೊಂದಿದ ೨ನೇ ನಗರ

 ಬೆಂಗಳೂರು: ಈಗ ದೇಶದ ಅತಿದೊಡ್ಡ ಮೆಟ್ರೋ ಜಾಲ ಹೊಂದಿದ ೨ನೇ ನಗರ

ಮೆಟ್ರೋ ಹಳದಿ ಮಾರ್ಗ, ವಂದೇ ಮಾತರಂ ಎಕ್ಸ್‌ ಪ್ರಸ್‌ ರೈಲಿಗೆ ಪ್ರಧಾನಿ ಹಸಿರು ನಿಶಾನೆ

ಬೆಂಗಳೂರು: ದೇಶದಲ್ಲಿ ಅತಿದೊಡ್ಡ ಮೆಟ್ರೋ ಜಾಲವನ್ನು ಹೊಂದಿರುವ ಎರಡನೇ ನಗರ ಎಂಬ ಹೆಗ್ಗಳಿಕೆಗೆ ಬೆಂಗಳೂರು ೨೦೨೫ ಆಗಸ್ಟ್‌ ೧೦ರ ಭಾನುವಾರ ಪಾತ್ರವಾಯಿತು. ಬೆಂಗಳೂರಿನ ರಾಗಿಗುಡ್ಡದಲ್ಲಿ ʼನಮ್ಮ ಮೆಟ್ರೋʼ ಹಳದಿ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡುವುದರೊಂದಿಗೆ ಈ ಹೆಗ್ಗಳಿಕೆ ಬೆಂಗಳೂರಿನ ಮುಡಿಗೇರಿತು.

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಚಿವರ ಸಮ್ಮುಖದಲ್ಲಿ ಪ್ರಧಾನಿ ಹಳದಿ ಮಾರ್ಗಕ್ಕೆ ಹಸಿರು ನಿಶಾನೆ ತೋರಿಸಿದರು. ಬಳಿಕ ಅಲ್ಲಿಂದ ಎಲೆಕ್ಟ್ರಾನಿಕ್‌ ಸಿಟಿವರೆಗೆ ಮೆಟ್ರೋದಲ್ಲೇ ಪಯಣಿಸಿದರು. ಸಿದ್ದರಾಮಯ್ಯ, ಶಿವಕುಮಾರ್‌ ಸೇರಿದಂತೆ ಇತರ ಗಣ್ಯರೂ ಪ್ರಧಾನಿಯರೊಂದಿಗೆ ಇದ್ದರು.

೧೯.೧೫ ಕಿಮೀ ಉದ್ದದ ಹಳದಿ ಮಾರ್ಗದ ಉದ್ಘಾಟನೆಯೊಂದಿಗೆ ಬೆಂಗಳೂರಿನ ಮೆಟ್ರೋ ಜಾಲ ೭೬.೯೫ ಕಿಮೀಯಿಂದ ೯೬.೧೦ ಕಿಮೀಗೆ ವಿಸ್ತರಣೆಗೊಂಡಿತು. ಈ ಮಾರ್ಗದಲ್ಲಿ ೧೬ ನಿಲ್ದಾಣಗಳಿದ್ದು  ಮೂರು ರೈಲುಗಳು ನಿತ್ಯ ಸಂಚರಿಸಲಿವೆ.

ಇದಕ್ಕೂ ಮುನ್ನ ಪ್ರಧಾನಿಯವರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಬೆಳಗಾವಿ- ಬೆಂಗಳೂರು ವಂದೇ ಭಾರತ್‌ ಎಕ್ಸ್‌ ಪ್ರಸ್‌ ರೈಲಿಗೆ ಹಸಿರು ನಿಶಾನೆ ತೋರಿಸಿದರು. ಇದೇ ಸಂದರ್ಭದಲ್ಲಿ ಜಮ್ಮು ಕಾಶ್ಮೀರದ ಕಟ್ರಾ ಮತ್ತು ಮಹಾರಾಷ್ಟ್ರದ ಪುಣೆ-ಅಜ್ನಿ (ನಾಗ್ಪುರ) ವಂದೇ ಭಾರತ್‌ ಎಕ್ಸ್‌ ಪ್ರಸ್‌ ರೈಲುಗಳ ಸಂಚಾರವನ್ನು ವರ್ಚುವಲ್‌ ಆಗಿ ಉದ್ಘಾಟಿಸಿದರು.

ಇಲ್ಲಿದೆ ಭಾರತದ ಮೆಟ್ರೋ ಕಥೆ

ಇಲ್ಲಿದೆ ಭಾರತದ ಮೆಟ್ರೋ ಕಥೆಯ ವಿಡಿಯೋ. ಇದನ್ನು ಈದಿನ ಮೆಟ್ರೋ ಹಳದಿ ಮಾರ್ಗದ ಉದ್ಘಾಟನೆಯ ಸಂದರ್ಭದಲ್ಲಿ ಪ್ರದರ್ಶಿಸಲಾಯಿತು.

