Showing posts with label Talamaddale. Show all posts
Showing posts with label Talamaddale. Show all posts

Wednesday, November 26, 2025

PARYAYA: ರಾಜ್ಯೋತ್ಸವ ಕಳೆಗಟ್ಟಿಸಿದ ಚಿಣ್ಣರ ʼಅಭಿಮನ್ಯು ಕಾಳಗʼ

 ರಾಜ್ಯೋತ್ಸವ ಕಳೆಗಟ್ಟಿಸಿದ ಚಿಣ್ಣರ ʼಅಭಿಮನ್ಯು ಕಾಳಗʼ

ಬೆಂಗಳೂರಿನಲ್ಲಿ ರಾಜ್ಯೋತ್ಸವ ಅಂದರೆ ನೆನಪಾಗುವುದು  ಭಾಷಣ, ನಾಟಕ,ಸಂಗೀತ, ನೃತ್ಯ.

ಆದರೆ, ರಾಮಕೃಷ್ಣ ಹೆಗಡೆ ನಗರ, ಜಕ್ಕೂರಿಗೆ ಸಮೀಪದ ಅಮೃತಹಳ್ಳಿಯ ತಲಕಾವೇರಿ ಬಡಾವಣೆಯಲ್ಲಿ ಈ ಬಾರಿಯ ರಾಜ್ಯೋತ್ಸವ ವಿಶೇಷವಾಗಿತ್ತು. ಈ ಬಡಾವಣೆಯ ಪುಟ್ಟ ಮಕ್ಕಳು ಬಣ್ಣ ಬಣ್ಣದ ವೇಷ ತೊಟ್ಟು, ಕಾಲಿಗೆ ಗೆಜ್ಜೆ ಕಟ್ಟಿಕೊಂಡು ಪೌರಾಣಿಕ ಪ್ರಸಂಗದ ಪಾತ್ರಧಾರಿಗಳಾಗಿ ಯಕ್ಷ ರಂಗಭೂಮಿಯಲ್ಲಿ ಮಿಂಚಿದರು.

ಕೇವಲ ೧೦ರಿಂದ ೧೫ದಿನಗಳ ಅವಧಿಯ ತರಬೇತಿಯಲ್ಲಿ ಯಕ್ಷಗಾನದ ಭಾಗವತಿಕೆಗೆ ಹೆಜ್ಜೆ ಹಾಕಿ ಅದ್ಭುತ ಪ್ರದರ್ಶನ ನೀಡಿದರು. ʼಅಭಿಮನ್ಯು ಕಾಳಗʼವನ್ನು ಪ್ರದರ್ಶಿಸಿ ಪ್ರೇಕ್ಷಕರನ್ನು ಹುಚ್ಚೆಬ್ಬಿಸಿದರು.

ʼಯಕ್ಷ ಕಲಾ ಕೌಸ್ತುಭʼದ ಯಕ್ಷಗುರು ಉಮೇಶ ರಾಜ್‌ ಮಂದಾರ್ತಿ ಅವರ ನಿರ್ದೇಶನ ಮತ್ತು ಅವರ ತಂಡದ ಸದಸ್ಯರ ಸಹಕಾರದೊಂದಿಗೆ ತಲಕಾವೇರಿ ಬಡಾವಣೆಯ ʼಅಭಿಮನ್ಯು ಕಾಳಗʼ ಯಕ್ಷಗಾನ ಎಲ್ಲರ ಮನ ಸೆಳೆಯಿತು.

ಉಮೇಶ ರಾಜ್‌ ಮಂದಾರ್ತಿ ಅವರು ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಪ್ರತಿ ಭಾನುವಾರ ಮಕ್ಕಳಿಗೆ ಯಕ್ಷಗಾನ ಹೇಳಿಕೊಡುತ್ತಿದ್ದಾರೆ.

ʼಅಭಿಮನ್ಯು ಕಾಳಗʼ ಪ್ರದರ್ಶನಕ್ಕೆ ನಾಲ್ಕೈದು ತಾಸು ಮುಂಚಿತವಾಗಿಯೇ ರಂಗಭೂಮಿಯ ಸಮೀಪದ ʼಚೌಕಿʼಯಲ್ಲಿ ಮಕ್ಕಳು ವೇಷಭೂಷಣ ತೊಟ್ಟುಕೊಳ್ಳುತ್ತಿದ್ದ ಸಡಗರದ ಚಿತ್ರಗಳು, ಚೌಕಿ ಪೂಜೆಯ ವಿಡಿಯೋ ಸೇರಿದಂತೆ ʼಅಭಿಮನ್ಯು ಕಾಳಗʼದ ಎರಡು ಭಾಗಗಳು ಇಲ್ಲಿವೆ.

ಕೆಳಗಿನ ಚಿತ್ರಗಳನ್ನು ಕ್ಲಿಕ್‌ ಮಾಡುವ ಮೂಲಕ ಯಕ್ಷಗಾನ ಪ್ರಸಂಗವನ್ನು ಪೂರ್ತಿಯಾಗಿ ಇಲ್ಲಿ 👇 ವೀಕ್ಷಿಸಬಹುದು.

