Showing posts with label Nation. Show all posts
Showing posts with label Nation. Show all posts

Saturday, December 27, 2025

PARYAYA: ವಿಬಿ-ಜಿ ರಾಮ್‌ ಜಿ: ಗಾಂಧೀಜಿ ಆಶಯಕ್ಕೆ ಧಕ್ಕೆಯೇ?

ಭಾರತೀಯ ಸಂಸತ್ತು ೨೦೨೫ರ ಡಿಸೆಂಬರ್‌ ೧೮ರಂದು ನೂತನ ʼವಿಬಿ-ಜಿ ರಾಮ್‌ ಜಿʼ ಅಂದರೆ ವಿಕಸಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಆಜೀವಿಕಾ ಮಿಷನ್ (ವಿಕಸಿತ ಭಾರತ್ ಗ್ಯಾರಂಟಿ ಉದ್ಯೋಗ ಮತ್ತು ಜೀವನೋಪಾಯ ಮಿಷನ್‌ (ಗ್ರಾಮೀಣ) ಕಾಯ್ದೆ ೨೦೨೫ ಇದನ್ನು ಹಿಂದಿನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯ ಸ್ಥಾನಕ್ಕೆ ತರಲು ತನ್ನ ಅಂಗೀಕಾರ ಮುದ್ರೆಯನ್ನು ಒತ್ತಿದೆ.

ರಾಷ್ಟ್ರಪತಿಗಳ ಒಪ್ಪಿಗೆಯೊಂದಿಗೆ ಅದು ಕಾಯ್ದೆಯಾಗಿ ದೇಶದಲ್ಲಿ ಜಾರಿಗೆ ಬಂದಿದೆ. ವಿರೋಧ ಪಕ್ಷಗಳು ಕಾಂಗ್ರೆಸ್‌ ಪಕ್ಷದ ನೇತೃತ್ವದಲ್ಲಿ ಈ ಕಾಯ್ದೆಯನ್ನು ತೀವ್ರವಾಗಿ ವಿರೋಧಿ ಇದು ಮಹಾತ್ಮ ಗಾಂಧಿಯವರನ್ನು ಮತ್ತೊಮ್ಮೆ ಕೊಂದಿದೆ ಎಂದು ಕಟುವಾಗಿ ಟೀಕಿಸಿವೆ.

ಹಾಗಿದ್ದರೆ ವಾಸ್ತವಾಂಶ ಏನು? ಈ ಎರಡೂ ಕಾಯ್ದೆ ಅಥವಾ ಯೋಜನೆಗಳನ್ನು ತುಲನಾತ್ಮಕವಾಗಿ ವಿಶ್ಲೇಷಿಸಬಹುದೇ? ನಿಜವಾಗಿಯೂ ʼವಿಬಿ-ಜಿ ರಾಮ್‌ ಜಿʼ ಕಾಯ್ದೆಯು ಮಹಾತ್ಮ ಗಾಂಧಿ ಆಶಯಗಳಿಗೆ ವಿರುದ್ಧವಾಗಿದೆಯೇ ಅಥವಾ ಮನರೇಗಾ ಇಟ್ಟಿದ್ದ ಹೆಜ್ಜೆಯನ್ನು ಇನ್ನೂ ಎತ್ತರದ ಸ್ತರಕ್ಕೆ ಒಯ್ಯುತ್ತಿದೆಯೇ? ಹೊಸ ಕಾಯ್ದೆಯ ವಿಧಿಗಳನ್ನು ಗಮನಿಸಿ, ವಿಶ್ಲೇಷಿಸಿ ನೋಡೋಣ ಬನ್ನಿ. (ಮುಂದಕ್ಕೆ ಓದಿ) ಅಥವಾ ಪರ್ಯಾಯ ವೆಬ್‌ ಸೈಟಿನ SPARDHA ಪುಟಕ್ಕೆ ಭೇಟಿ ಕೊಡಿ. 

Monday, October 27, 2025

PARYAYA: ಅಯೋಧ್ಯೆ ತೀರ್ಪು ರದ್ದು ಕೋರಿಕೆ: ವಕೀಲರಿಗೆ ₹6 ಲಕ್ಷ ದಂಡ

 ಅಯೋಧ್ಯೆ ತೀರ್ಪು ರದ್ದು ಕೋರಿಕೆ: ವಕೀಲರಿಗೆ ₹6 ಲಕ್ಷ ದಂಡ

ಒಂದು ಭಾಷಣದಲ್ಲಿ ಸುಪ್ರೀಂಕೋರ್ಟಿನ ಮಾಜಿ ಮುಖ್ಯ ನ್ಯಾಯಮೂರ್ತಿ (CJI) ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ, 2019ರ ಅಯೋಧ್ಯೆ ತೀರ್ಪನ್ನು ರದ್ದುಪಡಿಸುವಂತೆ ಮನವಿ ಸಲ್ಲಿಸಿದ್ದ ವಕೀಲ ಮೆಹಮೂದ್ ಪ್ರಾಚಾ ಅವರಿಗೆ ದೆಹಲಿ ನ್ಯಾಯಾಲಯವು ಬರೋಬ್ಬರಿ ಲಕ್ಷ ರೂಪಾಯಿ ದಂಡ ವಿಧಿಸಿದೆ.

ಈ ಅರ್ಜಿಯನ್ನು 'ಫಲಹೀನ ಮತ್ತು ಐಷಾರಾಮಿ ವ್ಯಾಜ್ಯ' (frivolous and luxurious litigation) ಎಂದು ಕರೆದ ಪಟಿಯಾಲಾ ಹೌಸ್ ಕೋರ್ಟಿನ ಜಿಲ್ಲಾ ನ್ಯಾಯಾಧೀಶ ಧರ್ಮೇಂದರ್ ರಾಣಾ ಅವರುಕೆಳ ನ್ಯಾಯಾಲಯವು ಪ್ರಾಚಾ ಅವರಿಗೆವಿಧಿಸಿದ್ದ ಲಕ್ಷ ರೂಪಾಯಿ ದಂಡವನ್ನು ಎತ್ತಿಹಿಡಿದುಹೆಚ್ಚುವರಿಯಾಗಿ ಲಕ್ಷ ರೂಪಾಯಿ ದಂಡ ವಿಧಿಸಿದ್ದಾರೆ.

ದಂಡ ವಿಧಿಸಿದ್ದು ಏಕೆ?

ಆರು ಲಕ್ಷ ರೂಪಾಯಿ ದಂಡವನ್ನು 30 ದಿನಗಳೊಳಗೆ ದೆಹಲಿ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ (DLSA) ಜಮಾ ಮಾಡಬೇಕು ಎಂದು ಆದೇಶಿಸಿರುವ ನ್ಯಾಯಾಧೀಶರು, "ಕಿರಿಯ ನ್ಯಾಯಾಲಯವು ವಿಧಿಸಿದ್ದ ದಂಡವು ನಿರೋಧಕ ಪರಿಣಾಮವನ್ನು (deterrent effectಸಾಧಿಸುವ ಉದ್ದೇಶಿತ ಗುರಿಯನ್ನು ಸಾಧಿಸುವಲ್ಲಿ ಸ್ಪಷ್ಟವಾಗಿ ವಿಫಲವಾಗಿದೆ. ಆದ್ದರಿಂದಫಲಹೀನ ಮತ್ತು ಐಷಾರಾಮಿ ವ್ಯಾಜ್ಯದ ಪಿಡುಗನ್ನು ಪರಿಣಾಮಕಾರಿಯಾಗಿ ಪರಿಶೀಲಿಸಲು ಮತ್ತು ಅಪೇಕ್ಷಿತ ಫಲಿತಾಂಶಗಳನ್ನು ಪಡೆಯಲು ದಂಡದ ಮೊತ್ತವನ್ನು ಸೂಕ್ತವಾಗಿ ಹೆಚ್ಚಿಸಬೇಕೆಂಬುದನ್ನು ನಾನು ಪರಿಗಣಿಸಿದ್ದೇನೆ," ಎಂದು ಹೇಳಿದ್ದಾರೆ.

