Showing posts with label Amith shah. Show all posts
Showing posts with label Amith shah. Show all posts

Monday, August 5, 2019

ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು

ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು
ಐತಿಹಾಸಿಕ ನಿರ್ಧಾರ, ಇಡೀ ದೇಶಕ್ಕೆ ಒಂದೇ ಸಂವಿಧಾನ, ಧ್ವಜ
ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಕಳೆದ ಒಂದು ವಾರದ ಬೆಳವಣಿಗೆಗೆ ೨೦೧೯ ಆಗಸ್ಟ್ ೫ರ ಸೋಮವಾರ ತೆರೆ ಬಿದ್ದಿದ್ದು, ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಪಡಿಸಲು ಸರ್ಕಾರ ತೀರ್ಮಾನಿಸಿರುವುದಾಗಿ  ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆಇದೇ ಘೋಷಣೆಯನ್ನು ಅವರು ಬಳಿಕ ಲೋಕಸಭೆಯಲ್ಲೂ ಮಾಡಿದರು.
ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಆದೇಶಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಸಹಿ ಮಾಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಪುನರ್ ವಿಂಗಡಣಾ ಮಸೂದೆಯನ್ನು ಶಾ ಅವರು ವಿರೋಧ ಪಕ್ಷಗಳ ತೀವ್ರ ಪ್ರತಿಭಟನೆಯ ಮಧ್ಯೆ ಸದನದಲ್ಲಿ ಮಂಡಿಸಿದರು. ಕಾಶ್ಮೀರಕ್ಕೆ ಸಂಬಂಧಿಸಿದಂತೆ  4 ನಿರ್ಣಯಗಳನ್ನು ಮಂಡಿಸಲಾಗಿದ್ದು ಈದಿನವೇ ಅಂಗೀಕಾರಗೊಳ್ಳುವ ನಿರೀಕ್ಷೆ ಇದೆ.

ಶಾ ಹೇಳಿದ್ದೇನು?
ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಪಡಿಸಲಾಗಿದೆ. ೩೭೦ನೇ ವಿಧಿಯನ್ನು ಹಾಗೂ  ೩೫ಎ ವಿಧಿಯನ್ನು ಕೂಡಾ ರದ್ದುಪಡಿಸಲಾಗಿದೆ ಎಂದು ಅಮಿತ್ ಶಾ ರಾಜ್ಯಸಭೆಯಲ್ಲಿ ಘೋಷಿಸಿದ್ದಾರೆ.

 ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿರುವ ಸಂವಿಧಾನದ  ೩೭೦ನೇ ವಿಧಿಯನ್ನು ಸಂವಿಧಾನಬದ್ಧವಾಗಿ ರದ್ದುಪಡಿಸಲು ತೀರ್ಮಾನಿಸಲಾಗಿದೆ  ಎಂದು ಅಮಿತ್ ಶಾ ರಾಜ್ಯಸಭೆಯಲ್ಲಿ ಪ್ರಕಟಿಸಿದರು..

ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ಮಹತ್ವದ ಸಭೆ ನಡೆದಿತ್ತು. ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ವಿದೇಶಾಂಗ ಸಚಿವ ಜೈಶಂಕರ್ ಭಾಗವಹಿಸಿದ್ದರು.

