ವಿಶ್ವ ಹವ್ಯಕ ಸಮ್ಮೇಳನ ೨ನೇ ದಿನ
ವಿಶ್ವ ಹವ್ಯಕ ಸಮ್ಮೇಳನ ೨ನೇ ದಿನದ ಸಂಭ್ರಮಕ್ಕೆ ಕಾಲಿಟ್ಟಿದೆ. ಈ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಮೇಲಿನ ಚಿತ್ರ ಕ್ಲಿಕ್ ಮಾಡಿರಿ
ವಿವಿಧ ಬ್ರಾಹ್ಮಣ ಸಂಸ್ಥೆಗಳಿಗೆ ಸನ್ಮಾನ
ಕೆಳಗಿನದ್ದನ್ನೂ ನೋಡಿರಿ:
ವಿಶ್ವ ಹವ್ಯಕ ಸಮ್ಮೇಳನ ೨ನೇ ದಿನ
ವಿಶ್ವ ಹವ್ಯಕ ಸಮ್ಮೇಳನ ೨ನೇ ದಿನದ ಸಂಭ್ರಮಕ್ಕೆ ಕಾಲಿಟ್ಟಿದೆ. ಈ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಮೇಲಿನ ಚಿತ್ರ ಕ್ಲಿಕ್ ಮಾಡಿರಿ
ವಿವಿಧ ಬ್ರಾಹ್ಮಣ ಸಂಸ್ಥೆಗಳಿಗೆ ಸನ್ಮಾನ
ವಿಶ್ವ ಹವ್ಯಕ ಸಮ್ಮೇಳನ ಪಾರ್ಶ್ವನೋಟಗಳು
ಬೆಂಗಳೂರಿನ ಅರಮನೆ ಮೈದಾನದಲ್ಲಿ ೨೧.೧೨.೨೦೨೪ರ ಶುಕ್ರವಾರ ಆರಂಭವಾದ ತೃತೀಯ ವಿಶ್ವ ಹವ್ಯಕ ಸಮ್ಮೇಳನದ ಕೆಲವು ಪಾರ್ಶ್ವನೋಟಗಳ ಚಿತ್ರಗಳು ಇಲ್ಲಿವೆ.ಹವ್ಯಕ ಸಮ್ಮೇಳನ ಸಡಗರ ಆರಂಭ
ಶನಿವಾರ ರಾತ್ರಿ ಮೇಲಾರಕ್ಕೆ ಕೊರೆಯುವ ಸಂಭ್ರಮದೊಂದಿಗೆ ಸಮ್ಮೇಳನದ ಕಳೆಗಟ್ಟತೊಡಗಿದೆ.
ಭವ್ಯವಾದ ವೇದಿಕೆ ಸಜ್ಜುಗೊಂಡಿದೆ.
ಸಮ್ಮೇಳನದ ಸಡಗರದ ಕೆಲವು ಚಿತ್ರಗಳು, ವಿಡಿಯೋ ನೋಡಲು ಕೆಳಗಿನ ಚಿತ್ರ ಕ್ಲಿಕ್ ಮಾಡಿರಿ.
ಮುನೇಶ್ವರ ಬ್ಲಾಕಿಗೆ ಬಂತು ಉಕ್ಕಿನಡ್ಕಾಸ್ ಆಯುರ್ವೇದ
ಬೆಂಗಳೂರು: ಕರ್ನಾಟಕ ಮತ್ತು ಕೇರಳ ರಾಜ್ಯಗಳ ಗಡಿಯಲ್ಲಿರುವ ಕಾಸರಗೋಡಿನ ʼಉಕ್ಕಿನಡ್ಕಾಸ್ ಆಯುರ್ವೇದʼ ಇದೀಗ ಬೆಂಗಳೂರಿನಲ್ಲಿ ತನ್ನ ಸ್ವಂತ ಕಟ್ಟಡಕ್ಕೆ ಸ್ಥಳಾಂತರಗೊಂಡಿದೆ. ಇಲ್ಲಿಯವರೆಗೆ ಸಂಸ್ಥೆಯು ಬೆಂಗಳೂರಿನಲ್ಲಿ ಶ್ರೀನಗರ ಸಮೀಪದ ಅಪೆಕ್ಸ್ ಬ್ಯಾಂಕ್ ಸಮೀಪ ಕಾರ್ಯ ನಿರ್ವಹಿಸುತ್ತಿತ್ತು.