ಪ್ರಾಚಾ ಅವರ ವಾದವೇನು?

ಪ್ರಾಚಾ ಅವರು ಅಯೋಧ್ಯೆ ತೀರ್ಪನ್ನು ಶೂನ್ಯ ಮತ್ತು ಅನೂರ್ಜಿತ ಎಂದು ಘೋಷಿಸಲು ಮತ್ತು ಸುಪ್ರೀಂ ಕೋರ್ಟಿನಲ್ಲಿ ದಾಖಲಾದ ಸಿವಿಲ್ ಮೇಲ್ಮನವಿಗಳನ್ನು ಹೊಸದಾಗಿ ವಿಚಾರಣೆ ಮಾಡಲು ಕೋರಿ ಸಿವಿಲ್ ಮೊಕದ್ದಮೆ ಹೂಡಿದ್ದರು. ಈ ಮೊಕದ್ದಮೆಯನ್ನು ಏಪ್ರಿಲಿನಲ್ಲಿ ವಿಚಾರಣಾ ನ್ಯಾಯಾಲಯವು ಲಕ್ಷ  ರೂಪಾಯಿ ದಂಡದೊಂದಿಗೆ ವಜಾಗೊಳಿಸಿತ್ತು.

ಪ್ರಾಚಾ ಅವರು ತೀರ್ಪಿನ ಅರ್ಹತೆಯನ್ನು (meritsಪ್ರಶ್ನಿಸದೆನ್ಯಾಯಾಧೀಶರಾದ ಚಂದ್ರಚೂಡ್ ಅವರು ತೀರ್ಪು ಬರೆದವರಲ್ಲಿ ಲ್ಲಿ ಒಬ್ಬರಾಗಿದ್ದುಅವರೇ ತಮ್ಮ ಭಾಷಣವೊಂದರಲ್ಲಿ "ತಮ್ಮ ಮುಂದೆ ವಾದ ಮಂಡಿಸಿದ ಕಕ್ಷಿದಾರರೇ (litigant) ತಮಗೆ ಮಾರ್ಗ ತೋರಿಸಿದರು" ಎಂದು ಒಪ್ಪಿಕೊಂಡಿರುವುದರಿಂದ ತೀರ್ಪು ವಂಚನೆಯ ಆಧಾರದ (on the ground of fraud) ಮೇಲೆ ದೋಷಪೂರಿತವಾಗಿದೆ ಎಂದು ವಾದಿಸಿದ್ದರು.

ಮಾಜಿ ಸಿಜೆಐ ಚಂದ್ರಚೂಡ್ ಅವರು ಅಯೋಧ್ಯೆ ಪ್ರಕರಣವನ್ನು ಪರಿಹರಿಸಲು ತಾವು ದೇವರಿಗೆ ಪ್ರಾರ್ಥನೆ ಸಲ್ಲಿಸಿದ್ದಾಗಿ ಹೇಳಿದ್ದ ಉಲ್ಲೇಖವೇ ಈ ವಾದಕ್ಕೆ ಕಾರಣವಾಗಿತ್ತು. ಇಂತಹ ಪರಿಸ್ಥಿತಿಯು **'ಕಾನೂನುಬಾಹಿರ ಹಸ್ತಕ್ಷೇಪ'**ಕ್ಕೆ ಸಮನಾಗಿದೆ. ಆದ್ದರಿಂದ ತೀರ್ಪು ವಂಚನೆಯ ಆಧಾರದ ಮೇಲೆ ದೋಷಪೂರಿತವಾಗಿದೆ ಎಂದು ಪ್ರಾಚಾ ಪ್ರತಿಪಾದಿಸಿದ್ದರು.

ಕೋರ್ಟ್‌ನ ತೀಕ್ಷ್ಣ ಪ್ರತಿಕ್ರಿಯೆ

ಪ್ರಾಚಾ ಅವರ ಮನವಿಯನ್ನು ವಜಾಗೊಳಿಸಿದ ನ್ಯಾಯಾಧೀಶ ರಾಣಾ ಅವರುಜಸ್ಟಿಸ್ ಚಂದ್ರಚೂಡ್ ಅವರ ಭಾಷಣವನ್ನು ಉಲ್ಲೇಖಿಸಿʼಅವರು ಸರ್ವೋಚ್ಚ ಶಕ್ತಿಯಲ್ಲಿ (Supreme Being) ಮಾರ್ಗ ತೋರಿಸುವಂತೆ ಪ್ರಾರ್ಥಿಸಿದ್ದರು. ಆದರೆ ಅಯೋಧ್ಯೆ ಪ್ರಕರಣದಲ್ಲಿ ಅವರ ಮುಂದೆ ವಾದ ಮಂಡಿಸಿದ ಕಕ್ಷಿದಾರರು ಆ ಸರ್ವೋಚ್ಚ ಶಕ್ತಿಯಿಂದ ಭಿನ್ನವಾದ 'ಕಾನೂನು ವ್ಯಕ್ತಿತ್ವ' (Juristic Personality) ಹೊಂದಿದ್ದಾರೆʼ ಎಂದು ಹೇಳಿದರು.

"ಮೇಲ್ಮನವಿದಾರರು 'ಸರ್ವೋಚ್ಚ ದೇವರುಮತ್ತು ನ್ಯಾಯಾಲಯದ ಮುಂದೆ ವ್ಯಾಜ್ಯ ಹೂಡಿದ 'ಕಾನೂನು ವ್ಯಕ್ತಿತ್ವದನಡುವಿನ ಸೂಕ್ಷ್ಮ ವ್ಯತ್ಯಾಸವನ್ನು ಬಹುಶಃ ಕಾನೂನು ಮತ್ತು ಧರ್ಮದ ಬಗ್ಗೆ ತಪ್ಪು ತಿಳುವಳಿಕೆಯಿಂದಾಗಿ ಗ್ರಹಿಸುವಲ್ಲಿ ವಿಫಲರಾಗಿದ್ದಾರೆ. ಮೇಲ್ಮನವಿದಾರರು ಅಯೋಧ್ಯೆ ಪ್ರಕರಣದ ತೀರ್ಪನ್ನು ಓದುವ ಗೋಜಿಗೆ ಹೋಗಿಲ್ಲವೆಂದು ತೋರುತ್ತಿದೆಇಲ್ಲದಿದ್ದರೆ ಇಂತಹ ಗೊಂದಲ ಅವರಿಗೆ ಉಂಟಾಗುತ್ತಿರಲಿಲ್ಲ," ಎಂದು ನ್ಯಾಯಾಲಯವು ತೀಕ್ಷ್ಣವಾಗಿ ಪ್ರತಿಕ್ರಿಯಿಸಿತು.

"ಸರ್ವಶಕ್ತನಿಂದ ಮಾರ್ಗದರ್ಶನ ಪಡೆಯುವುದನ್ನು ಕಾನೂನಿನಲ್ಲಿ ಅಥವಾ ಯಾವುದೇ ಧರ್ಮದಲ್ಲಿ ಅನ್ಯಾಯದ ಲಾಭ ಪಡೆಯಲು ಮಾಡಿದ ವಂಚಕ ಕೃತ್ಯ ಎಂದು ನಿಂದಿಸಲಾಗದು. ಆದ್ದರಿಂದಮೇಲ್ಮನವಿದಾರರ ಹೇಳಿಕೆಗಳನ್ನು ನಂಬಿದರೂ ಸಹಮನವಿಯು ಯಾವುದೇ ಕಾನೂನುಬದ್ಧ ಕಾರಣವನ್ನು (cause of action) ಹೊಂದಿದೆ ಎಂದು ವಾದಿಸಲು ಅವಕಾಶವಿಲ್ಲ. ಹೀಗಾಗಿಅವರ ಮೊಕದ್ದಮೆಯನ್ನು ವಜಾಗೊಳಿಸಿದ ಕೆಳ ನ್ಯಾಯಾಲಯದ ವಿಧಾನದಲ್ಲಿ ಯಾವುದೇ ದೋಷವಿಲ್ಲ" ಎಂದು ನ್ಯಾಯಾಲಯ ಹೇಳಿತು.

