Saturday, November 2, 2019

ಇಂದಿನ ಇತಿಹಾಸ History Today ನವೆಂಬರ್ 02

2019: ನವದೆಹಲಿ: ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಗೆ ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ 2019 ನವೆಂಬರ್ 02ರ ಶನಿವಾರ ರಾತ್ರಿ ಸ್ಪಷ್ಟಪಡಿಸಿದರು.  ಬಿಜೆಪಿ ಜತೆ ಸರ್ಕಾರ ರಚನೆಗೆ ಮುಂದಾಗದ ಶಿವಸೇನೆಗೆ ಎನ್ಸಿಪಿ-ಕಾಂಗ್ರೆಸ್ ಮೈತ್ರಿಕೂಟ್ರ ಬೆಂಬಲ ನೀಡಲಿದೆ ಎನ್ನಲಾಗಿತ್ತು.  ಶಿವಸೇನೆ ಜೊತೆಗೆ ಸೇರಿ ಮೈತ್ರಿ ಸರ್ಕಾರ ರಚಿಸಬಹುದು ಎಂದು ಮಹಾರಾಷ್ಟ್ರದ ಕೆಲವು ಕಾಂಗ್ರೆಸ್ ನಾಯಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಶಿವಸೇನೆ ಜತೆಗಿನ ಮೈತ್ರಿ ಬಗ್ಗೆ ಸೋನಿಯಾ ಗಾಂಧಿ ಸ್ಥಳೀಯ ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆ ನಡೆಸಿದ್ದು ವೇಳೆಯಲ್ಲಿ ಕಾಂಗ್ರೆಸ್ ವಿರೋಧಿ ನಿಲುವು ಹೊಂದಿರುವ ಹಾಗೂ ಬಿಜೆಪಿಯೊಂದಿಗೆ ಚುನಾವಣಾಪೂರ್ಣ ಮೈತ್ರಿ ಮಾಡಿಕೊಂಡಿದ್ದ ಶಿವಸೇನೆಗೆ ಬೆಂಬಲ ನೀಡಲು ಸಾಧ್ಯವಿಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ ಎಂದು ವರದಿಗಳು ತಿಳಿಸಿದವು. ಮಹಾರಾಷ್ಟ್ರದ ಕಾಂಗ್ರೆಸ್ ಅಧ್ಯಕ್ಷ ಬಾಳಾಸಾಹೇಬ್ ಥೋರಟ್ ನೇತೃತ್ವದ ತಂಡ ಸೋನಿಯಾ ಗಾಂಧಿಯವರ ಮುಂದೆ ಶಿವಸೇನೆ ಜತೆಗಿನ ಮೈತ್ರಿ ಕುರಿತು ಪ್ರಸ್ತಾಪ ಮಾಡಿತ್ತು. ಬಾಳಾಸಾಹೇಬ್ ಥೋರಟ್ ಜತೆಗೆ ಮಾಜಿ ಮುಖ್ಯಮಂತ್ರಿ ಅಶೋಕ್ ಚೌಹಾಣ್, ವಿಜಯ್ ವಡೇಟ್ಟಿವಾರ್ ಮತ್ತು ಮಣಿಕ್ರಾವ್ ಠಾಕ್ರೆ ಕಾಂಗ್ರೆಸ್ ಹೈಕಮಾಂಡ್ ಜತೆ ಮಾತುಕತೆ ನಡೆಸಿದ್ದರು. (ವಿವರಗಳಿಗೆ ಇಲ್ಲಿ ಕ್ಲಿಕ್ ಮಾಡಿರಿ)

2019: ಮುಂಬೈ: ಮುಖ್ಯಮಂತ್ರಿ ಹುದ್ದೆ ಹಾಗೂ ಅಧಿಕಾರದ ಸಮಾನ ಹಂಚಿಕೆಯ ಪಟ್ಟು ಹಿಡಿದಿರುವ ಶಿವಸೇನೆ ತನ್ನ ಪಟ್ಟನ್ನು ಸ್ವಲ್ಪ ಸಡಿಸಿಲಿದ್ದರೂ ಸರ್ಕಾರ ರಚನೆಯ ತಿಕ್ಕಾಟವನ್ನು ಮುಂದುವರೆಸಿವೆ ಎಂಬ ವರದಿಗಳ ಮಧ್ಯೆಯೇ ನ್ಯಾಷನಲಿಸ್ಟ್  ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರು 2019 ನವೆಂಬರ್ 02ರ ಶನಿವಾರ ಮಳೆಹಾನಿ ಪ್ರದೇಶಗಳ ತಮ್ಮ ಭೇಟಿಯನ್ನು ದಿಢೀರನೆ ರದ್ದುಪಡಿಸಿ ಮುಂಬೈಗೆ ವಾಪಸಾಗಿ, ಪಕ್ಷ ಪ್ರಮುಖರ ಸಭೆ ಕರೆದರು. ಶರದ್ ಪವಾರ್ ಅವರು ತಮ್ಮ ದೆಹಲಿ ಭೇಟಿಯನ್ನೂ ಹಿಂದೂಡಿದ್ದಾರೆ ಎಂದು ನಂಬಲಾಗಿದ್ದು, ದೆಹಲಿಯಲ್ಲಿ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾಗಾಂಧಿ ಅವರನ್ನು ಭೇಟಿಯಾಗಲು ತೆರಳುವ ಮುನ್ನವೇ ಮುಂಬೈಯಲ್ಲಿ ಪಕ್ಷದ ಹಿರಿಯ ನಾಯಕರ ಸಭೆ ಕರೆದರು. ಶರದ್ ಪವಾರ್ ಅವರು ಶಿವಸೇನೆ ನೇತೃತ್ವದ ಸರ್ಕಾರಕ್ಕೆ ಬೆಂಬಲ ನೀಡುವ ಸಾಧ್ಯತೆ ಬಗ್ಗೆ  ಕಾಂಗ್ರೆಸ್ ಮುಖ್ಯಸ್ಥೆ ಜೊತೆಗೆ ಚರ್ಚಿಸಲು ನವೆಂಬರ್ ೪ರ ಸೋಮವಾರ ದೆಹಲಿಗೆ ತೆರಳಬೇಕಾಗಿತ್ತು. ಈಗಿನ ವರದಿಗಳ ಪ್ರಕಾರ ಪವಾರ್ ಅವರು ಭಾನುವಾರವೇ ದೆಹಲಿಗೆ ತೆರಳಬಹುದು ಎಂದು ಹೇಳಲಾಯಿತು.