Showing posts with label Flash news News. Show all posts
Showing posts with label Flash news News. Show all posts

Saturday, March 25, 2023

PARYAYA: ಕಾವೇರಿಗಾಗಿ ಭಗೀರಥ ಹೋರಾಟ…!

 ಕಾವೇರಿಗಾಗಿ ಭಗೀರಥ ಹೋರಾಟ…!


ಬೆಂಗಳೂರಿನ ರಾಮಕೃಷ್ಣ ಹೆಗಡೆ ನಗರ ಮತ್ತು ಆಸುಪಾಸಿನ ಪ್ರದೇಶಗಳಲ್ಲಿ ಕಾವೇರಿ ನೀರು ಕೆಲ ಸಮಯದಿಂದ ಜೋರಾಗಿ ಸದ್ದು ಮಾಡುತ್ತಿದೆ. ಬ್ಯಾಟರಾಯನಪುರ ಶಾಸಕ ಶ್ರೀ ಕೃಷ್ಣ ಭೈರೇಗೌಡ ಅವರು ಇಲ್ಲಿ ಬೆಂಗಳೂರಿನಲ್ಲಿಯೇ ಅತಿ ದೊಡ್ಡದಾದ ಬೃಹತ್‌ ನೀರಿನ ಟ್ಯಾಂಕ್‌ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ್ದಾರೆ.

ನಾಗವಾರದ ಬಳಿಕ ಹೆಬ್ಬಾಳದಿಂದ ವಿಮಾನ ನಿಲ್ದಾಣಕ್ಕೆ ಹೋಗುವ ಮಾರ್ಗದವರೆಗಿನ ಈ ಪ್ರದೇಶದಲ್ಲಿ ಅಂದರೆ ಥಣಿಸಂದ್ರ, ರಾಮಕೃಷ್ಣ ಹೆಗಡೆ ನಗರ, ಶಬರಿ ಬಡಾವಣೆ, ರಾಮಕೃಷ್ಣ ಹೆಗಡೆ ನಗರ, ಎಂಸಿಎಸಿಎಚ್‌, ಶಿವರಾಮ ಕಾರಂತ ನಗರ, ಸೆಂಟ್ರಲ್‌ ಎಕ್ಸೈಸ್‌ ಬಡಾವಣೆ, ಸಂಪಿಗೆ ಹಳ್ಳಿ, ಜಕ್ಕೂರು, ಭಾರತೀಯ ಸಿಟಿ, ಚೊಕ್ಕನಹಳ್ಳಿ, ವಿನಾಯಕ ನಗರ, ಕೋಗಿಲು, ಬಾಗಲೂರು ಸೇರಿದಂತೆ ಈ ಪ್ರದೇಶದಲ್ಲಿ ಅಭಿವೃದ್ಧಿ ಜೋರಾಗಿದೆ. ಮೂಲಭೂತ ಸವಲತ್ತುಗಳನ್ನು ಒದಗಿಸುವ ನಿಟ್ಟಿನಲ್ಲೂ ಸಾಕಷ್ಟು ಕ್ರಮಗಳಾಗುತ್ತಿವೆ.

ಇಲ್ಲಿ ನೀರಿನ ಸಮಸ್ಯೆ ಮಾತ್ರ ಬಹಳ ವರ್ಷಗಳಿಂದ ಕಾಡುತ್ತಿದ್ದು ಬಹುತೇಕ ಜನರಿಗೆ ಕೊಳವೆ ಬಾವಿ ನೀರೇ ಜೀವನಕ್ಕೆ ಆಧಾರವಾಗಿದೆ. ಈ ಹಿನ್ನೆಲೆಯಲ್ಲೇ ಈ ಪ್ರದೇಶ ಅಂದರೆ ಬ್ಯಾಟರಾಯನಪುರ ಕ್ಷೇತ್ರದ ಶಾಸಕರಾದ ಶ್ರೀ ಕೃಷ್ಣ ಭೈರೇಗೌಡ ಅವರು ಇಲ್ಲಿಗೆ ಕಾವೇರಿ ನೀರನ್ನು ತರುವ ಮೂಲಕ ಶಾಶ್ವತ ಪರಿಹಾರ ತರಬೇಕು ಎಂಬ ಪ್ರಯತ್ನಕ್ಕೆ ಕೈ ಹಾಕಿದರು.

ನಾಲ್ಕೈದು ವರ್ಷಗಳ ಹಿಂದೆ ಅಂದರೆ ೨೦೧೮-೧೯ರ ಸುಮಾರಿಗೆ ಜಿಕೆವಿಕೆಯಿಂದ ಈ ಪ್ರದೇಶಕ್ಕೆ ಕಾವೇರಿ ನೀರು ಒದಗಿಸಲು ನೀರಿನ ಪೈಪ್‌ ಲೈನ್‌ ಹಾಕಿಸಿದರು. ಹಾಗೆಯೇ ಇಲೊಂದು ಬೃಹತ್‌ ನೀರಿನ ಟ್ಯಾಂಕ್‌ ನಿರ್ಮಿಸಿ ಅದರ ಮೂಲಕ ಕಾವೇರಿ ನೀರನ್ನು ಈ ಪ್ರದೇಶಕ್ಕೆ ಹರಿಸಬೇಕು ಎಂಬ ಯೋಜನೆ ಹಾಕಿಕೊಂಡು ಕಾರ್ಯ ಪ್ರವೃತ್ತರಾದರು. ಜಾಗವನ್ನೂ ಚೊಕ್ಕನಹಳ್ಳಿ ಪ್ರದೇಶದಲ್ಲಿ ಗುರುತಿಸಿ, ಜಲಮಂಡಳಿಗೆ ಜಾಗವನ್ನೂ ಮಂಜೂರು ಮಾಡಿಸಿಕೊಂಡರು.

ಈ ಬೃಹತ್‌ ನೀರಿನ ಟ್ಯಾಂಕಿಗೆ ಕಾವೇರಿ ನದಿಯಿಂದ ನೀರು ತರಲು, ಇಲ್ಲಿಂದ ಬಡಾವಣೆಗಳಿಗೆ ಅಪಾರ್ಟ್‌ಮೆಂಟುಗಳಿಗೆ ನೀರು ಹರಿಸಲು ಕೊಳವೆಗಳ ಜಾಲವನ್ನೂ ನಿರ್ಮಿಸಿದರು. ಆದರೆ ಈ ಪ್ರದೇಶದ ಜನರ ದುರಾದೃಷ್ಟ. ಜಿಕೆವಿಕೆಯಿಂದ ಹಾಕಿದ ಕೊಳವೆಯ ಮೂಲಕ ಬಾಲಾಜಿ ಕೃಪಾ ಬಡಾವಣೆಯವರೆಗೆ ನೀರು ಸರಾಗವಾಗಿ ಬರಲಿಲ್ಲ.