ಭಾಗ ೧ ಯು ಟ್ಯೂಬ್‌ ಲಿಂಕ್:‌ https://youtu.be/1LFnZpXOnlQ

ಭಾಗ ೨ ಯು ಟ್ಯೂಬ್‌ ಲಿಂಕ್‌: https://youtu.be/yl-0kIOX3HQ


ಅಥವಾ PARYAYA.COMನ  ಯಕ್ಷಗಾನ ತಾಳಮದ್ದಳೆ ಪುಟ ಕ್ಲಿಕ್‌ ಮಾಡಿರಿ.
ಇನ್ನೊಂದು ವಿಡಿಯೋ ನೋಡಲು ಈ ಲಿಂಕ್‌ ಕ್ಲಿಕ್‌ ಮಾಡಿರಿ.
PARYAYA: ರಾಜ್ಯೋತ್ಸವ ಕಳೆಗಟ್ಟಿಸಿದ ಚಿಣ್ಣರ ʼಅಭಿಮನ್ಯು ಕಾಳಗʼ:   ರಾಜ್ಯೋತ್ಸವ ಕಳೆಗಟ್ಟಿಸಿದ ಚಿಣ್ಣರ ʼ ಅಭಿಮನ್ಯು ಕಾಳಗ ʼ ಬೆಂ ಗಳೂರಿನಲ್ಲಿ ರಾಜ್ಯೋತ್ಸವ ಅಂದರೆ ನೆನಪಾಗುವುದು   ಭಾಷಣ, ನಾಟಕ,ಸಂಗೀತ, ನೃತ್ಯ. ಆದರೆ, ರಾಮಕೃಷ್ಣ ಹೆ...

Saturday, November 1, 2025

PARYAYA: ಹೆಸರಾಂತ ಯಕ್ಷಗಾನ ಅರ್ಥಧಾರಿ ವಿಟ್ಲ ಶಂಭು ಶರ್ಮ ಇನ್ನಿಲ್ಲ

 ಹೆಸರಾಂತ ಯಕ್ಷಗಾನ ಅರ್ಥಧಾರಿ ವಿಟ್ಲ ಶಂಭು ಶರ್ಮ ಇನ್ನಿಲ್ಲ

ಹೆಸರಾಂತ ಯಕ್ಷಗಾನ ಅರ್ಥಧಾರಿ ವಿಟ್ಲ ಶಂಭು ಶರ್ಮ ಅವರು ಇನ್ನಿಲ್ಲ. ೨೦೨೫ರ ನವೆಂಬರ್‌ ೧ರ ಶನಿವಾರ ಅವರು ಸ್ವರ್ಗಸ್ಥರಾದರು.
ಶಂಭು ಶರ್ಮರ ಬಗ್ಗೆ ಯಕ್ಷದೀಪ.ಕಾಮ್‌ ಐದು ವರ್ಷಗಳ ಹಿಂದೆ ಇದೇ ದಿನ ಪ್ರಕಟಿಸಿದ್ದ ಬರಹ ಇಲ್ಲಿದೆ. ಶಂಭುಶರ್ಮದ ಸಂಪೂರ್ಣ ಚಿತ್ರವನ್ನು ಇದು ನೀಡುತ್ತದೆ. ಇದರ ಜೊತೆಗೆ ಶಂಭು ಶರ್ಮರು ಉತ್ತರಕುಮಾರನಾಗಿ ಮಾಡಿದ್ದ ಅರ್ಥಗಾರಿಕೆಯ ತುಣುಕೊಂದು ಇಲ್ಲಿದೆ.
ವಿಟ್ಲ ಶಂಭು ಶರ್ಮ ಎಂಬ ಹೆಸರೇ ಒಂದು ಕಾಲದಲ್ಲಿ ಯಕ್ಷಗಾನ ತಾಳಮದ್ದಳೆ ಕ್ಷೇತ್ರದಲ್ಲಿ ಸಂಚಲನ ಮೂಡಿಸುತ್ತಿದ್ದ ಹೆಸರು. ತಾಳಮದ್ದಳೆ ಪ್ರಿಯ ಪ್ರೇಕ್ಷಕರ ದೈನಂದಿನ ಚರ್ಚೆಗಳಲ್ಲಿ ಆಗಾಗ ಪ್ರಸ್ತಾಪವಾಗುತ್ತಿದ್ದ ವ್ಯಕ್ತಿತ್ವ. ನಾನು ಕಾಲೇಜಿಗೆ ಹೋಗುತ್ತಿದ್ದ ದಿನಗಳಲ್ಲಿಯೂ ಮನೆಯಲ್ಲಿಸಮಾರಂಭಗಳಲ್ಲಿ ಶಂಭು ಶರ್ಮ ಎಂಬ ತಾಳಮದ್ದಳೆಯ ಹೊಸ ಪ್ರತಿಭೆಯ ಬಗ್ಗೆ ಮಾತನಾಡುವುದನ್ನು ಕೇಳಿದ್ದೆ. ‘ಒಳ್ಳೆ ಅರ್ಥ ಹೇಳ್ತಾರಂತೆವಾದದಲ್ಲಿ ಎತ್ತಿದ ಕೈ” ಹೀಗೆ ಮಾತನಾಡುವುದು ಕೇಳಿಬರುತ್ತಿತ್ತು.
ಆಮೇಲೆ ಅವರ ಅರ್ಥಗಾರಿಕೆಯನ್ನು ಹಲವಾರು ಬಾರಿ ಕೇಳುವ ಅವಕಾಶವೂ ಬಂತು.  ವರ್ತಮಾನದ ಆಗುಹೋಗುಗಳ ಹೋಲಿಕೆಹಾಸ್ಯಪ್ರವೃತ್ತಿಶೃಂಗಾರ,  ಹುಡುಗಾಟಿಕೆಯ ಮನೋಭಾವಇವುಗಳನ್ನೆಲ್ಲಾ ತನ್ನ ಅರ್ಥಗಾರಿಕೆಯಲ್ಲಿ ಬಳಸುವ ಶಂಭು ಶರ್ಮರ ಅರ್ಥಗಾರಿಕೆಯ ಶೈಲಿ  ಜನಪ್ರಿಯತೆಯನ್ನು ಸಾಧಿಸಿತು.  ತಾಳಮದ್ದಳೆ ಕ್ಷೇತ್ರದಲ್ಲಿ ಸಂಚಲನ ಮೂಡಿಸಿದ ಹೆಸರು. ಮಲ್ಪೆ ಶಂಕರನಾರಾಯಣ ಸಾಮಗಶೇಣಿ ಗೋಪಾಲಕೃಷ್ಣ ಭಟ್ದೇರಾಜೆ ಸೀತಾರಾಮಯ್ಯ ಮತ್ತು  ಪ್ರಸ್ತುತ ಕೂಟಗಳಲ್ಲಿ ಸಕ್ರಿಯರಾಗಿರುವ ಹಲವಾರು ಈಗಿನ ಕಿರಿಯ ಅರ್ಥಧಾರಿಗಳ ಜೊತೆಗೂ ಈಗಲೂ ಬಹುಬೇಡಿಕೆಯ ಅರ್ಥಧಾರಿ.
ಅವರು ಅತಿ ಕಿರಿಯ ವಯಸ್ಸಿನಲ್ಲಿ ಪ್ರೇಕ್ಷಕನಾಗಿ ಹೋಗಿದ್ದ ತಾಳಮದ್ದಳೆ ಕೂಟವೊಂದರಲ್ಲಿ ಅನಿವಾರ್ಯವಾಗಿ ಅರ್ಥಧಾರಿಯಾಗಿ ಭಾಗವಹಿಸಿದಾಗ ಎದುರು ಪಾತ್ರಧಾರಿಯಿಂದ ಆದ ಮಾತಿನ ದಾಳಿಯಲ್ಲಿ ಸೋತು ಕಣ್ಣೀರಿಳಿಸಿದ ಅವರು ಮುಂದೆ ಹಠದಿಂದ ತಾಳಮದ್ದಳೆ ಅರ್ಥಧಾರಿಯಾಗಿ ಸಾಧನೆಯನ್ನು ಮಾಡಿದರು. 