ಬೆಳವಣಿಗೆಗಳ ಬಗ್ಗೆ ಅರಿವು ಇರುವ ವ್ಯಕ್ತಿಗಳ ಪ್ರಕಾರ ಶಿವಸೇನೆಯ ಜೊತೆಗೆ ಸರ್ಕಾರ ರಚಿಸಿ ಕಾಂಗ್ರೆಸ್ ಪಕ್ಷದಿಂದ ಪರೋಕ್ಷ ಬೆಂಬಲ ಪಡೆಯುವ ಸಾಧ್ಯತೆಗಳನ್ನು ಎನ್ಸಿಪಿಯು ಶೋಧಿಸುತ್ತಿದೆ ಎನ್ನಲಾಯಿತು. ಸೇನೆಯಪ್ಲಾನ್ ಬಿ’ ಎಂಬುದಾಗಿ ಬಣ್ಣಿಸಲಾಗಿರುವ ವ್ಯವಸ್ಥೆಯ ಪ್ರಕಾರ ಸಣ್ಣ ಪಕ್ಷಗಳು ಮತ್ತು ಪಕ್ಷೇತರರ ಬೆಂಬಲದ ಜೊತೆಗೆ ಸರ್ಕಾರ ರಚನೆಯ ಹಂಚಿಕೆ ರೂಪುಗೊಳ್ಳುತ್ತಿದೆ  ಎಂದು ಹೇಳಲಾಯಿತು. ಪಕ್ಷದ ಕೆಲವು ವಲಯಗಳಲ್ಲಿ ಶಿವಸೇನೆ ಜೊತೆಗೆ ಸರ್ಕಾರ ರಚನೆಗೆ ವಿರೋಧ ಇರುವ ಹಿನ್ನೆಲೆಯಲ್ಲಿ ಸರ್ಕಾರದಲ್ಲಿ ಪಾಲ್ಗೊಳ್ಳಲು ಕಾಂಗ್ರೆಸ್ ಬಯಸುತ್ತಿಲ್ಲ ಎಂದು ಹೇಳಲಾಯಿತು. (ವಿವರಗಳಿಗೆ ಇಲ್ಲಿ ಕ್ಲಿಕ್ ಮಾಡಿರಿ)

2019: ನವದೆಹಲಿ: ಜಮ್ಮು –ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳಾಗಿ 2019 ಅಕ್ಟೋಬರ್ 31ರ ಗುರುವಾರ  ಅಸ್ತಿತ್ವಕ್ಕೆ ಬಂದಿವೆ. ಇದರೊಂದಿಗೆ ಭಾರತದ ನಕ್ಷೆಯೂ (ಮ್ಯಾಪ್) ಹೊಸದಾಗಿದೆಹೊಸ ನಕ್ಷೆಯನ್ನು ಕೇಂದ್ರ ಸರ್ಕಾರ 2019 ನವೆಂಬರ್ 02ರ ಶನಿವಾರ ಬಿಡುಗಡೆ ಮಾಡಿತು. ಉಭಯ ರಾಜ್ಯಗಳು ಕೇಂದ್ರಾಡಳಿತ ಪ್ರದೇಶಗಳಾಗುವುದಕ್ಕೂ ಮುನ್ನ ದೇಶದ ಒಟ್ಟು ರಾಜ್ಯಗಳ ಸಂಖ್ಯೆ 29 ಆಗಿತ್ತು. ಇದರಲ್ಲಿ ಜಮ್ಮುಕಾಶ್ಮೀರ ಮತ್ತು ಲಡಾಖ್ಸಹ ಸೇರಿತ್ತು. ಒಟ್ಟು ಕೇಂದ್ರಾಡಳಿತ ಪ್ರದೇಶಗಳ ಸಂಖ್ಯೆ 7 ಆಗಿತ್ತು. ಇದೀಗ ರಾಜ್ಯಗಳ ಸಂಖ್ಯೆ 28ಕ್ಕೆ ಇಳಿಕೆಯಾಗಿದೆ. ಹಾಗೆಯೇ ಕೇಂದ್ರಾಡಳಿತ ಪ್ರದೇಶಗಳ ಸಂಖ್ಯೆ 9ಕ್ಕೆ ತಲುಪಿದೆ. ಜಮ್ಮುಕಾಶ್ಮೀರ ಪುನರ್ವಿಂಗಡಣೆ ಕಾಯ್ದೆ 2019ನ್ನು  ಸಂಸತ್ತು ಮೂರು ತಿಂಗಳ ಹಿಂದೆ ಆಗಸ್ಟ್ 5ರಂದು ಅಂಗೀಕರಿಸಿತ್ತು. ಅದರ ಅನ್ವಯ ಎರಡು ಹೊಸ ಕೇಂದ್ರಾಡಳಿತ ಪ್ರದೇಶಗಳು ಕಾರ್ಯಾರಂಭ ಮಾಡಿದವು. (ವಿವರಗಳಿಗೆ ಇಲ್ಲಿ ಕ್ಲಿಕ್  ಮಾಡಿರಿ)

2019: ಬ್ಯಾಂಕಾಕ್/ ನವದೆಹಲಿ:ಭಾರತದ ಮೌಲ್ಯಗಳು ಮುಂಬರುವ ವರ್ಷಗಳಲ್ಲಿ ವಿಶ್ವವನ್ನು ರೂಪಿಸುವುದರಲ್ಲಿ ಮಹತ್ವದ ಕಾಣಿಕೆ ಸಲ್ಲಿಸಲಿವೆಎಂದು ಥಾಯ್ಲೆಂಡ್ ಭೇಟಿಯ ತಮ್ಮ ಮೊದಲ ದಿನವೇ (2019 ನವೆಂಬರ್ 02ರ ಶನಿವಾರ) ಪ್ರತಿಪಾದಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಭಾರತದ ಬೆಳೆಯುತ್ತಿರುವ ಪ್ರಭಾವವನ್ನು ಸಂಭ್ರಮಿಸಿದರು. ‘ಇದು ಥಾಯ್ಲೆಂಡಿಗೆ ನನ್ನ ಮೊದಲ ಅಧಿಕೃತ ಭೇಟಿ. ಇಲ್ಲಿ ಭಾರತೀಯತೆಯ ಅಗಾಧ ಅನುಭವ ನನಗೆ ಆಗುತ್ತಿದೆ. ಇಡೀ ವಿಶ್ವವೇ ಭಾರತದ ಜೊತೆಗೆ ದೀಪಾವಳಿಯನ್ನು ಆಚರಿಸಿದೆ, ಇಲ್ಲಿ ಕೂಡಾ ಅದೇ ಮರುಕಳಿಸಿರುವುದು ನನಗೆ ಕಾಣುತ್ತಿದೆಎಂದು ಬ್ಯಾಂಕಾಕಿನಲ್ಲಿಸ್ವಾಸ್ದೀ ಪಿಎಂ ಮೋದಿಸಮಾರಂಭದಲ್ಲಿ ಭಾರತೀಯ ಸಮುದಾಯದ ಸದಸ್ಯರ ಜೊತೆ ಸಂವಹನ ನಡೆಸುತ್ತಾ ಮೋದಿ ಹೇಳಿದರು. ಥಾಯ್ಲೆಂಡ್ ಜೊತೆಗೆ ಭಾರತವು ಪ್ರಬಲ ಬಾಂಧವ್ಯವನ್ನು ಹೊಂದಿದೆ. ರಾಣಿ ಮಹಾಚಕ್ರಿ ಸಿರಿಂಧೋರ್ನ್ ಅವರು ಕೂಡಾ ಸಂಸ್ಕೃತ ವಿದ್ವಾಂಸರಾಗಿದ್ದು ಭಾರತದೊಂದಿಗೆ ಆಳವಾದ ಬಾಂಧವ್ಯ ಹೊಂದಿದ್ದರು ಎಂದು ಪ್ರಧಾನಿ ನುಡಿದರು. ‘ಗೆಳೆಯರೇ, ನಮ್ಮ ಬಾಂಧವ್ಯವು ಭಾರತದ ಜೊತೆಗೆ ಇಷ್ಟೊಂದು ಪ್ರಬಲವಾಗಿರುವುದು ಹೇಗೆ? ಇದಕ್ಕೆ ಕಾರಣವೇನು ಎಂದು ಯೋಚಿಸಿದ್ದೀರಾ? ಇದಕ್ಕೆ ಸರಳವಾದ ಉತ್ತರ ಇದೆ: ನಮ್ಮ ಬಾಂಧವ್ಯವು ಸರ್ಕಾರಗಳ ನಡುವೆ ಇರುವ ಬಾಂಧವ್ಯ ಅಲ್ಲ. ಇತಿಹಾಸದ ಮೂಲಕ ಬೆಸೆದಿರುವ ಬಾಂಧವ್ಯ ಅದು. ಏಕೆಂದರೆ ಪ್ರತಿಯೊಂದು ಚಾರಿತ್ರಿಕ ಘಟನೆಯೂ ನಮ್ಮ ಬಾಂಧವ್ಯಗಳನ್ನು ಹೊಸ ಎತ್ತರಕ್ಕೆ ಏರಿಸಿದೆ’ ಎಂದು ಪ್ರಧಾನಿ ಹೇಳುತ್ತಿದ್ದಂತೆಯೇ ಜನ ಸಮೂಹವುಮೋದಿ, ಮೋದಿಮಂತ್ರದೊಂದಿಗೆ ಸ್ಪಂದಿಸಿತು. ‘ನೀವು  ನನ್ನನ್ನು ಸ್ವಾಸ್ದೀ ಮೋದಿ  ಎಂಬುದಾಗಿ ಹರಸಿದಿರಿ. ಆದರೆ ಅದರ ಅರ್ಥ ಏನು ಎಂಬುದು ನಿಮಗೆ ಗೊತ್ತಿದೆಯೇ? ಇದು ಸಂಸ್ಕೃತ ಪದ- ಸು ಮತ್ತು ಅಸ್ತಿ ಪದಗಳ ಜೋಡಣೆ- ’ಸ್ವಸ್ತಿಇದರ ಅರ್ಥಕಲ್ಯಾಣಎಂಬುದಾಗಿ ಮೋದಿ ವಿವರಿಸಿದರು. (ವಿವರಗಳಿಗೆ ಇಲ್ಲಿ ಕ್ಲಿಕ್  ಮಾಡಿರಿ)

2019: ನವದೆಹಲಿ:  ರಾಷ್ಟ್ರದ ರಾಜಧಾನಿ ಪ್ರದೇಶದ ವಾಯುಮಾಲಿನ್ಯ ವಿಷಮ ಸ್ಥಿತಿಗೆ ತಲುಪಿದ ಸಂದರ್ಭದಲ್ಲೇ ಕಾಕತಾಳೀಯವಾಗಿ ದೆಹಲಿಗೆ ಎರಡು ದಿನಗಳ ಭೇಟಿಗಾಗಿ ಆಗಮಿಸಿದ ಜರ್ಮನ್ ಚಾನ್ಸಲರ್ ಅಂಗೇಲಾ ಮರ್ಕೆಲ್ ಅವರು ಡೀಸೆಲ್ ಚಾಲಿತ ಬಸ್ಸುಗಳನ್ನು ವಿದ್ಯುತ್ ಚಾಲಿತ ಬಸ್ಸುಗಳಾಗಿ ಪರಿವರ್ತಿಸುವ ಮೂಲಕ ವಾಯುಮಾಲಿನ್ಯ ತಡೆಗಟ್ಟುವಂತೆ 2019 ನವೆಂಬರ್ 02ರ ಶನಿವಾರ ಇಲ್ಲಿ ಸಲಹೆ ಮಾಡಿದರು. ಜರ್ಮನಿ - ಭಾರತ ಸಹಭಾಗಿತ್ವ ಯೋಜನೆಗಳ ಅಂಗವಾಗಿ ಭಾರತದಲ್ಲಿ ಪರಿಸರ ಮಿತ್ರ ಹಸಿರು ಸಂಚಾರಕ್ಕೆ ಮುಂದಿನ ಐದು ವರ್ಷಗಳಲ್ಲಿ ಒಂದು ಬಿಲಿಯನ್ ಯೂರೋ ಅಂದರೆ ಪ್ರಸ್ತುತ ವಿನಿಮಯ ದರದಲ್ಲಿ ಸುಮಾರು  ೮೦೦೦ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡುವುದಾಗಿ ವಚನ ನೀಡಿದರು. ತಮಿಳುನಾಡಿನ ಬಸ್ಸುಗಳ ರಂಗದಲ್ಲಿ ಸುಧಾರಣೆಗಾಗಿಯೂ ನಾವು ೨೦೦ ಮಿಲಿಯನ್ ಯೂರೋಗಳನ್ನು ನಿಗದಿ ಪಡಿಸಿದ್ದೇವೆ. ದೆಹಲಿಯು ಶುಕ್ರವಾರ ಎದುರಿಸಿದ ವಾಯುಮಾಲಿನ್ಯವನ್ನು ಕಂಡ ಯಾರೇ ಆದರೂ ಡೀಸೆಲ್ ಚಾಲಿತ ಬಸ್ಸುಗಳನ್ನು ವಿದ್ಯುತ್ ಚಾಲಿತ ಬಸ್ಸುಗಳಾಗಿ ಮಾರ್ಪಡಿಸುವುದು ಅತ್ಯುತ್ತಮ ಎಂದು ಅರಿತುಕೊಳ್ಳಬಲ್ಲರು ಎಂದು ಮರ್ಕೆಲ್ ಹೇಳಿದರು. ರಾಷ್ಟ್ರೀಯ ರಾಜಧಾನಿ ಪ್ರದೇಶವು (ಎನ್ಸಿಆರ್) ಕಳೆದ ಎರಡು ವರ್ಷಗಳ ಅವಧಿಯಲ್ಲೇ ಅತ್ಯಂತ ಗರಿಷ್ಠ ವಾಯುಮಾಲಿನ್ಯವನ್ನು ಶುಕ್ರವಾರ ಅನುಭವಿಸಿತ್ತು. ವಾಯು ಗುಣಮಟ್ಟ ಸೂಚ್ಯಂಕವು ಸಂಜೆ ಗಂಟೆಯ ವೇಳೆಗೆ ೪೮೪ಕ್ಕೆ ತಲುಪಿತ್ತು. (ವಿವರಗಳಿಗೆ ಇಲ್ಲಿ ಕ್ಲಿಕ್ ಮಾಡಿರಿ)

2019: ನವದೆಹಲಿ:  ದೆಹಲಿಯ ತೀಸ್ ಹಜಾರಿ ನ್ಯಾಯಾಲಯದ ಆವರಣದಲ್ಲಿ ಪೊಲೀಸರು ಮತ್ತು ವಕೀಲರ ನಡುವೆ 2019 ನವೆಂಬರ್ 02ರ ಶನಿವಾರ  ಘರ್ಷಣೆಯಲ್ಲಿ ಓರ್ವ ವಕೀಲ ತೀವ್ರ ಗಾಯಗೊಂಡರು. ಶನಿವಾರ ಮಧ್ಯಾಹ್ನ ನ್ಯಾಯಲಯದ ಆವರಣದಲ್ಲಿ ಪಾರ್ಕಿಂಗ್ ವಿಚಾರವಾಗಿ ಪೊಲೀಸ್ ಮತ್ತು ವಕೀಲರ ನಡುವೆ ಘರ್ಷಣೆ ನಡೆದಿದ್ದು, ಗೋಲಿಬಾರ್ ಮಾಡಲಾಗಿದ್ದು, ಪೊಲೀಸರ ಗುಂಡೇಟಿಗೆ ವಕೀಲರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ವರದಿ ತಿಳಿಸಿತು. ಕೋರ್ಟ್ ಆವರಣದೊಳಗೆ ಆಗಮಿಸುವಾಗ ಪೊಲೀಸರ ವಾಹನ ವಕೀಲರಿಗೆ  ಗುದ್ದಿತು. ವೇಳೆ ಪೊಲೀಸರ ವಿರುದ್ಧ ವಕೀಲರು ಕಿರುಚಾಡಿದರು. ಆಗ ಪೊಲೀಸರು ವಕೀಲರನ್ನು ವಾಹನದೊಳಗೆ ಹಾಕಿ ಹಿಗ್ಗಾಮುಗ್ಗಾ ಥಳಿಸಿದರು. ಒಟ್ಟು ಆರು ಮಂದಿ ಪೊಲೀಸರು ವಕೀಲರಿಗೆ ಮನಬಂದತೆ ಥಳಿಸಿದರು ಎಂದರು ತೀಸ್ ಹಜಾರಿ ಅಸೊಸಿಯೇಷನ್ ಪದಾಧಿಕಾರಿ ಜೈ ಬಿಸ್ವಾಲ್ ಆಪಾದಿಸಿದರು. ಘಟನಾ ಸ್ಥಳಕ್ಕೆ ಯಾರನ್ನೂ ಬಿಡುತ್ತಿಲ್ಲ. ಸ್ಥಳೀಯ ಪೊಲೀಸರು ನಮ್ಮನ್ನು ಕೋರ್ಟ್ ಆವರಣದೊಳಗೆ ಬಿಡದೇ ತಡೆಯುತ್ತಿದ್ದಾರೆ. ವಿಚಾರ ನಾವು ದೆಹಲಿ ಹೈಕೋರ್ಟಿಗೆ ತಿಳಿಸಿದ್ದೇವೆ. ಆರು ಮಂದಿ ವಕೀಲರನ್ನು ಒಳಗೊಂಡ  ನಿಯೋಗ ಹೈಕೋರ್ಟಿಗೆ ತೆರಳಿದೆ ಎಂದು ಜೈ ಬಿಸ್ವಾಲ್ ತಿಳಿಸಿದರು. ಇನ್ನೊಂದೆಡೆ ವಾಹನ ಪಾರ್ಕಿಂಗ್ ವಿಚಾರಕ್ಕೆ ಪೊಲೀಸರು ಮತ್ತು ವಕೀಲರ ಮಧ್ಯೆ ಕೋರ್ಟ್ ಆವರಣದಲ್ಲೇ ವಾಗ್ವಾದ ನಡೆದು, ಹಿಂಸಾಚಾರಕ್ಕೆ ತಿರುಗಿದ್ದು, ಪೊಲೀಸರು ಮತ್ತು ವಕೀಲರು ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದರು. (ವಿವರಗಳಿಗೆ ಇಲ್ಲಿ ಕ್ಲಿಕ್ ಮಾಡಿರಿ)



Friday, November 1, 2019

ಇಂದಿನ ಇತಿಹಾಸ History Today ನವೆಂಬರ್ 01