ಬೆಂಗಳೂರಿನ ಗಿರಿನಗರಕ್ಕೆ ಸಮೀಪದ ಮುನೇಶ್ವರ ಬ್ಲಾಕಿನ ಶನೈಶ್ಚರ ದೇವಸ್ಥಾನದ ಎದುರಿನಲ್ಲಿರುವ ಸ್ವಂತ ಕಟ್ಟಡಕ್ಕೆ ಉಕ್ಕಿನಡ್ಕಾಸ್ ಸ್ಥಳಾಂತರ ಸಮಾರಂಭ 2023 ಸೆಪ್ಟೆಂಬರ್ 17ರ ಭಾನುವಾರ ಸರಳವಾಗಿ ನಡೆಯಿತು. ಚಿತ್ರ ನಟಿ ಸೋನುಗೌಡ ಅವರು ಸಮಾರಂಭವನ್ನು ಉದ್ಘಾಟಿಸಿದರು.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ನಾಯಕ ಶ್ರೀಧರ ಸಾಗರ್ ಜಿ, ಮಂಗಳೂರಿನ ಖ್ಯಾತ ಜಾಹೀರಾತು ಸಂಸ್ಥೆ ʼಕಲ್ಕೂರ ಆರ್ಟ್ಸ್ʼ ಸಂಸ್ಥಾಪಕ ಪ್ರದೀಪ ಕುಮಾರ ಕಲ್ಕೂರ ಮುಖ್ಯ ಅತಿಥಿಗಳಾಗಿದ್ದರು. ಹಿರಿಯ ಸಾಹಿತಿ ಶಾಂತರಾಜ್ ಐತಾಳ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಇದೇ ಸಂದರ್ಭದಲ್ಲಿ ಚರ್ಮಕ್ಕೆ ಸಂಬಂಧಿಸಿದಂತೆ ವಿಶೇಷ ಆಯುರ್ವೇದ ಉಪಚಾರ ನೀಡುವಂತಹ ʼಕಾಸ್ಮೆಟಿಕ್ ಚಿಕಿತ್ಸಾʼ ವಿಭಾಗವನ್ನೂ ಸೋನುಗೌಡ ಉದ್ಘಾಟಿಸಿದರು. ಸಂಸ್ಥೆಯ ವೈದ್ಯೆ ಡಾ. ನ್ಯಾನ್ಸಿ ಆಯುರ್ವೇದ ಕಾಸ್ಮೆಟಿಕ್ಸ್ ಚಿಕಿತ್ಸಾ ಸೌಲಭ್ಯದ ಬಗ್ಗೆ ವಿವರಿಸಿದರು.
ಸಂಸ್ಥೆಯ ಮುಖ್ಯಸ್ಥ ಡಾ. ಜಯಗೋವಿಂದ ಅವರು ಸ್ವಾಗತ ಕೋರಿ, 1950ರಲ್ಲಿ ಸ್ಥಾಪನೆಯಾದ ಉಕ್ಕಿನಡ್ಕಾಸ್ ಸಂಸ್ಥೆ ಇಲ್ಲಿಯವರೆಗೆ ನಡೆದು ಬಂದ ದಾರಿಯನ್ನು ವಿವರಿಸಿದರು. ಸಂಸ್ಥೆಯ ಎಕ್ಸಿಕ್ಯೂಟಿವ್ ಡೈರೆಕ್ಟರ್ ಡಾ. ಸಪ್ನಾ ಜಯಗೋವಿಂದ ವಂದನಾರ್ಪಣೆ ಸಲ್ಲಿಸಿದರು. ಬೆಂಗಳೂರಿನಲ್ಲಿ ಸ್ವಂತ ಕಟ್ಟಡಕ್ಕೆ ಕಾಲಿಡಲು ನೆರವಾದ ಎಲ್ಲರಿಗೂ ಈ ಸಂದರ್ಭದಲ್ಲಿ ಕಿರುಕಾಣಿಕೆ ನೀಡಿ ಸತ್ಕರಿಸಲಾಯಿತು.
