Showing posts with label Jammu and Kashmir. Show all posts
Showing posts with label Jammu and Kashmir. Show all posts

Monday, August 5, 2019

ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು

ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು
ಐತಿಹಾಸಿಕ ನಿರ್ಧಾರ, ಇಡೀ ದೇಶಕ್ಕೆ ಒಂದೇ ಸಂವಿಧಾನ, ಧ್ವಜ
ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಕಳೆದ ಒಂದು ವಾರದ ಬೆಳವಣಿಗೆಗೆ ೨೦೧೯ ಆಗಸ್ಟ್ ೫ರ ಸೋಮವಾರ ತೆರೆ ಬಿದ್ದಿದ್ದು, ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಪಡಿಸಲು ಸರ್ಕಾರ ತೀರ್ಮಾನಿಸಿರುವುದಾಗಿ  ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆಇದೇ ಘೋಷಣೆಯನ್ನು ಅವರು ಬಳಿಕ ಲೋಕಸಭೆಯಲ್ಲೂ ಮಾಡಿದರು.
ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಆದೇಶಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಸಹಿ ಮಾಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಪುನರ್ ವಿಂಗಡಣಾ ಮಸೂದೆಯನ್ನು ಶಾ ಅವರು ವಿರೋಧ ಪಕ್ಷಗಳ ತೀವ್ರ ಪ್ರತಿಭಟನೆಯ ಮಧ್ಯೆ ಸದನದಲ್ಲಿ ಮಂಡಿಸಿದರು. ಕಾಶ್ಮೀರಕ್ಕೆ ಸಂಬಂಧಿಸಿದಂತೆ  4 ನಿರ್ಣಯಗಳನ್ನು ಮಂಡಿಸಲಾಗಿದ್ದು ಈದಿನವೇ ಅಂಗೀಕಾರಗೊಳ್ಳುವ ನಿರೀಕ್ಷೆ ಇದೆ.

ಶಾ ಹೇಳಿದ್ದೇನು?
ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಪಡಿಸಲಾಗಿದೆ. ೩೭೦ನೇ ವಿಧಿಯನ್ನು ಹಾಗೂ  ೩೫ಎ ವಿಧಿಯನ್ನು ಕೂಡಾ ರದ್ದುಪಡಿಸಲಾಗಿದೆ ಎಂದು ಅಮಿತ್ ಶಾ ರಾಜ್ಯಸಭೆಯಲ್ಲಿ ಘೋಷಿಸಿದ್ದಾರೆ.

 ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿರುವ ಸಂವಿಧಾನದ  ೩೭೦ನೇ ವಿಧಿಯನ್ನು ಸಂವಿಧಾನಬದ್ಧವಾಗಿ ರದ್ದುಪಡಿಸಲು ತೀರ್ಮಾನಿಸಲಾಗಿದೆ  ಎಂದು ಅಮಿತ್ ಶಾ ರಾಜ್ಯಸಭೆಯಲ್ಲಿ ಪ್ರಕಟಿಸಿದರು..

ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ಮಹತ್ವದ ಸಭೆ ನಡೆದಿತ್ತು. ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ವಿದೇಶಾಂಗ ಸಚಿವ ಜೈಶಂಕರ್ ಭಾಗವಹಿಸಿದ್ದರು.

