Showing posts with label Rathotsava. Show all posts
Showing posts with label Rathotsava. Show all posts

Sunday, April 26, 2026

PARYAYA: ಗಿರಿನಗರ ಶ್ರೀ ಮಹಾಗಣಪತಿ ರಥೋತ್ಸವ

 ಗಿರಿನಗರ ಶ್ರೀ ಮಹಾಗಣಪತಿ ರಥೋತ್ಸವ

ಬೆಂಗಳೂರು ಗಿರಿನಗರದ ಒಡೆಯ ಶ್ರೀ ಮಹಾಗಣಪತಿಯ ರಥೋತ್ಸವವು ೨೦೨೬ ಏಪ್ರಿಲ್‌ ೨೬ರ ಭಾನುವಾರ ಸಡಗರದೊಂದಿಗೆ ನೆರವೇರಿತು.

ಶ್ರೀ ರಾಮಚಂದ್ರಾಪುರ ಮಠದ ಶ್ರೀ ಮಹಾಗಣಪತಿ ದೇವಾಲಯದಲ್ಲಿ ಶ್ರೀ ಮಹಾಗಣಪತಿ ಜಾತ್ರೆಯ ಪ್ರಯುಕ್ತ ಏಪ್ರಿಲ್‌ ೨೨ರಿಂದ ವಿವಿಧ ಕಾರ್ಯಕ್ರಮಗಳು ನಡೆದವು. ಏಪ್ರಿಲ್‌ ೨೨ರಂದು ನವಗ್ರಹ ಶಾಂತಿ ಹೋಮ, ಅಥರ್ವ ಶೀರ್ಷ ಹೋಮ, ಏಪ್ರಿಲ್‌ ೨೩ರಂದು ಅಥರ್ವ ಶೀರ್ಷ ಹೋಮ, ದುರ್ಗಾ ದೀಪ ನಮಸ್ಕಾರ, ಏಪ್ರಿಲ್‌ ೨೪ರಂದು ಸುಬ್ರಹ್ಮಣ್ಯ ಹೋಮ, ರಂಗಪೂಜೆ, ಏಪ್ರಿಲ್‌ ೨೫ರಂದು ನಾಗಮೂಲಮಂತ್ರ ಹೋಮ, ಆಶ್ಲೇಷಬಲಿ, ಪಲ್ಲಕ್ಕಿ ಉತ್ಸವ ನಡೆದವು.

ಏಪ್ರಿಲ್‌ ೨೬ರಂದು ಅಥರ್ವಶೀರ್ಷ ಹೋಮ, ರಥೋತ್ಸವ, ದೇವನೃತ್ಯ ಕಾರ್ಯಕ್ರಮಗಳು ನಡೆದವು. ಏಪ್ರಿಲ್‌ ೨೭ರಂದು ಸಹಸ್ರಮೋದಕ ಅಥರ್ವಶೀರ್ಷ ಹವನ ಹಾಗೂ ಅವಭೃತದೊಂದಿಗೆ ಜಾತ್ರೆ ಮುಕ್ತಾಯ.

ಭಾನುವಾರ ನಡೆದ ಸಂಭ್ರಮದ ರಥೋತ್ಸವದಲ್ಲಿ ಭಾರೀ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡರು.

ಈ ಸಂದರ್ಭದ ಕೆಲವು ವಿಡಿಯೋಗಳು ಹಾಗೂ ಚಿತ್ರಗಳು ಇಲ್ಲಿವೆ.

PARYAYA: ಗಿರಿನಗರ ಶ್ರೀ ಮಹಾಗಣಪತಿ ರಥೋತ್ಸವ:   ಗಿರಿನಗರ ಶ್ರೀ ಮಹಾಗಣಪತಿ ರಥೋತ್ಸವ ಬೆಂ ಗಳೂರು ಗಿರಿನಗರದ ಒಡೆಯ ಶ್ರೀ ಮಹಾಗಣಪತಿಯ ರಥೋತ್ಸವವು ೨೦೨೬ ಏಪ್ರಿಲ್‌ ೨೬ರ ಭಾನುವಾರ ಸಡಗರದೊಂದಿಗೆ ನೆರವೇರಿತು. ಶ್ರೀ ರಾಮ...

Monday, May 1, 2023

PARYAYA: ಬೆಂಗಳೂರಿನಲ್ಲಿ ಕೇರಳ ಮಾದರಿ ರಥೋತ್ಸವ..