"ಪರಿಹಾರವಾಗಲಿಲ್ಲ, ಸಮಸ್ಯೆಯಾದರು"

ಪ್ರಾಚಾ ಅವರು ಮಾಜಿ ಸಿಜೆಐ ಚಂದ್ರಚೂಡ್ ಅವರನ್ನು ವೈಯಕ್ತಿಕವಾಗಿ ವಿಚಾರಣೆಗೆ ಕರೆಯಬೇಕು ಮತ್ತು ಅವರನ್ನು ಈ ಪ್ರಕರಣದಲ್ಲಿ ಕಕ್ಷಿದಾರರನ್ನಾಗಿ ಮಾಡಬೇಕು ಎಂದು ಒತ್ತಾಯಿಸಿದ್ದನ್ನು ನ್ಯಾಯಾಧೀಶರು ತಳ್ಳಿಹಾಕಿದರು. ಮಾಜಿ ಸಿಜೆಐ ಅವರನ್ನು ಕಕ್ಷಿದಾರರನ್ನಾಗಿ ಮಾಡುವುದು ಕಾನೂನಿಗೆ ವಿರುದ್ಧವಾಗಿದೆ ಮತ್ತು ಪ್ರಾಚಾ ಅವರು 'ದುರುದ್ದೇಶಪೂರಿತ ಉದ್ದೇಶದಿಂದ' (oblique intent) ಪ್ರೇರಿತರಾಗಿದ್ದಾರೆ ಎಂದು ಕೋರ್ಟ್ ಹೇಳಿತು.

"ಸಾರ್ವಜನಿಕ ಸೇವಕರು ನಿವೃತ್ತರಾದ ನಂತರ ಅವರನ್ನು ಗುರಿಯಾಗಿಸುವ ಒಂದು ನಕಾರಾತ್ಮಕ ಪ್ರವೃತ್ತಿ ಇತ್ತೀಚೆಗೆ ಕಂಡುಬರುತ್ತಿದೆ. ಮಾಜಿ ಸಾರ್ವಜನಿಕ ಸೇವಕರು ತಮ್ಮ ಕಚೇರಿಯಿಂದ ನಿರ್ಗಮಿಸಿದ ನಂತರ ದುರ್ಬಲರಾಗುತ್ತಾರೆ ಮತ್ತು ಎಲ್ಲಾ ರೀತಿಯ ದುರುದ್ದೇಶಪೂರಿತ ದಾಳಿಗೆ ಗುರಿಯಾಗುತ್ತಾರೆ ಎಂಬ ತಪ್ಪು ಕಲ್ಪನೆಯನ್ನು ಕೆಲವು ನಿರ್ಲಜ್ಜ ವ್ಯಾಜ್ಯದಾರರು ಪೋಷಿಸುತ್ತಾರೆ," ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟರು.

"ಸಂರಕ್ಷಕನೇ ಪರಭಕ್ಷಕನಾದಾಗ (predator) ಪರಿಸ್ಥಿತಿ ತೀವ್ರ ತಳಮಳಕ್ಕೆ ಕಾರಣವಾಗುತ್ತದೆ. ಈ ಪ್ರಕರಣದಲ್ಲಿಮೇಲ್ಮನವಿದಾರರು ಸಾಕಷ್ಟು ಹಿರಿಯ ವಕೀಲರಾಗಿದ್ದರೂ ತಪ್ಪು ಮಾರ್ಗವನ್ನು ಆರಿಸಿಕೊಂಡಿದ್ದಾರೆ. ಪರಿಹಾರದಲ್ಲಿ ಭಾಗಿಯಾಗುವ ಬದಲುಸಮಸ್ಯೆಯನ್ನು ಹೆಚ್ಚಿಸಲು ಆರಿಸಿಕೊಂಡಿದ್ದಾರೆ. ಮೇಲ್ಮನವಿದಾರರು ಸುಳ್ಳು ಮತ್ತು ಫಲಹೀನ ಮೊಕದ್ದಮೆಯನ್ನು ಹೂಡಿದ್ದಲ್ಲದೆಸಂಪೂರ್ಣವಾಗಿ ಐಷಾರಾಮಿ ಮತ್ತು ಫಲಹೀನವಾದ ಮೇಲ್ಮನವಿಯನ್ನು ಸಹ ಸಲ್ಲಿಸಿದ್ದಾರೆ," ಎಂದು ನ್ಯಾಯಾಧೀಶರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಮಾಹಿತಿ ಮೂಲ: (ಲೈವ್‌ ಲಾ ವರದಿ)

PARYAYA: ಅಯೋಧ್ಯೆ ತೀರ್ಪು ರದ್ದು ಕೋರಿಕೆ: ವಕೀಲರಿಗೆ ₹6 ಲಕ್ಷ ದಂಡ:   ಅಯೋಧ್ಯೆ ತೀರ್ಪು ರದ್ದು ಕೋರಿಕೆ: ವಕೀಲ ರಿಗೆ ₹6 ಲಕ್ಷ ದಂಡ ಒಂ ದು ಭಾಷಣದಲ್ಲಿ ಸುಪ್ರೀಂಕೋರ್ಟಿನ ಮಾಜಿ ಮುಖ್ಯ ನ್ಯಾಯಮೂರ್ತಿ ( CJI) ನ್ಯಾಯಮೂರ್ತಿ ಡಿ.ವೈ. ಚಂದ್...

Tuesday, November 26, 2024

PARYAYA: ಗೌತಮ್ ಅದಾನಿ, ಸೋದರಳಿಯ ವಿರುದ್ಧ ಯಾವುದೇ ಲಂಚ ಆರೋಪಗಳಿಲ್ಲ

 ಗೌತಮ್ ಅದಾನಿಸೋದರಳಿಯ ವಿರುದ್ಧ ಯಾವುದೇ ಲಂಚ ಆರೋಪಗಳಿಲ್ಲ


US ಆರೋಪಗಳ ಬಗ್ಗೆ ಅದಾನಿ ಸಮೂಹ ಸ್ಪಷ್ಟನೆ

ಯುಎಸ್ ನ್ಯಾಯಾಂಗ ಇಲಾಖೆಯ ಪ್ರಕಾರ ಅದಾನಿ ಸಮೂಹದ ಅಧ್ಯಕ್ಷ ಗೌತಮ್ ಅದಾನಿಅವರ ಸೋದರಳಿಯ ಸಾಗರ್ ಅದಾನಿ ಮತ್ತು ಹಿರಿಯ ಕಾರ್ಯನಿರ್ವಾಹಕ ವನೀತ್ ಜೈನ್ ಅವರು ಲಂಚದ ಆರೋಪಗಳಿಂದ ಮುಕ್ತರಾಗಿದ್ದಾರೆ ಎಂದು ಅದಾನಿ ಗ್ರೂಪ್ ಇಂದು  (೨೦೨೪ ನವೆಂಬರ್‌ ೨೭ ಬುಧವಾರ) ಹೇಳಿದೆ.