 ಪರಿಣಾಮ ಏನು?
·     
  ಇಡೀ ರಾಷ್ಟ್ರಕ್ಕೆ ಒಂದೇ ಸಂವಿಧಾನ. ಒಂದೇ ಧ್ವಜ. ಜಮ್ಮು ಕಾಶ್ಮೀರ ರಾಜ್ಯಕ್ಕಿದ್ದ ವಿಶೇಷಾಧಿಕಾರ ರದ್ದು. ಇನ್ಮುಂದೆ ಸಾಮಾನ್ಯ ರಾಜ್ಯಗಳಂತೆ  ಜಮ್ಮು ಕಾಶ್ಮೀರ.  ಒಂದೇ ಬಾವುಟ ಹಾರಾಟ,  ೨ನೇ ಧ್ವಜ ಹಾರಾಟಕ್ಕೆ ಬ್ರೇಕ್ .  ಜಮ್ಮುಕಾಶ್ಮೀರ ಭೌಗೋಳಿಕವಾಗಿ ವಿಭಜನೆ.  ಜಮ್ಮು ಕಾಶ್ಮೀರ  2 ಭಾಗಗಳಾಗಿ ವಿಭಜನೆ.  ಜಮ್ಮು ಮತ್ತು  ಕಾಶ್ಮೀರ ಕೇಂದ್ರಾಡಳಿತ ಪ್ರದೇಶ. ವಿಧಾನಸಭೆ ಸಹಿತ ಕೇಂದ್ರಾಡಳಿತ ಪ್ರದೇಶ.  ಲಡಾಖ್ ಕೂಡಾ ಕೇಂದ್ರಾಡಳಿತ ಪ್ರದೇಶ.  ಶಿಕ್ಷಣ, ವಿದ್ಯಾರ್ಥಿವೇತನ, ಉದ್ಯೋಗ ಎಲ್ಲರೂ ಅರ್ಹ. ಮಹಿಳೆಯರು ಬೇರೆ ರಾಜ್ಯದವರನ್ನು ವಿವಾಹವಾಗಬಹುದು.  ಜಮ್ಮು-ಕಾಶ್ಮೀರದಲ್ಲಿ ಮುಂದಿನ ದಿನಗಳಲ್ಲಿ ಭಾರತದ ಸಂವಿಧಾನವೇ ಅನ್ವಯವಾಗಲಿದೆ.

ಸರ್ಕಾರ
ಮಹತ್ವದ ಆದೇಶ ಹೊರಡಿಸುವ ಉದ್ದೇಶದಿಂದ ಕಣಿವೆ ರಾಜ್ಯದಲ್ಲಿ ಬಿಗಿ ಭದ್ರತೆ ಒದಗಿಸಲಾಗಿತ್ತು

Tuesday, November 27, 2018

ಪತ್ರಕರ್ತ ಶುಜಾತ್ ಬುಖಾರಿ ಹಂತಕ ನವೀದ್ ಜಟ್ಟ್ ಹತ್ಯೆ

ಪತ್ರಕರ್ತ ಶುಜಾತ್ ಬುಖಾರಿ ಹಂತಕ ನವೀದ್ ಜಟ್ಟ್ ಹತ್ಯೆ
ಶ್ರೀನಗರ: ಕಾಶ್ಮೀರದ ಬಡಗಮ್ ಜಿಲ್ಲೆಯಲ್ಲಿ ಹಿರಿಯ ಪತ್ರಕರ್ತ, ‘ರೈಸಿಂಗ್ ಕಾಶ್ಮೀರ ಸಂಪಾದಕ ಶುಜಾತ್ ಬುಖಾರಿ ಅವರನ್ನು ಕೊಲೆ ಮಾಡಿದ ಭಯೋತ್ಪಾದಕ ನವೀದ್ ಜಟ್ಟ್ ಸೇರಿದಂತೆ ಲಷ್ಕರ್--ತೊಯ್ಬಾ (ಎಲ್ ಇಟಿ)ಭಯೋತ್ಪಾದಕ ಸಂಘಟನೆಯ  ಇಬ್ಬರು ಭಯೋತ್ಪಾದಕರು ಭದ್ರತಾ ಪಡೆಗಳೊಂದಿಗೆ 2018 ನವೆಂಬರ್ 28 ಬುಧವಾರ ನಡೆದ ಗುಂಡಿನ ಘರ್ಷಣೆಯಲ್ಲಿ ಹತರಾಗಿದ್ದಾರೆ.

ಬುಕಾರಿ ಅವರು  ಹಿರಿಯ ಪತ್ರಕರ್ತ ಮತ್ತುರೈಸಿಂಗ್ ಕಾಶ್ಮೀರಪತ್ರಿಕೆಯ ಸಂಪಾದಕರಾಗಿದ್ದು, ವರ್ಷದ ಜೂನ್ ತಿಂಗಳಲ್ಲಿ ಶ್ರೀನಗರದ ಹೃದಯಭಾಗದಲ್ಲಿರುವ ತಮ್ಮ ಪತ್ರಿಕಾ ಕಚೇರಿಯ ಹೊರಭಾಗದಲ್ಲಿ ಭಯೋತ್ಪಾದಕರ ಗುಂಡಿನ ದಾಳಿಗೆ ಬಲಿಯಾಗಿದ್ದರು.

