Showing posts with label Maharastra. Show all posts
Showing posts with label Maharastra. Show all posts

Sunday, May 24, 2026

PARYAYA: ಬಸ್ಸನ್ನು ತಡೆದ ಮಂಗ ಕೇಳಿದ್ದು ಏನನ್ನು?

 ಬಸ್ಸನ್ನು ತಡೆದ ಮಂಗ ಕೇಳಿದ್ದು ಏನನ್ನು?

ಇದೊಂದು ಮನ ಕಲಕುವ ಸನ್ನಿವೇಶ

ಹಾರಾಷ್ಟ್ರದ ವಿದರ್ಭದಲ್ಲಿ ಅದೊಂದು ಮನ ಕಲಕುವ ಸನ್ನಿವೇಶ. ಬಸ್ಸೊಂದು ರಸ್ತೆಯಲ್ಲಿ ಮುಂದಕ್ಕೆ ಸಾಗುತ್ತಿತ್ತು. ಹಠಾತ್ತನೆ ಕೋತಿಯೊಂದು ಬಂದು ಬಸ್ಸಿನ ಮುಂದೆ ನಿಂತುಕೊಂಡಿತು.

ಚಾಲಕನಿಗೆ ಮುಂದೆ ಸಾಗಲು ಸಾಧ್ಯವಾಗಲಿಲ್ಲ. ಬಸ್ಸನ್ನು ನಿಲ್ಲಿಸಿದ. ಶ್..‌ ಶ್‌.. ಎಂದು ಬಾಯಿಯಲ್ಲೇ ಸದ್ದು ಮಾಡಿದ.

ಮಂಗ ಕದಲಲಿಲ್ಲ. ನಿಂತಲ್ಲೇ ನಿಂತುಕೊಂಡಿತ್ತು. ಇದೇನೋ ವಿಲಕ್ಷಣ ಪರಿಸ್ಥಿತಿ ಎಂದು ಬಸ್ಸಿನಲ್ಲಿದ್ದ ಕೆಲವರು ಕೆಳಕ್ಕೆ ಇಳಿದರು. ಆದರೂ ಕೋತಿ ಅಲ್ಲೇ ನಿಂತಿತ್ತು. ತನ್ನದೇ ಮೂಕಭಾಷೆಯಲ್ಲಿ ಕೈ ಅಲ್ಲಾಡಿಸುತ್ತಿತ್ತು.

ಅದಕ್ಕೆ ಬಹುಶಃ ನೀರು ಬೇಕಾಗಿರಬಹುದು ಎಂದು ಪ್ರಯಾಣಿಕರಲ್ಲಿ ಒಬ್ಬರಿಗೆ ಅನ್ನಿಸಿತು. ಅವರು ತತ್‌ ಕ್ಷಣವೇ ತನ್ನ ಬ್ಯಾಗಿನಲ್ಲಿದ್ದ ಪ್ಲಾಸ್ಟಿಕ್‌ ಬಾಟಲಿಯ ಮುಚ್ಚಳ ತೆಗೆದು ಮಂಗನ ಮುಂದೆ ಹಿಡಿದರು. ಮಂಗ ಬಾಯಿ ತೆರೆದು ಗಟಗಟನೆ ನೀರು ಕುಡಿಯಿತು.

ಅಷ್ಟರಲ್ಲಿ ಇನ್ನಷ್ಟು ಮಂಗಗಳು ಆಸು ಪಾಸಿನಿಂದ ಓಡಿ ಬಂದು ಕೈ ಚಾಚ ತೊಡಗಿದವು. ಬಸ್ಸಿನಲ್ಲಿದ್ದವರು ತಮ್ಮ ಬ್ಯಾಗುಗಳಿಂದ ನೀರಿನ ಬಾಟಲಿಗಳನ್ನು ತೆಗೆದು ಕೆಳಗಿದ್ದವರ ಕೈಗಳಿಗೆ ಕೊಟ್ಟರು. ಮಹಿಳೆಯರೂ ಹಿಂದು ಮುಂದು ನೋಡದೆ ತಮ್ಮ ನೀರಿನ ಬಾಟಲಿಗಳನ್ನು ನೀಡಿದರು.