ನವದೆಹಲಿ: (ಇಪಿಸಿಎ) ದೆಹಲಿ-ಎನ್ಸಿಆರ್ ಪ್ರದೇಶದಲ್ಲಿ ಆರೋಗ್ಯ ತುರ್ತುಸ್ಥಿತಿಯನ್ನು ರಾಜಧಾನಿ ನವದೆಹಲಿಯಲ್ಲಿ ವಾಯು ಮಾಲಿನ್ಯವು ಅಂಕೆ ಮೀರಿವಿಷಮ ಸ್ಥಿತಿಗೆ (ಸಿವಿಯರ್ ಪ್ಲಸ್) ತಲುಪಿದ್ದನ್ನು ಅನುಸರಿಸಿ ಸುಪ್ರೀಂಕೋರ್ಟ್ ನೇಮಿಸಿದ ಪರಿಸರ ಮಾಲಿನ್ಯ (ತಡೆ ಮತ್ತು ನಿಯಂತ್ರಣ) ಪ್ರಾಧಿಕಾರವು ಘೋಷಣೆ ಮಾಡಿದ್ದು 2019 ನವೆಂಬರ್ ೫ರವರೆಗೆ ಎಲ್ಲ ನಿರ್ಮಾಣ ಚಟುವಟಿಕೆಗಳನ್ನೂ 2019 ನವೆಂಬರ್ 01ರ ಶುಕ್ರವಾರ ನಿಷೇದಿಸಿತು. ಇದೇ ವೇಳೆಗೆ ದೆಹಲಿ ಸರ್ಕಾರವು ನವೆಂಬರ್ ೫ರವರೆಗೆ ಶಾಲೆಗಳಿಗೆ ರಜೆ ಘೋಷಿಸಿತುವಾಯುಗುಣಮಟ್ಟ ವಿಪರೀತ ಎನಿಸುವಷ್ಟು ಕೆಳಕ್ಕೆ ಕುಸಿದಿದ್ದು, ದೆಹಲಿಗರು ಉಸಿರು ಎಳೆದುಕೊಳ್ಳಲು ಚಡಪಡಿಸಬೇಕಾದ ಸ್ಥಿತಿ ಉಂಟಾಗಿದೆ ಎಂದು ಹೇಳಿರುವ ಪ್ರಾಧಿಕಾರ ಚಳಗಾಲದ ಅವಧಿಯಲ್ಲಿ ಪಟಾಕಿ ಸಿಡಿಸುವುದನ್ನೂ ನಿಷೇಧಿಸಿತು. ಉತ್ತರ ಪ್ರದೇಶ, ಹರಿಯಾಣ ಮತ್ತು ದೆಹಲಿಯ ಮುಖ್ಯಕಾರ್ಯದರ್ಶಿಗಳಿಗೆ ಬರೆದಿರುವ ಪತ್ರದಲ್ಲಿ ಪ್ರಾಧಿಕಾರದ ಅಧ್ಯಕ್ಷ ಭುರೇಲಾಲ್ ಅವರು ದೆಹಲಿ-ಎನ್ಸಿಆರ್ ಪ್ರದೇಶದಲ್ಲಿ ವಾಯುಗುಣಮಟ್ಟ ಗುರುವಾರ ರಾತ್ರಿ ಇನ್ನಷ್ಟು ಕುಸಿದಿದ್ದು, ಪ್ರಸ್ತುತ ವಿಷಮ ಸ್ಥಿತಿಯ ಹಂತದಲ್ಲಿದೆ ಎಂದು ತಿಳಿಸಿದರು. ‘ವಾಯುಮಾಲಿನ್ಯವು ಎಲ್ಲರ ಮೇಲೆ, ನಿರ್ದಿಷ್ಟವಾಗಿ ನಮ್ಮ ಮಕ್ಕಳ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ನಾವು ಇದನ್ನು ಆರೋಗ್ಯ ತುರ್ತುಸ್ಥಿತಿ ಎಂಬುದಾಗಿ ಪರಿಗಣಿಸಬೇಕುಎಂದು ಭುರೇಲಾಲ್ ಪತ್ರದಲ್ಲಿ ಬರೆದರು. ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ರಾಜಧಾನಿಯ ಎಲ್ಲ ಶಾಲೆಗಳಿಗೂ ನವೆಂಬರ್ 5ರ ಮಂಗಳವಾರದವರೆಗೆ ರಜೆ ಘೋಷಣೆ ಮಾಡಿದರು. ದೆಹಲಿಯನ್ನು ಗ್ಯಾಸ್ ಚೇಂಬರ್ ಆಗಿ ಪರಿವರ್ತಿಸಿದ್ದಕ್ಕಾಗಿ ರಾಜ್ಯಗಳನ್ನು ದೂಷಿಸಿದ ಮುಖ್ಯಮಂತ್ರಿ ಕೇಜ್ರಿವಾಲ್, ಈದಿನ ಶಾಲಾ ಮಕ್ಕಳಿಗೆ ೫೦ ಲಕ್ಷ ಮುಖವಾಡಗಳನ್ನು (ಮಾಸ್ಕ್) ವಿತರಿಸಿದರು ಮತ್ತು ಅವುಗಳನ್ನು ಬಳಸುವಂತೆ ಇತರ ನಿವಾಸಿಗಳಿಗೂ ಮನವಿ ಮಾಡಿದರು. (ವಿವರಗಳಿಗೆ ಇಲ್ಲಿ ಕ್ಲಿಕ್ ಮಾಡಿರಿ)

2019: ನವದೆಹಲಿ: ೨೫,೦೦೦ ರೂಪಾಯಿಗಳ ಜುಜುಬಿ ದಂಡದ ಹಣವನ್ನು ಉಳಿಸುವ ಸಲುವಾಗಿ ಲಕ್ಷಾಂತರ ರೂಪಾಯಿಗಳನ್ನು ಖಟ್ಲೆಗಾಗಿ ವೆಚ್ಚ ಮಾಡಿದ ಕೇರಳ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಚಾಟಿ ಬೀಸಿತು. ಕೇರಳ ಸರ್ಕಾರವು ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ಇಂತಹ ಕ್ಷುಲ್ಲಕ ಮತ್ತು ಅನಗತ್ಯ ಪ್ರಕರಣದಾಖಲಿಸಿದ್ದಕ್ಕಾಗಿ ಅದನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡು. ಇಂತಹ ದುಸ್ಸಾಹಸಗಳನ್ನು ಮಾಡುವುದರ ವಿರುದ್ಧ ಕಠಿಣ ಎಚ್ಚರಿಕೆ ನೀಡಿತು. ಭವಿಷ್ಯದಲ್ಲಿ ಕೇರಳ ಸರ್ಕಾರದಿಂದ ಇಂತಹ ಅರ್ಜಿ ಸಲ್ಲಿಕೆಯಾದರೆ ನಾವು ಭಾರೀ ದಂಡ ವಿಧಿಸಬೇಕಾಗುತ್ತದೆ ಎಂಬದಾಗಿ ನಾವು ಸ್ಪಷ್ಟ ಪಡಿಸಬಯಸುತ್ತೇವೆಎಂದು