ಬುಧವಾರ ಬೆಳಗ್ಗೆ ಉಗ್ರಗಾಮಿಗಳು ಅಡಗಿರುವ ಬಗ್ಗೆ ಲಭಿಸಿದ ಮಾಹಿತಿಯನ್ನು ಅನುಸರಿಸಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದಾಗ ಉಗ್ರಗಾಮಿಗಳು ಗುಂಡಿನ ದಾಳಿ ಆರಂಭಿಸಿದರು. ಭದ್ರತಾ ಪಡೆಗಳೂ ಪ್ರತಿಗುಂಡು ಹಾರಿಸಿದವು. ಬಳಿಕ ತೀವ್ರ ಗುಂಡಿನ ಘರ್ಷಣೆ ನಡೆಯಿತು ಎಂದು ಸುದ್ದಿಮೂಲಗಳು ತಿಳಿಸಿವೆ.

ಮುನ್ನೆಚ್ಚರಿಕೆಯ ಕ್ರಮವಾಗಿ ಬಡ್ಗಮ್ನಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಯಿತು ಎಂದು ಮೂಲಗಳು ಹೇಳಿದವು.

ಪಾಕಿಸ್ತಾನದ ಮೂಲದ ಎಲ್ ಇಟಿ ಸದಸ್ಯನಾಗಿದ್ದ ಉಗ್ರಗಾಮಿ ನವೀದ್ ಜಟ್ಟ್  ಶ್ರೀನಗರದ ಶ್ರೀ ಮಹಾರಾಜಾ ಹರಿ ಸಿಂಗ್ ಆಸ್ಪತ್ರೆಯಿಂದ 2018  ಫೆಬ್ರುವರಿಯಲ್ಲಿ ತಪ್ಪಿಸಿಕೊಂಡಿದ್ದ. ಬಳಿಕ
ಆತ ದಕ್ಷಿಣ ಕಾಶ್ಮೀರದಲ್ಲಿ ಉಗ್ರಗಾಮಿ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದ ಮತ್ತು ೨೦೧೩-೨೦೧೪ರ ಅವಧಿಯಲ್ಲಿ ಹಲವಾರು ಉಗ್ರಾಗಾಮಿ ದಾಳಿಗಳಲ್ಲಿ ಪಾಲ್ಗೊಂಡಿದ್ದ.

ಮುಲ್ತಾನಿನ ಟ್ರಕ್ ಚಾಲಕನೊಬ್ಬನ ಮಗನಾದ ಜಟ್ಟ್ ದಕ್ಷಿಣ ಕಾಶ್ಮೀರದ ಅನಂತನಾಗ್, ಪುಲ್ವಾಮಾ ಮತ್ತು ಶೋಪಿಯಾನ್ ಜಿಲ್ಲೆಗಳಲ್ಲಿ ಸಕ್ರಿಯನಾಗಿದ್ದ. ಪೊಲೀಸ್ ದಾಖಲೆಗಳ ಪ್ರಕಾರ, ಅನಂತನಾಗ್ ಜಿಲ್ಲೆಯ ಸೆಂಪೋರಾ ಬಿಜ್ ಬೆಹರಾದಲ್ಲಿ ೨೦೧೪ ಸೆಪ್ಟೆಂಬರ್ ೧೯ ರಂದು ನವೀದ್ ಜಟ್ಟ್ ನನ್ನು ಬಂಧಿಸಲಾಗಿತ್ತು. ಕೊಲೆ ಮತ್ತು ಕೊಲೆಯತ್ನ ಆರೋಪದ ಪ್ರಕರಣಗಳಲ್ಲಿ ಆತನನ್ನು  ಶ್ರೀನಗರ ರೈನಾವರಿ ಸೆರೆಮನೆಯಲ್ಲಿ ಬಂಧಿಸಿ ಇಡಲಾಗಿತ್ತು.