ವಿಟ್ಲ ಶಂಭುಶರ್ಮ ಹುಟ್ಟಿದ್ದು  13-10-1951ರಲ್ಲಿ ಕುಂಬಳೆ ಸೀಮೆಯ ಎಡನಾಡು ಗ್ರಾಮದ ಶೆಡಂಪಾಡಿ ಎಂಬಲ್ಲಿ.  ತಂದೆಯವರು ದಿಕೃಷ್ಣ ಭಟ್ರುತಾಯಿ ಹೇಮಾವತಿ ಅಮ್ಮ. ತಂದೆಯವರು ಹೆಡ್‍ಮಾಸ್ಟ್ರು. ಓದಿದ್ದು ಬೇರೆ ಬೇರೆ ಕಾಲೇಜುಗಳಲ್ಲಿ. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂ.ಎ  ಓದಿ 35 ವರ್ಷ ಬೇರೆ ಬೇರೆ ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ದುಡಿದು ಎಲ್ಲಿಯೂ ಖಾಯಂ ಆಗದೆ ನಿವೃತ್ತಿ ಹೊಂದಿದರು. 
ಮೊದಲೇ ಹೇಳಿದಂತೆ ಆಕಸ್ಮಿಕ ಸನ್ನಿವೇಶವೊಂದರಲ್ಲಿ ಯಕ್ಷಗಾನ ತಾಳಮದ್ದಳೆ ಕೂಟವೊಂದರಲ್ಲಿ ಅರ್ಥ ಹೇಳಿದ ಶಂಭು ಶರ್ಮ ಮುಂದಕ್ಕೆ ಅದರಲ್ಲಿ ಆಸಕ್ತಿಯನ್ನು ಬೆಳೆಸಿಕೊಂಡರು. ಮೊದಲ ಅನಿರೀಕ್ಷಿತ ಅವಕಾಶದಲ್ಲಿ ಆದ ಮುಖಭಂಗ ಅವರನ್ನು ಮುಂದೆ ಹಠವಾದಿಯನ್ನಾಗಿ ಬೆಳೆಸಿತು. ವಿಟ್ಲಕ್ಕೆ ಬಂದಿದ್ದ ಪ್ರಸಿದ್ಧ ಅರ್ಥಧಾರಿ ದೇರಾಜೆ ಸೀತಾರಾಮಯ್ಯನವರನ್ನು ಭೇಟಿಯಾಗಿ ಅರ್ಥಗಾರಿಕೆ ಕಲಿಸಿಕೊಡುವಂತೆ ಬಿನ್ನವಿಸಿದ್ದರು. ‘‘ಅರ್ಥಗಾರಿಕೆ ಎಂಬುದು ಕಲಿಸಿಕೊಡುವಂಥದ್ದಲ್ಲ. ತಾನಾಗಿ ಕಲಿತು ಸಿದ್ಧಿಸುವಂತದ್ದು’’ ಎಂದು ದೇರಾಜೆಯವರು ಹೇಳಿದರು. ಆದರೂ ಅವರೊಡನೆ ಸಂಭಾಷಣೆಯ ಮತ್ತು ಪಾತ್ರಗಳ ಸೂಕ್ಷ ಮರ್ಮಗಳನ್ನು ಕಲಿತರು.
ಅರ್ಥಧಾರಿಯಾಗಿ ಬೆಳೆಯಲು ಕರ್ಗಲ್ಲು ಸುಬ್ಬಣ್ಣ ಭಟ್ಟರು ಶಂಭು ಶರ್ಮರಿಗೆ ತುಂಬಾ ಪ್ರೋತ್ಸಾಹವನ್ನು ಕೊಟ್ಟರು. ಅದರಂತೆ ವಿಟ್ಲದ ಹಲವಾರು ಕೂಟಗಳಲ್ಲಿ ಹಿರಿಯ ಕಲಾವಿದರಾಗಿ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗಳುಪೆರುವೋಡಿ ನಾರಾಯಣ ಭಟ್ಟರೇ ಮೊದಲಾದವರು ಭಾಗವಹಿಸುತ್ತಿದ್ದುದರಿಂದ ಶಂಭು ಶರ್ಮರಿಗೆ ಅರ್ಥಧಾರಿಯಾಗಿ ಬೆಳೆಯಲು ಅನುಕೂಲವಾಯಿತು. ಆದರೆ ಶಂಭು ಶರ್ಮರಿಗೆ ಉದ್ಯೋಗದ ಕಾರಣದಿಂದ ಅರ್ಥಗಾರಿಕೆಯಲ್ಲಿ ಮತ್ತು ತಾಳಮದ್ದಳೆಯಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳಲು ಆಗುತ್ತಲೇ ಇರಲಿಲ್ಲ. ಅವರು ಉಪನ್ಯಾಸಕ ವೃತ್ತಿಯನ್ನು ಕೈಗೊಂಡಿದ್ದ ಕೆಲವು ಕಾಲೇಜಿನ ಪರಿಸರಗಳಲ್ಲಿ ಯಕ್ಷಗಾನತಾಳಮದ್ದಳೆಗಳು ನಡೆಯುತ್ತಿರಲಿಲ್ಲ. ಹೀಗೆ ಆಗಾಗ ತನ್ನ ವೃತ್ತಿ ಬದುಕಿನ ನಡುವೆ ಯಕ್ಷಗಾನ ಕ್ಷೇತ್ರದಿಂದ ದೂರ ಉಳಿಯಬೇಕಾಗಿ ಬರುತ್ತಿತ್ತು. 