ಜಲಮಂಡಳಿ ಅಧಿಕಾರಿಗಳಿಗೆ ಜನ ಮಾಡಿದ ಮನವಿಗಳೆಲ್ಲ ನೀರ ಮೇಲಣ ಹೋಮವಾದವು. ಒಂದಿಲ್ಲ ಒಂದು ಕಾರಣದಿಂದ ಅಧಿಕಾರಿಗಳು ಕೊಟ್ಟ ಭರವಸೆ ಈಡೇರಲಿಲ್ಲ. ಜನ ಸಹಜವಾಗಿ ಸಿಟ್ಟಿಗೆದ್ದರು. ಚುನಾವಣೆ ಬಹಿಷ್ಕಾರದ ಬಗ್ಗೆ ಮಾತನಾಡತೊಡಗಿದರು. ಈ ವಿಚಾರ ಸಹಜವಾಗಿಯೇ ಪತ್ರಿಕೆ ಹಾಗೂ ಟಿವಿ ಮಾಧ್ಯಮಗಳಲ್ಲೂ ಪ್ರತಿಫಲಿಸಿದವು.

ಆದರೆ ಈ ಪ್ರದೇಶಕ್ಕೆ ಕಾವೇರಿ ಹರಿಸುವ ಭಗೀರಥ ಪ್ರಯತ್ನ ನಡೆಸಿದ್ದ ಶಾಸಕ ಶ್ರೀ ಕೃಷ್ಣ ಭೈರೇಗೌಡರು ಹೇಳುವ ಪ್ರಕಾರ ಸಮಸ್ಯೆಯ ಮೂಲ ಕಾರಣ ಬೇರೆಯೇ ಆಗಿತ್ತು. ಈ ಜಾಗದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದ್ದ ನೀರಿನ ಟ್ಯಾಂಕಿಗಾಗಿ ಗುರುತಿಸಲಾಗಿದ್ದ ಸರ್ಕಾರಿ ಜಾಗ ಭೂ ವಿವಾದಕ್ಕೆ ಸಿಕ್ಕಿಹಾಕಿಕೊಂಡಿತ್ತು. ಈ ಸರ್ಕಾರಿ ಜಾಗವನ್ನು ಕಬಳಿಸಲು ಇಲ್ಲಿ ನಿರಂತರ ಯತ್ನ ನಡೆದಿತ್ತು. ಈ ವಿವಾದ ಕೋರ್ಟ್‌ ಮೆಟ್ಟಿಲನ್ನು ಕೂಡಾ ಏರಿತ್ತು. ಈ ಸಿಕ್ಕುಗಳು ಕಾಮಗಾರಿಯನ್ನು ವಿಳಂಬಗೊಳಿಸಿದವು.

ಕಟ್ಟ ಕಡೆಗೂ ೨೦೨೩ ಮಾರ್ಚ್‌ ೨೪ರ ಶುಕ್ರವಾರ ಈ ನೀರಿನ ಟ್ಯಾಂಕಿಗಾಗಿ ಭೂಮಿ ಪೂಜೆ ನಡೆಸುವ ಅವಕಾಶ ಒದಗಿ ಬಂತು. ಜಾಗ ಕಬಳಿಸುವ ಸಲುವಾಗಿ ಸೃಷ್ಟಿಸಲಾಗಿದ್ದ ದಾಖಲೆಗಳೆಲ್ಲವೂ ನಕಲಿ ಎಂಬುದಾಗಿ ಫೋರೆನ್ಸಿಕ್‌ ಲ್ಯಾಬ್‌ ವರದಿಗಳಿಂದ ಖಚಿತವಾಗಿ ಆ ವರದಿಗಳನ್ನು ಆಧರಿಸಿ ನ್ಯಾಯಾಲಯ ಜಲಮಂಡಳಿ ಪರವಾಗಿ ನ್ಯಾಯಾಲಯ ತೀರ್ಪು  ಕೊಟ್ಟಿದೆ.

ಇದನ್ನು ಆಧರಿಸಿಯೇ ಭೂಮಿ ಪೂಜೆ ನೆರವೇರಿಸಿದ ಈ ಸಂದರ್ಭದಲ್ಲಿ ಕೃಷ್ಣ ಭೈರೇಗೌಡ ಅವರು ʼಕಾವೇರಿ ನೀರು ತರಲು ನಡೆಸಿದ ಈ ʼಭಗೀರಥʼ ಹೋರಾಟದ ಕಥೆಯನ್ನು ಸವಿಸ್ತಾರವಾಗಿಯೇ ಬಿಚ್ಚಿಟ್ಟರು. ಸಂಭ್ರಮದ ವಾತಾವರಣದಲ್ಲಿ ಭೂಮಿ ಪೂಜೆ ನೆರವೇರಿಸಿದರು. ಈ ಟ್ಯಾಂಕ್‌ ಸಾಮರ್ಥ್ಯ ೬೫ ಎಂಎಲ್‌ ಡಿ ಆಗಿದ್ದು (ದಿನಕ್ಕೆ ೬೫೦ ಲಕ್ಷ ಲೀಟರ್), ಇದನ್ನು  ೧೫ ಎಂಎಲ್‌ ಡಿಯಷ್ಟು ಹೆಚ್ಚಿಸುವ ಅವಕಾಶಗಳಿವೆ. ಇದು ಆಸು ಪಾಸಿನ ಸುಮಾರು ಒಂದು ಲಕ್ಷ ಜನರ ನೀರಿನ ಸಮಸ್ಯೆ ನಿವಾರಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತ ಪಡಿಸಿದರು.

ಓದಿರಿ: ಬಾಲಾಜಿ ಕೃಪಾ ಬಡಾವಣೆಗೆ ‘ಕಾವೇರಿ’ ಆಗಮನ

PARYAYA: ಕಾವೇರಿಗಾಗಿ ಭಗೀರಥ ಹೋರಾಟ…!:   ಕಾವೇರಿಗಾಗಿ ಭಗೀರಥ ಹೋರಾಟ…! ಬೆಂಗಳೂರಿನ ರಾಮಕೃಷ್ಣ ಹೆಗಡೆ ನಗರ ಮತ್ತು ಆಸುಪಾಸಿನ ಪ್ರದೇಶಗಳಲ್ಲಿ ಕಾವೇರಿ ನೀರು ಕೆಲ ಸಮಯದಿಂದ ಜೋರಾಗಿ ಸದ್ದು ಮಾಡುತ್ತಿದೆ. ಬ್ಯಾಟ...