ಮಂಗಗಳ ಹಿಂಡೇ ಬಾಟಲಿಗಳಿಂದ ನೀರು ಕುಡಿದು ಖುಷಿ ಪಟ್ಟವು.

ನೀರು ಸಿಗದೆ ಅದೆಷ್ಟು ದಿನಗಳಿಂದ ಬಾಯಾರಿದ್ದವೋ ಏನೋ. ಮಂಗಗಳಿಗೆ ಅಮೃತ ಸಿಕ್ಕಂತಾಗಿತ್ತು.

ಈ ಮನ ಕಲಕುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಮೇಲೆ ಕ್ಲಿಕ್‌ ಮಾಡಿ ವಿಡಿಯೋ ನೋಡಿ.

ಮರೆಯಬೇಡಿ. ನಿಮ್ಮ ಮನೆ, ಕಚೇರಿಯ ಆಸುಪಾಸಿನಲ್ಲೂ ಪಶು ಪಕ್ಷಿಗಳು ಈ ಬೇಸಗೆಯಲ್ಲಿ ನೀರು ಸಿಗದೆ ಕಂಗಾಲಾಗಿರಬಹುದು. ಅವುಗಳಿಗೆ ಸಿಗುವಂತೆ ನೀರು ಸಿಗುವ ವ್ಯವಸ್ಥೆ ಮಾಡಿ. ಮೂಕ ಪ್ರಾಣಿ, ಪಕ್ಷಿಗಳ ದಾಹ ತಣಿಸಿ.PARYAYA: ಬಸ್ಸನ್ನು ತಡೆದ ಮಂಗ ಕೇಳಿದ್ದು ಏನನ್ನು?:   ಬಸ್ಸನ್ನು ತಡೆದ ಮಂಗ ಕೇಳಿದ್ದು ಏನನ್ನು? ಇದೊಂದು ಮನ ಕಲಕುವ ಸನ್ನಿವೇಶ ಮ ಹಾರಾಷ್ಟ್ರದ ವಿದರ್ಭದಲ್ಲಿ ಅದೊಂದು ಮನ ಕಲಕುವ ಸನ್ನಿವೇಶ. ಬಸ್ಸೊಂದು ರಸ್ತೆಯಲ್ಲಿ ಮುಂದಕ...

Saturday, November 23, 2024

PARYAYA: ಬಲ್ಲಿರೇನಯ್ಯಾ? ಚುನಾವಣೆಗಳಲ್ಲಿ ಗೆದ್ದವರು ಯಾರೆಂದುಕೊಂಡಿ...

  ಬಲ್ಲಿರೇನಯ್ಯಾ? ಚುನಾವಣೆಗಳಲ್ಲಿ ಗೆದ್ದವರು

ಯಾರೆಂದುಕೊಂಡಿದ್ದೀರಿ?


ಭಾರತದಲ್ಲಿ ನಡೆದ
 ವಿವಿಧ ಚುನಾವಣೆಗಳಲ್ಲಿ ಗೆದ್ದವರು ಯಾರೆಂದುಕೊಂಡಿದ್ದೀರಿ? ಕುತೂಹಲಕಾರಿ ಚುನಾವಣೆಗಳ ಫಲಿತಾಂಶಗಳು ಇಲ್ಲಿ ಕ್ಷಣ ಕ್ಷಣಕ್ಕೂ ಪ್ರತಿಫಲಿಸುತ್ತವೆ. ಮೇಲಿನ ಚಿತ್ರದ ಕಿರೀಟವನ್ನು ಕ್ಲಿಕ್‌ ಮಾಡಿ ತಿಳಿದುಕೊಳ್ಳಿ.