ತುರ್ತುಪರಿಸ್ಥಿತಿಯ ವಿರುದ್ಧದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಯಕ್ಷಗಾನದಿಂದ ದೂರವಾಗಿದ್ದರು.  ತುರ್ತುಪರಿಸ್ಥಿತಿಯ ನಂತರ ಗಣಪತಿ ಜೂನಿಯರ್ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆಗೆ ಸೇರಿದ ನಂತರ ಆ ಸಂದರ್ಭದಲ್ಲಿ ಪುನಃ ಯಕ್ಷಗಾನದಲ್ಲಿ ಬೆಳೆಯುವುದಕ್ಕೆ ಅವಕಾಶ ಆಯಿತು. ಬೆಸೆಂಟ್ ಸಂಜೆ ಕಾಲೇಜುಬೆಸೆಂಟ್ ಡೇ ಕಾಲೇಜು- ಹೀಗೆ ಹಲವು ಕಾಲೇಜುಗಳಲ್ಲಿ ದುಡಿಯುತ್ತಾ  ರಾತ್ರಿ ಶ್ರೀಧರ ರಾಯರ ನೇತೃತ್ವದ ಯಕ್ಷಗಾನ ಬಯಲಾಟಗಳಲ್ಲಿ ಭಾಗವಹಿಸುತ್ತಿದ್ದರು. ತಾಳಮದ್ದಳೆಗಳಲ್ಲಿ ಭಾಗವಹಿಸುತ್ತಿದ್ದರು. 
ಯೌವನದ ಪ್ರಾರಂಭದಲ್ಲಿ ಹೀಗೆ ಅವಿಶ್ರಾಂತಿಯಿಂದ ದುಡಿಯುತ್ತಿದ್ದರೂ ಮತ್ತೆ ಪುನಃ ಮೂರ್ನಾಡಿಗೆ ಉದ್ಯೋಗಕ್ಕಾಗಿ ತೆರಳಿದಾಗ ಯಕ್ಷಗಾನದ ಸಂಪರ್ಕ ಮುರಿಯಿತು. ಎರಡು ವರ್ಷದ ನಂತರ ಮೂರ್ನಾಡಿಂದ ಮಂಗಳೂರಿನ ಫಿಶರೀಸ್ ಕಾಲೇಜಿಗೆ ಬಂದಾಗ ಮತ್ತೆ ಯಕ್ಷಗಾನದ ಅವಕಾಶಗಳು ಕೈತುಂಬಾ ಬಂದು ಜನಪ್ರಿಯನಾಗಲು ಸಹಾಯಕವಾಯಿತು. ಆದರೆ ಯಾಕೋ ಮತ್ತೆ ತಡೆ ಬಂತು. ಮುಂದಿನ ಎಂಟು ವರ್ಷಗಳ ಕಾಲ ಸೋಮವಾರಪೇಟೆಯ ಕಾಲೇಜಿನಲ್ಲಿ ಕೆಲಸ ಮಾಡಬೇಕಾಗಿ ಬಂತು. ಹೀಗೆ ಯಕ್ಷಗಾನದ ಸಂಪರ್ಕ ಆಗಾಗ ಕಡಿಯುತ್ತಾ ಇದ್ದುದು ಶಂಭು ಶರ್ಮರ ಕಲಾ ಬದುಕಿನ ದುರಂತವೆಂದೇ ಹೇಳಬೇಕು. ಸೋಮವಾರಪೇಟೆಯಿಂದ ಬಂದ ನಂತರ ವಿಜಯಾ ಕಾಲೇಜುಮುಲ್ಕಿಸುಂಕದಕಟ್ಟೆ ಕಾಲೇಜು ಇಲ್ಲಿ ಕೆಲಸ ಮಾಡುತ್ತಿದ್ದಾಗ ಪ್ರಥಮ ಹಂತದ ಅರ್ಥಧಾರಿಗಳ ಸಾಲಿಗೆ ಸೇರಿದ್ದರು. 
ವಿಟ್ಲ ಶಂಭು ಶರ್ಮ ಕೇವಲ ತಾಳಮದ್ದಳೆ ಕ್ಷೇತ್ರದಲ್ಲಿ ಅರ್ಥಧಾರಿ ಎಂದು ಹಚ್ಚಿನವರು ಭಾವಿಸಿರಬಹುದು. ಆದರೆ ಅವರು ಯಕ್ಷಗಾನ ವೇಷಧಾರಿಯಾಗಿಯೂ ಕೆಲವು ವರ್ಷಗಳ ತಿರುಗಾಟ ಮಾಡಿದ್ದಾರೆ ಎಂದರೆ ಕೆಲವರಿಗೆ ಆಶ್ಚರ್ಯವಾಗಬಹುದು. ಶ್ರೀಧರ ರಾಯರ ತಂಡದಲ್ಲಿ ಹಾಗೂ ಕರ್ನೂರು ಕೊರಗಪ್ಪ ರೈಗಳ ತಂಡದಲ್ಲಿ ಖಾಯಂ ವೇಷಧಾರಿಯಾಗಿದ್ದರು.  ಮಾತ್ರವಲ್ಲ ಫೆಬ್ರವರಿ 28ಕ್ಕೆ ಕಾಲೇಜಿನ ಪಾಠವನ್ನು ಮುಗಿಸಿದ ಮೇಲೆಬೇರೆ ಬೇರೆ ಮೇಳಗಳಲ್ಲಿ ಅಂದರೆಸುಬ್ರಹ್ಮಣ್ಯಕದ್ರಿಮೇಳ ಮೊದಲಾದುವುಗಳಲ್ಲಿ ಅತಿಥಿ ಕಲಾವಿದನಾಗಿ ಭಾಗವಹಿಸುತ್ತಿದ್ದರು.  ಒಂದು ವರ್ಷ ಉದ್ಯೋಗಕ್ಕೆ ರಜೆ ಹಾಕಿ ಪೂರ್ಣಾವಧಿ ಕಲಾವಿದನಾಗಿ ನಾರಾಯಣ ಕಮ್ತಿಯವರ ಬಪ್ಪನಾಡು ಮೇಳದಲ್ಲಿ ತಿರುಗಾಟ ಮಾಡಿದ್ದರು.