Sunday, February 6, 2022

PARYAYA: ಗಾಯನ ನಿಲ್ಲಿಸಿದ ’ಗಾನ ಕೋಗಿಲೆ’ ಲತಾ ಮಂಗೇಶ್ಕರ್

 ಗಾಯನ ನಿಲ್ಲಿಸಿದ ’ಗಾನ ಕೋಗಿಲೆ’ ಲತಾ ಮಂಗೇಶ್ಕರ್

ಮುಂಬೈ: ‘ಭಾರತದ ಗಾನ ಕೋಗಿಲೆ’ ಎಂಬುದಾಗಿಯೇ  ಖ್ಯಾತರಾಗಿದ್ದ ಗಾಯಕಿ ಲತಾ ಮಂಗೇಶ್ಕರ್ (೯೨) ಅವರು 2022 ಫೆಬ್ರುವರಿ 6ರ ಭಾನುವಾರ ನಿಧನರಾದರು.

ಕೋವಿಡ್-೧೯ ದೃಢಪಟ್ಟ ಹಿನ್ನೆಲೆ ಚಿಕಿತ್ಸೆಗಾಗಿ ಅವರನ್ನು ಮುಂಬೈಯ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಜನವರಿ ೮ರಂದು ದಾಖಲಿಸಲಾಗಿತ್ತು. ಕೆಲವು ವಾರಗಳಿಂದ ಅವರು ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದರು.

ಇತ್ತೀಚೆಗೆ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಾಣಿಸಿಕೊಂಡಿತ್ತಾದರೂ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ, ಭಾನುವಾರ ಬೆಳಿಗ್ಗೆ ಅವರು ಅಗಲಿದರು.

ಗಾನ ಕೋಗಿಲೆ

ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರು ಸುಮಾರು ಏಳು ದಶಕಗಳ ಕಾಲ ಹಿನ್ನೆಲೆ ಗಾಯಕಿಯಾಗಿ ಮನರಂಜಿಸಿದ್ದಾರೆ. ೧೯೪೨ರಿಂದ ಆರಂಭವಾದ ಅವರ ಗಾಯನ ಯಾನದಲ್ಲಿ ೩೦,೦೦೦ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ.  ಏ ಮೇರೆ ವತನ್ ಕೆ ಲೋಗೊ, ಲಗ್ ಜಾ ಗಲೇ, ಏಹ್ ಕಹಾ ಆಗಯೇ ಹಮ್ ಹಾಗೂ ಪ್ಯಾರ್ ಕಿಯಾ ತೊ ಡರ್ನಾ ಕ್ಯಾ,...ಸೇರಿದಂತೆ ಅವರ ನೂರಾರು ಹಾಡುಗಳು ಇವತ್ತಿಗೂ ಅಪಾರ ಜನಪ್ರಿಯತೆ ಪಡೆದಿವೆ.

ಭಾರತರತ್ನ, ಪದ್ಮ ವಿಭೂಷಣ, ಪದ್ಮಭೂಷಣ ಮತ್ತು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತರಾಗಿರುವ ಲತಾ ಮಂಗೇಶ್ಕರ್ ಅವರು ಭಾರತೀಯ ಚಿತ್ರರಂಗದ ಐಕಾನ್ ಆಗಿದ್ದು, ದೊಡ್ಡ ಸಂಖ್ಯೆಯ ಹಿಂದಿ ಚಲನಚಿತ್ರಗಳಿಗೆ ಹಿನ್ನೆಲೆ ಗಾಯಕಿಯಾಗಿ ಹಾಡಿದ್ದಾರೆ. ಮರಾಠಿ ಮತ್ತು ಬಂಗಾಳಿ ಸೇರಿದಂತೆ ಹಲವಾರು ಪ್ರಾದೇಶಿಕ ಭಾಷೆಗಳಲ್ಲೂ ಅವರು ಹಲವಾರು ಹಾಡುಗಳನ್ನು ಹಾಡಿದ್ದಾರೆ.

ಪ್ರತಿಷ್ಠಿತ ಗಾಯಕ ಮನೆತನಕ್ಕೆ ಸೇರಿದ ಲತಾ ಮಂಗೇಶ್ಕರ್ ಅವರು ಸಂಗೀತ ರಚನೆ ಹಾಗೂ ಕೆಲವು ಚಿತ್ರಗಳ ನಿರ್ಮಾಣವನ್ನೂ ಮಾಡಿದ್ದಾರೆ.

೧೯೨೯ರಲ್ಲಿ ಜನಿಸಿದ್ದ ಲತಾ ಅವರು ಐವರು ಮಕ್ಕಳ ಪೈಕಿ ಹಿರಿಯವರು. ಶಾಸ್ತೀಯ ಸಂಗೀತಗಾರರಾಗಿದ್ದ ತಂದೆ ಪಂಡಿತ ದೀನಾನಾಥ್ ಮಂಗೇಶ್ಕರ್ ಅವರು ಕಿರಿಯ ಲತಾ ಮಂಗೇಶ್ಕರ್ ಅವರಿಗೆ ಸಂಗೀತದ ಮೊದಲ ಪಾಠ ಮಾಡಿದ್ದರು. ೧೯೪೨ರಲ್ಲಿ ತಂದೆ ಮೃತರಾದ ಬಳಿಕ, ೧೩ರ ಹರೆಯದ ಲತಾ ಮಂಗೇಶ್ಕರ್ ಅವರು ಮರಾಠಿ ಸಿನಿಮಾಗಳಿಗೆ ಹಾಡುವ ಮೂಲಕ ಗಾಯನ ವೃತ್ತಿಯನ್ನು ಆರಂಭಿಸಿದರು.

೧೯೪೫ರಲ್ಲಿ ಲತಾ ಅವರು ಮಧುಬಾಲಾ ನಟನೆಯ ಮಹಲ್ ಚಲಚಿತ್ರದ ’ಆಯೇಗಾ ಆನೇವಾಲ’ ಚಿತ್ರದ ಮೂಲಕ ಮೊತ್ತ ಮೊದಲಿಗೆ ಪ್ರಸಿದ್ಧಿಗೆ ಬಂದರು. ಆ ಬಳಿಕ ಲತಾ ಮಂಗೇಶ್ಕರ್ ಅವರ ಧ್ವನಿ ಮತ್ತು ಗಾಯನ ವೃತ್ತಿ ಹೊಸ ಉತ್ತುಂಗಕ್ಕೆ ಏರಿತು..

