Showing posts with label Deepavali. Show all posts
Showing posts with label Deepavali. Show all posts

Tuesday, October 21, 2025

PARYAYA: ದೀಪಾವಳಿ: ದೀಪ, ಪಟಾಕಿ ಬಾಣಗಳ ಹಬ್ಬ!

 ದೀಪಾವಳಿ: ದೀಪ, ಪಟಾಕಿ ಬಾಣಗಳ ಹಬ್ಬ!

ಇದು ಸುವರ್ಣ ನೋಟ

ದೀಪಾವಳಿ ದೀಪಗಳ ಹಬ್ಬ, ಪಟಾಕಿ ಬಾಣಗಳ ಬಿರುಸಿನ ಹಬ್ಬ.

ಶ್ರೀರಾಮಚಂದ್ರನು ರಾವಣನನ್ನು ವಧಿಸಿದ ಬಳಿಕ ಅಯೋಧ್ಯೆಗೆ ವಾಪಸಾಗಿ ಪಟ್ಟವನ್ನೇರಿದ ಹಬ್ಬ. ಅಸುರ ನರಕಾಸುರನನ್ನು ವಧಿಸಿದ ದಿನದ ಹಬ್ಬ. ವಿಷ್ಣುವು ವಾಮನರೂಪಿಯಾಗಿ ಬಂದು ಮೂರು ಅಡಿ ಭೂಮಿಯನ್ನು ದಾನವಾಗಿ ಪಡೆದು ಬಲಿಯೇಂದ್ರ ಚಕ್ರವರ್ತಿಯನ್ನು ಪಾತಾಳಕ್ಕೆ ಕಳುಹಿಸಿದ ಹಬ್ಬ. ಪಾರ್ವತಿಯ ಕೇದಾರೇಶ್ವರನನ್ನಪೂಜಿಸಿ ಈಶ್ವರನನ್ನು ಪತಿಯಾಗಿ ಪಡೆದ ಹಬ್ಬ. ಲಕ್ಷ್ಮಿಯು ಪೂಜೆ ಸ್ವೀಕರಿಸಿ ಭಕ್ತರನ್ನು ಹರಸುವ ಹಬ್ಬ.ಗೋಮಾತೆಯನ್ನು ಪೂಜಿಸುವ ಹಬ್ಬ.

ಈ ಹಬ್ಬಕ್ಕೆ ದೇವರಿಗೆ ಹೂಗಳ ಸಿಂಗಾರದೊಂದಿಗೆ ಸಾಲು ದೀಪಗಳ ಹಣತೆ ಬೆಳಗಿಸುವುದರ ಜೊತೆಗೆ ಪಟಾಕಿ ಬಾಣಗಳ ಬಿರುಸು ಸಂಭ್ರಮವನ್ನು ಇಮ್ಮಡಿಗೊಳಿಸುತ್ತದೆ.

ಈ ದೃಶ್ಯಗಳನ್ನು ಸೆರೆ ಹಿಡಿದು ದೀಪಾವಳಿ ಹಬ್ಬದ ಸಂಭ್ರಮಕ್ಕೆ ಹಿರಿಯ ಪತ್ರಿಕಾ ಛಾಯಾಗ್ರಾಹಕ ವಿಶ್ವನಾಥ ಸುವರ್ಣ ಅವರು ಕಳೆಗಟ್ಟಿಸಿರುವುದು ಹೀಗೆ.

ಪಟಾಕಿ ಬಾಣಗಳ ಸುಂದರ ಛಾಯಾಚಿತ್ರಗಳನ್ನು ಪರ್ಯಾಯದ 
ʼಸುವರ್ಣ ನೋಟʼಕ್ಕೆ ಒದಗಿಸಿದ್ದಾರೆ.









ಈ ಚಿತ್ರಗಳಿಗೆ ಚಲನೆ ನೀಡಿ ವಿಡಿಯೋ ರೂಪಿಸಿದ್ದು ನೆತ್ರಕೆರೆ ಉದಯಶಂಕರ.

ಚಿತ್ರ ಹಾಗೂ ವಿಡಿಯೋದ ಸಂಗಮ ಇಲ್ಲಿದೆ.👇

ಚಿತ್ರಗಳ ಸಮೀಪ ನೋಟಕ್ಕೆ ಚಿತ್ರಗಳನ್ನು ಕ್ಲಿಕ್‌ ಮಾಡಿ. ವಿಡಿಯೋದ ವೀಕ್ಷಣೆಗೆ ಕೆಳಗಿನ ಚಿತ್ರ ಕ್ಲಿಕ್‌ ಮಾಡಿ. ಇಲ್ಲವೇ ಇಲ್ಲಿರುವ ಯೂ ಟ್ಯೂಬ್‌ವಿಡಿಯೋ ಲಿಂಕ್‌ ಕ್ಲಿಕ್‌ ಮಾಡಿ: https://youtu.be/ZqJD3In5guY?list=PLv2kXf-8UHyK3E-4qT6ApslDz_pUNsCZO




PARYAYA: ದೀಪಾವಳಿ: ದೀಪ, ಪಟಾಕಿ ಬಾಣಗಳ ಹಬ್ಬ!:   ದೀಪಾವಳಿ: ದೀಪ, ಪಟಾಕಿ ಬಾಣಗಳ ಹಬ್ಬ! ಇದು ಸುವರ್ಣ ನೋಟ ದೀ ಪಾವಳಿ ದೀಪಗಳ ಹಬ್ಬ, ಪಟಾಕಿ ಬಾಣಗಳ ಬಿರುಸಿನ ಹಬ್ಬ. ಶ್ರೀರಾಮಚಂದ್ರನು ರಾವಣನನ್ನು ವಧಿಸಿದ ಬಳಿಕ ಅಯೋ...