ಆಮೇಲೆ ಅನಿರೀಕ್ಷಿತ ಅಪಘಾತವಾಗಿದ್ದರಿಂದ ಚಿಟ್ಟೆಪಟ್ಟಿ ಕಟ್ಟಲಿಕ್ಕೂ ಕಷ್ಟವಾಗಿ ಯಕ್ಷಗಾನ ತಿರುಗಾಟವನ್ನು ನಿಲ್ಲಿಸಿದ್ದರು. ಆದರೆ ಕೆಲವೊಮ್ಮೆ ಅತಿಥಿ ಕಲಾವಿದನಾಗಿ ಅಪರೂಪಕ್ಕೆ ಒಂದೊಂದು ವೇಷವನ್ನು ಆಗಾಗ ಮಾಡುತ್ತಿದ್ದರು. ಶಂಭು ಶರ್ಮ ತನ್ನ 14ನೆಯ ವಯಸ್ಸಿನಲ್ಲಿ ಸೂರಂಬೈಲಿನಲ್ಲಿ ನಡೆದ ‘ಭೀಷ್ಮಪರ್ವ’ ತಾಳಮದ್ದಳೆ ಕೂಟದಲ್ಲಿ ದೊಡ್ಡ ಸಾಮಗರ (ಮಲ್ಪೆ ಶಂಕರನಾರಾಯಣ ಸಾಮಗ) ಭೀಷ್ಮನ ಪಾತ್ರಕ್ಕೆದುರಾಗಿ ಅಭಿಮನ್ಯುವಾಗಿ ಅರ್ಥ ಹೇಳಿದ್ದರು. ದೊಡ್ಡ ಸಾಮಗರು ಇವರ ಅರ್ಥವನ್ನು ಮೆಚ್ಚಿಕೊಂಡು ಪ್ರಶಂಸಿಸಿದ್ದರು. 
ಯಕ್ಷಗಾನಕ್ಕೆ ಶೈಕ್ಷಣಿಕ ಶಿಸ್ತಿನ ಗ್ರಂಥವನ್ನು ಅವಶ್ಯಕತೆಯ ಬಗ್ಗೆ ಶಂಭು ಶರ್ಮರಲ್ಲಿ ಕೇಳಿದಾಗ “ಅದು ಸಾಧ್ಯ ಇಲ್ಲ ಎಂದೇ ನನ್ನ ಅಭಿಪ್ರಾಯ. ಯಕ್ಷಗಾನ ಎಂದರೆ ಚೌಕಟ್ಟಿನೊಳಗಿರುವ ಸ್ವಾತಂತ್ರ್ಯ. ಇದಕ್ಕೆ ಚೌಕಟ್ಟೂ ಇದೆಸ್ವಾತಂತ್ರ್ಯವೂ ಇದೆ ಎಂದಾಗ ಒಂದು clean syllabus ಸಾಧ್ಯವಿಲ್ಲ. ಒಂದು ರೂಪುರೇಷೆಗಳ outline ಮಾಡಬಹುದೇ ಹೊರತು ಕಡ್ಡಾಯ ಕಾನೂನಿನಲ್ಲಿ ಯಕ್ಷಗಾನವನ್ನು ಒಳಪಡಿಸಲು ಸಾಧ್ಯವೇ ಇಲ್ಲ. ಸ್ವಾತಂತ್ರ್ಯ ಸ್ವಲ್ಪ ಇದ್ದರೂ ಅದು ದುರುಪಯೋಗ ಆಗಬಾರದು ಎಂದು ನಿರ್ದೇಶನಗಳನ್ನು ಕೊಡಬಹುದೇ ಹೊರತು ಕಟ್ಟುನಿಟ್ಟು ಎಂಬುದು ಯಕ್ಷಗಾನದಲ್ಲಿ ಕಷ್ಟ” ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.
ಶಂಭು ಶರ್ಮರಿಗೆ ಸಂಕಷ್ಟದ ಕಾಲವೊಂದಿತ್ತು. ಅಪಘಾತವೊಂದರಲ್ಲಿ ದೈಹಿಕವಾಗಿ ಜರ್ಝರಿತರಾಗಿದ್ದ ಸಮಯದಲ್ಲಿ ಫ್ರಾಕ್ಚರ್ ಆಗಿ ಕೈಯೊಂದನ್ನು ರಾಡ್ ಹಾಕಿ ಕೊರಳಿಗೆ ನೇತಾಡಿಸಿದ್ದರು. ಈ ಸ್ಥಿತಿಯಲ್ಲೇ ಶಂಭು ಶರ್ಮರು ಸುಮಾರು 50 ತಾಳಮದ್ದಳೆಗಳಲ್ಲಿ ಭಾಗವಹಿಸಿದ್ದರು. ಎಲ್ಲರಿಂದಲೂ ಇದು ಸಾಧ್ಯವಾಗುವ ಕಾರ್ಯವಲ್ಲ. ಶಂಭು ಶರ್ಮ ಇವರು ಯಕ್ಷರಂಗ ಪ್ರಶಸ್ತಿಪೆರ್ಲ ಕೃಷ್ಣ ಭಟ್ಟ ಪ್ರಶಸ್ತಿಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನಸಂಪಾಜೆಯ ಪುರಸ್ಕಾರವಿಟ್ಲ ಜೋಷಿ ಪ್ರಶಸ್ತಿಮುಂಬಯಿ ಅಜೆಕಾರು ಪ್ರಶಸ್ತಿಯೇ ಮೊದಲಾದ ಹಲವಾರು ಪ್ರಶಸ್ತಿಸನ್ಮಾನಗಳನ್ನು ಪಡೆದಿದ್ದಾರೆ. ಈಗ ಪತ್ನಿ ಲಕ್ಷ್ಮೀಶರ್ಮಮಗ ಕೃಷ್ಣರಾಜಸೊಸೆ ವಿದ್ಯಾಮೊಮ್ಮಗ ನಿಶ್ಚಯರೊಂದಿಗೆ ಸಂತೃಪ್ತ ಜೀವನವನ್ನು ನಡೆಸಿದ್ದರು.