ಬೈಜು ಬಾವ್ರಾ, ಮದರ್ ಇಂಡಿಯಾ ಮತ್ತು ಮುಘಲ್-ಇ-ಆಜಂ ದಂತಹ ಚಿತ್ರಗಳಲ್ಲಿ ನೌಶದ್ ರಚನೆಯ ರಾಗ ಆಧಾರಿತ ಹಾಡುಗಳನ್ನು ಅವರು ಹಾಡಿದರು. ಶಂಕರ್ ಜೈಕಿಷನ್ ಅವರ ಹಿಟ್ ಸಿನಿಮಾಗಳಾದ ಬರ್ಸಾತ್, ಶ್ರೀ ೪೨೦, ಸಲೀಲ್ ಚೌಧರಿ ಮಧುಮತಿ ಚಿತ್ರದ ಹಾಡುಗಳು ಲತಾ ಮಂಗೇಶ್ಕರ್ ಅವರಿಗೆ ಅತ್ಯುತ್ತಮ ಹಿನ್ನೆಲೆಗಾಯಕಿ  ಫಿಲಂಫೇರ್ ಪ್ರಶಸ್ತಿಯನ್ನು ತಂದು ಕೊಟ್ಟವು. ಬಳಿಕ ಬೀಸ್ ಸಾಲ್ ಬಾದ್, ಖಾನ್ದಾನ್ ಮತ್ತು ಜೀನೆ ಕಿ ರಾಹ್ ಚಿತ್ರಗಳ ಹಾಡುಗಳಿಗೂ ಅವರಿಗೆ ಇನ್ನೂ ಮೂರು ಫಿಲಂಫೇರ್ ಪ್ರಶಸ್ತಿಗಳು ಬಂದವು. ಪರಿಚಯ್, ಕೋರಾ ಕಾಗಜ್ ಮತ್ತು ಲೇಕಿನ್ ಚಿತ್ರಗಳಲ್ಲಿ ಅತ್ಯುತ್ತಮ ಹಿನ್ನೆಲೆ ಗಾಯಕಿಯಾಗಿ ಅವರಿಗೆ  ಮೂರು ರಾಷ್ಟ್ರೀಯ ಪ್ರಶಸ್ತಿಗಳು ಬಂದವು.

ಪಾಕೀಜಾ, ಅಭಿಮಾನ್, ಅಮರ್ ಪ್ರೇಮ್, ಆನಂದಿ, ಸಿಲ್ ಸಿಲಾ, ಚಾಂದನಿ, ಸಾಗರ್, ರುಡಾಲಿ, ದಿಲ್ ವಾಲೇ ದುಲ್ಹನಿಯಾ ಲೇ ಜಾಯೇಂಗೆ ಇತ್ಯಾದಿ ಚಿತ್ರಗಳು ಅವರ ಅತ್ಯುತ್ತಮ ಹಿನ್ನೆಲೆ ಗಾಯನಕ್ಕಾಗಿ ಪ್ರಸಿದ್ಧವಾಗಿವೆ.

ಲತಾ ಮಂಗೇಶ್ಕರ್ ಅವರ ದೇಶಭಕ್ತಿ ಗೀತೆಗಳಲ್ಲಿ ೧೯೬೨ರಲ್ಲಿ ಚೀನಾ ಜೊತೆಗಿನ ಸಮರದಲ್ಲಿ ಹುತಾತ್ಮರಾದ ಭಾರತೀಯ ಯೋಧರ ಸ್ಮರಣೆಗಾಗಿ ಹಾಡಿದ ’ಆಯೇ ಮೇರೆ ವತನ್ ಕೆ ಲೋಗೋ’ ಅತ್ಯಂತ ಖ್ಯಾತಿ ಪಡೆದ ಹಾಡಾಗಿದ್ದು ಇದನ್ನು ೧೯೬೩ರ ಗಣರಾಜ್ಯೋತ್ಸವ ದಿನ ನವದೆಹಲಿಯ ನ್ಯಾಷನಲ್ ಸ್ಟೇಡಿಯಂನಲ್ಲಿ ಹಾಡಲಾಗಿತ್ತು. ಲತಾ ಮಂಗೇಶ್ಕರ್ ಅವರು ಈ ಹಾಡನ್ನು ರಾಷ್ಟ್ರಪತಿ ಎಸ್. ರಾಧಾಕೃಷ್ಣನ್ ಮತ್ತು ಪ್ರಧಾನಿ ಜವಾಹರಲಾಲ್ ನೆಹರೂ ಅವರ ಸಮ್ಮುಖದಲ್ಲಿ ಹಾಡಿದ್ದರು.

ಲತಾ ಮಂಗೇಶ್ಕರ್ ಅವರು ಹಿಡಿಯಷ್ಟು ಮರಾಠಿ ಚಿತ್ರಗಳಿಗೆ ಸಂಗೀತ ರಚನೆಯನ್ನೂ ಮಾಡಿದ್ದಾರೆ. ಇವುಗಳಲ್ಲಿ ಸಧಿ ಮನಸೆ ಚಿತ್ರವು  ಅವರಿಗೆ ಮಹಾರಾಷ್ಟ್ರ ರಾಜ್ಯ ಸರ್ಕಾರದ ಅತ್ಯುತ್ತಮ ಸಂಗೀತ ನಿರ್ದೇಶಕಿ ಪ್ರಶಸ್ತಿಯನ್ನು ೧೯೬೫ರಲ್ಲಿ ತಂದುಕೊಟ್ಟಿತ್ತು. ಅವರು ನಿರ್ಮಿಸಿದ ಕೆಲವೇ ಕೆಲವು ಚಿತ್ರಗಳ ಪೈಕಿ ೧೯೯೦ರಲ್ಲಿ ನಿರ್ಮಿಸಿದ ಲೇಖಿನ್ ಚಿತ್ರವೂ ಒಂದಾಗಿದ್ದು ಅದರಲ್ಲಿ ಸ್ವತಃ ಲತಾ ಅವರೇ ಹಾಡಿದ್ದರು.

ಲತಾ ಮಂಗೇಶ್ಕರ್ ಅವರ ಮೈ ನವಿರೇಳಿಸುವ ಒಂದು ಹಾಡಿನ ಪರಿ ಇಲ್ಲಿದೆ ನೋಡಿ:



PARYAYA: ಗಾಯನ ನಿಲ್ಲಿಸಿದ ’ಗಾನ ಕೋಗಿಲೆ’ ಲತಾ ಮಂಗೇಶ್ಕರ್:   ಗಾಯನ ನಿಲ್ಲಿಸಿದ ’ಗಾನ ಕೋಗಿಲೆ’ ಲತಾ ಮಂಗೇಶ್ಕರ್ ಮುಂಬೈ: ‘ಭಾರತದ ಗಾನ ಕೋಗಿಲೆ’ ಎಂಬುದಾಗಿಯೇ   ಖ್ಯಾತರಾಗಿದ್ದ ಗಾಯಕಿ ಲತಾ ಮಂಗೇಶ್ಕರ್ ( ೯೨ ) ಅವರು 2022 ಫೆಬ್ರು...