ರಾಜ್ಯದ ಅನೇಕ ಭಯೋತ್ಪಾದನಾ ದಾಳಿ ಕೃತ್ಯಗಳಿಗೆ ಸಂಬಂಧಿಸಿದಂತೆ ಜಟ್ಟ್ ಪೊಲೀಸರಿಗೆ ಬೇಕಾಗಿದ್ದ.
ಅಬು ಹಂಜುಲ್ಲ ಎಂಬುದಾಗಿಯೂ ಕರೆಯಲ್ಪಡುತ್ತಿದ್ದ ಜಟ್ಟ್, ದಾಳಿಯೊಂದರಲ್ಲಿ ಇಬ್ಬರು ಪೊಲೀಸರನ್ನು ಮತ್ತು ಅಸಿಸ್ಟೆಂಟ್ ಸಬ್ ಇನ್ ಸ್ಪೆಕ್ಟರನನ್ನು ಕೊಂದಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪಾಕಿಸ್ತಾನದ
ಪಂಜಾಬ್ ಪ್ರಾಂತ್ಯದ ಮುಲ್ತಾನ್ ನಿವಾಸಿಯಾಗಿದ್ದ ಆತ  ಇನ್ನೊಂದು ದಾಳಿಯಲ್ಲಿ ಐವರು ಪೊಲೀಸರು ಮತ್ತು ಇಬ್ಬರು ನಾಗರಿಕರನ್ನು ಗಂಭೀರವಾಗಿ ಗಾಯಗೊಳಿಸಿದ್ದ.

Thursday, November 22, 2018

ಕಾಶ್ಮೀರ ಗುಂಡಿನ ಘರ್ಷಣೆ: 6 ಉಗ್ರರ ಹತ್ಯೆ


ಕಾಶ್ಮೀರ ಗುಂಡಿನ ಘರ್ಷಣೆ: 6 ಉಗ್ರರ ಹತ್ಯೆ

ಶ್ರೀನಗರ: ದಕ್ಷಿಣ ಕಾಶ್ಮೀರದ ಬಿಜ್ ಬೆಹರಾ ಪ್ರದೇಶದಲ್ಲಿ ಭದ್ರತಾ ಪಡೆಗಳ ಜೊತೆ ಸಂಭವಿಸಿದ ಗುಂಡಿನ ಘರ್ಷಣೆಯಲ್ಲಿ 6 ಮಂದಿ ಉಗ್ರಗಾಮಿಗಳು 2018 ನವೆಂಬರ್ 23 ಶುಕ್ರವಾರ ಹತರಾದರು.

ಭಾರತೀಯ ಸೇನೆ ಮತ್ತು ರಾಜ್ಯ ಪೊಲೀಸರ ಕಾರ್ಯಾಚರಣೆ ಪ್ರಾರಂಭಿಸಿದ ಬಳಿಕ ಉಗ್ರಗಾಮಿಗಳು ಭದ್ರತಾ ಪಡೆಗಳ ಜೊತೆ ಗುಂಡಿನಘರ್ಷಣೆ ಆರಂಭಿಸಿದ್ದರು.

"ಗುಂಡಿನ ಘರ್ಷಣೆ ಸಂಭವಿಸಿದ ಸ್ಥಳದಲ್ಲಿ  ಸಮರದಲ್ಲಿ ಬಳಸುವಂತಹ ಸೊತ್ತುಗಳ ಸಂಗ್ಹವನ್ನು ನಾವು ವಶ ಪಡಿಸಿಕೊಂಡಿದ್ದೇವೆಎಂದು ಸೇನಾ ವಕ್ತಾರ ರಾಜೇಶ್ ಕಾಲಿಯಾ ಹೇಳಿದರು.

ಘರ್ಷಣೆ- ಕಾರ್ಯಾಚರಣೆ ಇನ್ನು ಮುಂದುವರೆದಿದೆ ಎಂದು ಅಧಿಕಾರಿಗಳು ಅಧಿಕಾರಿಗಳು ತಿಳಿಸಿದ್ದಾರೆ.