 ಬೆಂಗಳೂರಿನಲ್ಲಿ ಕೇರಳ ಮಾದರಿ ರಥೋತ್ಸವ..

ಹೌದು. ಬೆಂಗಳೂರಿನಲ್ಲಿ ಕೇರಳ ಮಾದರಿ ರಥೋತ್ಸವ. ಇದು ಬೆಂಗಳೂರಿನ ಗಿರಿನಗರದ ಮೂಲ ದೇವರಾದ ಮಹಾಗಣಪತಿಯ ರಥೋತ್ಸವ.
ಬೆಂಗಳೂರಿನ ಗಿರಿನಗರದಲ್ಲಿ ಮಹಾಗಣಪತಿ ರಥೋತ್ಸವ ಏಪ್ರಿಲ್‌ ೨೬ರಿಂದ ಮೇ ೦೧ರವರೆಗೆ ರಾಮಚಂದ್ರಾಪುರ ಮಠದ ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ನಡೆಯಿತು.

ಕರ್ನಾಟಕದ ಪಶ್ಚಿಮ ಕರಾವಳಿಯ ಅದರಲ್ಲೂ ಮುಖ್ಯವಾಗಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆ ಹಾಗೂ ಕೇರಳದಲ್ಲಿ ನಡೆಯುವ ಮಾದರಿಯಲ್ಲಿ ಜಾತ್ರೆ ಹಾಗೂ ರಥೋತ್ಸವ ಇಲ್ಲಿನ ಆಸುಪಾಸಿನ ಭಕ್ತಾದಿಗಳನ್ನು ವಿಶೇಷವಾಗಿ ಆಕರ್ಷಿಸಿತು.

ಕೇರಳ, ದಕ್ಷಿಣ ಕನ್ನಡ, ಉಡುಪಿ ದೇವಾಲಯಗಳ ಮಾದರಿಯ  ದರ್ಶನಬಲಿ, ದೇವನೃತ್ಯ, ರಂಗಪೂಜೆ, ಮತ್ತು ವಿಶೇಷವಾಗಿ ಚೆಂಡೆ ವಾದನ, ಕೊಂಬು ಕಹಳೆಯೊಂದಿಗೆ ಮಹಾರಥೋತ್ಸವ ಜರುಗಿತು.


ದೇವಾಲಯದ ಅಷ್ಟಬಂಧ ಬ್ರಹ್ಮಕಲಶೋತ್ಸವ ಕೂಡಾ ೨೦೨೨ರಲ್ಲಿ ಕೇರಳ, ಕರ್ನಾಟಕದ ಪಶ್ಚಿಮ ಕರಾವಳಿ ಮಾದರಿಯಲ್ಲೇ ನೆರವೇರಿತ್ತು.


ಏಪ್ರಿಲ್‌ ೩೦ರಂದು ನಡೆದ ಮಹಾಗಣಪತಿ ದೇವರ ರಥೋತ್ಸವ ಸಂಭ್ರಮದ ವಿಡಿಯೋಗಳು ಇಲ್ಲಿವೆ.


PARYAYA: ಬೆಂಗಳೂರಿನಲ್ಲಿ ಕೇರಳ ಮಾದರಿ ರಥೋತ್ಸವ..:   ಬೆಂಗಳೂರಿನಲ್ಲಿ ಕೇರಳ ಮಾದರಿ ರಥೋತ್ಸವ.. ಹೌದು. ಬೆಂಗಳೂರಿನಲ್ಲಿ ಕೇರಳ ಮಾದರಿ ರಥೋತ್ಸವ. ಇದು ಬೆಂಗಳೂರಿನ ಗಿರಿನಗರದ ಮೂಲ ದೇವರಾದ ಮಹಾಗಣಪತಿಯ ರಥೋತ್ಸವ. ಬೆಂಗಳೂರ...

Monday, January 22, 2018

‘ವಿಟ್ಲಾಯನ’ ವೈಭವ, ಕಣ್ತುಂಬಿಕೊಳ್ಳಿ ‘ವಿಟ್ಲ ತೇರು’ ಸಂಭ್ರಮ! Vittla Sri Panchalingeshwara Car Festival !