Wednesday, October 2, 2019

ಸುಬ್ರಹ್ಮಣ್ಯದ ಕಡೆಗೆ ಬ್ರಹ್ಮರಥದ ಪಯಣ

ಸುಬ್ರಹ್ಮಣ್ಯದ ಕಡೆಗೆ ಬ್ರಹ್ಮರಥದ ಪಯಣ
ಸುಬ್ರಹ್ಮಣ್ಯ: ಕರ್ನಾಟಕದ ಪ್ರಸಿದ್ಧ ಯಾತ್ರಾ ಸ್ಥಳಗಳಲ್ಲಿ ಒಂದಾಗಿರುವ ದಕ್ಷಿಣ ಕನ್ನಡ ಜಿ್ಲ್ಲೆಯ  ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೂತನ ಬ್ರಹ್ಮರಥ ಸಮರ್ಪಣೆಯಾಗಲಿದ್ದು, ಬ್ರಹ್ಮರಥವು ಇದೀಗ ಕೋಟೇಶ್ವರದಿಂದ ಹೊರಟು ಸುಬ್ರಹ್ಮಣ್ಯದ ಸಮೀಪಕ್ಕೆ ಬಂದಿದ್ದು, ಅಕ್ಟೋಬರ್  2ರ ಬುಧವಾರ ಸುಬ್ರಹ್ಮಣ್ಯವನ್ನು ತಲುಪಲಿದೆ.
ವಿವಿಧ ಜಾತಿಯ 2000 ಸಿ ಎಫ್ ಟಿ  ಮರ ಬಳಸಿ ಬ್ರಹ್ಮರಥವನ್ನು ನಿರ್ಮಿಸಲಾಗಿದೆ. ಕೋಟೇಶ್ವರದಲ್ಲಿ ಕೇವಲ 7 ತಿಂಗಳಲ್ಲಿ ಸುಂದರವಾದ ಕೆತ್ತನೆಗಳೊಂದಿಗೆ ನೂತನ ಬ್ರಹ್ಮರಥ ನಿರ್ಮಾಣವಾಗಿದೆ.
ನವರಾತ್ರಿ ಆರಂಭವಾಗುವ ಹೊತ್ತಿಗೆ,  ಸೆಪ್ಟೆಂಬರ  29 ರಂದು ರಥವನ್ನು ದೇವಾಲಯಕ್ಕೆ ಬಿಟ್ಟು ಕೊಡಲಾಗಿದ್ದು.  ಸೆಪ್ಟೆಂಬರ  30 ರಂದು ಬೆಳಗ್ಗೆ ರಥವು ಟ್ರಾಲಿಯ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊರಟಿದೆ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರಸ್ತುತ  ಸುಮಾರು 400 ವರ್ಷಗಳ ಪುರಾತನವಾದ ರಥ ಇದೆ. ಪುರಾತನ ರಥದ ಅಳತೆಗೆ, ಶಾಸ್ತ್ರಕ್ಕೆ ಯಾವುದೇ ಧಕ್ಕೆಯಾಗದಂತೆ ಅದೇ ಮಾದರಿಯಲ್ಲಿ ಈಗ ಹೊಸ ಬ್ರಹ್ಮರಥ ನಿರ್ಮಾಣ ಮಾಡಲಾಗಿದೆ.
ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ ಮಾರ್ಗದರ್ಶನದಲ್ಲಿ ಕೋಟೇಶ್ವರದ  ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಶಾಲೆಯಲ್ಲಿ ಬ್ರಹ್ಮರಥ ನಿರ್ಮಾಣಗೊಂಡಿದೆಉದ್ಯಮಿ ಮುತ್ತಪ್ಪ ರೈ ಮತ್ತು ಅಜಿತ್ ರೈ ಕಡಬ ದಾನ ರೂಪದಲ್ಲಿ ಸುಮಾರು 2 ಕೋಟಿ ರೂ ವೆಚ್ಚದಲ್ಲಿ  ರಥವನ್ನು ನಿರ್ಮಿಸಿಕೊಟ್ಟಿದ್ದಾರೆ.
ಬ್ರಹ್ಮರಥವು ಸುಬ್ರಹ್ಮಣ್ಯಕ್ಕೆ ಸಾಗುತ್ತಿರುವ ಸಡಗರದ ದೃಶ್ಯ  ಇಲ್ಲಿದೆ. ಇದು ಬಿಸಿರೊಡಿನ  ದೃಶ್ಯ. ಕೃಪೆ: (ವಿಟ್ಲ ಸುದ್ದಿಗಳು)  ವಿಡಿಯೋ ವೀಕ್ಷಿಸಲು ಇಲ್ಲಿ ಕ್ಲಿಕ್  ಮಾಡಿರಿ



Thursday, August 29, 2019

ಪಾಕಿಸ್ತಾನದಿಂದ ಪರಮಾಣು ಸಾಮರ್ಥ್ಯದ ಖಂಡಾಂತರ ಕ್ಷಿಪಣಿ ಪರೀಕ್ಷೆ

ಪಾಕಿಸ್ತಾನದಿಂದ ಪರಮಾಣು ಸಾಮರ್ಥ್ಯದ ಖಂಡಾಂತರ ಕ್ಷಿಪಣಿ ಪರೀಕ್ಷೆ
ನವದೆಹಲಿ: ಯುದ್ಧೋನ್ಮತ್ತ  ಪಾಕಿಸ್ತಾನವು ಮೇಲ್ಮೈಯಿಂದ ಮೇಲ್ಮೈಗೆ ಚಿಮ್ಮುವ ಖಂಡಾಂತರ ಘಜ್ನವಿ ಕ್ಷಿಪಣಿಯ ರಾತ್ರಿ ತರಬೇತಿ ಪರೀಕ್ಷೆಯನ್ನು  2019 ಆಗಸ್ಟ್ 29ರ  ಗುರುವಾರ ನಸುಕಿನಲ್ಲಿ ನಡೆಸಿತು. 

ಕಾಶ್ಮೀರ ವಿಷಯವನ್ನು ಅಂತಾರಾಷ್ಟ್ರೀಯ ಸಮಸ್ಯೆಯನ್ನಾಗಿ ಮಾಡುವ ತನ್ನ ಯತ್ನಗಳ ನಡುವೆಯೇ ಪಾಕಿಸ್ತಾನ
ಅಣ್ವಸ್ತ್ರ ಸಾಗಣೆ ಶಕ್ತಿಯನ್ನು ಹೊಂದಿರುವ ಕ್ಷಿಪಣಿ ಪರೀಕ್ಷೆಯನ್ನು ನಡೆಸಿದೆ.
ಕ್ಷಿಪಣಿ ಉಡಾವಣೆ ಯಶಸ್ವಿಯಾಗಿದೆ ಎಂದು ಪಾಕಿಸ್ತಾನ ಸಶಸ್ತ್ರ ಪಡೆಗಳ ವಕ್ತಾರ ಮೇಜರ್ ಜನರಲ್ ಆಸಿಫ್ ಗಫೂರ್ ಟ್ವೀಟ್ ಮಾಡಿದರು.
ಘಜ್ನವಿ ಖಂಡಾಂತರ ಕ್ಷಿಪಣಿಯು ೨೯೦ ಕಿ.ಮೀ ವರೆಗೆ  ಹಲವಾರು ಮಾದರಿಯ ಸಿಡಿತಲೆಗಳನ್ನು ತಲುಪಿಸುವ ಸಾಮರ್ಥ್ಯ ಹೊಂದಿದೆ ಎಂದು ಮಿಲಿಟರಿ ವಕ್ತಾರರು ತಿಳಿಸಿದರು.