 ಪರಿಣಾಮ ಏನು?
·     
  ಇಡೀ ರಾಷ್ಟ್ರಕ್ಕೆ ಒಂದೇ ಸಂವಿಧಾನ. ಒಂದೇ ಧ್ವಜ. ಜಮ್ಮು ಕಾಶ್ಮೀರ ರಾಜ್ಯಕ್ಕಿದ್ದ ವಿಶೇಷಾಧಿಕಾರ ರದ್ದು. ಇನ್ಮುಂದೆ ಸಾಮಾನ್ಯ ರಾಜ್ಯಗಳಂತೆ  ಜಮ್ಮು ಕಾಶ್ಮೀರ.  ಒಂದೇ ಬಾವುಟ ಹಾರಾಟ,  ೨ನೇ ಧ್ವಜ ಹಾರಾಟಕ್ಕೆ ಬ್ರೇಕ್ .  ಜಮ್ಮುಕಾಶ್ಮೀರ ಭೌಗೋಳಿಕವಾಗಿ ವಿಭಜನೆ.  ಜಮ್ಮು ಕಾಶ್ಮೀರ  2 ಭಾಗಗಳಾಗಿ ವಿಭಜನೆ.  ಜಮ್ಮು ಮತ್ತು  ಕಾಶ್ಮೀರ ಕೇಂದ್ರಾಡಳಿತ ಪ್ರದೇಶ. ವಿಧಾನಸಭೆ ಸಹಿತ ಕೇಂದ್ರಾಡಳಿತ ಪ್ರದೇಶ.  ಲಡಾಖ್ ಕೂಡಾ ಕೇಂದ್ರಾಡಳಿತ ಪ್ರದೇಶ.  ಶಿಕ್ಷಣ, ವಿದ್ಯಾರ್ಥಿವೇತನ, ಉದ್ಯೋಗ ಎಲ್ಲರೂ ಅರ್ಹ. ಮಹಿಳೆಯರು ಬೇರೆ ರಾಜ್ಯದವರನ್ನು ವಿವಾಹವಾಗಬಹುದು.  ಜಮ್ಮು-ಕಾಶ್ಮೀರದಲ್ಲಿ ಮುಂದಿನ ದಿನಗಳಲ್ಲಿ ಭಾರತದ ಸಂವಿಧಾನವೇ ಅನ್ವಯವಾಗಲಿದೆ.

ಸರ್ಕಾರ
ಮಹತ್ವದ ಆದೇಶ ಹೊರಡಿಸುವ ಉದ್ದೇಶದಿಂದ ಕಣಿವೆ ರಾಜ್ಯದಲ್ಲಿ ಬಿಗಿ ಭದ್ರತೆ ಒದಗಿಸಲಾಗಿತ್ತು

Sunday, December 23, 2018

೧೭-೧೭-೬: ಬಿಹಾರ ಸೀಟ್ ಹಂಚಿಕೆ ಒಪ್ಪಂದ ಪ್ರಕಟಿಸಿದ ಅಮಿತ್ ಶಾ

೧೭-೧೭-: ಬಿಹಾರ ಸೀಟ್ ಹಂಚಿಕೆ ಒಪ್ಪಂದ ಪ್ರಕಟಿಸಿದ ಅಮಿತ್ ಶಾ
ಪಾಟ್ನಾ: ಬಿಜೆಪಿ ಮತ್ತು ಜೆಡಿ (ಯು) ಗೆ ೧೭ ಸ್ಥಾನಗಳು ಮತ್ತು ಲೋಕ ಜನಶಕ್ತಿ ಪಕ್ಷಕ್ಕೆ ಆರು ಸ್ಥಾನಗಳನ್ನು ನಿಗದಿ ಪಡಿಸಿ, ಬಿಹಾರದ ಎನ್ ಡಿ ಎ ಅಂಗ ಪಕ್ಷಗಳ  ಅಂತಿಮ ಸ್ಥಾನ ಹಂಚಿಕೆ ಒಪ್ಪಂದವನ್ನು ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಬಿಹಾರ ಮುಖ್ಯಮಂತ್ರಿ, ಜನತಾದಳ (ಯು) ಮುಖ್ಯಸ್ಥ   ನಿತೀಶ್ ಕುಮಾರ್ ಮತ್ತು ಲೋಕಜನಶಕ್ತಿ ಪಕ್ಷದ ನಾಯಕ ರಾಮ್ ವಿಲಾಸ್ ಪಾಸ್ವಾನ್ ಅವರು 2018ರ ಡಿಸೆಂಬರ್ 23ರ ಭಾನುವಾರ ಇಲ್ಲಿ ಪ್ರಕಟಿಸಿದರು.

ಲೋಕಜನಶಕ್ತಿ ಪಕ್ಷವು ಬಿಹಾರದ ಆರು ಲೋಕಸಭಾ ಕ್ಷೇತ್ರಗಳಲ್ಲದೆ,ಉತ್ತರ ಪ್ರದೇಶ ಅಥವಾ ಜಾರ್ಖಂಡ್ ನಲ್ಲಿ ಒಂದು ಲೋಕಸಭಾ ಕ್ಷೇತ್ರ ಮತ್ತು ರಾಜ್ಯಸಭೆಯ ಒಂದು ಕ್ಷೇತ್ರ ಪಡೆಯುವ ಸಾಧ್ಯತೆಯಿದೆ.ರಾಜ್ಯಸಭಾ ಸ್ಥಾನವನ್ನು ಪ್ರಸ್ತುತ ನರೇಂದ್ರ ಮೋದಿ ಸಚಿವ ಸಂಪುಟದಲ್ಲಿ ಸಚಿವರಾಗಿರುವ ಪಾಸ್ವಾನ್ ಅವರು ಪಡೆಯುವ ಸಾಧ್ಯತೆ ಇದೆ.

ಪಾಸ್ವಾನ್ ಮತ್ತು ಬಿಜೆಪಿಯೊಂದಿಗಿನ ತಮ್ಮ ಪಕ್ಷದ ಭಿನ್ನಾಭಿಪ್ರಾಯಗಳ ಬಗ್ಗೆ ಬಹಿರಂಗವಾಗಿ ಮಾತನಾಡುತ್ತಿದ್ದ  ಪಾಸ್ವಾನ್ ಪುತ್ರ ಚಿರಾಗ್ ಅವರು ಶುಕ್ರವಾರ ಬಿಜೆಪಿ ಮುಖಂಡ ಅರುಣ್ ಜೇಟ್ಲಿ ಅವರನ್ನು ಭೇಟಿ ಮಾಡಿದ ಬಳಿಕ ಈ ಒಪ್ಪಂದವನ್ನು ರೂಪಿಸಲಾಯಿತು. ಸ್ಥಾನಗಳನ್ನು ಹಂಚಿಕೆಯಲ್ಲದೆ ಇತರ ಸಮಸ್ಯೆಗಳೂ ಇವೆ ಎಂದು ಚಿರಾಗ್ ವರದಿಗಾರರ ಜೊತೆ ಮಾತನಾಡುತ್ತಾ ಹೇಳಿದ್ದರು.
ಉಭಯ ಪಕ್ಷಗಳ ನಡುವಣ ಭಿನ್ನಮತ ನಿವಾರಣೆಯಾಗಿದೆ ಎಂದು ಬಳಿಕ ಮೂಲಗಳು ಹೇಳಿದವು..

2014ರ ಲೋಕಸಭಾ ಚುನಾವಣೆಯಲ್ಲಿ 31 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ ನೇತೃತ್ವದ  ಎನ್ ಡಿಎ, ರಾಜಕೀಯವಾಗಿ ನಿರ್ಣಾಯಕ ರಾಜ್ಯವಾಗಿರುವ ಬಿಹಾರದಲ್ಲಿ ಮಿತ್ರ ಪಕ್ಷ ಜೆಡಿಯು ಜೊತೆಗೆ ಈ ಬಾರಿ ಸಮಾನ ಸ್ಥಾನಗಳಿಗೆ ಸ್ಪರ್ಧಿಸುವುದಾಗಿ ಈ ಮುನ್ನ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪ್ರಕಟಿಸಿದ್ದರು.

ಲೋಕಜನಶಕ್ತಿ ಪಕ್ಷದ (ಎಲ್ ಜೆಪಿ) ಜೊತೆಗೆ ಮೈತ್ರಿ ಗಟ್ಟಿಗೊಳಿಸುವ ಕಾರ್ಯವನ್ನು ಪಕ್ಷವು ವಿವಿಧ ಪಕ್ಷಗಳ ನಾಯಕರ ಜೊತೆಗೆ  ಉತ್ತಮ ಸ್ನೇಹ ಸಂಬಂಧ ಹೊಂದಿರುವ ಜೇಟ್ಲಿ ಅವರಿಗೆ ಬಿಜೆಪಿ ವಹಿಸಿತ್ತು. ಎಲ್ ಜೆಪಿಯು ದಲಿತ ವರ್ಗದ ಪ್ರಬಲ ಬೆಂಬಲವನ್ನು ಹೊಂದಿರುವುದು ಇಲ್ಲಿ ಗಮನಾರ್ಹ.