ಅದಾನಿ ಸಮೂಹದ ಅಡಿಯಲ್ಲಿರುವ ಅದಾನಿ ಗ್ರೀನ್ ಸಂಸ್ಥೆಯು ತನ್ನ ಇತ್ತೀಚಿನ ಸ್ಟಾಕ್ ಎಕ್ಸ್‌ಚೇಂಜ್ ಫೈಲಿಂಗ್‌ನಲ್ಲಿ ಈ ಕುರಿತು ವಿವರ ನೀಡಿದ್ದು, ಮಾಧ್ಯಮ ವರದಿಗಳನ್ನು "ತಪ್ಪು" ಎಂದು ಕರೆದಿದೆ.

ಅದಾನಿ ಗ್ರೂಪ್ ವಿರುದ್ಧದ ಆರೋಪಗಳಲ್ಲಿ ರಂಧ್ರಗಳನ್ನು ಎಂದು ಹಿರಿಯ ವಕೀಲ ಮತ್ತು ಭಾರತದ ಮಾಜಿ ಅಟಾರ್ನಿ ಜನರಲ್ ಮುಕುಲ್ ರೋಹಟಗಿ ಗುರುತಿಸಿದ್ದಾರೆ.

ಸಮೂಹದ ಸಂಸ್ಥಾಪಕ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಅವರು US ನಲ್ಲಿ ಲಂಚ ಅಥವಾ ನ್ಯಾಯಕ್ಕೆ ಅಡ್ಡಿಪಡಿಸಿದ ಆರೋಪವನ್ನು ಹೊಂದಿಲ್ಲ. ಯುಎಸ್ ನ್ಯಾಯಾಂಗ ಇಲಾಖೆಯ ದೋಷಾರೋಪಣೆಯ ಕುರಿತ ವರದಿಗಳು ತಪ್ಪಾಗಿವೆ ಎಂದು ರೋಹ್ಟಗಿ ಹೇಳಿದ್ದಾರೆ.

ಮಾಧ್ಯಮಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.

"ಮೊದಲಿಗೇ ಹೇಳಿಬಿಡುತ್ತೇನೆ. ಇದು ನನ್ನ ವೈಯಕ್ತಿಕ ಕಾನೂನು ದೃಷ್ಟಿಕೋನ ಎಂದು ನಾನು ನಿಮಗೆ ಹೇಳಲು ಬಯಸುತ್ತೇನೆ. ನಾನು ಅದಾನಿ ಸಮೂಹದ ವಕ್ತಾರನಲ್ಲ. ನಾನು ವಕೀಲ. ನಾನು ಹಲವಾರು ಪ್ರಕರಣಗಳಲ್ಲಿ ಅದಾನಿ ಸಮೂಹದ ಪರವಾಗಿ ಹಾಜರಾಗಿದ್ದೇನೆ. ದೋಷಾರೋಪಣೆಯನ್ನು ನಾನು ಪರಿಶೀಲಿಸಿದ್ದೇನೆ.

US ನ್ಯಾಯಾಲಯದ ದೋಷಾರೋಪಣೆಯಲ್ಲಿ ಮೊದಲ ಮತ್ತು ೫ನೇ ಆಪಾದನೆ ಇತರವುಗಳಿಗಿಂತ ಹೆಚ್ಚು ಮುಖ್ಯವಾದುದು ಎಂಬುದನ್ನು ಗಮನಿಸುವುದು ಬಹಳ ಮುಖ್ಯ. ದೋಷಾರೋಪ ಪಟ್ಟಿಯು ಕೆಲವು ಅಧಿಕಾರಿಗಳು ಮತ್ತು ವಿದೇಶೀ ವ್ಯಕ್ತಿಯೊಬ್ಬರಿಗೆ ಸಂಬಂಧಿಸಿದೆ. ಅದರಲ್ಲಿ ಅದಾನಿ ಮತ್ತು ಸೋದರಳಿಯನ ಹೆಸರಿಲ್ಲ ಎಂದು ಹಿರಿಯ ವಕೀಲರು ಹೇಳಿದರು.

ಯುಎಸ್‌ ನ್ಯಾಯಾಂಗ ಇಲಾಖೆಯ ದೋಷಾರೋಪಣೆ ಪಟ್ಟಿಯು ಲಂಚಗಳ ಕುರಿತು ನಡೆಸಲಾದ ಚರ್ಚೆಗಳು ಅಥವಾ ಭರವಸೆಗಳ ಪ್ರತಿಪಾದನೆಗಳನ್ನು ಮಾತ್ರ ಆಧರಿಸಿದೆ. ಅದು ಭಾರತ ಸರ್ಕಾರದ ಅಧಿಕಾರಿಗಳು ಅದನಿ ಕಾರ್ಯ ನಿರ್ವಾಹಕರಿಂದ ಪಡೆದ ಲಂಚಕ್ಕೆ ಯಾವುದೇ ಸಾಕ್ಷ್ಯಾಧಾರವನ್ನೂ ನೀಡಿಲ್ಲ ಎಂದು ಸಮೂಹ ಹೇಳಿದೆ.

ದೋಷಾರೋಪ ಪಟ್ಟಿಯಲ್ಲಿ ಯಾರಿಗೆ ಲಂಚ ನೀಡಲಾಗಿದೆ ಎಂಬ ಯಾವುದೇ ವಿವರ ಕೂಡಾ ಇಲ್ಲ ಎಂದು ವಕೀಲ ರೋಹ್ಟಗಿ ನುಡಿದರು.

https://youtu.be/wE_dvjPG1NE

ಕಾಂಗ್ರೆಸಿನಿಂದ ʼಅತಿರಂಜಿತʼ

ಈ ಮಧ್ಯೆ, ಹಿರಿಯ ವಕೀಲ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಮಹೇಶ ಜೇಠ್ಮಲಾನಿ ಅವರು ʼಅಮೆರಿಕದಲ್ಲಿ ಅದನಿ ಸಮೂಹದ ವಿರುದ್ಧ ಮಾಡಲಾಗಿರುವ ದೋಷಾರೋಪ ಪಟ್ಟಿಯ ವಿಷಯವನ್ನು ಸ್ಪಷ್ಟವಾದ ರಾಜಕೀಯ ಕಾರಣಗಳಿಗಾಗಿ ಕಾಂಗ್ರೆಸ್‌ ʼಅತಿರಂಜಿತʼಗೊಳಿಸುತ್ತಿದೆ ಎಂದು ಹೇಳಿದ್ದಾರೆ.

ಸಂಸದೀಯ ತನಿಖೆಗಾಗಿ ಒತ್ತಾಯಿಸುವ ಮುನ್ನ ವಿರೋಧ ಪಕ್ಷವು ವಿಶ್ವಾಸಾರ್ಹ ಸಾಕ್ಷ್ಯವನ್ನುನೀಡಲೇಬೇಕು ಎಂದು ಅವರು ಹೇಳಿದ್ದಾರೆ.

ಭಾರತದ ಆರ್ಥಿಕ ಉನ್ನತಿಯನ್ನು ಅಸ್ಥಿರಗೊಳಿಸಲು ಅಮೆರಿಕದ ನ್ಯಾಯಾಲಯಗಳನ್ನು “ಆಳವಾದ ಪ್ರಜಾಪ್ರಭುತ್ವ ರಾಷ್ಟ್ರʼ   ಶಸ್ತ್ರವನ್ನಾಗಿ ಬಳಸಿಕೊಳ್ಳುತ್ತಿದೆ ಎಂದೂ ಅವರ ಟೀಕಿಸಿದ್ದಾರೆ.