 ಪಾಕಿಸ್ತಾನದ  ಅಧ್ಯಕ್ಷ ಆರಿಫ್ ಅಲ್ವಿ ಮತ್ತು ಪ್ರಧಾನಿ ಇಮ್ರಾನ್ ಖಾನ್  ಈ ಸಾಧನೆಗಾಗಿ ವಿಜ್ಞಾನಿಗಳ ತಂಡಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಮತ್ತು ರಾಷ್ಟ್ರವನ್ನು ಅಭಿನಂದಿಸಿದ್ದಾರೆ ಎಂದು ಗಫೂರ್  ಹೇಳಿದರು.

ಪಾಕಿಸ್ತಾನವು ಮಿಲಿಟರಿ ಕ್ಷಿಪಣಿ ಉಡಾವಣೆಯ ೩೦ ಸೆಕೆಂಡುಗಳ ವಿಡಿಯೋ ತುಣುಕನ್ನು ಮತ್ತು ಉಡಾವಣೆಗೆ ಮುನ್ನ ಕ್ಷಿಪಣಿಯೊಂದಿಗೆ ಪೋಸ್ ನೀಡಿದ ಮಿಲಿಟರಿ ಅಧಿಕಾರಿಗಳ ಗುಂಪನ್ನು ಸಹ ಟ್ವೀಟ್ ಮಾಡಿತು.
ಕಾಶ್ಮೀರ ಸಮಸ್ಯೆಯನ್ನು ರಾಜತಾಂತ್ರಿಕ ಮಟ್ಟದಲ್ಲಿ ಅಂತರರಾಷ್ಟ್ರೀಯವನ್ನಾಗಿ ಮಾಡುವ ಹಾಗೂ ಉಭಯ ದೇಶಗಳ ನಡುವೆ ಪರಮಾಣು ಯುದ್ಧ ಭೀತಿಯನ್ನು ಹೆಚ್ಚಿಸುವ  ದ್ವಿಮುಖ ಪ್ರಯತ್ನದ ಭಾಗವಾಗಿ ಈ ಕ್ಷಿಪಣಿ ಪರೀಕ್ಷೆ ನಡೆದಿದೆ ಎಂದು ರಾಜತಾಂತ್ರಿಕ ವಲಯಗಳು ಭಾವಿಸಿವೆ.

Saturday, August 17, 2019

ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನಕ್ಕೆ ಚೀನಾ ಒಂದೇ ಬೆಂಬಲಿಗ..! ಕನ್ನಡಿ ಹಿಡಿದ ಪಾಕ್ ಪತ್ರಿಕೆ ‘ಡಾನ್’

ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನಕ್ಕೆ ಚೀನಾ ಒಂದೇ ಬೆಂಬಲಿಗ..! 

ಕನ್ನಡಿ ಹಿಡಿದ ಪಾಕ್ ಪತ್ರಿಕೆ ‘ಡಾನ್’

ನವದೆಹಲಿ:   ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ  (ಯುಎನ್ಎಸ್ಸಿ) ಚೀನಾ ಮಾತ್ರ ಪಾಕಿಸ್ತಾನವನ್ನು "ಬಹಿರಂಗವಾಗಿ ಬೆಂಬಲಿಸುತ್ತಿದೆ" ಎಂದು ಪಾಕಿಸ್ತಾನದ ಪ್ರಮುಖ ಪತ್ರಿಕೆ ‘ಡಾನ್’  ಟೀಕಿಸಿದ್ದು, ವಿಶ್ವ ವಿಶೇಷ ಸಂಸ್ಥೆಯ ಪ್ರಸ್ತುತ ಸಂಯೋಜನೆಯ ಉನ್ನತ ಅಂಗವು ಇಸ್ಲಾಮಾಬಾದಿಗೆ  ಅನುಕೂಲಕರವಾಗಿ ಕಾಣುತ್ತಿಲ್ಲ ಎಂದು ಇಮ್ರಾನ್ ಖಾನ್ ಸರ್ಕಾರಕ್ಕೆ ಕನ್ನಡಿ ಹಿಡಿದು ತೋರಿಸಿದೆ..

 ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಭಾರತ ರದ್ದುಪಡಿಸಿದ ನಂತರ ವಿಶ್ವಸಂಸ್ಥೆ ಭದ್ರತಾ ಮಂಡಳಿಯು  2019 ಆಗಸ್ಟ್ 16ರ ಶುಕ್ರವಾರ  ಕಾಶ್ಮೀರ ಬೆಳವಣಿಗೆಗೆ ಸಂಬಂಧಿಸಿದಂತೆ  ಅಪರೂಪದ  ರಹಸ್ಯ ಸಭೆ ನಡೆಸಿತ್ತು.

ಜಮ್ಮು ಮತ್ತು ಕಾಶ್ಮೀರಕ್ಕೆ  ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದು ಪಡಿಸಿ, ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ಮೂಲಕ ಭಾರತವು ಪಾಕಿಸ್ತಾನದ ಜೊತೆ ಹೊಸ ವಿವಾದ ಹುಟ್ಟು ಹಾಕಿದೆ ಎಂದು ಆಪಾದಿಸಿ ಪಾಕಿಸ್ತಾನವು ವಿಶ್ವಸಂಸ್ಥೆ ಭದ್ರತಾ ಮಂಡಳಿಗೆ ಪತ್ರ ಬರೆದಿತ್ತು.
ಮುಚ್ಚಿದ ಬಾಗಿಲುಗಳ ಹಿಂದೆ  ನಡೆದ ರಹಸ್ಯ ಸಭೆಯಲ್ಲಿ ಕೇವಲ ಐದು ಖಾಯಂ ಸದಸ್ಯರು ಮತ್ತು ೧೦ ಖಾಯಮೇತರ ಸದಸ್ಯರು ಮಾತ್ರ ಹಾಜರಿದ್ದರು.