ಉಕ್ಕಿನಡ್ಕಾಸ್ ಆಯುರ್ವೇದ ಫಾರ್ಮೆಸಿ ವಿಭಾಗದ ಚಂದನ್ ಕಾರ್ಯಕ್ರಮ ನಿರ್ವಹಿಸಿದರು.
ಇದನ್ನೂ ನೋಡಿ:
ಕಡೆಗೂ ಹಾರಿತು ಹದ್ದಿನ ಮರಿ ….!
‘ಈ ಬಡಪಾಯಿ ಹಕ್ಕಿಗೆ (ಈಗಲ್ - ಹದ್ದು) ಹಾರಲು ಯಾರಾದರೂ ನೆರವಾಗುತ್ತೀರಾ? ಇದರ ರೆಕ್ಕೆಗೆ ಗಾಳಪಟದ ನೂಲು ಸಿಕ್ಕಿ ಹಾಕಿಕೊಂಡಿದೆ. ಅದರಿಂದ ತಪ್ಪಿಸಿಕೊಳ್ಳಲು ನಡೆಸಿದ ಯತ್ನದಲ್ಲಿ ಅದು ನೂಲಿನಲ್ಲಿ ಇನ್ನಷ್ಟು ಸಿಕ್ಕಿ ಹಾಕಿಕೊಂಡಿದೆ. ಅದಕ್ಕೆ ತಾನಾಗಿಯೇ ಹಾರಲು ಸಾಧ್ಯವಾಗುತ್ತಿಲ್ಲ. ಈ ಹಕ್ಕಿ ಸಿಕ್ಕಿಹಾಕಿಕೊಂಡಿರುವ ಜಾಗ ಬಡಾವಣೆಯ 2ನೇ ಕ್ರಾಸಿನ ದಕ್ಷಿಣ ಬದಿ’ ಎಂದು ಆರೋನ್ ಬರೆದಿದ್ದರು.
‘ಹೌದು ನೀವು ಅವರನ್ನ ಕರೆಯಬಹುದು’ ಬಡಾವಣೆಯ ಸಂಘದ ಸಹಕಾರ್ಯದರ್ಶಿ ರಾಘವೇಂದ್ರ ಕಾಮತ್ ಸೂಚಿಸಿದರು. ‘ಹೌದು’ ಇದು ಈಗಲ್ ಮರಿ’ ಎಂದೂ ಹಕ್ಕಿಯ ಚಿತ್ರವನ್ನು
ಹಿರಿದುಗೊಳಿಸಿ ಅವರು ವಿವರಿಸಿದರು.
‘ಹತ್ತಿರದಲ್ಲೇ ಪ್ರಾಣಿ ರಕ್ಷಣಾ ಕೇಂದ್ರದವರಿದ್ದಾರೆಯೇ
ಎಂದು ನೀವು ಪರಿಶೀಲಿಸಬಹುದು. ಅವರು ನೆರವು ನೀಡಬಹುದು’ ಎಂದು ಸೂಚನೆ ಸೈಯದ್ ವಾಸೀಮ್ ಅವರಿಂದ ಬಂತು.
ಹಕ್ಕಿ ಸಂರಕ್ಷಣಾ ಕೇಂದ್ರದ ನಂಬರ್ 944964222 ಇದನ್ನೂ ಅವರು ನಮೂದಿಸಿದರು. ‘ಸಂಪರ್ಕಿಸಲು ಯತ್ನಿಸುತ್ತಿದ್ದೇನೆ ಬಿಜಿ ಬರುತ್ತಿದೆ’ ಎಂದು
ವಾಸೀಮ್ ಬರೆದರು.
‘ಬೆಸ್ಕಾಮ್ ಅಥವಾ ಬಿಬಿಎಂಪಿಯವರನ್ನು ಕರೆಯಿರಿ.
ಅವರ ಬಳಿಯೂ ದೊಡ್ಡ ದೊಡ್ಡ ಏಣಿಗಳಿವೆ. ಅವರು ನೆರವಾಗಬಹುದು’
ಎಂದರು ಮಂಜುಳಾ.