ವಿಟ್ಲಾಯನವೈಭವ, ಕಣ್ತುಂಬಿಕೊಳ್ಳಿವಿಟ್ಲ ತೇರುಸಂಭ್ರಮ!
Vittla Sri Panchalingeshwara Car Festival !
ವಿಟ್ಲ: ಹೌದು. ಇದಕ್ಕೆವಿಟ್ಲಾಯನ’ ಎಂದೇ ಹೆಸರು. ಅಂದರೆ ವಿಟ್ಲ ಜಾತ್ರೆ. ಪಂಚಲಿಂಗೇಶ್ವರನ ವರ್ಷಾವಧಿ ಜಾತ್ರಾ ಮಹೋತ್ಸವ ಪ್ರತಿವರ್ಷ ಮಕರ ಸಂಕ್ರಮಣದಿನವಾದ ಜನವರಿ 14ರಂದು ‘ಗರುಡಾರೋಹಣ’ದೊಂದಿಗೆ ಆರಂಭವಾಗಿ ಜನವರಿ 22ರಂದು ಮುಕ್ತಾಯವಾಗುತ್ತದೆ.

https://youtu.be/JRsaTMrHMZY
ಹಿಂದಿನಿಂದಲೇ ವಿಟ್ಲದ ಆಸುಪಾಸಿನ ಮಂದಿಗೆಲ್ಲ ಸಡಗರ ಸಂಭ್ರಮದ ದಿನಗಳಿವು. ಈಗಂತೂ ದೇವಸ್ಥಾನದ ಜೀರ್ಣೋದ್ಧಾರ ನೆರವೇರಿದ ಬಳಿಕ ದೇವಸ್ಥಾನಕ್ಕೆ ಬರುವ ಭಕ್ತರ ಸಂಖ್ಯೆ ಇನ್ನೂ ಹೆಚ್ಚಿದೆ.
ದಕ್ಷಿಣ ಕನ್ನಡ, ಕೇರಳ ಶೈಲಿಯ ವಿಶಿಷ್ಠ ದೇವಾಲಯಗಳಲ್ಲಿ ಒಂದಾಗಿರುವ ಪಂಚಲಿಂಗೇಶ್ವರ ದೇವಸ್ಥಾನ ದಕ್ಷಿಣ ಭಾರತದಲ್ಲೇ ಅತ್ಯಂತ ವಿಶಾಲವಾದಗಜಪೃಷ್ಠ ಗರ್ಭಗುಡಿಇರುವಂತಹ ದೇವಸ್ಥಾನ. ದೇಗುಲದ ಗರ್ಭಗುಡಿಯ ಹಿಂಭಾಗ ಆನೆಯ ಪೃಷ್ಠದ ಆಕಾರದಲ್ಲಿ ಇರುವುದೇ ಇದಕ್ಕೆ ಹೆಸರು ಬರಲು ಕಾರಣ.
ಪಂಚಲಿಂಗೇಶ್ವರನಿಗೆ ವರ್ಷ ಭಕ್ತರು ಕಾಣಿಕೆಯ ರೂಪದಲ್ಲಿ ಹೊಸ ದೋಣಿಯೊಂದನ್ನು ಅರ್ಪಿಸಿದ್ದರಿಂದ ವರ್ಷ ದೇವರ ತೆಪ್ಪೋತ್ಸವಕ್ಕೂ ವಿಶೇಷ ಕಳೆ ಮೂಡಿತ್ತು.
2018 ಜನವರಿ 21 ರಾತ್ರಿ ಪಂಚಲಿಂಗೇಶ್ವರನ ಸಡಗರದ ತೇರು (ರಥೋತ್ಸವ). ರಥೋತ್ಸವದ ಸಂಭ್ರಮ, ಬೆಡಿ (ಸಿಡಿಮದ್ದು) ಗೌಜಿಯನ್ನು ಕಣ್ತುಂಬಿಕೊಳ್ಳಲು ಬರುವ ಮಂದಿ ಕಡಿಮೆ ಏನಲ್ಲ.
ವಿಟ್ಲಾಯನದ ಸಂಭ್ರಮದ ಕೆಲವು ಝಲಕ್ ಗಳು, ವಿಡಿಯೋಗಳು ಇಲ್ಲಿವೆ. ಬನ್ನಿ ಕಣ್ತುಂಬಿಕೊಳ್ಳಿ.


ವಿಡಿಯೋಗಳನ್ನು ನೋಡಲು ಕೆಳಗಿನ ಚಿತ್ರ ಕ್ಲಿಕ್ ಮಾಡಿ:
https://youtu.be/JRsaTMrHMZY



https://youtu.be/g4d4ZuaWsWE
https://youtu.be/ydkg9r7-7ac

(ಫೊಟೋ, ವಿಡಿಯೋ ಕೃಪೆ: ವಿಟ್ಲ ಸುದ್ದಿಗಳು ಆ್ಯಪ್)