ಸುಪ್ರೀಂಕೋರ್ಟ್ ಇತ್ತೀಚೆಗೆ ನೀಡಿದ ತನ್ನ ಆದೇಶದಲ್ಲಿ ಎಚ್ಚರಿಸಿತು. ಹೈಕೋರ್ಟ್ ತೀರ್ಪೊಂದನ್ನು ಪ್ರಶ್ನಿಸಿ ರಾಜ್ಯ ಸರ್ಕಾರವು ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ವೇಳೆಯಲ್ಲಿ ಸುಪ್ರೀಂಕೋರ್ಟ್ ಕೇರಳ ಸರ್ಕಾರವನ್ನು ರೀತಿ ಕಟುವಾಗಿ ತರಾಟೆಗೆ ತೆಗೆದುಕೊಂಡಿತು. ಎರಡು ದಿನಾಂಕಗಳಲ್ಲಿ ಆರೋಪಿಯನ್ನು ಹಾಜರು ಪಡಿಸಲು ರಾಜ್ಯ ಸರ್ಕಾರ ವಿಫಲವಾದ ಬಳಿಕ ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರು ದುಬೈಯಿಂದ ಸಾಕ್ಷ ನೀಡುವ ಸಲುವಾಗಿ ಬಂದಿದ್ದ ಸಾಕ್ಷಿದಾರನಿಗೆ ೨೫,೦೦೦ ರೂಪಾಯಿಗಳನ್ನು ಪಾವತಿ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಆಜ್ಞಾಪಿಸಿದ್ದರು. ಆರೋಪಿ ಹಾಜರಿಲ್ಲದ ಕಾರಣ ಸಾಕ್ಷ್ಯ ನೀಡಿಕೆಯನ್ನು ಮುಂದೂಡಬೇಕಾಗಿ ಬಂದಿತ್ತು. ವಿಚಾರಣಾ ನ್ಯಾಯಾಧೀಶರ ಆದೇಶದ ವಿರುದ್ಧ ಕೇರಳ ಸರ್ಕಾರವು ಹೈಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಿತು. ವಿಚಾರಣಾ ನ್ಯಾಯಾಧೀಶರ ಆದೇಶವು ಸರಿಯಾಗಿಯೇ ಇದೆ ಎಂದು ಹೇಳಿ ಹೈಕೋರ್ಟ್ ಅದನ್ನು ಎತ್ತಿ ಹಿಡಿಯಿತು. ವಿಚಾರಣಾ ನ್ಯಾಯಾಧೀಶರ ಆದೇಶವನ್ನು ಎತ್ತಿ ಹಿಡಿದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರವು ಸುಪ್ರೀಂಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಿತು. ಮತ್ತು ತನ್ಮೂಲಕ, ೨೫,೦೦೦ ರೂಪಾಯಿಗಳನ್ನು ಉಳಿಸಲು ಖಟ್ಲೆಗಳಿಗಾಗಿ ಲಕ್ಷಾಂತರ ರೂಪಾಯಿ ವೆಚ್ಚ ಮಾಡುವ ಮಾರ್ಗವನ್ನು ಆರಿಸಿಕೊಂಡಿತು. (ವಿವರಗಳಿಗೆ ಇಲ್ಲಿ ಕ್ಲಿಕ್ ಮಾಡಿರಿ)

2019: ಔರಂಗಾಬಾದ್: ಆಡಳಿತಾರೂಢ ಎನ್ಡಿಎ ಮೈತ್ರಿಕೂಟದ ಅಂಗಪಕ್ಷಗಳಾದ ಬಿಜೆಪಿ ಮತ್ತು ಶಿವಸೇನೆ ಅಧಿಕಾರ ಹಂಚಿಕೆ ಮತ್ತು ಮುಂದಿನ ಸರ್ಕಾರ ರಚನೆಯ ಬಗೆಗಿನ ತಮ್ಮ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳುವವರೆಗೆ  ನಾನೇ ಮುಖ್ಯಮಂತ್ರಿಯಾಗುತ್ತೇನೆ, ಅವಕಾಶ ಕೊಡಿಎಂದು ಹೇಳುವ ಮೂಲಕ ಮಹಾರಾಷ್ಟ್ರದ ಬೀಡ್ ಜಿಲ್ಲೆಯ ರೈತರೊಬ್ಬರು ಆಡಳಿತಾರೂಢ ಮೈತ್ರಿಕೂಟದಜಗಳಕ್ಕೆ ವಿಶಿಷ್ಟ ಪರಿಹಾರ ಸೂಚಿಸಿದರು. ಕೇಜ್ತಾಲ್ಲೂಕಿನ ವಡ್ಮೌಲಿ ನಿವಾಸಿ ಶ್ರೀಕಾಂತ್ ವಿಷ್ಣು ಗಡಲೆ ಎಂಬ ರೈತ ಗುರುವಾರ ಬೀಡ್ ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸಿದ ಪತ್ರದಲ್ಲಿ ಪರಿಹಾರವನ್ನು ಸಲಹೆ ಮಾಡಿದರು. ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ಭುಗಿಲೆದ್ದಿರುವ ಮುಖ್ಯಮಂತ್ರಿ ಹುದ್ದೆಗೆ ಸಂಬಂಧಿಸಿದ ತಮ್ಮ ಸಮಸ್ಯೆಯನ್ನು ಶಿವಸೇನೆ ಮತ್ತು ಬಿಜೆಪಿ ಇನ್ನೂ ಬಗೆಹರಿಸಿಕೊಂಡಿಲ್ಲ ಎಂದು ಅವರು ಪತ್ರದಲ್ಲಿ ಅಸಮಾಧಾನ ವ್ಯಕ್ತ ಪಡಿಸಿದರು. "ನೈಸರ್ಗಿಕ ವಿಪತ್ತುಗಳು (ಅಕಾಲಿಕ ಮಳೆ) ರಾಜ್ಯದಲ್ಲಿ ಕೊಯ್ಲು ಮಾಡಲು ಸಿದ್ಧವಾದ ಬೆಳೆಗಳಿಗೆ ಅಡ್ಡಿಯಾಗಿದೆ. ವಿಪತ್ತುಗಳ ಬಗ್ಗೆ ರೈತರು ಉದ್ವಿಗ್ನರಾಗಿದ್ದಾರೆ. ರೈತರು ಬಳಲುತ್ತಿರುವ ಸಮಯದಲ್ಲಿ, ಶಿವಸೇನೆ ಮತ್ತು ಬಿಜೆಪಿ ಮುಖ್ಯಸ್ಥರಿಗೆ ತಮ್ಮಅಧಿಕಾರದ ಸಮಸ್ಯೆಯನ್ನು  ಪರಿಹರಿಸಲು ಸಾಧ್ಯವಾಗುತ್ತಿಲ್ಲ ಎಂದು ಅವರು ಟೀಕಿಸಿದರು. "ಆದ್ದರಿಂದ, ಇವರ ಸಮಸ್ಯೆ ಬಗೆಹರಿಯುವವರೆಗೆ, ರಾಜ್ಯಪಾಲರು ಮುಖ್ಯಮಂತ್ರಿ ಹುದ್ದೆಯ ಜವಾಬ್ದಾರಿಯನ್ನು ನನಗೆ ಹಸ್ತಾಂತರಿಸಬೇಕು" ಎಂದು ಗಡಾಲೆ ಹೇಳಿದ್ದಾರೆ. ‘ನಾನು ರೈತರ ಸಮಸ್ಯೆಗಳನ್ನು ಬಗೆಹರಿಸಿ ಅವರಿಗೆ ನ್ಯಾಯ ನೀಡುತ್ತೇನೆಎಂದು ಗಡಾಲೆ ತಿಳಿಸಿದರು. (ವಿವರಗಳಿಗೆ ಇಲ್ಲಿ ಕ್ಲಿಕ್ ಮಾಡಿರಿ)
2019: ನವದೆಹಲಿಜಾರ್ಖಂಡ್ ವಿಧಾನಸಭೆ ಚುನಾವಣೆಯ ದಿನಾಂಕವನ್ನು 2019 ನವೆಂಬರ್ 1ರ ಶುಕ್ರವಾರ ಚುನಾವಣಾ ಆಯೋಗ ಘೋಷಣೆ ಮಾಡಿತು.  ನವೆಂಬರ್​ 30ರಿಂದ5 ಹಂತಗಳಲ್ಲಿ
ಮತದಾನ ನಡೆಯಲಿದ್ದು, ಡಿಸೆಂಬರ್ 23ಕ್ಕೆ ಫಲಿತಾಂಶ ಹೊರ ಬೀಳಲಿದೆ.  ಮುಖ್ಯ ಚುನಾವಣಾಧಿಕಾರಿ ಸುನಿಲ್ ಅರೋರಾ ಜಾರ್ಖಂಡ್ವಿಧಾನಸಭೆ ಚುನಾವಣೆಯ ದಿನಾಂಕ ಘೋಷಿಸಿದರು. ಸುದ್ದಿಗೋಷ್ಠಿಯಲ್ಲಿ ಜಾರ್ಖಂಡ್ವಿಧಾನಸಭೆ ಚುನಾವಣೆ ನವೆಂಬರ್​ 30ರಿಂದ 5 ಹಂತಗಳಲ್ಲಿ ನಡೆಯಲಿದೆ. ಡಿಸೆಂಬರ್ 23ಕ್ಕೆ ಫಲಿತಾಂಶ ಬರಲಿದೆ ಎಂದು ಅವರು ಪ್ರಕಟಿಸಿದರು.
.30ಕ್ಕೆ ಮೊದಲ ಹಂತದ ಮತದಾನಡಿ.7ರಂದು 2ನೇ ಹಂತದ ಮತದಾನಡಿ.12ರಂದು 3ನೇ ಹಂತದ ಮತದಾನಡಿ.16ರಂದು 4ನೇ ಹಂತದ ಮತದಾನಡಿ.20ರಂದು 5ನೇ ಹಂತದ ಮತದಾನ ನಡೆಯಲಿದೆ. ರಾಜ್ಯದಲ್ಲಿ ಈದಿನದಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆರಾಜ್ಯ ವಿಧಾನಸಭೆಯ ಐದು ವರ್ಷಗಳ ಅವಧಿ ಜನವರಿ 5, 2020 ಕ್ಕೆ ಮುಕ್ತಾಯಗೊಳ್ಳಲಿದೆ. ಚುನಾವಣಾ ಖರ್ಚಿನ ಮೇಲೆ ಹಿಡಿತ ಸಾಧಿಸಲು ಪ್ರತಿ ಜಿಲ್ಲೆಗಳಲ್ಲಿ ಆದಾಯ ತೆರಿಗೆ ಅಧಿಕಾರಿಗಳನ್ನು ನೇಮಿಸಲಾಗುತ್ತಿದೆ ಎಂದು ಅರೋರಾ ಹೇಳಿದರು. ಜಾರ್ಖಂಡ್ 81 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. 81 ಸ್ಥಾನಗಳ ಶಾಸಕರ ಅಧಿಕಾರಾವಧಿ ಜನವರಿ 5ರಂದು ಅಂತ್ಯವಾಗಲಿದೆಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕಳೆದ ಲೋಕಸಭಾ ಚುನಾವಣೆಯಲ್ಲಿ 2ನೇ ಬಾರಿಗೆ ಅಧಿಕಾರಕ್ಕೆ ಬಂದ ನಂತರ ನಡೆಯುತ್ತಿರುವ 3ನೇ ರಾಜ್ಯದ ಚುನಾವಣೆ ಇದಾಗಿದೆ. ರಾಜ್ಯದಲ್ಲಿ ಕೂಡ ಬಿಜೆಪಿ ಅಧಿಕಾರದಲ್ಲಿದೆ. ಹೀಗಾಗಿ, ಜಾರ್ಖಂಡ್ ಚುನಾವಣೆ ಬಿಜೆಪಿಗೆ ಪ್ರತಿಷ್ಠೆಯ ವಿಷಯವಾಗಿದೆ. (ವಿವರಗಳಿಗೆ ಇಲ್ಲಿ ಕ್ಲಿಕ್ ಮಾಡಿರಿ)