‘ಅವರನ್ನು ಕೂಡಾ ಕರೆಯಲು ಯತ್ನಿಸುತ್ತೇನೆ’
ಉತ್ತಿಸಿದರು ವಾಸೀಮ್. ‘ಪೀಪಲ್ ಫಾರ್ ಎನಿಮಲ್ಸ್’ನವರನ್ನು ಕರೆಯಿರಿ. ಇದು ಅವರ ನಂಬರ್ 9900025370. ನಾನು ಈಗಷ್ಟೇ ಅವರ ಬಳಿ ಮಾತನಾಡಿದೆ. ಅವರಿಗೆ ಲೊಕೇಷನ್ ಮತ್ತು ವಿಡಿಯೋ
ಬೇಕಂತೆ’ ಸುಧೀರ್ ತಮ್ಮ ಸಂದೇಶವನ್ನು ಪ್ರಕಟಿಸಿದರು.
‘ಇದು ಪೀಪಲ್ ಫಾರ್ ಎನಿಮಲ್ಸ್’ನವರ ಸ್ಥಿರ ದೂರವಾಣಿ ಸಂಖ್ಯೆ ‘080-28611986’ ಇದಕ್ಕೂ ಕರೆ
ಮಾಡಿ’ ಸುಧೀರ್ ಮತ್ತೆ ಸೂಚಿಸಿದರು.
‘ಈಗಾಗಲೇ ತಿಳಿಸಿ ಆಗಿದೆ. ಅವರು ಬಾಕಿ ಇರುವ
ಪ್ರಕರಣಗಳನ್ನು ಮುಗಿಸಿಕೊಂಡು ಬರುತ್ತಾರಂತೆ. ಆದರೆ ಅದು ತಡವಾಗಬಹುದೇನೋ?’ ನಾನು ಗಾಳಿಪಟದ ನೂಲನ್ನು
ಕತ್ತರಿಸಿದೆ. ಆದರೆ ನೂಲು ರೆಕ್ಕೆಗಳಿಗೆ ಸುತ್ತಿಕೊಂಡು ಕೊಂಬೆಗೆ ಸಿಕ್ಕಿ ಹಾಕಿಕೊಂಡಿದೆ’ ರಾಘವೇಂದ್ರ
ಕಾಮತ್ ಆತಂಕ ವ್ಯಕ್ತ ಪಡಿಸಿದರು. ‘ಹೌದಾ’ ಮಧು ನಾಯರ್ ಅವರಿಂದ ಅಸಹಾಯಕತೆಯ ಭಾವ ವ್ಯಕ್ತವಾಯಿತು.
‘ಉದಯಶಂಕರ್ ಅವರು ಬೀದಿ ದೀಪ ಸರಿ ಪಡಿಸುವವರನ್ನು
ಕರೆದಿದ್ದಾರೆ. ಬಹುಶ ಅವರು ನೆರವಿಗೆ ಬರಬಹುದು’ ರಾಘವೇಂದ್ರ
ಕಾಮತ್ ಆಶಾಭಾವನೆ ವ್ಯಕ್ತ ಪಡಿಸಿದರು.
‘ಇದು ಹೊರಮಾವು ಘಟಕದ ನಂಬರ್ 9449642222’
ಸುಧೀರ್ ಇನ್ನೊಂದು ಮೊಬೈಲ್ ನಂಬರ್ ನೀಡಿದರು.
‘ಈಗ ಬರಬಹುದು. ನನಗೆ ಉದ್ದವಾದ ಪೈಪ್ ಸಿಕ್ಕಿದೆ’
ನಾಯರ್, ಕಾಮತ್ ಸಂದೇಶಕ್ಕೆ ಸಂಘದ ಆಂತರಿಕ ಲೆಕ್ಕ
ಪರಿಶೋಧಕ ಮೊಹ್ಸಿನ್ ಪ್ರತಿಕ್ರಿಯಿಸಿದರು.
‘ಪ್ರಯತ್ನಿಸಿದೆ, ಅದೂ ಸಾಲುತ್ತಿಲ್ಲ’ ಮೊಹ್ಸಿನ್
ನಿರಾಶೆ.
‘ಇರಲಿ, ಹೇಗಿದ್ದರೂ ಅವರು ಬರುತ್ತಿದ್ದಾರಲ್ಲ.
ಕಾಯೋಣ’ ಮಧು ನಾಯರ್.