ವಿಡಿಯೋ ನೋಡಲು ಕೆಳಗಿನ ಚಿತ್ರ ಅಥವಾ ಯೂ ಟ್ಯೂಬ್‌ ವಿಡಿಯೋ ಲಿಂಕ್‌ ಕ್ಲಿಕ್‌ ಮಾಡಿರಿ.


ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಏನು ಹೇಳಿದರು?

ಕೆಳಗಿನ ಚಿತ್ರ ಕ್ಲಿಕ್‌ ಮಾಡಿರಿ

ಇನ್ನಷ್ಟು ಸುದ್ದಿಗಳಿಗಾಗಿ ಕೆಳಗಿನ ಚಿತ್ರ ಕ್ಲಿಕ್‌ ಮಾಡಿರಿ
PARYAYA: ಬೆಂಗಳೂರು: ಈಗ ದೇಶದ ಅತಿದೊಡ್ಡ ಮೆಟ್ರೋ ಜಾಲ ಹೊಂದಿದ ೨ನೇ ನಗರ:   ಬೆಂಗಳೂರು: ಈಗ ದೇಶದ ಅತಿದೊಡ್ಡ ಮೆಟ್ರೋ ಜಾಲ ಹೊಂದಿದ ೨ನೇ ನಗರ ಮೆಟ್ರೋ ಹಳದಿ ಮಾರ್ಗ, ವಂದೇ ಮಾತರಂ ಎಕ್ಸ್‌ ಪ್ರಸ್‌ ರೈಲಿಗೆ ಪ್ರಧಾನಿ ಹಸಿರು ನಿಶಾನೆ ಬೆಂ ಗಳೂರು: ...

Saturday, August 2, 2025

PARYAYA: ಆ.10: ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ ಹಸಿರು ನಿಶಾನೆ

 ಆ.10: ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ ಹಸಿರು ನಿಶಾನೆ

ಬೆಂಗಳೂರು: ನಮ್ಮ ಬೆಂಗಳೂರು ಮೆಟ್ರೋವು ನಿರ್ಮಿಸಿರುವ ಬೊಮ್ಮಸಂದ್ರದಿಂದ ಆರ್‌ ವಿ ರಸ್ತೆವರೆಗಿನ ೧೯.೧೫ ಕಿ.ಮೀ. ದೂರದ ಹಳದಿ ಮೆಟ್ರೋ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಅವರು ೨೦೨೫ ಆಗಸ್ಟ್‌ ೧೦ರಂದು ಲೋಕಾರ್ಪಣೆ ಮಾಡಲಿದ್ದಾರೆ.

ಅದೇ ದಿನ ೧೫,೬೧೧ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುವ ಮೂರನೇ ಹಂತದ ಮೆಟ್ರೋ ಮಾರ್ಗಕ್ಕೆ ಶಂಕುಸ್ಥಾಪನೆಯನ್ನೂ ನೆರವೇರಿಸಲಿದ್ದಾರೆ. ಈ ಮೆಟ್ರೋ ಮಾರ್ಗವು ೪೪.೬೫ ಕಿಮೀ ಉದ್ದವಿರಲಿದೆ.

ಆರ್.ವಿ.ರಸ್ತೆಯಿಂದ ಬೊಮ್ಮಸಂದ್ರದವರೆಗಿನ ಹಳದಿ ಮೆಟ್ರೋ ಮಾರ್ಗವನ್ನು ೫,೦೫೬.೯೯ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದು ಸುಮಾರು ೮ ಲಕ್ಷ ಪ್ರಯಾಣಿಕರಿಗೆ ಅನುಕೂಲವಾಗಲಿದೆ.

ಪ್ರಧಾನಿಯ ನರೇಂದ್ರ ಮೋದಿ ಅವರಿಂದ ಹಳದಿ ಮೆಟ್ರೋ ಮಾರ್ಗದ ಉದ್ಘಾಟನೆ ಮತ್ತು ಮೂರನೇ ಹಂತದ ಮೆಟ್ರೋ ಮಾರ್ಗಕ್ಕೆ ಶಂಕು ಸ್ಥಾಪನೆ ನೆರವೇರಿಸಲಿರುವ ವಿಚಾರವನ್ನು ಕೇಂದ್ರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರಲಾಲ್‌ ಖಟ್ಟರ್‌ ಮತ್ತು ಬೆಂಗಳೂರು ದಕ್ಷಿಣದ ಸಂಸತ್‌ ಸದಸ್ಯ ತೇಜಸ್ವಿ ಸೂರ್ಯ ಎಕ್ಸ್‌ ಮೂಲಕ ನೀಡಿದ ಪ್ರತ್ಯೇಕ ಸಂದೇಶಗಳಲ್ಲಿ ಹಂಚಿಕೊಂಡಿದ್ದಾರೆ.