ಕ್ಲಿಕ್‌ ಮಾಡಿರಿ: http://www.paryaya.com/p/blog-page_3.html
PARYAYA: ಬಲ್ಲಿರೇನಯ್ಯಾ? ಚುನಾವಣೆಗಳಲ್ಲಿ ಗೆದ್ದವರು ಯಾರೆಂದುಕೊಂಡಿ...:     ಬಲ್ಲಿರೇನಯ್ಯಾ? ಚುನಾವಣೆಗಳಲ್ಲಿ ಗೆದ್ದವರು ಯಾರೆಂದುಕೊಂಡಿದ್ದೀರಿ? ಭಾ ರತದಲ್ಲಿ ನಡೆದ   ವಿವಿಧ ಚುನಾವಣೆಗಳಲ್ಲಿ ಗೆದ್ದವರು ಯಾರೆಂದುಕೊಂಡಿದ್ದೀರಿ? ಕುತೂಹಲಕಾರಿ ...

Saturday, July 22, 2017

“ತೆಂಗಿನ ಕಾಯಿ”ಗೆ ಮತ, ಬೆಳಗಿತು “ಕಮಲ”ದ ಬಲ್ಬ್!

“ತೆಂಗಿನ ಕಾಯಿ”ಗೆ ಮತ,
ಬೆಳಗಿತು “ಕಮಲ”ದ ಬಲ್ಬ್!
ಮುಂಬೈ: ವಿದ್ಯುನ್ಮಾನ ಮತಯಂತ್ರಗಳು (ಇವಿಎಂ) ಸಂಪೂರ್ಣ ದೋಷಮುಕ್ತ ಎಂಬುದಾಗಿ ಭಾರತದ ಚುನಾವಣಾ ಆಯೋಗ ನಿರಂತರ ಪ್ರತಿಪಾದಿಸುತ್ತಿದ್ದರೂ, ಇವಿಎಂ ಅಸಮರ್ಪಕವಾಗಿ ಕಾರ್ಯ ನಿರ್ವಹಿಸಿದ ಪ್ರಕರಣ ಮಹಾರಾಷ್ಟ್ರದಲ್ಲಿ ಘಟಿಸಿದೆ.
ಮಾಹಿತಿ ಹಕ್ಕು ಕಾಯ್ದೆಯ ಅಡಿ ಒದಗಿಸಲಾದ ಮಾಹಿತಿಯಿಂದ ಇದು ಬೆಳಕಿಗೆ ಬಂದಿದೆ.
ಬುಲ್ದಾನ ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ಸುಲ್ತಾನಪುರ ಮತಗಟ್ಟೆಯಲ್ಲಿ ಈ ಘಟನೆ ಘಟಿಸಿದೆ. ಯಾರೇ ವ್ಯಕ್ತಿ ಪಕ್ಷೇತರ ಅಭ್ಯರ್ಥಿ ಒಬ್ಬರ ತೆಂಗಿನಕಾಯಿ ಚಿಹ್ನೆಗೆ ಮತ ಹಾಕಿದಾಗಲೆಲ್ಲ, ಬಿಜೆಪಿಯ ಕಮಲ ಚಿಹ್ನೆಯ ಮುಂಭಾಗದ ಎಲ್ಇಡಿ ಬಲ್ಬ್ ಮಿನುಗುತ್ತಿತ್ತು ಎಂದು ಆರ್ ಟಿಐ ಮಾಹಿತಿ ಹೇಳಿದೆ.
ಚುನಾವಣಾಧಿಕಾರಿ ಈ ವಿಷಯವನ್ನು ಜಿಲ್ಲಾಧಿಕಾರಿಗೆ ವರದಿ ಮಾಡಿದ್ದರು ಎಂದು ಆರ್ ಟಿ ಐ ಮಾಹಿತಿ ತಿಳಿಸಿದೆ.
Voted for Coconut, But Lotus Lit Up!
For details Visit: www.paryaya.com