Monday, October 20, 2025

PARYAYA: ಐಎನ್‌ಎಸ್‌ ವಿಕ್ರಾಂತ್‌ ನಲ್ಲಿ ದೀಪಾವಳಿ ಸಂಭ್ರಮ

 ಐಎನ್‌ಎಸ್‌ ವಿಕ್ರಾಂತ್‌ ನಲ್ಲಿ ದೀಪಾವಳಿ ಸಂಭ್ರಮ

ದೀಪಾವಳಿ ಹಬ್ಬವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿವರ್ಷದಂತೆ, ಈದಿನ (೨೦.೧೦.೨೦೨೫) ಭಾರತದ ನೌಕಾಕಾಪಡೆಯ ಯೋಧರ ಜೊತೆಗೆ ಆಚರಿಸಿದರು.

ಗೋವಾದ ಕರಾವಳಿಯಲ್ಲಿ ಮತ್ತು ಐಎನ್‌ಎಸ್‌ ವಿಕ್ರಾಂತ್‌ನಲ್ಲಿ ಯೋಧರ ಜೊತೆಗೆ ಸಂವಾದ ನಡೆಸಿದ ಪ್ರಧಾನಿ, ಅವರೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲೂ ಪಾಲ್ಗೊಂಡರು.

ಐಎನ್‌ ಎಸ್‌ ವಿಕ್ರಾಂತ್‌ ನಲ್ಲಿ ಯೋಧರು ಮತ್ತು ಸಿಬ್ಬಂದಿ ಪ್ರದರ್ಶಿಸಿದ “ಕಸಮ್‌ ಸಿಂದೂರ್‌ ಕಿʼ ಹಾಡನ್ನು ಮೆಚ್ಚಿಕೊಂಡರು.

ಐಎನ್‌ಎಸ್‌ ಮುಖಾಂತರ ಪ್ರದರ್ಶನಗೊಂಡ ವಾಯುಬಲದ ವಿಡಿಯೋವನ್ನೂ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡರು.

ಪ್ರಧಾನಿ ಹಂಚಿಕೊಂಡ ವಿಡಿಯೋಗಳು ಇಲ್ಲಿವೆ.


PARYAYA: ಐಎನ್‌ಎಸ್‌ ವಿಕ್ರಾಂತ್‌ ನಲ್ಲಿ ದೀಪಾವಳಿ ಸಂಭ್ರಮ:   ಐಎನ್‌ಎಸ್‌ ವಿಕ್ರಾಂತ್‌ ನಲ್ಲಿ ದೀಪಾವಳಿ ಸಂಭ್ರಮ ದೀ ಪಾವಳಿ ಹಬ್ಬವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿವರ್ಷದಂತೆ, ಈದಿನ (೨೦.೧೦.೨೦೨೫) ಭಾರತದ ನೌಕಾಕಾಪಡೆಯ ಯ...

Sunday, October 23, 2022

PARYAYA: ಅಯೋಧ್ಯಾ ದೀಪಾವಳಿ: ವಿಶ್ವದಾಖಲೆ

 ಅಯೋಧ್ಯಾ ದೀಪಾವಳಿ: ವಿಶ್ವದಾಖಲೆ

ಅಯೋಧ್ಯೆ: ಹನ್ನೆರಡು ಲಕ್ಷದ ಎಪ್ಪತ್ತಾರು ಸಾವಿರ (12,76,000) ಹಣತೆಗಳನ್ನು ಬೆಳಗುವ ಮೂಲಕ 2022 ಅಕ್ಟೋಬರ್‌ 24ರ ಭಾನುವಾರ ಅಯೋಧ್ಯೆ ವಿಶ್ವದಾಖಲೆಯನ್ನು ಬರೆಯಿತು. ಇದರೊಂದಿಗೆ  ಲೇಸರ್‌ ಬೆಳಕಿನಲ್ಲಿ ರಾಮಾಯಣ, ಅಯೋಧ್ಯಾ ಮಂದಿರದ ದೃಶ್ಯಗಳೂ ಕಣ್ಮನ ಸೆಳೆದವು.

ಅಯೋಧ್ಯೆಯ ಅಭೂತಪೂರ್ವ ದೀಪಾವಳಿ, ಗಂಗಾರತಿ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರೊಂದಿಗೆ ಪಾಲ್ಗೊಂಡರು.

ಈ ಸಂದರ್ಭವನ್ನು ಕಣ್ತುಂಬಿಕೊಳ್ಳಲು ಕೆಳಗಿನ ವಿಡಿಯೋ ಕ್ಲಿಕ್‌ ಮಾಡಿ. ಇದು ಎನ್‌ಎನ್‌ಐ  ವಿಡಿಯೋ.


ಇನ್ನೊಂದು ವಿಡಿಯೋ ನೋಡಿ: 

PARYAYA: ಅಯೋಧ್ಯಾ ದೀಪಾವಳಿ: ವಿಶ್ವದಾಖಲೆ:   ಅಯೋಧ್ಯಾ ದೀಪಾವಳಿ: ವಿಶ್ವದಾಖಲೆ ಅಯೋಧ್ಯೆ : ಹನ್ನೆರಡು ಲಕ್ಷದ ಎಪ್ಪತ್ತಾರು ಸಾವಿರ (12,76,000) ಹಣತೆಗಳನ್ನು ಬೆಳಗುವ ಮೂಲಕ 2022 ಅಕ್ಟೋಬರ್‌ 24ರ ಭಾನುವಾರ ಅಯೋಧ್ಯ...