ಹಳದಿ ಮೆಟ್ರೋ ಮಾರ್ಗದ ಉದ್ಘಾಟನೆ ಮತ್ತು ಮೂರನೇ ಹಂತದ ಮೆಟ್ರೋ ಮಾರ್ಗಕ್ಕೆ ಶಂಕುಸ್ಥಾಪನೆಯನ್ನು ಪ್ರಧಾನಿಯವರು ಆಗಸ್ಟ್‌ ೧೦ರಂದು ನೆರವೇರಿಸಲಿದ್ದಾರೆ ಎಂದು ಖಟ್ಟರ್‌ ಅವರು ತಿಳಿಸಿದರೆ, ಹಳದಿ ಮಾರ್ಗದ ಉದ್ಘಾಟನೆ ಮೂಲಕ ನಮ್ಮ ನಗರ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಿದ್ದಕ್ಕಾಗಿ ಪ್ರಧಾನಿಯವರಿಗೆ ತೇಜಸ್ವಿ ಸೂರ್ಯ ಧನ್ಯವಾದ ಅರ್ಪಿಸಿದ್ದಾರೆ.

ಈ ಮಾರ್ಗದ ಉದ್ಘಾಟನೆಯಿಂದ ೮ ಲಕ್ಷ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಮತ್ತು ಸಿಲ್ಕ್‌ ಬೋರ್ಡಿನ ಸಂಚಾರ ದಟ್ಟಣೆ ಸಮಸ್ಯೆ ಪರಿಹಾರವಾಗಲಿದೆ ಎಂದು ತೇಜಸ್ವಿ ಹೇಳಿದ್ದಾರೆ.

ಸಂಚಾರ ದಟ್ಟಣೆ ಕಡಿಮೆ ಮಾಡಲು ಸಾರ್ವಜನಿಕ ಸಾರಿಗೆಯೇ ಏಕೈಕ ಆಯ್ಕೆ. ನಾವು ಆಗಸ್ಟ್‌ ೧೫ರ ಗಡುವನ್ನು ಪೂರೈಸುತ್ತಿದ್ದೇವೆ. ಯಾವುದೇ ವಿಳಂಬವಿಲ್ಲದೆ ಇದು ಸಾರ್ವಜನಿಕರಿಗೆ ಮುಕ್ತವಾಗಬೇಕು ಎಂಬ ಪ್ರಧಾನಿಯವರ ವೈಯಕ್ತಿಕ ಆಗ್ರಹದಿಂದಾಗಿಯೇ ಇದು ಸಾಧ್ಯವಾಗುತ್ತಿದೆ ಎಂದು ಸೂರ್ಯ ಬರೆದಿದ್ದಾರೆ.

ಈ ಕೆಳಗಿದ್ದನ್ನೂ ಓದಿರಿ:

ಬೆಂಗಳೂರಿನ ಮೊದಲ ಚಾಲಕ ರಹಿತ ಮೆಟ್ರೋ ರೈಲು
ನಾಗವಾರಕೆಂಪಾಪುರಹೆಬ್ಬಾಳಕ್ಕೂ ಬರಲಿದೆ ಮೆಟ್ರೋ ಇಂಟರ್‌ ಚೇಂಜ್‌ ನಿಲ್ದಾಣ
ಆಗ್ರಾ ಮೆಟ್ರೋ ರೈಲು ಯೋಜನೆ: ಮೊದಲ ಹಂತದ ಉದ್ಘಾಟನೆ
ಏನಿದು ರಾಷ್ಟ್ರೀಯ ಸಾಮಾನ್ಯ ಸಂಚಾರೀ ಕಾರ್ಡ್ ?
ಭಾರತದ ಮೊದಲ ಚಾಲಕರಹಿತ ರೈಲು: ಪ್ರಧಾನಿ ಹಸಿರು ನಿಶಾನೆ
ರಾಷ್ಟ್ರೀಯ ಸಾಮಾನ್ಯ ಸಂಚಾರಿ ಕಾರ್ಡ್: ಪ್ರಧಾನಿ ಉದ್ಘಾಟನೆ
ಬೆಂಗಳೂರು ಸುರಂಗ ರಸ್ತೆಮೆಟ್ರೋಗೆ ರಕ್ಷಣಾ ಭೂಮಿ: ಕೇಂದ್ರಕ್ಕೆ ಮುಖ್ಯಮಂತ್ರಿ ಮನವಿ
 

PARYAYA: ಆ.10: ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ ಹಸಿರು ನಿಶಾನೆ:   ಆ.10: ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ ಹಸಿರು ನಿಶಾನೆ ಬೆಂ ಗಳೂರು: ನಮ್ಮ ಬೆಂಗಳೂರು ಮೆಟ್ರೋವು ನಿರ್ಮಿಸಿರುವ ಬೊಮ್ಮಸಂದ್ರದಿಂದ ಆರ್‌ ವಿ ರಸ್ತೆವರೆಗಿನ ೧೯....