2019: ನವದೆಹಲಿ: ಐಎನ್ ಎಕ್ಸ್ ಮೀಡಿಯಾ ಹಣ ವರ್ಗಾವಣೆ ಪ್ರಕರಣದಲ್ಲಿ ತಿಹಾರ್ ಸೆರೆಮನೆ ಸೇರಿರುವ ಕೇಂದ್ರದ ಮಾಜಿ ವಿತ್ತ ಸಚಿವ ಪಿ. ಚಿದಂಬರಂ ಅನಾರೋಗ್ಯ ನೆಲೆಯಲ್ಲಿ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು 2019 ನವೆಂಬರ್ 01ರ ಶುಕ್ರವಾರ ಇತ್ಯರ್ಥ ಪಡಿಸಿದ ದೆಹಲಿ ಹೈಕೋರ್ಟ್ ಮಾಜಿ ಸಚಿವರಿಗೆ ಸ್ವಚ್ಛ ಪರಿಸರ, ಮಾಲಿನ್ಯ ಮುಖವಾಡ  ಮತ್ತು ಪರಿಶುದ್ಧ ನೀರು (ಮಿನರಲ್ ವಾಟರ್) ಒದಗಿಸುವಂತೆ ತಿಹಾರ್ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಿತು. ಕ್ರೋನ್ಸ್ ಕಾಯಿಲೆಯಿಂದ ಬಳಲುತ್ತಿರುವ ಚಿದಂಬರಂ ಅವರನ್ನು ಆಸ್ಪತ್ರೆಗೆ ದಾಖಲಿಸಬೇಕಾದ ಅಗತ್ಯ ಇಲ್ಲ ಎಂಬುದಾಗಿ ಏಮ್ಸ್ ವೈದ್ಯಕೀಯ ಮಂಡಳಿಯು ನ್ಯಾಯಾಲಯಕ್ಕೆ ತಿಳಿಸಿದ ಬಳಿಕ ಪೀಠವು ನಿರ್ದೇಶನ ನೀಡಿತು.  ಚಿದಂಬರಂ ಅವರ ಆರೋಗ್ಯದ ಬಗ್ಗೆ ಅಭಿಪ್ರಾಯ ನೀಡಲು ವೈದ್ಯಕೀಯ ಮಂಡಳಿಯೊಂದನ್ನು ರಚಿಸುವಂತೆ ಏಮ್ಸ್ ನಿರ್ದೇಶಕರಿಗೆ ಪೀಠವು 2019 ಅಕ್ಟೋಬರ್ 31ರ ಗುರುವಾರ ಆಜ್ಞಾಪಿಸಿತ್ತುಕ್ರೋನ್ಸ್ ಕಾಯಿಲೆಯು ಜೀರ್ಣಾಂಗದಲ್ಲಿ ಉರಿಯೂತ ಉಂಟುಮಾಡುವ ಕಾಯಿಲೆಯಾಗಿದ್ದು ಕಿಬ್ಬೊಟ್ಟೆಯಲ್ಲಿ ನೋವು, ಅತಿಸಾರ ಅಥವಾ ಭೇದಿ ಮತ್ತು ತೂಕನಷ್ಟಕ್ಕೆ ಕಾರಣವಾಗುತ್ತದೆ.  ಹೈದರಾಬಾದ್ ಮೂಲದ ಜಠರತಜ್ಞ ನಾಗೇಶ್ವರ ರೆಡ್ಡಿ ಅವರನ್ನೂ ತಪಾಸಣೆ ನಡೆಸುವ ಏಮ್ಸ್  ವೈದ್ಯಕೀಯ ಮಂಡಳಿಗೆ ಸೇರ್ಪಡೆ ಮಾಡಿಕೊಳ್ಳುವಂತೆ ಹೈಕೋರ್ಟ್ ಹೇಳಿತ್ತು. ಚಿದಂಬರಂ ಅವರು ವೈದ್ಯಕೀಯ ನೆಲೆಯಲ್ಲಿ ತಮಗೆ ಮಧ್ಯಂತರ ಜಾಮೀನು ನೀಡುವಂತೆ ಅರ್ಜಿ ಸಲ್ಲಿಸಿದ್ದರು. ತಮ್ಮ ದೇಹಸ್ಥಿತಿ ಹದಗೆಡುತ್ತಿರುವುದರಿಂದ ಸ್ವಚ್ಛ ಪರಿಸರದ ಅಗತ್ಯ ತಮಗಿದೆ. ಆದ್ದರಿಂದ ತಮ್ಮ ಕುಟುಂಬ ವೈದ್ಯರಾದ ನಾಗೇಶ್ವರ ರೆಡ್ಡಿ ಅವರಿಂದ ತಪಾಸಣೆ ಮಾಡಿಸಿಕೊಳ್ಳುವ ಸಲುವಾಗಿ ಮತ್ತು ಅವರ ಜೊತೆ ಸಮಾಲೋಚನೆಗಾಗಿ ತಮಗೆ ಆರು ದಿನಗಳ ಮಧ್ಯಂತರ ಜಾಮೀನು ನೀಡಬೇಕು ಎಂದು ಚಿದಂಬರಂ ಅರ್ಜಿ ಸಲ್ಲಿಸಿದ್ದರು. ರೆಡ್ಡಿಯವರು ಹೈದರಾಬಾದಿನ ಏಷ್ಯನ್ ಇನ್ ಸ್ಟಿಟ್ಯೂಟ್ ಆಫ್ ಗ್ಯಾಸ್ಟ್ರೊಎಂಟೆರಾಲಜಿಯ ಖ್ಯಾತ ಜಠರತಜ್ಞರಾಗಿದ್ದಾರೆ. ೨೦೧೭ರಲ್ಲಿ ತಮಗೆ ಕಂಡು ಬಂದಿದ್ದ ಕ್ರೋನ್ಸ್ ಕಾಯಿಲೆಯ ಪರಿಣಾಮವಾಗಿ ಅಕ್ಟೋಬರ್ ೫ರಿಂದ ತಮಗೆ ತೀವ್ರ ಸ್ವರೂಪದ ಸತತ ನೋವು ಕಿಬ್ಬೊಟ್ಟೆಯಲ್ಲಿ ಕಾಣಿಸಿಕೊಳ್ಳುತ್ತಿದ್ದು ಅದಕ್ಕೆ ತುರ್ತಾಗಿ ಚಿಕಿತ್ಸೆ ಪಡೆಯುವ ಅಗತ್ಯವಿದೆ ಎಂದು ಚಿದಂಬರಂ ಪ್ರತಿಪಾದಿಸಿದ್ದರು. (ವಿವರಗಳಿಗೆ ಇಲ್ಲಿ ಕ್ಲಿಕ್ ಮಾಡಿರಿ)