ಜಮ್ಮು ಮತ್ತು ಕಾಶ್ಮೀರಕ್ಕೆ  ವಿಶೇಷ ಸ್ಥಾನಮಾನವನ್ನು  ನೀಡಿದ್ದ ಭಾರತೀಯ  ಸಂವಿಧಾನದ ೩೭೦ ನೇ ವಿಧಿಯನ್ನು ರದ್ದುಪಡಿಸುವ  ಕ್ರಮವು ಆಂತರಿಕ ವಿಷಯವಾಗಿದೆ  ಎಂದು ಅಂತಾರಾಷ್ಟ್ರೀಯ ಸಮುದಾಯಕ್ಕೆ  ಖಡಾಖಂಡಿತವಾಗಿ  ಹೇಳಿದ್ದ ಭಾರತ  ವಾಸ್ತವವನ್ನು ಒಪ್ಪಿಕೊಳ್ಳುವಂತೆ ಪಾಕಿಸ್ತಾನಕ್ಕೆ ಸಲಹೆ ನೀಡಿತ್ತು.
ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಳ್ಳುವ ಭಾರತದ ನಿರ್ಧಾರವು ದಕ್ಷಿಣ ಏಷ್ಯಾದ ಶಾಂತಿ ಮತ್ತು ಸ್ಥಿರತೆಗೆ ಹೇಗೆ ಧಕ್ಕೆ ತರುತ್ತದೆ ಎಂಬುದಾಗಿ ವಿಶ್ವಸಂಸ್ಥೆ ಭದ್ರತಾ ಮಂಡಳಿ ಸದಸ್ಯರಿಗೆ ನಾಟುವಂತೆ ತಿಳಿಹೇಳಲು ಪಾಕಿಸ್ತಾನದ  ವಿಶ್ವಸಂಸ್ಥೆಯಲ್ಲಿನ ರಾಯಭಾರಿ ಮಲೀಹಾ ಲೋಧಿ ಮತ್ತು ಅವರ ತಂಡವು ತಿಂಗಳ ಆರಂಭದಿಂದಲೂ  ದಣಿವರಿವು ಇಲ್ಲದೆ  ಕೆಲಸ ಮಾಡಿತ್ತು ಎಂದು ವಿಶ್ವಸಂಸ್ಥೆ ಕೇಂದ್ರ  ಕಚೇರಿಯಿಂದ  ಮಾಡಲಾದ ಡಾನ್’ ವರದಿ ತಿಳಿಸಿದೆ.
"ಆದರೆ ಮಂಡಳಿಯ ಪ್ರಸ್ತುತ ಸಂಯೋಜನೆಯು ಪಾಕಿಸ್ತಾನಕ್ಕೆ ಒಲವು ತೋರುತ್ತಿಲ್ಲ" ಎಂದು ಪತ್ರಿಕೆ ಬರೆದಿದೆ.
ಜಮ್ಮು ಮತ್ತು ಕಾಶ್ಮೀರದ ಹಾಲಿ  ಪರಿಸ್ಥಿತಿಯ ಬಗ್ಗೆ ಚರ್ಚಿಸಲು ಇಸ್ಲಾಮಾಬಾದ್  ಮಾಡಿದ ಮನವಿಯ ಮೇರೆಗೆ ಪಾಕಿಸ್ತಾನದ  ಸಾರ್ವಕಾಲಿಕ  ಮಿತ್ರ ಚೀನಾ  ಮಂಡಳಿಯು ರಹಸ್ಯ ಸಭೆಗೆ ಆಗ್ರಹಿಸಿತ್ತು.
"ಐವರು ಖಾಯಂ ಸದಸ್ಯರಲ್ಲಿ ಒಬ್ಬರಾದ  ಚೀನಾ ಚೀನಾ  ಬಹಿರಂಗವಾಗಿ ಪಾಕಿಸ್ತಾನವನ್ನು ಬೆಂಬಲಿಸಿತು’  ಎಂದು ಡಾನ್ ವರದಿ  ಹೇಳಿತು.

ಉಳಿದ ನಾಲ್ಕು ಖಾಯಂ ಸದಸ್ಯರಾದ ಬ್ರಿಟನ್, ಫ್ರಾನ್ಸ್, ರಶ್ಯಾ ಮತ್ತು  ಅಮೆರಿಕ ಕಾಶ್ಮೀರ ವಿವಾದವನ್ನು  ಭಾರತ ಮತ್ತು ಪಾಕಿಸ್ತಾನ ದ್ವಿಪಕ್ಷೀಯ ಮಾತುಕತೆ ಮೂಲಕ  ಪರಿಹರಿಸಬೇಕೆಂದು ಬಯಸಿದವು  ಎಂದು ‘ಡಾನ್’ ಹೇಳಿತು.
ಭಾರತವೂ  ಇದೇ  ತಾಳಿದ್ದರೂ, ಕಾಶ್ಮೀರದ ಬಗ್ಗೆ ಯಾವುದೇ ಮಾತುಕತೆ ನಡೆಸಲು ನಿರಾಕರಿಸುತ್ತಿದೆ. ಕಾಶ್ಮೀರ ಸಮಸ್ಯೆಯನ್ನು ಆಂತರಿಕ ವಿಷಯವೆಂದು ಅದು ಹೇಳುತ್ತಿದೆ  ಎಂದು ವರದಿ ತಿಳಿಸಿದೆ.

ಬೆಲ್ಜಿಯಂ, ಕೋಟ್ ಡಿ ಐವೊಯಿರ್, ಡೊಮಿನಿಕನ್ ರಿಪಬ್ಲಿಕ್, ಈಕ್ವಟೋರಿಯಲ್ ಗಿನಿಯಾ, ಜರ್ಮನಿ, ಇಂಡೋನೇಷ್ಯಾ, ಕುವೈತ್, ಪೆರು, ಪೋಲೆಂಡ್ ಮತ್ತು ದಕ್ಷಿಣ ಆಫ್ರಿಕಾಇವು ವಿಶ್ವಸಂಸ್ಥೆ ಸಾಮಾನ್ಯ ಸಭೆಯಿಂದ  ಎರಡು ವರ್ಷಗಳ ಅವಧಿಗೆ ಆಯ್ಕೆಯಾಗಿರುವ ಭದ್ರತಾ ಮಂಡಳಿಯ  ೧೦ ಖಾಯಮೇತರ ಸದಸ್ಯರು

ಇವರ ಪೈಕಿ  ಇಂಡೋನೇಷ್ಯಾ ಮತ್ತು ಕುವೈತ್  ಇವರಿಬ್ಬರು ಈ ಹಿಂದೆ ಪಾಕಿಸ್ತಾನದ ಬಗ್ಗೆ ಸಹಾನುಭೂತಿ  ಹೊಂದಿದ್ದರೂ,  ಚೀನಾದ ಕೋರಿಕೆಯನ್ನು ಬೆಂಬಲಿಸುವ ನಿಟ್ಟಿನಲ್ಲಿ ಇತರರನ್ನು ಮನವೊಲಿಸುವುದು ಕಷ್ಟಕರ ಎಂದು ಡಾನ್ ವರದಿ ತಿಳಿಸಿದೆ.