ಲೇಖನ: ಮನಮೋಹನ್ ವಿ.ಎಸ್. 

ಕೃಪೆ: ಯಕ್ಷದೀಪ.ಕಾಮ್‌ (https://yakshadeepa.com/)

PARYAYA: ಹೆಸರಾಂತ ಯಕ್ಷಗಾನ ಅರ್ಥಧಾರಿ ವಿಟ್ಲ ಶಂಭು ಶರ್ಮ ಇನ್ನಿಲ್ಲ:   ಹೆಸರಾಂತ ಯಕ್ಷಗಾನ ಅರ್ಥಧಾರಿ ವಿಟ್ಲ ಶಂಭು ಶರ್ಮ ಇನ್ನಿಲ್ಲ ಹೆ ಸರಾಂತ ಯಕ್ಷಗಾನ ಅರ್ಥಧಾರಿ ವಿಟ್ಲ ಶಂಭು ಶರ್ಮ ಅವರು ಇನ್ನಿಲ್ಲ. ೨೦೨೫ರ ನವೆಂಬರ್‌ ೧ರ ಶನಿವಾರ ಅವರು ಸ...

Thursday, June 5, 2025

PARYAYA: ಶ್ರೀರಾಮ ದರ್ಶನ- ತಾಳಮದ್ದಳೆ ಭಾಗ-6

 ಶ್ರೀರಾಮ ದರ್ಶನ- ತಾಳಮದ್ದಳೆ ಭಾಗ-6

ಪಾರ್ಥನು ಮತ್ತೊಮ್ಮೆ ನಿರ್ಮಿಸಿದ ಬಾಣಗಳ ಸೇತುವೆಯನ್ನು ಮುರಿದೇ ಬಿಡುತ್ತೇನೆ ಎಂಬ ಅತ್ಯುತ್ಸಾಹದೊಂದಿಗೆ ನೆಗೆದ ಹನುಮಂತ ತನ್ನ ಯತ್ನದಲ್ಲಿ ಸೋತು ಬಿಡುತ್ತಾನೆ. ಪರಮ ರಾಮಭಕ್ತನಿಗೆ ಎಂತಹ ಸೋಲಾಯಿತು ಎಂದು ಮರುಗುತ್ತಾನೆ. ತನ್ನ ರಾಮಭಕ್ತಿಗೆ ಚ್ಯುತಿ ಬಂತಲ್ಲ ಎಂದು ಪರಿ ಪರಿಯಾಗಿ ಪ್ರಲಾಪಿಸುತ್ತಾನೆ. ಇದನ್ನೆಲ್ಲ ನೋಡುತ್ತಲೇ ಇದ್ದ ವೃದ್ಧ ತನ್ನಷ್ಟಕ್ಕೇ ಒಂದು ತೀರ್ಮಾನಕ್ಕೆ ಬರುತ್ತಾನೆ. ಆಗ, ಹನುಮ, ಪಾರ್ಥನ ಎದುರು ಅದ್ಭುತ ಘಟನೆಯೊಂದು ನಡೆಯುತ್ತದೆ. ಏನದು ಆ ಅದ್ಭುತ ಘಟನೆ?

ಕೆಳಗಿನ ಚಿತ್ರ ಕ್ಲಿಕ್‌ ಮಾಡಿ ವಿಡಿಯೋ ನೋಡಿ ಅಥವಾ  ʼಯಕ್ಷಗಾನ/ ತಾಳಮದ್ದಳೆ ʼ ಪುಟ ಕ್ಲಿಕ್‌ ಮಾಡಿ ಪೂರ್ತಿ ಕಥೆ ನೋಡಿ.