ಬಿಜೆಪಿಯ ಅಧ್ಯಕ್ಷ ಶಾ ಮತ್ತು ಜೇಟ್ಲಿ ಅವರು ರಾಮ್ ವಿಲಾಸ್ ಪಾಸ್ವಾನ್ ಮತ್ತು ಅವರ ಪುತ್ರ ಚಿರಾಗ್ ಜೊತೆಗೆ ಗುರುವಾರ ಒಂದು ಗಂಟೆಗೂ ಹೆಚ್ಚಿನ ಮಾತುಕತೆ ನಡೆಸಿದ್ದರು.

ಇದಕ್ಕೆ ಮುನ್ನ ಜೇಟ್ಲಿ ಅವರಿಗೆ ಪತ್ರ ಬರೆದಿದ್ದ ಚಿರಾಗ್ ಪಾಸ್ವಾನ್ ಅವರು ನೋಟು ಅಮಾನ್ಯೀಕರಣದಿಂದ ದೇಶಕ್ಕೆ ಏನು ಪ್ರಯೋಜನವಾಗಿದೆ ಎಂದು ವಿವರಿಸುವಂತೆ ಆಗ್ರಹಿಸಿದ್ದರು.

ಸ್ಥಾನ ಹಂಚಿಕೆ ಪ್ರಕಟಣೆಯ ವಿಳಂಬದಿಂದ ಆಡಳಿತಾರೂಢ ಮೈತ್ರಿಕೂಟಕ್ಕೆ ಹಾನಿಯಾಗಬಹುದು ಎಂದೂ ಅವರು ಟ್ವೀಟ್ ಮಾಡಿದ್ದರು.

Friday, December 21, 2018

ಸೊಹ್ರಾಬುದ್ದೀನ್ ನಕಲಿ ಎನ್ ಕೌಂಟರ್: ಎಲ್ಲ ೨೨ ಆರೋಪಿಗಳ ಖುಲಾಸೆ

ಸೊಹ್ರಾಬುದ್ದೀನ್ ನಕಲಿ ಎನ್ ಕೌಂಟರ್: ಎಲ್ಲ ೨೨ ಆರೋಪಿಗಳ ಖುಲಾಸೆ
ಮುಂಬೈ: ಮುಂಬೈಯ ವಿಶೇಷ ಸಿಬಿಐ ನ್ಯಾಯಾಲಯವು ಸೊಹ್ರಾಬುದ್ದೀನ್ ಶೇಖ್ ಎನ್ ಕೌಂಟರ್   ಪ್ರಕರಣದ ಎಲ್ಲ ೨೨ ಮಂದಿ ಆರೋಪಿಗಳನ್ನು ಕೊಲೆ ಕೃತ್ಯವನ್ನು  ಸಾಬೀತುಪಡಿಸಲು ಸಾಕಷ್ಟು ಪುರಾವೆ ಇಲ್ಲ ಎಂದು ಹೇಳಿ ೨೦೧೮ ಡಿಸೆಂಬರ್ ೨೧ ರ ಶುಕ್ರವಾರ ಖುಲಾಸೆ ಮಾಡಿತು.

ಭಯೋತ್ಪಾದಕರೊಂದಿಗೆ ಸಂಪರ್ಕ  ಇತ್ತೆನ್ನಲಾದ ಶೇಖ್ ಎಂಬ ದರೋಡೆಕೋರನನ್ನು 2005ರ ನವೆಂಬರ್ ತಿಂಗಳಲ್ಲಿ ನಡೆದ ನಕಲಿ ಗುಂಡಿನ ಘರ್ಷಣೆಯಲ್ಲಿ ಕೊಲೆಗೈದ ಕೃತ್ಯದಲ್ಲಿ ಶಾಮೀಲಾಗಿದ್ದ ಆರೋಪದಲ್ಲಿ ಗುಜರಾತ್ ಮತ್ತು ರಾಜಸ್ಥಾನದ 22 ಮಂದಿ ಬಹುತೇಕ ಕಿರಿಯ ಪೊಲೀಸ್ ಅಧಿಕಾರಿಗಳು ವಿಚಾರಣೆ ಎದುರಿಸುತ್ತಿದರು.