ಆರು ಅಥವಾ ಏಳು ಉಗ್ರಗಾಮಿಗಳು  ಸೀಕ್ಪೋರಾ  ಹಳ್ಳಿಯಲ್ಲಿ ಅಡಗಿಕೊಂಡಿದ್ದಾರೆ ಎಂಬ ವಿಶ್ವಸನೀಯ ಮಾಹಿತಿಯ ಮೇರೆಗೆ ಸ್ಥಳಕ್ಕೆ ಮುತ್ತಿಗೆ ಹಾಕಿ ಶೋಧ ಕಾರ್ಯಾಚರಣೆಯನ್ನು ಆರಂಭಿಸಲಾಗಿತ್ತು ಎಂದು ಅವರು ಹೇಳಿದರು.

ಇದಕ್ಕೆ ಮುನ್ನ ಇನ್ನೊಂದು  ಘಟನೆಯಲ್ಲಿ ಜಮ್ಮು ಮತ್ತು ಕಾಶ್ಮೀರದ  ಕುಲಗಂ ಖುದ್ವಾನಿ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಘರ್ಷಣೆ  ಸಂಭವಿಸಿ, ಒಬ್ಬ ನಾಗರಿಕ ಮೃತನಾಗಿದ್ದು, ಹಲವರು ಗಾಯಗೊಂಡಿದ್ದರು.

ಗಾಯಾಳುಗಳೆಲ್ಲರನ್ನೂ  ಆಸ್ಪತ್ರೆಗೆ ಸೇರಿಸಲಾಗಿದ್ದು, ಶೋಧ ಕಾರ್ಯಾಚರಣೆಗಾಗಿ ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರೆದಿವೆ.

ನವೆಂಬರ್ ೧೮ ರಂದು ಸಂಭವಿಸಿದ್ದ ಘಟನೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಶೊಪಿಯಾನ್ ಜಿಲ್ಲೆಯ ಜೈನಪೊರಾ ಗ್ರಾಮದ ರೆಬ್ಬಾನ್  ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಘರ್ಷಣೆ ಸಂಭವಿಸಿ  ಇಬ್ಬರು ಭಯೋತ್ಪಾದಕರನ್ನು ಕೊಲ್ಲಲಾಗಿತ್ತು. ಉಗ್ರಗಾಮಿಗಳು ೧೯ ವರ್ಷದ ಹದಿಹರೆಯದ ಯುವಕನನ್ನು ಅಪಹರಿಸಿ ಕೊಂದ ಘಟನೆಯ ಬಳಿಕ  ಗುಂಡಿನ ಘರ್ಷಣೆ ಸಂಭವಿಸಿತ್ತು.

ಭಯೋತ್ಪಾದಕರು ಪ್ರದೇಶದಲ್ಲಿ ಅವಿತಿರುವ ಬಗ್ಗೆ ನಿರ್ದಿಷ್ಟ ಮಾಹಿತಿ ಲಭಿಸಿದ್ದನ್ನು ಅನುಸರಿಸಿ ಪ್ರದೇಶಕ್ಕೆ ಮುತ್ತಿಗೆ ಹಾಕಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿತ್ತು.

"ಶೋಧ ಕಾರ್ಯಾಚರಣೆಯು ನಡೆಯುತ್ತಿದ್ದಾಗ ಅಡಗಿದ್ದ ಭಯೋತ್ಪಾದಕರು ಗುಂಡು ಹಾರಿಸಿದರು. ಭದ್ರತಾ ಸಿಬ್ಬಂದಿಯೂ  ಗುಂಡಿನ ಉತ್ತರ ನೀಡಿದರು. ಬಳಿಕ ನಡೆದ ಗುಂಡಿನ ಘರ್ಷಣೆಯಲ್ಲಿ ಇಬ್ಬರು ಭಯೋತ್ಪಾದಕರು ಹತರಾದರು.  ಘಟನಾ ಸ್ಥಳದಲ್ಲಿ ಸತ್ತ ಭಯೋತ್ಪಾದಕರ ಶವ ಪತ್ತೆ ಹಚ್ಚಲಾಗಿದ್ದು, ಗುರುತು ಪತ್ತೆಗೆ ಯತ್ನಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.