ಮಹೇಶ ಜೇಠ್ಮಲಾನಿ ಅವರು ಪಿಟಿಐಗೆ ನೀಡಿದ ಅಭಿಪ್ರಾಯ ಟ್ವಿಟ್ಟರಿನಲ್ಲಿ  (ಹಿಂದಿನ ಎಕ್ಸ್)‌ ಪ್ರಕಟವಾಗಿದೆ.

ಮಹೇಶ ಜೇಠ್ಮಲಾನಿ ಅಭಿಪ್ರಾಯ ಕೇಳಲು ಈ ಕೊಂಡಿಯನ್ನು ಕ್ಲಿಕ್‌ ಮಾಡಿ:

 https://twitter.com/i/status/1861660163272282118

PARYAYA: ಗೌತಮ್ ಅದಾನಿ, ಸೋದರಳಿಯ ವಿರುದ್ಧ ಯಾವುದೇ ಲಂಚ ಆರೋಪಗಳಿಲ್ಲ:   ಗೌತಮ್ ಅದಾನಿ , ಸೋದರಳಿಯ ವಿರುದ್ಧ ಯಾವುದೇ ಲಂಚ ಆರೋಪಗಳಿಲ್ಲ US ಆರೋಪಗಳ ಬಗ್ಗೆ ಅದಾನಿ ಸಮೂಹ ಸ್ಪಷ್ಟನೆ ಯುಎಸ್ ನ್ಯಾಯಾಂಗ ಇಲಾಖೆಯ ಪ್ರಕಾರ ಅದಾನಿ ಸಮೂಹದ ಅಧ್ಯಕ...

Sunday, September 5, 2021

PARYAYA: ನ್ಯಾಯಾಲಯಕ್ಕೆ ಸಾಧ್ಯವಾಗದ್ದು, ಪಂಚಾಯತಿಗೆ ಸಾಧ್ಯವಾಯಿತು..!

ನ್ಯಾಯಾಲಯಕ್ಕೆ ಸಾಧ್ಯವಾಗದ್ದು, ಪಂಚಾಯತಿಗೆ ಸಾಧ್ಯವಾಯಿತು..!

 ಈ ಗ್ರಾಮ ಪಂಚಾಯತಿಯಲ್ಲಿ ‘ಸರ್’  ‘ಮ್ಯಾಡಮ್’ ಪದ ಬಳಸುವಂತಿಲ್ಲ..

ನ್ಯಾಯಾಲಯಕ್ಕೆ ಸಾಧ್ಯವಾಗದ್ದು, ಪಂಚಾಯತಿಗೆ ಸಾಧ್ಯವಾಯಿತು..!

ಆರು ತಿಂಗಳ ಹಿಂದೆ ಸುಪ್ರೀಂಕೋರ್ಟಿನಲ್ಲಿ  ಭಾರತದ ಮುಖ್ಯ ನ್ಯಾಯಮೂರ್ತಿ  ಎಸ್ ಎ ಬೋಬಡೆ ಅವರು ಯುವ ವಕೀಲರೊಬ್ಬರು ತಮ್ಮನ್ನು ‘ಯುವರ್ ಆನರ್’ ಎಂಬುದಾಗಿ ಸಂಬೋಧಿಸಿದಾಗ ಸಿಟ್ಟಿಗೆದ್ದಿದ್ದರು.

‘ನಿಮ್ಮ ಮನಸ್ಸಿನಲ್ಲಿ ಏನಿದೆ? ನೀವು ಅಮೆರಿಕದ ಸುಪ್ರೀಂಕೋರ್ಟಿನಲ್ಲಿ ಇದ್ದೇನೆ ಅಂದುಕೊಂಡಿದ್ದೀರೋ ಅಥವಾ ಅಲ್ಲಿನ ಮ್ಯಾಜಿಸ್ಟ್ರೇಟ್ ಕೋರ್ಟಿನಲ್ಲಿ ಇದ್ದೇನೆ ಅಂದುಕೊಂಡಿದ್ದೀರೋ?’

ತತ್ ಕ್ಷಣವೇ ಕಾನೂನು ವಿದ್ಯಾರ್ಥಿಯಾಗಿದ್ದ ಯುವ ವಕೀಲರು  ನಾಲಿಗೆ ಕಚ್ಚಿಕೊಂಡರು. ‘ತಪ್ಪಾಯಿತು, ಕ್ಷಮಿಸಿ’ ಎಂದು ಕೇಳಿಕೊಂಡು ಯುವ ವಕೀಲರು ‘ಇನ್ನು ಮುಂದೆ  ‘ಮೈ ಲಾರ್ಡ್ಸ್ ಪದ ಬಳಸುತ್ತೇನೆ’ ಎಂದು ಉತ್ತರಿಸಿದರು.

‘ಏನಾದರೂ ಸರಿ. ನೀವು ಯಾವ ಪದ ಬಳಸುತ್ತೀರಿ ಎಂದೇ ನಾವು ಗಮನಿಸುತ್ತಿರುವುದಿಲ್ಲ, ಆದರೆ ತಪ್ಪು ಪದಗಳನ್ನು ಬಳಸಬೇಡಿ’ ಎಂದರು ಸಿಜೆಐ.

ಹಿಂದೆ, 2020ರ ಆಗಸ್ಟ್ ತಿಂಗಳಲ್ಲಿ ಕೂಡಾ ಇದೇ ರೀತಿ ನ್ಯಾಯಮೂರ್ತಿಗಳನ್ನು ಉದ್ದೇಶಿಸಿ ‘ಯುವರ್ ಆನರ್’ ಪದ ಬಳಸಿದಾಗ  ಸಿಜೆಐ ಬೋಬ್ಡೆ ಸಿಡಿಮಿಡಿಗೊಂಡಿದ್ದರು. ಆಗ ಕೂಡಾ  ‘ನೀವೇನು ಅಮೆರಿಕದ ಸುಪ್ರೀಂಕೋರ್ಟಿನ ಮುಂದೆ ಇದ್ದೀರೋ?’ ಎಂಬುದಾಗಿ ಅವರು ವಕೀಲರನ್ನು ಗದರಿದ್ದರು.

ಉನ್ನತ  ನ್ಯಾಯಾಲಯಗಳಲ್ಲಿ ಸಾಮಾನ್ಯವಾಗಿ ಬಳಸುವ  ‘ಮೈ ಲಾರ್ಡ್’, ‘ಯುವರ್ ಲಾರ್ಡ್ ಶಿಪ್’ ಮುಂತಾದ ಶಿಷ್ಟಾಚಾರದ ಪದಗಳು ನಮ್ಮ ದೇಶಕ್ಕೆ ಬ್ರಿಟಿಷ್ ಆಡಳಿತದ ಬಳುವಳಿಗಳು. ಈ ಪದಗಳ ಬಳಕೆಯನ್ನು ನಿಲ್ಲಿಸಬೇಕು ಎಂದು ಹಲವಾರು ವರ್ಷಗಳಿಂದಲೇ ಪ್ರಯತ್ನಗಳು ನಡೆಯುತ್ತಲೇ ಬಂದಿವೆ.

ಭಾರತದ ವಕೀಲರ ಸಂಘವಾದ ಬಾರ್ ಕೌನ್ಸಿಲ್ ಆಫ್ ಇಂಡಿಯಾಕ್ಕೆ  ಇಂತಹ ಪದಗಳ ಬಳಕೆ ಬಗ್ಗೆ ನಿಯಮಗಳನ್ನು ರೂಪಿಸಲು 1961ರ ವಕೀಲರ ಕಾಯ್ದೆಯ ಸೆಕ್ಷನ್ 49 (1)(ಸಿ) ಅಧಿಕಾರ ನೀಡಿದೆ.  2006ರಲ್ಲೇ  ಬಾರ್ ಕೌನ್ಸಿಲ್ ಆಫ್ ಇಂಡಿಯಾ , ‘ಮೈಲಾರ್ಡ್’ ‘ಯುವರ್ ಲಾರ್ಡ್ ಶಿಪ್’ ನಂತಹ ಪದಗಳನ್ನು  ಬಳಸಲು ಉತ್ತೇಜನ ನೀಡಬಾರದು ಎಂದು ನಿರ್ಣಯ ಕೈಗೊಂಡಿತ್ತು.