ಶೇಖ್ ಪತ್ನಿ ಕೌಸರ್ ಬಿ ಕೂಡ ಅದೇ ತಿಂಗಳು ಕೊಲ್ಲಲ್ಪಟ್ಟಿದ್ದರು. ಗುಜರಾತ್ ಮತ್ತು ರಾಜಸ್ಥಾನ್ ಪೊಲೀಸರು ಡಿಸೆಂಬರ್ ೨೦೦೬ ಡಿಸೆಂಬರಿನಲ್ಲಿ ನಡೆದ ಇನ್ನೊಂದು ಗುಂಡಿನ ಘರ್ಷಣೆಯಲ್ಲಿ ಶೇಖನ ಸಹಾಯಕ  ತುಳಸಿರಾಮ್ ಪ್ರಜಾಪತಿಯನ್ನು ಕೊಂದು ಹಾಕಿದ್ದರು.

ನಕಲಿ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ  ಪ್ರಾಸೆಕ್ಯೂಷನ್ ೨೧೦ ಸಾಕ್ಷಿಗಳನ್ನು ಹಾಜರು ಪಡಿಸಿತ್ತು. ಅವರ ಪೈಕಿ  ೯೨ ಸಾಕ್ಷಿಗಳು ಪ್ರತಿಕೂಲರಾಗಿದ್ದರು.

ತಿಂಗಳ ಆರಂಭದಲ್ಲಿ ಅಂತಿಮ ವಾದ ಮುಕ್ತಾಯದ ಬಳಿಕ ಸಿಬಿಐ ಪ್ರಕರಣಗಳ ವಿಶೇಷ ನ್ಯಾಯಾಧೀಶ ಎಸ್. ಜೆ. ಶರ್ಮಾ ಅವರು ಡಿಸೆಂಬರ್ ೨೧ ರಂದು ತೀರ್ಪು ಘೋಷಿಸುವುದಾಗಿ ಪ್ರಕಟಿಸಿದ್ದರು.
ಗುಜರಾತ್ ಗೃಹ ಸಚಿವ (ಈಗ ಬಿಜೆಪಿ ಅಧ್ಯಕ್ಷ ಅಮಿತ್ ಶಾ) ಮತ್ತು ಗುಜರಾತ್ ಮತ್ತು ರಾಜಸ್ಥಾನದ ಹಿರಿಯ  ಪೊಲೀಸ್ ಅಧಿಕಾರಿಗಳು ಸೇರಿದಂತೆ ೩೮ ಜನರ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ೨೦೧೦ ರಲ್ಲಿ ಪ್ರಕರಣ ದಾಖಲಿಸಿತ್ತು.

ಏನಿದ್ದರೂ ಸುಪ್ರೀಂಕೋರ್ಟ್ ಆದೇಶದಂತೆ 2013ರಲ್ಲಿ ಗುಜರಾತಿನಿಂದ ಮುಂಬೈ ನ್ಯಾಯಾಲಯಕ್ಕೆ ವರ್ಗಾವಣೆಗೊಂಡಿದ್ದ ಈ ಪ್ರಕರಣದಲ್ಲಿ ಮುಂಬೈಯ ಸಿಬಿಐ ವಿಶೇಷ ನ್ಯಾಯಾಲಯವು
 ಅಮಿತ್ ಶಾ ಮತ್ತು ಗುಜರಾತ್ ಪೊಲೀಸ್ ಮುಖ್ಯಸ್ಥ ಪಿ.ಸಿ. ಪಾಂಡೆ ಹಾಗೂ ಭಯೋತ್ಪಾದನಾ ನಿಗ್ರಹ  ತಂಡ ಮಹಾನಿರ್ದೇಶಕ ಡಿ.ಜಿ. ವಂಜಾರ  ಸೇರಿದಂತೆ ೧೬ ಹಿರಿಯ ಪೊಲೀಸ್ ಅಧಿಕಾರಿಗಳನ್ನು ದೋಷಮುಕ್ತರನ್ನಾಗಿ ಮಾಡಿತ್ತು.

ಆ ಬಳಿಕ, ವಂಜಾರ ಮತ್ತು ಇತರ ನಾಲ್ವರು ಪೊಲೀಸ್ ಅಧಿಕಾರಿಗಳ ಖುಲಾಸೆ ವಿರುದ್ಧ ಶೇಖ್ ಸಹೋದರ ರುಬಾಬುದ್ದೀನ್ ಸಲ್ಲಿಸಿದ್ದ ಮನವಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿತ್ತು.