 ಕೆಳಗಿನವುಗಳನ್ನೂ ಓದಿರಿ:

ಕೊರೋನಾದಿಂದ ರಕ್ಷಣೆ ಹೇಗಣ್ಣಇಲ್ಲಿದೆ ಜಾಗೃತಿ ಯಕ್ಷಗಾನ

'ಅಕ್ಕಅಂಗಳದಲ್ಲಿ 'ಯಕ್ಷವೈಭವ...! Yaksha Vaibhava in Akka Conference...!

ಬಲಿಪರು ಇನ್ನು ದಂತಕಥೆ ಮಾತ್ರ.

ವಿನೂತನ ಯಕ್ಷಗಾನ ಪ್ರದರ್ಶನ ʼಹರಿದರುಶನ-ಏಕವ್ಯಕ್ತಿ ನವರೂಪಂ

ಕ್ಷಮಿಸಿ ಪಂಜಾಜೆ ನಿಮ್ಮ ಮನೆಗೆ ಬರಲಾಗಲಿಲ್ಲ..

ಶ್ರೀರಾಮ ದರ್ಶನತಾಳಮದ್ದಳೆ ಭಾಗ-

ಶ್ರೀರಾಮ ದರ್ಶನತಾಳಮದ್ದಳೆ ಭಾಗ-

ಶ್ರೀರಾಮ ದರ್ಶನತಾಳಮದ್ದಳೆ ಭಾಗ-

ಶ್ರೀರಾಮ ದರ್ಶನತಾಳಮದ್ದಳೆ ಭಾಗ-4

ಶ್ರೀರಾಮ ದರ್ಶನ- ತಾಳಮದ್ದಳೆ ಭಾಗ-5

PARYAYA: ಶ್ರೀರಾಮ ದರ್ಶನ- ತಾಳಮದ್ದಳೆ ಭಾಗ-6:   ಶ್ರೀರಾಮ ದರ್ಶನ- ತಾಳಮದ್ದಳೆ ಭಾಗ-6 ಪಾ ರ್ಥನು ಮತ್ತೊಮ್ಮೆ ನಿರ್ಮಿಸಿದ ಬಾಣಗಳ ಸೇತುವೆಯನ್ನು ಮುರಿದೇ ಬಿಡುತ್ತೇನೆ ಎಂಬ ಅತ್ಯುತ್ಸಾಹದೊಂದಿಗೆ ನೆಗೆದ ಹನುಮಂತ ತನ್ನ ಯತ...

Tuesday, April 8, 2025

PARYAYA: ಶ್ರೀರಾಮ ದರ್ಶನ- ತಾಳಮದ್ದಳೆ ಭಾಗ-5

 ಶ್ರೀರಾಮ ದರ್ಶನ- ತಾಳಮದ್ದಳೆ ಭಾಗ-5

ಪಾರ್ಥನು ಸೇತುವೆಯನ್ನು ಮತ್ತೊಮ್ಮೆ ನಿರ್ಮಿಸಿದ್ದೇ ಆದರೆ, ಅದನ್ನು ಮತ್ತೆ ಮುರಿಯುವುದಕ್ಕೆ ತಾನೂ ಸಿದ್ಧ ಎಂಬುದಾಗಿ ಹನುಮಂತ ವೃದ್ಧನಿಗೆ ಹೇಳುತ್ತಾನೆ. ಅರ್ಜುನ ಮತ್ತೊಮ್ಮೆ ಬಾಣ ಪ್ರಯೋಗಿಸಿ ಸೇತುವೆ ನಿರ್ಮಿಸುತ್ತಾನೆ. ಆಗ ವೃದ್ಧ ಈ ಸೇತುವೆ ಎಷ್ಟು ಗಟ್ಟಿ ಇದೆ ಎಂದು ಒಮ್ಮೆ ಪರೀಕ್ಷಿಸಿ ಬರುತ್ತೇನೆ ಹೇಳಿ ತೆರಳುತ್ತಾನೆ.

ಸ್ವಲ್ಪ ಹೊತ್ತು ವೃದ್ಧನ ಬರುವಿಕೆಗಾಗಿ ಕಾದ ಹನುಮಂತ ಮುಂದೇನು ಮಾಡುತ್ತಾನೆ?

ವಿಡಿಯೋ ಪೂರ್ತಿ ನೋಡಿ:

ಕೆಳಗಿನ ಚಿತ್ರ ಕ್ಲಿಕ್‌ ಮಾಡಿ ವಿಡಿಯೋ ನೋಡಿ ಅಥವಾ  ʼಯಕ್ಷಗಾನ/ ತಾಳಮದ್ದಳೆ ʼ ಪುಟ ಕ್ಲಿಕ್‌ ಮಾಡಿ ಪೂರ್ತಿ ಕಥೆ ನೋಡಿ.

 ಕೆಳಗಿನವುಗಳನ್ನೂ ಓದಿರಿ:

ಕೊರೋನಾದಿಂದ ರಕ್ಷಣೆ ಹೇಗಣ್ಣಇಲ್ಲಿದೆ ಜಾಗೃತಿ ಯಕ್ಷಗಾನ

'ಅಕ್ಕಅಂಗಳದಲ್ಲಿ 'ಯಕ್ಷವೈಭವ...! Yaksha Vaibhava in Akka Conference...!

ಬಲಿಪರು ಇನ್ನು ದಂತಕಥೆ ಮಾತ್ರ.

ವಿನೂತನ ಯಕ್ಷಗಾನ ಪ್ರದರ್ಶನ ʼಹರಿದರುಶನ-ಏಕವ್ಯಕ್ತಿ ನವರೂಪಂ

ಕ್ಷಮಿಸಿ ಪಂಜಾಜೆ ನಿಮ್ಮ ಮನೆಗೆ ಬರಲಾಗಲಿಲ್ಲ..