2014ರಲ್ಲಿ ಶಿವಸಾಗರ್ ತಿವಾರಿ ಎಂಬ ವಕೀಲರೊಬ್ಬರು, ಇಂತಹ ಪದಗಳು ದೇಶದ ಘನತೆಗೆ ಧಕ್ಕೆ ತರುತ್ತವೆ ಮತ್ತು ಇವು ಗುಲಾಮಿತನದ ಸಂಕೇತವಾದ್ದರಿಂದ ಅವುಗಳ ಬಳಕೆಯನ್ನು  ನಿಷೇಧಿಸಬೇಕು’ ಎಂದು ಸುಪ್ರೀಂಕೋರ್ಟಿನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಆದರೆ ಆದರೆ ನ್ಯಾಯಮೂರ್ತಿಗಳಾದ ಎಚ್.ಎಲ್. ದತ್ತು ಮತ್ತು ಬೋಬ್ಡೆ ಅವರ ಪೀಠವು ‘ಈ ಪದಗಳ ಬಳಕೆ ಎಂದಿಗೂ ಕಡ್ಡಾಯವಾಗಿಲ್ಲ’ ಎಂಬುದಾಗಿ ಹೇಳಿ ಅರ್ಜಿಯನ್ನು ತಿರಸ್ಕರಿಸಿತ್ತು.

‘ನ್ಯಾಯಾಲಯವನ್ನು ಗೌರವಯುತವಾಗಿ ಸಂಬೋಧಿಸಿ ಅಷ್ಟೆ. ನೀವು ‘ಸರ್’ ಎಂದರೂ ಒಪ್ಪುತ್ತೇವೆ, ‘ಯುವರ್ ಆನರ್’ ಎಂದರೂ  ಒಪ್ಪುತ್ತೇವೆ, ‘ಲಾರ್ಡ್ ಶಿಪ್’ ಎಂದು ಕರೆದರೂ ಒಪ್ಪುತ್ತೇವೆ.’ ಎಂದು ಪೀಠ ಹೇಳಿತ್ತು.

ಆದರೆ, 2019ರಲ್ಲಿ ರಾಜಸ್ಥಾನ ಹೈಕೋರ್ಟ್ ‘ಮೈಲಾರ್ಡ್’  ‘ಯುವರ್ ಲಾರ್ಡ್ ಶಿಪ್’ ಪದಗಳ ಬಳಕೆಯನ್ನು ನಿಷೇಧಿಸಿತ್ತು. ಸಂವಿಧಾನವು ಸಮಾನತೆಯನ್ನು ಪ್ರತಿಪಾದಿಸಿರುವಾಗ  ಇಂತಹ ಪದಗಳ ಬಳಕೆ ಸರಿಯಲ್ಲ ಎಂದು ರಾಜಸ್ಥಾನ ಹೈಕೋರ್ಟ್ ಸಾರಿತ್ತು.

ಆದರೂ ನ್ಯಾಯಾಲಯಗಳಲ್ಲಿ ಇಂತಹ ಪದಗಳ ಬಳಕೆ ನಿರಂತರವಾಗಿ ನಡೆಯುತ್ತಲೇ ಇದೆ.

ಬ್ರಿಟಿಷ್ ವಸಾಹತಿನ ಬಳುವಳಿ ಪದಗಳನ್ನು ನಿಷೇಧಿಸುವ ಬಗ್ಗೆ ನ್ಯಾಯಾಲಯಗಳೇ ಹೀಗೆ ದ್ವಂದ್ವದಲ್ಲಿ ಇರುವ ಹೊತ್ತಿನಲ್ಲಿ  ಕೇರಳದ ಪುಟ್ಟ ಗ್ರಾಮ ಪಂಚಾಯತಿಯೊಂದು ‘ಸರ್ ಮತ್ತು  ಮ್ಯಾಡಮ್’ ನಂತಹ ಬ್ರಿಟಿಷ್ ವಸಾಹತುಶಾಹಿಯ ಪದಗಳ ಬಳಕೆಯನ್ನು ನಿಷೇಧಿಸುವ ಮೂಲಕ  ಇಂತಹ ಪದಗಳ ಬಳಕೆಯನ್ನು ನಿಷೇಧಿಸಿದ ದೇಶದ ಮೊತ್ತ ಮೊದಲ ಗ್ರಾಮ ಪಂಚಾಯತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಕೇರಳದ ಪಾಲಕ್ಕಾಡ್ ಜಿಲ್ಲೆಯ ಮಾಥುರ್ ಗ್ರಾಮ ಪಂಚಾಯತಿಯು 2021ರ ಆಗಸ್ಟ್ 31ರ ಮಂಗಳವಾರ  ‘ಸರ್ ಮತ್ತು ಮ್ಯಾಡಮ್’  ಪದಗಳ ಬಳಕೆಯನ್ನು ನಿಷೇಧಿಸುವ  ಚಾರಿತ್ರಿಕ ನಿರ್ಣಯವನ್ನು ಕೈಗೊಂಡು ಇತಿಹಾಸ  ಬರೆದಿದೆ.

16 ಸದಸ್ಯರ ಕಾಂಗ್ರೆಸ್ ಆಡಳಿತದ ಗ್ರಾಮ ಪಂಚಾಯಿತಿಯು ಈ ವಾರದ ಆರಂಭದಲ್ಲಿ ಅಂಗೀಕರಿಸಿದ ಸರ್ವಾನುಮತದ ನಿರ್ಣಯಕ್ಕೆ ಏಳು ಸಿಪಿಐ (ಎಂ) ನಾಮನಿರ್ದೇಶಿತರು ಮತ್ತು ಒಬ್ಬ ಬಿಜೆಪಿ ಸದಸ್ಯರ ಬೆಂಬಲ ಲಭಿಸಿದೆ. ಈ ವಿಚಾರದಲ್ಲಿ ಪಕ್ಷಗಳು ಯಾವುದೇ ರಾಜಕೀಯವನ್ನೂ ಎಳೆದುತರಲಿಲ್ಲ ಎಂಬುದೇ ವಿಶೇಷ.

ಸಾಮಾನ್ಯ ಜನರು, ಜನಪ್ರತಿನಿಧಿಗಳು ಮತ್ತು ನಾಗರಿಕ ಸಂಸ್ಥೆಯ ಅಧಿಕಾರಿಗಳ ನಡುವಣ ಅಂತರವನ್ನು ಕಡಿಮೆ ಮಾಡುವ ಉದ್ದೇಶದಿಂದ  ಇಂತಹ ಕ್ರಮ ಕೈಗೊಂಡಿರುವ ಮಾಥುರ್ ಗ್ರಾಮ ಪಂಚಾಯತಿ ಇದನ್ನು ಪಂಚಾಯತಿಯ ಪ್ರಕಟಣಾ ಫಲಕದಲ್ಲಿ ಅಂಟಿಸುವ ಮೂಲಕ ಜಾರಿಗೂ ತಂದಿದೆ.