ಈಮಧ್ಯೆ, ಪಾಕಿಸ್ತಾನ ಸರ್ಕಾರವು ಜಾಗತಿಕ ಬೆಂಬಲವನ್ನು ಕ್ರೋಡೀಕರಿಸಲು  ಹೊರಟಿದ್ದರೂ, ಆರ್ಗನೈಸೇಶನ್ ಆಫ್ ಇಸ್ಲಾಮಿಕ್ ಕೋಆಪರೇಷನ್ (ಒಐಸಿ) ಮತ್ತು ಮುಸ್ಲಿಮ್  ರಾಷ್ಟ್ರಗಳಿಂದ ಪ್ರತ್ಯೇಕವಾಗಿ  ಲಭ್ಯವಾದ  ಪ್ರತಿಕ್ರಿಯೆಗಳು ಮತ್ತು ಬೆಂಬಲ ದುರ್ಬಲವಾಗಿವೆ ಎಂದು ‘ ದಿ ನ್ಯೂಸ್ ಇಂಟರ್ನ್ಯಾಷನಲ್’  ಪತ್ರಿಕೆ ತಿಳಿಸಿದೆ.
ಸುಮಾರು ೫೦ ವರ್ಷದ ಒಐಸಿಯು ಬಿಡುಗಡೆ ಮಾಡಿರುವ  ರಾಜತಾಂತ್ರಿಕ ಪರಿಭಾಷೆಯ ಕೆಲವು ಹೇಳಿಕೆಗಳು ಯಾವುದೇ ಬದ್ಧತೆಯನ್ನೂ ವ್ಯಕ್ತ ಪಡಿಸಿಲ್ಲ ಎಂದು  ಪತ್ರಿಕೆಯಲ್ಲಿನ ಲೇಖನವೊಂದು ತಿಳಿಸಿದೆ.

ಒಐಸಿ ಸದಸ್ಯ ರಾಷ್ಟ್ರಗಳ ಜೊತೆಗಿನ  ಭಾರತೀಯ ವ್ಯಾಪಾರ ಮತ್ತು ವ್ಯವಹಾರದ ಶಕ್ತಿಯು, ಅದರ ವ್ಯಾಪಾರ ಪಾಲುದಾರರು ನಿರ್ಲಕ್ಷಿಸಲಾಗದಷ್ಟು ಪ್ರಬಲವಾಗಿದೆ, ಅವರಲ್ಲಿ ಯಾರೂ ಪಾಕಿಸ್ತಾನದ  ಪ್ರಸ್ತುತ ಮನವಿಯತ್ತ ಯಾವುದೇ ಗಮನವನ್ನೂ ಹರಿಸುತ್ತಿಲ್ಲ ಎಂದು ಪತ್ರಿಕೆ ಹೇಳಿದೆ.

Wednesday, August 14, 2019

ಪಾಕ್ ಸಚಿವನಿಗೆ ಪಂಜಾಬ್ ಸಿಎಂ ಗುದ್ದು!

ಪಾಕ್ ಸಚಿವನಿಗೆ ಪಂಜಾಬ್ ಸಿಎಂ ಗುದ್ದು!
ನವದೆಹಲಿ: ಭಾರತೀಯ ಸೇನೆಯ ಪಂಜಾಬೀ ಯೋಧರು ಕಾಶ್ಮಿರದಲ್ಲಿ ಕಾರ್ಯನಿರ್ವಹಿಸಲು ನಿರಾಕರಿಸಬೇಕು ಎಂಬುದಾಗಿ ಪಾಕಿಸ್ತಾನೀ ಸಚಿವ ಫವಾದ್ ಚೌಧರಿ ನೀಡಿದ್ದ ಹೇಳಿಕೆ ಇದೀಗ ತೀವ್ರ ಆಕ್ರೋಶಕ್ಕೆ ಎಡೆಮಾಡಿಕೊಟ್ಟಿದ್ದು, ಪಾಕ್ ಸಚಿವನ ಹೇಳಿಕೆಗೆ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಕೂಡಾ ಬುಧವಾರ ಆಕ್ರೋಶ ವ್ಯಕ್ತಪಡಿಸಿದರು.

ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲಾ ಪಂಜಾಬಿ ಯೋಧರಲ್ಲಿ ನಾನು ಮನವಿ ಮಾಡಿಕೊಳ್ಳುವುದು ಏನೆಂದರೆ ಜಮ್ಮು-ಕಾಶ್ಮೀರದಲ್ಲಿ ಸೇವೆ ಸಲ್ಲಿಸಲು ನಿರಾಕರಿಸಬೇಕು’ ಎಂದು ಫವಾದ್ ಚೌಧರಿ ಟ್ವೀಟ್ ಮಾಡಿದ್ದರು.

ಚೌಧರಿ ಟ್ವೀಟಿಗೆ ಪ್ರತಿಕ್ರಿಯಿಸಿದ  ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀದರ್ ಸಿಂಗ್  ಅವರು , ಭಾರತದ ಆಂತರಿಕ ವಿಚಾರದಲ್ಲಿ ಮೂಗು ತೂರಿಸಿದರೆ ಜಾಗ್ರತೆ ಎಂದು ಎಚ್ಚರಿಕೆಯ ಸಂದೇಶವನ್ನು ರವಾನಿಸಿದರು.

ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಸೇನೆಯಲ್ಲಿ ಸೇವೆ ಸಲ್ಲಿಸಿರುವ ಯೋಧರಾಗಿದ್ದು ಇದೀಗ ಪಂಜಾಬಿನ ಮುಖ್ಯಮಂತ್ರಿಯಾಗಿದ್ದಾರೆ.

ಪವಾದ್ ಚೌಧರಿ ಮನವಿಯು ಭಾರತೀಯ ಸೇನೆಯ ಯಾವುದೇ ಯೋಧರ ಮೇಲೆ ಪರಿಣಾಮವನ್ನೂ  ಬೀರುವುದಿಲ್ಲ. ನಮ್ಮ ಸೇನೆ ಶಿಸ್ತು ಮತ್ತು ದೇಶಪ್ರೇಮಕ್ಕೆ ಬದ್ಧವಾಗಿದೆ ಎಂದು ಪಾಕ್ ಸಚಿವನಿಗೆ ಕ್ಯಾಪ್ಟನ್ ಸಿಂಗ್ ಎದಿರೇಟು ಕೊಟ್ಟರು.