ಶ್ರೀರಾಮ ದರ್ಶನತಾಳಮದ್ದಳೆ ಭಾಗ-

ಶ್ರೀರಾಮ ದರ್ಶನತಾಳಮದ್ದಳೆ ಭಾಗ-

ಶ್ರೀರಾಮ ದರ್ಶನತಾಳಮದ್ದಳೆ ಭಾಗ-

ಶ್ರೀರಾಮ ದರ್ಶನತಾಳಮದ್ದಳೆ ಭಾಗ-4

PARYAYA: ಶ್ರೀರಾಮ ದರ್ಶನ- ತಾಳಮದ್ದಳೆ ಭಾಗ-5:   ಶ್ರೀರಾಮ ದರ್ಶನ- ತಾಳಮದ್ದಳೆ ಭಾಗ-5 ಪಾ ರ್ಥನು ಸೇತುವೆಯನ್ನು ಮತ್ತೊಮ್ಮೆ ನಿರ್ಮಿಸಿದ್ದೇ ಆದರೆ, ಅದನ್ನು ಮತ್ತೆ ಮುರಿಯುವುದಕ್ಕೆ ತಾನೂ ಸಿದ್ಧ ಎಂಬುದಾಗಿ ಹನುಮಂತ ವೃದ...

Tuesday, April 1, 2025

PARYAYA: ಶ್ರೀರಾಮ ದರ್ಶನ- ತಾಳಮದ್ದಳೆ ಭಾಗ-4

 ಶ್ರೀರಾಮ ದರ್ಶನ- ತಾಳಮದ್ದಳೆ ಭಾಗ-4

ಮ್ಮಿಬ್ಬರ ನಡುವಣ ಪಂಥಾಹ್ವಾನದಲ್ಲಿ ತಾನು ಸೋತು ಈಗ ಈ ಅಗ್ನಿಕುಂಡಕ್ಕೆ ಹಾರುವ ಸ್ಥಿತಿ ಬಂದೊದಗಿದೆ ಎಂಬುದಾಗಿ ಪಾರ್ಥ ಹೇಳುತ್ತಿದ್ದಂತೆಯೇ ʼಇದೊಳ್ಳೆ ಕಥೆಯಾಯಿತಲ್ಲ. ನೀನು ಬಾಣದ ಸೇತುವೆ ನಿರ್ಮಿಸುವುದಂತೆ ಅದನ್ನು ಆ ಕೋತಿ ಮುರಿಯುವುದಂತೆ. ಇದರ ಚಂದವನ್ನು ನೋಡಬೇಕಪ್ಪ. ಯಾರಿದ್ದಾರಯ್ಯ ಇದನ್ನು ನೋಡಿದವರು? ಎಂಬ ಮರುಪ್ರಶ್ನೆ ಎಸೆಯುತ್ತಾನೆ ವೃದ್ಧ. ಮುಂದೇನಾಯಿತು?

ವಿಡಿಯೋ ಪೂರ್ತಿ ನೋಡಿ:

ಕೆಳಗಿನ ಚಿತ್ರ ಕ್ಲಿಕ್‌ ಮಾಡಿ ವಿಡಿಯೋ ನೋಡಿ ಅಥವಾ  ʼಯಕ್ಷಗಾನ/ ತಾಳಮದ್ದಳೆ ʼ ಪುಟ ಕ್ಲಿಕ್‌ ಮಾಡಿ ಪೂರ್ತಿ ಕಥೆ ನೋಡಿ.

 ಕೆಳಗಿನವುಗಳನ್ನೂ ಓದಿರಿ:

ಕೊರೋನಾದಿಂದ ರಕ್ಷಣೆ ಹೇಗಣ್ಣಇಲ್ಲಿದೆ ಜಾಗೃತಿ ಯಕ್ಷಗಾನ

'ಅಕ್ಕಅಂಗಳದಲ್ಲಿ 'ಯಕ್ಷವೈಭವ...! Yaksha Vaibhava in Akka Conference...!

ಬಲಿಪರು ಇನ್ನು ದಂತಕಥೆ ಮಾತ್ರ.

ವಿನೂತನ ಯಕ್ಷಗಾನ ಪ್ರದರ್ಶನ ʼಹರಿದರುಶನ-ಏಕವ್ಯಕ್ತಿ ನವರೂಪಂ

ಕ್ಷಮಿಸಿ ಪಂಜಾಜೆ ನಿಮ್ಮ ಮನೆಗೆ ಬರಲಾಗಲಿಲ್ಲ..

ಶ್ರೀರಾಮ ದರ್ಶನತಾಳಮದ್ದಳೆ ಭಾಗ-

ಶ್ರೀರಾಮ ದರ್ಶನತಾಳಮದ್ದಳೆ ಭಾಗ-

ಶ್ರೀರಾಮ ದರ್ಶನತಾಳಮದ್ದಳೆ ಭಾಗ-

PARYAYA: ಶ್ರೀರಾಮ ದರ್ಶನ- ತಾಳಮದ್ದಳೆ ಭಾಗ-4:   ಶ್ರೀರಾಮ ದರ್ಶನ- ತಾಳಮದ್ದಳೆ ಭಾಗ-4 ತ ಮ್ಮಿಬ್ಬರ ನಡುವಣ ಪಂಥಾಹ್ವಾನದಲ್ಲಿ ತಾನು ಸೋತು ಈಗ ಈ ಅಗ್ನಿಕುಂಡಕ್ಕೆ ಹಾರುವ ಸ್ಥಿತಿ ಬಂದೊದಗಿದೆ ಎಂಬುದಾಗಿ ಪಾರ್ಥ ಹೇಳುತ್ತಿ...