ಜನರು, ಪಂಚಾಯತಿನ ಯಾವುದೇ ಅಧಿಕಾರಿಯನ್ನು ಉದ್ದೇಶಿಸಿ ‘ಸರ್’ ಅಥವಾ ‘ಮ್ಯಾಡಮ್’ ಎಂಬುದಾಗಿ ಸಂಬೋಧಿಸಬೇಕಾಗಿಲ್ಲ.  ಅಧಿಕಾರಿಯ ಹುದ್ದೆ ಅಥವಾ ಹೆಸರಿನಿಂದಲೇ ಸಂಬೋಧಿಸಬಹುದುಅಧಿಕಾರಿಗಳು ವಯಸ್ಸಾದವರೋ  ಹಿರಿಯರೋ ಆಗಿದ್ದರೆ ಮಲಯಾಳಂನಲ್ಲಿ ‘ಚೇತಾ’/ ‘ಚೇತನ್’ (ಅಣ್ಣ) ಅಥವಾ ‘ಚೇಚಿ’ (ಅಕ್ಕ) ಇಂತಹ ಸ್ನೇಹಪರ ಪದಗಳನ್ನು ಬಳಸಬಹುದು.

‘ಸರ್’ ಅಥವಾ ‘ಮ್ಯಾಡಮ್’ ಪದ ಬಳಸದ್ದಕ್ಕಾಗಿ ಸೇವೆ ನೀಡಲು ಯಾರಾದರೂ ನಿರಾಕರಿಸಿದರೆ ಜನರು ಪಂಚಾಯತ್ ಅಧ್ಯಕ್ಷರು ಅಥವಾ ಕಾರ್ಯದರ್ಶಿಗೆ ದೂರು ನೀಡಬಹುದು.

ಪಂಚಾಯತಿ ನಿರ್ಣಯದ ಪರಿಣಾಮವಾಗಿ ಈಗ ಅಲ್ಲಿನ  ಅಧಿಕಾರಿಗಳು ತಮ್ಮ ಮೇಜಿನ ಮೇಲೆ ತಮ್ಮ ಹೆಸರುಹುದ್ದೆಗಳ ಫಲಕಗಳನ್ನೂ ಇಡುತ್ತಿದ್ದಾರೆ.

'ಸರ್' ಮತ್ತು 'ಮೇಡಂ' ಗೆ ಪರ್ಯಾಯ ಪದಗಳನ್ನು ನೀಡುವಂತೆ ಪಂಚಾಯತಿಯು ಅಧಿಕೃತ ಭಾಷಾ ಇಲಾಖೆಯನ್ನು  ಕೂಡಾ  ಕೋರಿದೆ.

ಪ್ರಜಾಪ್ರಭುತ್ವದಲ್ಲಿ ನಾಗರಿಕರೇ ಪ್ರಭುಗಳು. ನಾವೆಲ್ಲರೂ ಅವರಿಗೆ ಸೇವೆ ಒದಗಿಸುವ ಸೇವಕರು. ನಮ್ಮ ಸೇವೆ ಪಡೆಯಲು ಜನರು ನಮ್ಮನ್ನು ಅಂಗಲಾಚುವಂತೆ ಆಗಬಾರದು. ಇದಕ್ಕಾಗಿ, ಪಂಚಾಯತ್ ಪ್ರಸ್ತುತ 'ಅಪೇಕ್ಷಾ ನಮೂನೆ' (ಅರ್ಜಿ ನಮೂನೆ) ಯನ್ನು 'ಅವಕಾಶ ಪತ್ರಿಕೆ' (ಹಕ್ಕು ಪ್ರಮಾಣಪತ್ರ) ಆಗಿ ಬದಲಾಯಿಸಲೂ ಪಂಚಾಯತಿಯು ತೀರ್ಮಾನಿಸಿದೆ ಎಂದೂ ಪಂಚಾಯತಿಯ ಉಪಾಧ್ಯಕ್ಷರು ತಿಳಿಸಿದ್ದಾರೆ.

ಎಂತಹ ಅನುಕರಣೀಯ ಗ್ರಾಮ ಪಂಚಾಯತಿ ಇದು ಅಲ್ಲವೇ?

ವಿಡಿಯೋ ನೋಡಲು ಕೆಳಗೆ ಕ್ಲಿಕ್ ಮಾಡಿರಿ:


 -ನೆತ್ರಕೆರೆ ಉದಯಶಂಕರ



PARYAYA: ನ್ಯಾಯಾಲಯಕ್ಕೆ ಸಾಧ್ಯವಾಗದ್ದು, ಪಂಚಾಯತಿಗೆ ಸಾಧ್ಯವಾಯಿತು..!:   ಈ ಗ್ರಾಮ ಪಂಚಾಯತಿಯಲ್ಲಿ ‘ಸರ್’   ‘ಮ್ಯಾಡಮ್’ ಪದ ಬಳಸುವಂತಿಲ್ಲ.. ನ್ಯಾಯಾಲಯಕ್ಕೆ ಸಾಧ್ಯವಾಗದ್ದು, ಪಂಚಾಯತಿಗೆ ಸಾಧ್ಯವಾಯಿತು..! ಆರು ತಿಂಗಳ ಹಿಂದೆ ಸುಪ್ರೀಂಕೋರ್ಟ...

Wednesday, December 9, 2020

ಗೋಹತ್ಯೆ ನಿಷೇಧ ಮಸೂದೆಗೆ ವಿಧಾನಸಭೆ ಅಂಗೀಕಾರ

 ಗೋಹತ್ಯೆ ನಿಷೇಧ ಮಸೂದೆಗೆ ವಿಧಾನಸಭೆ ಅಂಗೀಕಾರ

ಬೆಂಗಳೂರು: ಪ್ರತಿಪಕ್ಷಗಳ ಗದ್ದಲ, ಕೋಲಾಹಲ, ಧರಣಿ, ಸಭಾತ್ಯಾಗದ ನಡುವೆಯೇ ರಾಜ್ಯದಲ್ಲಿ ಗೋಹತ್ಯೆ ನಿಷೇಧಿಸುವ ಕಠಿಣ ನಿಯಮಗಳನ್ನು ಒಳಗೊಂಡ ಕರ್ನಾಟಕ ಜಾನುವಾರು ವಧೆ, ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅನುಮೋದನೆ ಪಡೆದುಕೊಳ್ಳುವಲ್ಲಿ ಸರ್ಕಾರ 2020 ಡಿಸೆಂಬರ್ 09ರ ಬುಧವಾರ ಯಶಸ್ವಿಯಾಯಿತು.

ಇದರೊಂದಿಗೆ ಉತ್ತರ
ಪ್ರದೇಶ ಸರ್ಕಾರದ ಬಳಿಕ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರುತ್ತಿರುವ ಎರಡನೇ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಲು ವೇದಿಕೆ ಸಜ್ಜಾಯಿತು. ಗೋ ಹತ್ಯೆ ಮಾಡಿದರೆ ವರ್ಷಗಳವರೆಗೆ ಜೈಲುವಾಸ, ಮೊದಲ ಬಾರಿ ಜಾನುವಾರು ಹತ್ಯೆಗೆ ೫೦ ಸಾವಿರದಿಂದ ಲಕ್ಷ ರೂ. ವರೆಗೆ ದಂಡ ವಿಧಿಸುವ ಅಂಶಗಳು ಪ್ರಸ್ತಾವಿತ ಕಾಯ್ದೆಯಲ್ಲಿವೆ. ವಿಧಾನ ಪರಿಷತ್ನಲ್ಲೂ ವಿಧೇಯಕ ಅನುಮೋದನೆ ಪಡೆದುಕೊಂಡ ಬಳಿಕ ರಾಜ್ಯಪಾಲರ ಸಹಿಗೆ ಕಳಿಸಲಾಗುತ್ತದೆ. ಬಳಿಕ ನಿಯಮ ರಚಿಸಿ ಕಾಯ್ದೆ ಅನುಷ್ಠಾನವಾಗಲಿದೆ.

ವಿಧಾನಸಭೆಯಲ್ಲಿ ಬುಧವಾರ ವಿಧೇಯಕ ಮಂಡನೆ ಪ್ರಕ್ರಿಯೆ ಹಠಾತ್ ನಡೆಯಿತು. ಪಶು ಸಂಗೋಪನೆ ಸಚಿವ ಪ್ರಭು ಚೌವ್ಹಾಣ್ , ವಿಧೇಯಕ ಮಂಡನೆಗೆ ಮುಂದಾಗುತ್ತಿದ್ದಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಪ್ರತಿಪಕ್ಷಗಳ ಅನೇಕ ಸದಸ್ಯರು ಆಕ್ಷೇಪ ಎತ್ತಿದರು. ಸಭಾಧ್ಯಕ್ಷರ ಪೀಠದ ಮುಂದಕ್ಕೆ  ಧಾವಿಸಿದರು. ಕೋಲಾಹಲ  ಎಬ್ಬಿಸಿದರು. ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರು ಪರ ವಿರೋಧ ಘೋಷಣೆ ಕೂಗಿದರು.

ಬಿಜೆಪಿ ಸದಸ್ಯರು ಕೇಸರಿ ಶಾಲು ಹೊದ್ದು ಸಂಭ್ರಮಿಸಿದರಲ್ಲದೆ, ವಿಧಾನಸಭೆ ಹೊರ ಆವರಣದಲ್ಲಿ ಗೋವು ತಂದು ಪೂಜೆ ಸಲ್ಲಿಸಿದರು. ಮಸೂದೆ ಮಂಡನೆಯಾಗುತ್ತಿದ್ದಂತೆಯೇ ಜೆಡಿಎಸ್ ಎಚ್.ಕೆ. ಕುಮಾರಸ್ವಾಮಿ, ವಿಧೇಯಕ ಮಂಡನೆಯ ವಿಷಯ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ನಿರ್ಧಾರವಾಗಿಲ್ಲ. ಹಾಗಾಗಿ ಮಂಡನೆ ಮಾಡಲು ಅವಕಾಶ ಕೊಡಬೇಡಿ ಎಂದು ಸಭಾಧ್ಯಕ್ಷರಿಗೆ  ಮನವಿ ಮಾಡಿದರು. ಇದಕ್ಕೆ ದನಿಗೂಡಿಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಸಭಾಧ್ಯಕ್ಷರ  ನಡೆಯನ್ನು ಖಂಡಿಸಿದರು.

ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಪ್ರಮುಖ ವಿಧೇಯಕ ಮಂಡಿಸುವ ಬಗ್ಗೆ ತೀರ್ಮಾನವಾಗಿತ್ತು, ಪ್ರಕಾರ ಅವಕಾಶ ನೀಡಲಾಗಿದೆ ಎಂದು ಸಮರ್ಥಿಸಿಕೊಂಡರಲ್ಲದೇ, ಮಂಡನೆಗೆ ಸೂಚನೆ ನೀಡಿದರು. ನಡುವೆ ನಮಗೆ ವಿಧೇಯಕದ ಅಗತ್ಯವಿದೆ, ತಾಕತ್ತಿದ್ದರೆ ಚರ್ಚೆ ಮಾಡಿ ಎಂದು ಬಿಜೆಪಿಯ ಸುನೀಲ್ ಕುಮಾರ್ ಪ್ರತಿಪಕ್ಷಗಳಿಗೆ ಸವಾಲೆಸೆದರೆ, ಕಾಂಗ್ರೆಸ್ನವರು ದನ ಕಡಿಯುವವರ ಪರ ಎಂದು ಸಿ.ಟಿ.ರವಿ ಘೋಷಣೆ ಹಾಕಿದರು.

ಪ್ರತಿಯಾಗಿ, ವಿಧಾನಸಭೆಯನ್ನು ಬಿಜೆಪಿ ಕಚೇರಿ ಮಾಡಬೇಡಿ ಎಂದು ಕಾಂಗ್ರೆಸ್ ಎಚ್. ಕೆ.ಪಾಟೀಲ್ ಕಿಡಿಕಾರಿದರು. ಜೈ ಶ್ರೀರಾಮ್, ಹಿಂದು ವಿರೋಧಿ ಕಾಂಗ್ರೆಸ್, ಗೋ ಮಾತೆ ವಿರೋಧಿ ಕಾಂಗ್ರೆಸ್ ಎಂಬ ಘೋಷಣೆಗಳು ಆಡಳಿತ ಪಕ್ಷದ ಕಡೆಯಿಂದ ಮೊಳಗಿದವು. ಕಾಂಗ್ರೆಸ್ ಸದಸ್ಯರು ಸ್ಪೀಕರ್ ಪೀಠದ ಮುಂದೆ ಧರಣಿ ಕುಳಿತರು. ದಿನದ ಕಲಾಪಪಟ್ಟಿಯಲ್ಲಿ ವಿಧೇಯಕದ ಮಾಹಿತಿಯೇ ಇಲ್ಲ ಎಂದು ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಕಲಾಪವನ್ನು ಮುಂದೂಡಿ ಪುನಃ ಪ್ರತಿಪಕ್ಷ ಸದಸ್ಯರನ್ನು ಮನವೊಲಿಸಲು ಸಭಾಧ್ಯಕ್ಷರು ನಡೆಸಿದ ಪ್ರಯತ್ನ ಫಲಕೊಡಲಿಲ್ಲ. ಎಷ್ಟೇ ಮನವಿ ಮಾಡಿದರೂ ಧರಣಿ ಹಿಂಪಡೆಯಲಿಲ್ಲ. ನಡುವೆ ಸರ್ಕಾರ ಹಠಕ್ಕೆ ಬಿದ್ದು ವಿಧೇಯಕ ಮಂಡನೆ, ಚರ್ಚೆ, ಅನುಮೋದನೆ ಪ್ರಕ್ರಿಯೆ ಮುಗಿಸಿತು.

ವಿಧೇಯಕ ಮಂಡನೆಗೂ ಮುನ್ನ ಮತ್ತು ಬಳಿಕ ಬಿಜೆಪಿ ನಾಯಕರು ವಿಧಾನಸೌಧ ಆವರಣದಲ್ಲಿ ಗೋ ಪೂಜೆ ನೆರವೇರಿಸಿದರು. ಗೋವುಗಳನ್ನು ವಿಧಾನಸೌಧಕ್ಕೆ ತರಿಸಿಕೊಂಡಿದ್ದ ಪಕ್ಷದ ನಾಯಕರು, ವಿಶೇಷ ಪೂಜೆ ನೆರವೇರಿಸಿ ಘೋಷಣೆ ಹಾಕಿ ಸಂಭ್ರಮಿಸಿದರು. ಜತೆಗೆ ಕೇಸರಿ ಶಾಲು ಹಾಕಿಕೊಂಡು ಸಂಭ್ರಮಿಸಿ ಕಲಾಪದಲ್ಲಿ ಪಾಲ್ಗೊಂಡರು.ಆದರೆ, ಕೇಸರಿ ಶಾಲು ಧರಿಸಿ ಬಂದಿದ್ದಕ್ಕೆ ಎಚ್.ಕೆ. ಪಾಟೀಲ್ ಆಕ್ಷೇಪ ಎತ್ತಿದರು. ಆದರೆ, ಮಂಗಳವಾರ ಕಾಂಗ್ರೆಸ್ ಪ್ರತಿಪಕ್ಷ ಶಾಸಕರು ಕಪ್ಪು ಪಟ್ಟಿ ಧರಿಸಿ ಬಂದಿದ್ದನ್ನು ಪ್ರಸ್ತಾಪಿಸಿ ಎಚ್.ಕೆ.ಪಾಟೀಲ್ ಆಕ್ಷೇಪಕ್ಕೆ ಮಣೆ ಹಾಕಲಿಲ್ಲ.