ಗಂಟೆ 11.31 ಆಗಿತ್ತು. ಹಕ್ಕಿ ಸಿಕ್ಕಿ ಹಾಕಿಕೊಂಡು
ಅದಾಗಲೇ ಸುಮಾರು 2 ಗಂಟೆಗಳಾಗಿತ್ತು. ಹಕ್ಕಿಯಿಂದ ಯಾವ ಸದ್ದೂ ಇರಲಿಲ್ಲ.
‘ಓಹ್ ಬಂದರು’ ಮೊಹ್ಸಿನ್ ಖುಷಿಯ ಸಂದೇಶ. ಮಧು
ನಾಯರ್ ಅವರಿಂದಲೂ ಖುಷಿಯ ಸಂಕೇತ.
ಸುಮಾರು 20 ನಿಮಿಷಗಳ ಬಳಿಕ ರಾಘವೇಂದ್ರ ಕಾಮತ್ ಸಂದೇಶ ಪ್ರಕಟವಾಯಿತು: ‘ಹಕ್ಕಿಯ ರಕ್ಷಣೆಯಾಯಿತು. ಧನ್ಯವಾದಗಳು
ಎಆರ್ ಆರ್ ಸಿ ಹಕ್ಕಿ ರಕ್ಷಣಾ ತಂಡಕ್ಕೆ’
ಸಂದೇಶದ ಜೊತೆಗೆ ಎಆರ್ ಆರ್ ಸಿ ತಂಡದ ಕಾರು,
ಏಣಿ, ನೂಲಿನ ಜೊತೆಗೆ ತಂಡದ ಕಾರ್ಯಾಚರಣೆಯ ವಿಡಿಯೋವನ್ನೂ ಕಾಮತ್ ಸಂದೇಶ ಹಂಚಿಕೊಂಡಿತ್ತು.
‘ಓಹ್. ನಿಮಗೆ ಇಡೀ ತಂಡಕ್ಕೆ ಧನ್ಯವಾದಗಳು’
ಆರೋನ್ ಕೃತಜ್ಞತೆ ಸಲ್ಲಿಸಿದರು. ‘ ಎಆರ್ ಆರ್ ಸಿ
ತಂಡಕ್ಕೆ ಧನ್ಯವಾದಗಳು’ ಸೈಯದ್ ವಾಸೀಮ್ ಸಂದೇಶ ಅದಕ್ಕೆ ಜೋಡಿಯಾಯಿತು. ಮಂಜುಳಾ, ಮಧು ನಾಯರ್ ಅವರಿಂದಲೂ ಖುಷಿಯ ಸಂದೇಶ ಹೊರ ಹೊಮ್ಮಿತು.
‘ಎಆರ್ ಆರ್ ಸಿ ತಂಡದಿಂದ ಅತ್ಯಂತ ಅದ್ಭತ
ಕೆಲಸ. ನಾನು ಅಭಿನಂದನೆಗಳನ್ನು ಸಲ್ಲಿಸುತ್ತೇನೆ’-ಇಡೀ ಬಡಾವಣೆಯ
ಪರವಾಗಿ ತಮ್ಮ ಕೃತಜ್ಞತೆ ಸಲ್ಲಿಸಿದರು ಸಂಘದ ಅಧ್ಯಕ್ಷ ಶಿವಪ್ಪ ಶಾಂತಪ್ಪನವರ್. ‘ಉತ್ತಮ ಕೆಲಸ’
ಎಂದು ದನಿ ಗೂಡಿಸಿದರು ವಿಕಾಸ್ ವರ್ಮಾ.
ಸುಮಾರು ಎರಡು ಗಂಟೆಗಳ ಕಾಲ ಜೀವನ್ಮರಣ ಹೋರಾಟ
ನಡೆಸಿದ ಪುಟ್ಟ ಹಕ್ಕಿ ಮರಿ ಕಡೆಗೂ ಸ್ವಚ್ಚಂದವಾಗಿ ಬಾನಿನಲ್ಲಿ ಹಾರಿತ್ತು. ಗಾಳಿಪಟದ ನೂಲು ಎಂಬ ‘ಮೃತ್ಯು ಪಾಶ’ದಿಂದ ಪಾರಾಗಿತ್ತು.
ಹಾಗಾದರೆ ಎ ಆರ್ ಆರ್ ಸಿ ತಂಡದವರು ಮಾಡಿದ್ದೇನು?
ಈ ಪುಟ್ಟ ವಿಡಿಯೋ ನೋಡಿ: